Sign In

By signing in or creating an account, you agree with Associated Broadcasting Company's Terms & Conditions and Privacy Policy.

IIT ಮದ್ರಾಸ್​ ಸೀಲ್​ಡೌನ್​! 66 ವಿದ್ಯಾರ್ಥಿ, 5 ಸಿಬ್ಬಂದಿಗೆ ಕೊರೊನಾ​..

IIT ಮದ್ರಾಸ್​ ಕಾಲೇಜಿನಲ್ಲಿ ಸುಮಾರು 66 ವಿದ್ಯಾರ್ಥಿ ಹಾಗೂ 5 ಶಿಕ್ಷಣ ಸಿಬ್ಬಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಇದೀಗ, ಕೊರೊನಾ ಪ್ರಕರಣಗಳು ಹೆಚ್ಚಳವಾದ ಹಿನ್ನೆಲೆಯಲ್ಲಿ ಮುಂದಿನ ಆದೇಶದವರೆಗೂ IIT ಮದ್ರಾಸ್​ನಲ್ಲಿ ರಜೆ ಘೋಷಣೆಯಾಗಿದೆ.

IIT ಮದ್ರಾಸ್​ ಸೀಲ್​ಡೌನ್​! 66 ವಿದ್ಯಾರ್ಥಿ, 5 ಸಿಬ್ಬಂದಿಗೆ ಕೊರೊನಾ​..
IIT ಮದ್ರಾಸ್​
Follow us
KUSHAL V
|

Updated on:Dec 14, 2020 | 10:52 AM

ಚೆನ್ನೈ: IIT ಮದ್ರಾಸ್​ ಕಾಲೇಜಿನಲ್ಲಿ ಸುಮಾರು 66 ವಿದ್ಯಾರ್ಥಿ ಹಾಗೂ 5 ಶಿಕ್ಷಣ ಸಿಬ್ಬಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಇದೀಗ, ಕೊರೊನಾ ಪ್ರಕರಣಗಳು ಹೆಚ್ಚಳವಾದ ಹಿನ್ನೆಲೆಯಲ್ಲಿ ಮುಂದಿನ ಆದೇಶದವರೆಗೂ IIT ಮದ್ರಾಸ್​ನಲ್ಲಿ ರಜೆ ಘೋಷಣೆಯಾಗಿದೆ.

ಅಂದ ಹಾಗೆ, ಶಿಕ್ಷಣ ಸಂಸ್ಥೆಯಲ್ಲಿ ಮೊದಲನೇ ಕೇಸ್​ ಡಿಸೆಂಬರ್ 1ರಂದು ಪತ್ತೆಯಾಗಿತ್ತು. ಇದೀಗ, ಕಳೆದ ಮೂರು ದಿನದಲ್ಲಿ ಸುಮಾರು 55 ಜನರಿಗೆ ಸೋಂಕು ದೃಢಪಟ್ಟಿದೆ.

ಸದ್ಯ, ಸೋಂಕಿನ ಲಕ್ಷಣವಿದ್ದರೆ ತಕ್ಷಣ ಪರೀಕ್ಷೆ​ ಮಾಡಿಸುವಂತೆ ಎಲ್ಲರಿಗೂ ಸೂಚನೆ ಸಹ ನೀಡಲಾಗಿದೆ. ಜೊತೆಗೆ, ಶಿಕ್ಷಣ ಸಂಸ್ಥೆಯ ಲ್ಯಾಬ್​, ಗ್ರಂಥಾಲಯ ಹಾಗೂ ಎಲ್ಲಾ ವಿಭಾಗಗಳನ್ನು ಮುಚ್ಚಲಾಗಿದೆ. IIT ಮದ್ರಾಸ್​ನ ಕ್ಯಾಂಪಸ್​ನಲ್ಲಿ ಒಟ್ಟು 774 ವಿದ್ಯಾರ್ಥಿಗಳಿದ್ದಾರೆ ಎಂದು ತಿಳಿದುಬಂದಿದೆ. ಇದೀಗ, ಎಲ್ಲರಿಗೂ ತಮ್ಮ ಹಾಸ್ಟೆಲ್​ಗಳಲ್ಲೇ ಕ್ವಾರಂಟೈನ್​ ಆಗಲು ಸೂಚಿಸಲಾಗಿದ್ದು ಜೊತೆಗೆ ನಗರದಿಂದ ಬರುತ್ತಿದ್ದ ಸಿಬ್ಬಂದಿ ಮತ್ತು ಸಂಶೋಧನಾ ವಿದ್ಯಾರ್ಥಿಗಳಿಗೆ ವರ್ಕ್​​ ಫ್ರಂ ಹೋಂ ಅವಕಾಶ ನೀಡಲಾಗಿದೆ.​​

ತಮಿಳುನಾಡು ಸರ್ಕಾರ ಹೊರಡಿಸಿದ್ದ ಆದೇಶದ ಮೇರೆಗೆ ಡಿಸೆಂಬರ್ 7ರಂದು IIT ಮದ್ರಾಸ್​ನಲ್ಲಿ ಫೈನಲ್​ ಇಯರ್ ಓದುತ್ತಿರುವ​ ವಿದ್ಯಾರ್ಥಿಗಳಿಗೆ ಶಿಕ್ಷಣ ಸಂಸ್ಥೆಗೆ ಭೇಟಿ ನೀಡಲು ಅವಕಾಶ ಕಲ್ಪಿಸಲಾಗಿತ್ತು. ಈ ನಡುವೆ, ಕಾಲೇಜಿನಲ್ಲಿ ಸೋಂಕು ಹೇಗೆ ಹಬ್ಬಿತು ಎಂದು ತಿಳಿದುಬಂದಿಲ್ಲ. ಬಟ್​, ಎಲ್ಲಾ ವಿದ್ಯಾರ್ಥಿಗಳು ಕಾಲೀಜಿನ ಕ್ಯಾಂಟೀನ್​ಗೆ ಭೇಟಿಕೊಡುತ್ತಿದ್ದ ಹಿನ್ನೆಲೆಯಲ್ಲಿ ಕೊರೊನಾ ಅಲ್ಲಿಂದ ಹರಡಿರುವ ಗುಮಾನಿ ವ್ಯಕ್ತವಾಗಿದೆ.

ಚಿರತೆಗೂ ಕೋವಿಡ್: ಹಿಮಚಿರತೆಗೆ ಕೊರೊನಾ ಸೋಂಕು, ಎರಡು ಚಿರತೆಗಳಲ್ಲಿ ರೋಗ ಲಕ್ಷಣ

Published On - 10:35 am, Mon, 14 December 20

ಹೈದರಾಬಾದ್ ಆಟಗಾರರು ತಂಗಿದ್ದ ಹೋಟೆಲ್‌ನಲ್ಲಿ ಅಗ್ನಿ ಅವಘಡ
ಹೈದರಾಬಾದ್ ಆಟಗಾರರು ತಂಗಿದ್ದ ಹೋಟೆಲ್‌ನಲ್ಲಿ ಅಗ್ನಿ ಅವಘಡ
ಜಾತಿ ಗಣತಿ ಅವೈಜ್ಞಾನಿಕವಾಗಿದೆ, ಮತ್ತೊಮ್ಮೆ ಮಾಡಿಸಬೇಕು: ಸ್ವಾಮೀಜಿ
ಜಾತಿ ಗಣತಿ ಅವೈಜ್ಞಾನಿಕವಾಗಿದೆ, ಮತ್ತೊಮ್ಮೆ ಮಾಡಿಸಬೇಕು: ಸ್ವಾಮೀಜಿ
ಬೃಹತ್ ಜಾತಿ ಗಣತಿ ವರದಿಯನ್ನು ಯಾರೂ ಓದಿದಂತಿಲ್ಲ, ಓದಲು ಸಮಯ ಹಿಡಿಯಲಿದೆ
ಬೃಹತ್ ಜಾತಿ ಗಣತಿ ವರದಿಯನ್ನು ಯಾರೂ ಓದಿದಂತಿಲ್ಲ, ಓದಲು ಸಮಯ ಹಿಡಿಯಲಿದೆ
25 ವರ್ಷಗಳ ಹಿಂದೆಯೇ ಬ್ಯಾಂಕ್ ಜನಾರ್ದನ್​ಗೆ ಹಾರ್ಟ್ ಸಮಸ್ಯೆ: ಸಾಧು ಕೋಕಿಲ
25 ವರ್ಷಗಳ ಹಿಂದೆಯೇ ಬ್ಯಾಂಕ್ ಜನಾರ್ದನ್​ಗೆ ಹಾರ್ಟ್ ಸಮಸ್ಯೆ: ಸಾಧು ಕೋಕಿಲ
ಭಾರತದ ಲೇಸರ್ ವೆಪನ್ ಸಿಸ್ಟಂ ಪ್ರಯೋಗದ ವಿಡಿಯೋ
ಭಾರತದ ಲೇಸರ್ ವೆಪನ್ ಸಿಸ್ಟಂ ಪ್ರಯೋಗದ ವಿಡಿಯೋ
ಕುಮಾರಸ್ವಾಮಿ ಮನೆಗೆ ಲೇಟಾಗಿ ಹೋಗಿದ್ದರೆ ಅವರೇ ಅದಕ್ಕೆ ಜಬಾಬ್ದಾರರು: ಸಚಿವ
ಕುಮಾರಸ್ವಾಮಿ ಮನೆಗೆ ಲೇಟಾಗಿ ಹೋಗಿದ್ದರೆ ಅವರೇ ಅದಕ್ಕೆ ಜಬಾಬ್ದಾರರು: ಸಚಿವ
ಪಬ್ಲಿಕ್​ನಲ್ಲಿ ಮುಸ್ಲಿಂ ಮಹಿಳೆಯ ಹಿಜಾಬ್ ಕಳಚಿದ ಪುರುಷರು
ಪಬ್ಲಿಕ್​ನಲ್ಲಿ ಮುಸ್ಲಿಂ ಮಹಿಳೆಯ ಹಿಜಾಬ್ ಕಳಚಿದ ಪುರುಷರು
ಭಯಾನಕ ವಿಡಿಯೋ: ಜೀಪ್ ರ‍್ಯಾಲಿ ನಡೆಯುವ ವೇಳೆ‌ ಕಾಡಾನೆ ಡೆಡ್ಲಿ ಅಟ್ಯಾಕ್
ಭಯಾನಕ ವಿಡಿಯೋ: ಜೀಪ್ ರ‍್ಯಾಲಿ ನಡೆಯುವ ವೇಳೆ‌ ಕಾಡಾನೆ ಡೆಡ್ಲಿ ಅಟ್ಯಾಕ್
4 ವರ್ಷದ ಪ್ರೀತಿಗೆ ಸಾಕ್ಷಿಯಾದ ಅಂಬೇಡ್ಕರ್ ಜಯಂತಿ: ಪ್ರತಿಮೆ ಎದುರೇ ವಿವಾಹ
4 ವರ್ಷದ ಪ್ರೀತಿಗೆ ಸಾಕ್ಷಿಯಾದ ಅಂಬೇಡ್ಕರ್ ಜಯಂತಿ: ಪ್ರತಿಮೆ ಎದುರೇ ವಿವಾಹ
ಜಾತಿಗಣತಿ ವರದಿ ಬಗ್ಗೆ ಕೇಳಿದರೆ ಸಿಡಿಮಿಡಿಗೊಳ್ಳುವ ಸಿಎಂ ಸಿದ್ದರಾಮಯ್ಯ
ಜಾತಿಗಣತಿ ವರದಿ ಬಗ್ಗೆ ಕೇಳಿದರೆ ಸಿಡಿಮಿಡಿಗೊಳ್ಳುವ ಸಿಎಂ ಸಿದ್ದರಾಮಯ್ಯ