AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾಷಣ ಮಾಡುವಾಗ ವೇದಿಕೆ ಮೇಲೆಯೇ ಕುಸಿದು ಬಿದ್ದು ಐಐಟಿ ಕಾನ್ಪುರದ ಹಿರಿಯ ಪ್ರಾಧ್ಯಾಪಕ ನಿಧನ

ಐಐಟಿ ಕಾನ್ಪುರದ ಹಿರಿಯ ಪ್ರಾಧ್ಯಾಪಕರೊಬ್ಬರು ವಿಶ್ವವಿದ್ಯಾಲಯದಲ್ಲಿ ಹಳೆಯ ವಿದ್ಯಾರ್ಥಿಗಳನ್ನುದ್ದೇಶಿಸಿ ಭಾಷಣ ಮಾಡುತ್ತಿದ್ದ ವೇಳೆ ಹೃದಯಸ್ತಂಭನದಿಂದ ಸಾವನ್ನಪ್ಪಿದ್ದಾರೆ. ಸಮೀರ್ ಖಂಡೇಕರ್ ಐಐಟಿ ಕಾನ್ಪುರ ಸಭಾಂಗಣದಲ್ಲಿ ನಡೆದ ಹಳೆ ವಿದ್ಯಾರ್ಥಿಗಳ ಸಮಾವೇಶದಲ್ಲಿ ಭಾಷಣ ಮಾಡುತ್ತಿದ್ದರು.

ಭಾಷಣ ಮಾಡುವಾಗ ವೇದಿಕೆ ಮೇಲೆಯೇ ಕುಸಿದು ಬಿದ್ದು ಐಐಟಿ ಕಾನ್ಪುರದ ಹಿರಿಯ ಪ್ರಾಧ್ಯಾಪಕ ನಿಧನ
ಸಮೀರ್Image Credit source: India Today
ನಯನಾ ರಾಜೀವ್
|

Updated on: Dec 24, 2023 | 8:07 AM

Share

ಐಐಟಿ ಕಾನ್ಪುರದ ಹಿರಿಯ ಪ್ರಾಧ್ಯಾಪಕರೊಬ್ಬರು ವಿಶ್ವವಿದ್ಯಾಲಯದಲ್ಲಿ ಹಳೆಯ ವಿದ್ಯಾರ್ಥಿಗಳನ್ನುದ್ದೇಶಿಸಿ ಭಾಷಣ ಮಾಡುತ್ತಿದ್ದ ವೇಳೆ ಹೃದಯಸ್ತಂಭನದಿಂದ ಸಾವನ್ನಪ್ಪಿದ್ದಾರೆ. ಸಮೀರ್ ಖಂಡೇಕರ್ ಐಐಟಿ ಕಾನ್ಪುರ ಸಭಾಂಗಣದಲ್ಲಿ ನಡೆದ ಹಳೆಯ ವಿದ್ಯಾರ್ಥಿಗಳ ಸಮಾವೇಶದಲ್ಲಿ ಭಾಷಣ ಮಾಡುತ್ತಿದ್ದರು.

ಖಂಡೇಕರ್ ಅವರು ಉತ್ತಮ ಆರೋಗ್ಯವನ್ನು ಕಾಪಾಡಿಕೊಳ್ಳುವ ಮಾರ್ಗಗಳ ಬಗ್ಗೆ ಮಾತನಾಡುತ್ತಿದ್ದರು. ಖಂಡೇಕರ್ ಇದ್ದಕ್ಕಿದ್ದಂತೆ ಅಸ್ವಸ್ಥರಾದರು, ಎದೆಯಲ್ಲಿ ಸ್ಬಲ್ಪ ನೋವು ಕಾಣಿಸಿಕೊಂಡಿತ್ತು. ಅವರು ಭಾವುಕರಾಗಿದ್ದಾರೆ ಎಂದು ವಿದ್ಯಾರ್ಥಿಗಳು ಭಾವಿಸಿದ್ದರು. ಸ್ವಲ್ಪ ಸಮಯದ ನಂತರ ಬೆವರು ಬರಲು ಶುರುವಾಗಿತ್ತು. ವೇದಿಕೆ ಮೇಲೆಯೇ ಕುಸಿದು ಬಿದ್ದರು. ಕೂಡಲೇ ಆಸ್ಪತ್ರೆಗೆ ದಾಖಲಿಸಲಾಯಿತು. ವೈದ್ಯ ನೀರಜ್ ಕುಮಾರ್ ಪ್ರಕಾರ, ಆಸ್ಪತ್ರೆಗೆ ಕರೆತರುವ ಮೊದಲೇ ಖಂಡೇಕರ್ ಮೃತಪಟ್ಟಿದ್ದರು.

ಕೇಂಬ್ರಿಡ್ಜ್ ವಿಶ್ವವಿದ್ಯಾನಿಲಯದಲ್ಲಿ ಓದುತ್ತಿರುವ ಪ್ರೊಫೆಸರ್ ಅವರ ಮಗ ತನ್ನ ತಂದೆಯ ಅಂತ್ಯಕ್ರಿಯೆಯನ್ನು ನಡೆಸಲಿದ್ದಾರೆ. ಖಂಡೇಕರ್ ಅವರು 2019 ರಿಂದ ಕೊಲೆಸ್ಟ್ರಾಲ್‌ನಿಂದ ಬಳಲುತ್ತಿದ್ದರು ಮತ್ತು ನಿರಂತರ ಔಷಧಿಗಳನ್ನು ತೆಗೆದುಕೊಳ್ಳುತ್ತಿದ್ದರು. ಅವರು ತಂದೆ-ತಾಯಿ, ಪತ್ನಿ ಹಾಗೂ ಪುತ್ರನನ್ನು ಅಗಲಿದ್ದಾರೆ.

ಮತ್ತಷ್ಟು ಓದಿ: ಸ್ಪಂದನಾ ಸಾವಿನ ಬೆನ್ನಲ್ಲೇ ಮತ್ತೊಂದು ಶಾಕ್; ಮಂಡ್ಯ ಮೂಲದ ಕಿರುತೆರೆ ನಟ ಹೃದಯಾಘಾತದಿಂದ ನಿಧನ

ಮಧ್ಯಪ್ರದೇಶದ ಜಬಲ್‌ಪುರದಲ್ಲಿ ಜನಿಸಿದ ಖಾಂಡೇಕರ್ ಐಐಟಿ ಕಾನ್ಪುರದಲ್ಲಿ ಬಿ.ಟೆಕ್ ಓದಿದ್ದು, ಪಿಎಚ್‌ಡಿಗಾಗಿ ಜರ್ಮನಿಗೆ ತೆರಳಿದ್ದರು. 2004 ರಲ್ಲಿ, ಅವರು ಐಐಟಿ ಕಾನ್ಪುರದಲ್ಲಿ ಸಹಾಯಕ ಪ್ರಾಧ್ಯಾಪಕರಾಗಿ ಸೇರಿದರು, ನಂತರ ಅವರು ಸಹ ಪ್ರಾಧ್ಯಾಪಕರಾದರು. ನಂತರ ಅವರನ್ನು ಮೆಕ್ಯಾನಿಕಲ್ ವಿಭಾಗದ ಮುಖ್ಯಸ್ಥರಾಗಿದ್ದರು. ಅವರ ಹೆಸರಿಗೆ ಎಂಟು ಪೇಟೆಂಟ್‌ಗಳೂ ಇವೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ