AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೋಮೂತ್ರದಲ್ಲಿರುವ ಔಷಧೀಯ ಗುಣಗಳ ಕೊಂಡಾಡಿದ ಐಐಟಿ ಮದ್ರಾಸ್ ನಿರ್ದೇಶಕ

ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (ಐಐಟಿ), ಮದ್ರಾಸ್ ನಿರ್ದೇಶಕ ವಿ. ಕಾಮಕೋಟಿ ಅವರ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿದೆ.ಇದರಲ್ಲಿ ಅವರು ಗೋಮೂತ್ರದ ಔಷಧೀಯ ಗುಣಗಳನ್ನು ಹೊಗಳಿದ್ದಾರೆ ಎಂದು ಹೇಳಲಾಗುತ್ತದೆ. ದೇಶಿ ತಳಿಯ ಗೋವುಗಳನ್ನು ಸಂರಕ್ಷಿಸಿ ಸಾವಯವ ಕೃಷಿಯನ್ನು ಅಳವಡಿಸಿಕೊಳ್ಳುವುದರ ಮಹತ್ವ ಕುರಿತು ಅವರು ಮಾತನಾಡಿದ್ದರು ಎನ್ನುವ ಮಾಹಿತಿ ಲಭ್ಯವಾಗಿದೆ.

ಗೋಮೂತ್ರದಲ್ಲಿರುವ ಔಷಧೀಯ ಗುಣಗಳ ಕೊಂಡಾಡಿದ ಐಐಟಿ ಮದ್ರಾಸ್ ನಿರ್ದೇಶಕ
ವಿ. ಕಾಮಕೋಟಿImage Credit source: India Today
ನಯನಾ ರಾಜೀವ್
|

Updated on: Jan 20, 2025 | 1:56 PM

Share

ಗೋಮೂತ್ರದ ಔಷಧೀಯ ಗುಣಗಳ ಬಗ್ಗೆ ದೇಶದಲ್ಲಿ ಹಲವು ಬಾರಿ ಚರ್ಚೆ ನಡೆದಿದೆ. ಈ ಬಗ್ಗೆ ವ್ಯತಿರಿಕ್ತ ಹೇಳಿಕೆಗಳು ಕೂಡ ಬಂದಿವೆ. ಕೆಲವರು ಗೋಮೂತ್ರ ಆರೋಗ್ಯಕರ ಎಂದು ಹೇಳಿದರೆ ಇನ್ನು ಕೆಲವರು ಈ ಹೇಳಿಕೆಯನ್ನು ಲೇವಡಿ ಮಾಡುತ್ತಾರೆ. ಇದೀಗ ಐಐಟಿ ಮದ್ರಾಸ್ ನಿರ್ದೇಶಕ ವಿ.ಕಾಮಕೋಟಿ ಅವರು ಗೋಮೂತ್ರದ ‘ಔಷಧೀಯ ಗುಣ’ಗಳನ್ನು ಶ್ಲಾಘಿಸಿರುವ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳಲಾಗುತ್ತಿದೆ.

ಪಿಟಿಐ ವರದಿಯ ಪ್ರಕಾರ, ಕಾಮಕೋಟಿಯು ಗೋಮೂತ್ರದ ಆಂಟಿಬ್ಯಾಕ್ಟೀರಿಯಲ್, ಆಂಟಿಫಂಗಲ್ ಮತ್ತು ಜೀರ್ಣಕಾರಿ ಗುಣಲಕ್ಷಣಗಳಿವೆ ಎಂದು ಹೇಳಿರುವುದು ವೀಡಿಯೊದಲ್ಲಿ ಕಂಡುಬರುತ್ತದೆ. ದೇಶಿ ತಳಿಯ ಗೋವುಗಳನ್ನು ಸಂರಕ್ಷಿಸಿ ಸಾವಯವ ಕೃಷಿಯನ್ನು ಅಳವಡಿಸಿಕೊಳ್ಳುವುದರ ಮಹತ್ವ ಕುರಿತು ಅವರು ಮಾತನಾಡಿದರು.

ತೀವ್ರ ಜ್ವರದಿಂದ ಬಳಲುತ್ತಿದ್ದ ನಂತರ ಗೋಮೂತ್ರ ಸೇವಿಸಿ ಗುಣಮುಖನಾದ ಸನ್ಯಾಸಿಯೊಬ್ಬನ ಜೀವನದ ಪ್ರಸಂಗವನ್ನು ಹೇಳುವಾಗ ಅವರು ಈ ಪ್ರತಿಕ್ರಿಯೆ ನೀಡಿದ್ದಾರೆ. ಇರಿಟೇಬಲ್ ಬವೆಲ್ ಸಿಂಡ್ರೋಮ್, ದೊಡ್ಡ ಕರುಳಿಗೆ ಸಂಬಂಧಿಸಿದ ಕಾಯಿಲೆಯಂತಹ ಸಮಸ್ಯೆಗಳಿಗೆ ಇದು ಉಪಯುಕ್ತವಾಗಿದೆ ಎಂದು ಹೇಳಿದರು.

ಗೋಮೂತ್ರದ ಕುರಿತ ಅವರ ಹೇಳಿಕೆಯು ಸತ್ಯಕ್ಕೆ ವಿರುದ್ಧವಾಗಿದೆ ಮತ್ತು ನಾಚಿಕೆಗೇಡಿನ ಸಂಗತಿ ಎಂದು ವಿಚಾರವಾದಿ ಸಂಘಟನೆ ಡಿಎಂಕೆ ಟೀಕಿಸಿದೆ. ಕೇಂದ್ರ ಸರ್ಕಾರ ದೇಶದ ಶಿಕ್ಷಣವನ್ನು ಹಾಳು ಮಾಡುವ ಉದ್ದೇಶ ಹೊಂದಿದೆ ಎಂದು ಆರೋಪಿಸಿದರು. ಈ ಕುರಿತು ಇಂಡಿಯಾ ಟುಡೇ ವರದಿ ಮಾಡಿದೆ.

ಮತ್ತಷ್ಟು ಓದಿ: ಕೇರಳ ಸರ್ಕಾರದ ಆಯುರ್ವೇದ ಕಂಪನಿಯಿಂದ ‘ಪಂಚಗವ್ಯ ಘೃತ’: ವೈರಲ್ ಪೋಸ್ಟ್​ ಹಿಂದಿರುವ ನಿಜ ಸಂಗತಿಯಿದು

ಕಾಂಗ್ರೆಸ್ ನಾಯಕ ಕಾರ್ತಿ ಪಿ ಚಿದಂಬರಂ ಹೇಳಿಕೆಯನ್ನು ಖಂಡಿಸಿದ್ದಾರೆ ಮತ್ತು ಐಐಟಿ ಮದ್ರಾಸ್ ನಿರ್ದೇಶಕರು ಸುಳ್ಳು ವಿಜ್ಞಾನವನ್ನು ಹರಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ಡಿಎಂಕೆ ನಾಯಕ ಟಿಕೆಎಸ್ ಇಳಂಗೋವನ್ ಅವರು ನಿರ್ದೇಶಕರ ಹೇಳಿಕೆಯನ್ನು ಟೀಕಿಸಿದ್ದಾರೆ ಮತ್ತು ಅವರನ್ನು ಸಂಸ್ಥೆಯಿಂದ ವರ್ಗಾಯಿಸಬೇಕು ಎಂದು ಒತ್ತಾಯಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಮದುವೆ ಸಮಾರಂಭದ ವೇಳೆ ಬ್ಯಾಂಕ್ವೆಟ್​ ಹಾಲ್​ನಲ್ಲಿ ಭಾರಿ ಅಗ್ನಿ ಅವಘಡ
ಮದುವೆ ಸಮಾರಂಭದ ವೇಳೆ ಬ್ಯಾಂಕ್ವೆಟ್​ ಹಾಲ್​ನಲ್ಲಿ ಭಾರಿ ಅಗ್ನಿ ಅವಘಡ
ಹಗಲಿನಲ್ಲಿ ನಿದ್ರೆ ಮಾಡಬಹುದಾ ಅಥವಾ ಮಾಡಬಾರದಾ?
ಹಗಲಿನಲ್ಲಿ ನಿದ್ರೆ ಮಾಡಬಹುದಾ ಅಥವಾ ಮಾಡಬಾರದಾ?
ಇಂದು ಈ ರಾಶಿಯವರಿಗೆ ಮುಖ್ಯ ನಿರ್ಧಾರ ತೆಗೆದುಕೊಳ್ಳುವಲ್ಲಿ ಕಷ್ಟವಾಗುವುದು
ಇಂದು ಈ ರಾಶಿಯವರಿಗೆ ಮುಖ್ಯ ನಿರ್ಧಾರ ತೆಗೆದುಕೊಳ್ಳುವಲ್ಲಿ ಕಷ್ಟವಾಗುವುದು
ಮುಂದುವರಿದ ಡಿನ್ನರ್ ಮೀಟಿಂಗ್: ಆರೋಗ್ಯ ಸರಿ ಇಲ್ಲದಿದ್ದರೂ ಸಿಎಂ ಭಾಗಿ
ಮುಂದುವರಿದ ಡಿನ್ನರ್ ಮೀಟಿಂಗ್: ಆರೋಗ್ಯ ಸರಿ ಇಲ್ಲದಿದ್ದರೂ ಸಿಎಂ ಭಾಗಿ
ಡಿಕೆಶಿ​ ಪಿಎಸ್ ಕಾರು ಅಪಘಾತ: ಬೈಕ್​ ಸವಾರ ಸಾವು, ಕಾರು ಪಲ್ಟಿ
ಡಿಕೆಶಿ​ ಪಿಎಸ್ ಕಾರು ಅಪಘಾತ: ಬೈಕ್​ ಸವಾರ ಸಾವು, ಕಾರು ಪಲ್ಟಿ
ನಾನು ಲೋಫರ್, ದುನಿಯಾ ವಿಜಿ ನಮ್ಮ ಅಪ್ಪ ಇದ್ದಂಗೆ: ಯೋಗರಾಜ್ ಭಟ್ ನೇರ ಮಾತು
ನಾನು ಲೋಫರ್, ದುನಿಯಾ ವಿಜಿ ನಮ್ಮ ಅಪ್ಪ ಇದ್ದಂಗೆ: ಯೋಗರಾಜ್ ಭಟ್ ನೇರ ಮಾತು
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ