ಗೋಮೂತ್ರದಲ್ಲಿರುವ ಔಷಧೀಯ ಗುಣಗಳ ಕೊಂಡಾಡಿದ ಐಐಟಿ ಮದ್ರಾಸ್ ನಿರ್ದೇಶಕ

ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (ಐಐಟಿ), ಮದ್ರಾಸ್ ನಿರ್ದೇಶಕ ವಿ. ಕಾಮಕೋಟಿ ಅವರ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿದೆ.ಇದರಲ್ಲಿ ಅವರು ಗೋಮೂತ್ರದ ಔಷಧೀಯ ಗುಣಗಳನ್ನು ಹೊಗಳಿದ್ದಾರೆ ಎಂದು ಹೇಳಲಾಗುತ್ತದೆ. ದೇಶಿ ತಳಿಯ ಗೋವುಗಳನ್ನು ಸಂರಕ್ಷಿಸಿ ಸಾವಯವ ಕೃಷಿಯನ್ನು ಅಳವಡಿಸಿಕೊಳ್ಳುವುದರ ಮಹತ್ವ ಕುರಿತು ಅವರು ಮಾತನಾಡಿದ್ದರು ಎನ್ನುವ ಮಾಹಿತಿ ಲಭ್ಯವಾಗಿದೆ.

ಗೋಮೂತ್ರದಲ್ಲಿರುವ ಔಷಧೀಯ ಗುಣಗಳ ಕೊಂಡಾಡಿದ ಐಐಟಿ ಮದ್ರಾಸ್ ನಿರ್ದೇಶಕ
ವಿ. ಕಾಮಕೋಟಿ
Image Credit source: India Today

Updated on: Jan 20, 2025 | 1:56 PM

ಗೋಮೂತ್ರದ ಔಷಧೀಯ ಗುಣಗಳ ಬಗ್ಗೆ ದೇಶದಲ್ಲಿ ಹಲವು ಬಾರಿ ಚರ್ಚೆ ನಡೆದಿದೆ. ಈ ಬಗ್ಗೆ ವ್ಯತಿರಿಕ್ತ ಹೇಳಿಕೆಗಳು ಕೂಡ ಬಂದಿವೆ. ಕೆಲವರು ಗೋಮೂತ್ರ ಆರೋಗ್ಯಕರ ಎಂದು ಹೇಳಿದರೆ ಇನ್ನು ಕೆಲವರು ಈ ಹೇಳಿಕೆಯನ್ನು ಲೇವಡಿ ಮಾಡುತ್ತಾರೆ. ಇದೀಗ ಐಐಟಿ ಮದ್ರಾಸ್ ನಿರ್ದೇಶಕ ವಿ.ಕಾಮಕೋಟಿ ಅವರು ಗೋಮೂತ್ರದ ‘ಔಷಧೀಯ ಗುಣ’ಗಳನ್ನು ಶ್ಲಾಘಿಸಿರುವ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳಲಾಗುತ್ತಿದೆ.

ಪಿಟಿಐ ವರದಿಯ ಪ್ರಕಾರ, ಕಾಮಕೋಟಿಯು ಗೋಮೂತ್ರದ ಆಂಟಿಬ್ಯಾಕ್ಟೀರಿಯಲ್, ಆಂಟಿಫಂಗಲ್ ಮತ್ತು ಜೀರ್ಣಕಾರಿ ಗುಣಲಕ್ಷಣಗಳಿವೆ ಎಂದು ಹೇಳಿರುವುದು ವೀಡಿಯೊದಲ್ಲಿ ಕಂಡುಬರುತ್ತದೆ. ದೇಶಿ ತಳಿಯ ಗೋವುಗಳನ್ನು ಸಂರಕ್ಷಿಸಿ ಸಾವಯವ ಕೃಷಿಯನ್ನು ಅಳವಡಿಸಿಕೊಳ್ಳುವುದರ ಮಹತ್ವ ಕುರಿತು ಅವರು ಮಾತನಾಡಿದರು.

ತೀವ್ರ ಜ್ವರದಿಂದ ಬಳಲುತ್ತಿದ್ದ ನಂತರ ಗೋಮೂತ್ರ ಸೇವಿಸಿ ಗುಣಮುಖನಾದ ಸನ್ಯಾಸಿಯೊಬ್ಬನ ಜೀವನದ ಪ್ರಸಂಗವನ್ನು ಹೇಳುವಾಗ ಅವರು ಈ ಪ್ರತಿಕ್ರಿಯೆ ನೀಡಿದ್ದಾರೆ. ಇರಿಟೇಬಲ್ ಬವೆಲ್ ಸಿಂಡ್ರೋಮ್, ದೊಡ್ಡ ಕರುಳಿಗೆ ಸಂಬಂಧಿಸಿದ ಕಾಯಿಲೆಯಂತಹ ಸಮಸ್ಯೆಗಳಿಗೆ ಇದು ಉಪಯುಕ್ತವಾಗಿದೆ ಎಂದು ಹೇಳಿದರು.

ಗೋಮೂತ್ರದ ಕುರಿತ ಅವರ ಹೇಳಿಕೆಯು ಸತ್ಯಕ್ಕೆ ವಿರುದ್ಧವಾಗಿದೆ ಮತ್ತು ನಾಚಿಕೆಗೇಡಿನ ಸಂಗತಿ ಎಂದು ವಿಚಾರವಾದಿ ಸಂಘಟನೆ ಡಿಎಂಕೆ ಟೀಕಿಸಿದೆ. ಕೇಂದ್ರ ಸರ್ಕಾರ ದೇಶದ ಶಿಕ್ಷಣವನ್ನು ಹಾಳು ಮಾಡುವ ಉದ್ದೇಶ ಹೊಂದಿದೆ ಎಂದು ಆರೋಪಿಸಿದರು. ಈ ಕುರಿತು ಇಂಡಿಯಾ ಟುಡೇ ವರದಿ ಮಾಡಿದೆ.

ಮತ್ತಷ್ಟು ಓದಿ:
ಕೇರಳ ಸರ್ಕಾರದ ಆಯುರ್ವೇದ ಕಂಪನಿಯಿಂದ ‘ಪಂಚಗವ್ಯ ಘೃತ’: ವೈರಲ್ ಪೋಸ್ಟ್​ ಹಿಂದಿರುವ ನಿಜ ಸಂಗತಿಯಿದು

ಕಾಂಗ್ರೆಸ್ ನಾಯಕ ಕಾರ್ತಿ ಪಿ ಚಿದಂಬರಂ ಹೇಳಿಕೆಯನ್ನು ಖಂಡಿಸಿದ್ದಾರೆ ಮತ್ತು ಐಐಟಿ ಮದ್ರಾಸ್ ನಿರ್ದೇಶಕರು ಸುಳ್ಳು ವಿಜ್ಞಾನವನ್ನು ಹರಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ಡಿಎಂಕೆ ನಾಯಕ ಟಿಕೆಎಸ್ ಇಳಂಗೋವನ್ ಅವರು ನಿರ್ದೇಶಕರ ಹೇಳಿಕೆಯನ್ನು ಟೀಕಿಸಿದ್ದಾರೆ ಮತ್ತು ಅವರನ್ನು ಸಂಸ್ಥೆಯಿಂದ ವರ್ಗಾಯಿಸಬೇಕು ಎಂದು ಒತ್ತಾಯಿಸಿದ್ದಾರೆ.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us