AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IIT ಮದ್ರಾಸ್​ ಸೀಲ್​ಡೌನ್​! 66 ವಿದ್ಯಾರ್ಥಿ, 5 ಸಿಬ್ಬಂದಿಗೆ ಕೊರೊನಾ​..

IIT ಮದ್ರಾಸ್​ ಕಾಲೇಜಿನಲ್ಲಿ ಸುಮಾರು 66 ವಿದ್ಯಾರ್ಥಿ ಹಾಗೂ 5 ಶಿಕ್ಷಣ ಸಿಬ್ಬಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಇದೀಗ, ಕೊರೊನಾ ಪ್ರಕರಣಗಳು ಹೆಚ್ಚಳವಾದ ಹಿನ್ನೆಲೆಯಲ್ಲಿ ಮುಂದಿನ ಆದೇಶದವರೆಗೂ IIT ಮದ್ರಾಸ್​ನಲ್ಲಿ ರಜೆ ಘೋಷಣೆಯಾಗಿದೆ.

IIT ಮದ್ರಾಸ್​ ಸೀಲ್​ಡೌನ್​! 66 ವಿದ್ಯಾರ್ಥಿ, 5 ಸಿಬ್ಬಂದಿಗೆ ಕೊರೊನಾ​..
IIT ಮದ್ರಾಸ್​
KUSHAL V
|

Updated on:Dec 14, 2020 | 10:52 AM

Share

ಚೆನ್ನೈ: IIT ಮದ್ರಾಸ್​ ಕಾಲೇಜಿನಲ್ಲಿ ಸುಮಾರು 66 ವಿದ್ಯಾರ್ಥಿ ಹಾಗೂ 5 ಶಿಕ್ಷಣ ಸಿಬ್ಬಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಇದೀಗ, ಕೊರೊನಾ ಪ್ರಕರಣಗಳು ಹೆಚ್ಚಳವಾದ ಹಿನ್ನೆಲೆಯಲ್ಲಿ ಮುಂದಿನ ಆದೇಶದವರೆಗೂ IIT ಮದ್ರಾಸ್​ನಲ್ಲಿ ರಜೆ ಘೋಷಣೆಯಾಗಿದೆ.

ಅಂದ ಹಾಗೆ, ಶಿಕ್ಷಣ ಸಂಸ್ಥೆಯಲ್ಲಿ ಮೊದಲನೇ ಕೇಸ್​ ಡಿಸೆಂಬರ್ 1ರಂದು ಪತ್ತೆಯಾಗಿತ್ತು. ಇದೀಗ, ಕಳೆದ ಮೂರು ದಿನದಲ್ಲಿ ಸುಮಾರು 55 ಜನರಿಗೆ ಸೋಂಕು ದೃಢಪಟ್ಟಿದೆ.

ಸದ್ಯ, ಸೋಂಕಿನ ಲಕ್ಷಣವಿದ್ದರೆ ತಕ್ಷಣ ಪರೀಕ್ಷೆ​ ಮಾಡಿಸುವಂತೆ ಎಲ್ಲರಿಗೂ ಸೂಚನೆ ಸಹ ನೀಡಲಾಗಿದೆ. ಜೊತೆಗೆ, ಶಿಕ್ಷಣ ಸಂಸ್ಥೆಯ ಲ್ಯಾಬ್​, ಗ್ರಂಥಾಲಯ ಹಾಗೂ ಎಲ್ಲಾ ವಿಭಾಗಗಳನ್ನು ಮುಚ್ಚಲಾಗಿದೆ. IIT ಮದ್ರಾಸ್​ನ ಕ್ಯಾಂಪಸ್​ನಲ್ಲಿ ಒಟ್ಟು 774 ವಿದ್ಯಾರ್ಥಿಗಳಿದ್ದಾರೆ ಎಂದು ತಿಳಿದುಬಂದಿದೆ. ಇದೀಗ, ಎಲ್ಲರಿಗೂ ತಮ್ಮ ಹಾಸ್ಟೆಲ್​ಗಳಲ್ಲೇ ಕ್ವಾರಂಟೈನ್​ ಆಗಲು ಸೂಚಿಸಲಾಗಿದ್ದು ಜೊತೆಗೆ ನಗರದಿಂದ ಬರುತ್ತಿದ್ದ ಸಿಬ್ಬಂದಿ ಮತ್ತು ಸಂಶೋಧನಾ ವಿದ್ಯಾರ್ಥಿಗಳಿಗೆ ವರ್ಕ್​​ ಫ್ರಂ ಹೋಂ ಅವಕಾಶ ನೀಡಲಾಗಿದೆ.​​

ತಮಿಳುನಾಡು ಸರ್ಕಾರ ಹೊರಡಿಸಿದ್ದ ಆದೇಶದ ಮೇರೆಗೆ ಡಿಸೆಂಬರ್ 7ರಂದು IIT ಮದ್ರಾಸ್​ನಲ್ಲಿ ಫೈನಲ್​ ಇಯರ್ ಓದುತ್ತಿರುವ​ ವಿದ್ಯಾರ್ಥಿಗಳಿಗೆ ಶಿಕ್ಷಣ ಸಂಸ್ಥೆಗೆ ಭೇಟಿ ನೀಡಲು ಅವಕಾಶ ಕಲ್ಪಿಸಲಾಗಿತ್ತು. ಈ ನಡುವೆ, ಕಾಲೇಜಿನಲ್ಲಿ ಸೋಂಕು ಹೇಗೆ ಹಬ್ಬಿತು ಎಂದು ತಿಳಿದುಬಂದಿಲ್ಲ. ಬಟ್​, ಎಲ್ಲಾ ವಿದ್ಯಾರ್ಥಿಗಳು ಕಾಲೀಜಿನ ಕ್ಯಾಂಟೀನ್​ಗೆ ಭೇಟಿಕೊಡುತ್ತಿದ್ದ ಹಿನ್ನೆಲೆಯಲ್ಲಿ ಕೊರೊನಾ ಅಲ್ಲಿಂದ ಹರಡಿರುವ ಗುಮಾನಿ ವ್ಯಕ್ತವಾಗಿದೆ.

ಚಿರತೆಗೂ ಕೋವಿಡ್: ಹಿಮಚಿರತೆಗೆ ಕೊರೊನಾ ಸೋಂಕು, ಎರಡು ಚಿರತೆಗಳಲ್ಲಿ ರೋಗ ಲಕ್ಷಣ

Published On - 10:35 am, Mon, 14 December 20

Follow Us
KUSHAL V
KUSHAL V
ರೋಗಿ ಕರೆದೊಯ್ಯುತ್ತಿದ್ದ ಆ್ಯಂಬುಲೆನ್ಸ್ ಕ್ಯಾಂಟರ್​​ಗೆ ಡಿಕ್ಕಿ
ರೋಗಿ ಕರೆದೊಯ್ಯುತ್ತಿದ್ದ ಆ್ಯಂಬುಲೆನ್ಸ್ ಕ್ಯಾಂಟರ್​​ಗೆ ಡಿಕ್ಕಿ
ಪೆದ್ದಿ ರಿಲೀಸ್​​ಗೂ ಮೊದಲು ಕಾಲ್ನಡಿಗೆಯಲ್ಲಿ ತಿರುಪತಿಗೆ ಬಂದ ಜಾನ್ವಿ
ಪೆದ್ದಿ ರಿಲೀಸ್​​ಗೂ ಮೊದಲು ಕಾಲ್ನಡಿಗೆಯಲ್ಲಿ ತಿರುಪತಿಗೆ ಬಂದ ಜಾನ್ವಿ
ವಿದ್ಯಾರ್ಥಿ ಜೀವನದಲ್ಲಿ ಇವುಗಳಿದ್ದರೆ ಉದ್ಧಾರ ಗ್ಯಾರಂಟಿ
ವಿದ್ಯಾರ್ಥಿ ಜೀವನದಲ್ಲಿ ಇವುಗಳಿದ್ದರೆ ಉದ್ಧಾರ ಗ್ಯಾರಂಟಿ
ಸಾಯಿಬಾಬಾ ನೆನೆದರೆ ಕಷ್ಟಗಳೆಲ್ಲಾ ನಿವಾರಣೆ
ಸಾಯಿಬಾಬಾ ನೆನೆದರೆ ಕಷ್ಟಗಳೆಲ್ಲಾ ನಿವಾರಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್