AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲೈಂಗಿಕ ದೌರ್ಜನ್ಯಕ್ಕೂ ಮುನ್ನ ಆಕೆ ಬಳಿ ನಾನು ನಿನ್ನ ಬಾಸ್, ನಾನು ಏನು ಬೇಕಿದ್ರೂ ಮಾಡಬಹುದು ಎಂದಿದ್ದ ತರುಣ್ ತೇಜ್​ಪಾಲ್

ತೆಹಲ್ಕಾ ಮಾಜಿ ಸಂಪಾದಕ ತರುಣ್ ತೇಜ್‌ಪಾಲ್‌ಗೆ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ 10 ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಲಾಗಿದೆ. 2013ರ ಪ್ರಕರಣದಲ್ಲಿ ಅವರ ಕ್ಷಮೆಯಾಚನೆಯ ಇ-ಮೇಲ್ ತೀರ್ಪಿಗೆ ಪ್ರಮುಖ ತಿರುವಾಯಿತು. ಇದು ಕೆಲಸದ ಸ್ಥಳದಲ್ಲಿ ಮಹಿಳೆಯರ ಸುರಕ್ಷತೆಗಾಗಿ ಇರುವ POSH ಕಾಯ್ದೆಯ ಇತಿಹಾಸದಲ್ಲಿ ಮಹತ್ವದ ಮೈಲಿಗಲ್ಲು. ಅಧಿಕಾರದ ದುರುಪಯೋಗಕ್ಕೆ ಈ ತೀರ್ಪು ಬಲವಾದ ಎಚ್ಚರಿಕೆ. ಸಂತ್ರಸ್ತೆಯ ಸುದೀರ್ಘ ಹೋರಾಟಕ್ಕೆ ನ್ಯಾಯ ಸಿಕ್ಕಿದೆ.

ಲೈಂಗಿಕ ದೌರ್ಜನ್ಯಕ್ಕೂ ಮುನ್ನ ಆಕೆ ಬಳಿ ನಾನು ನಿನ್ನ ಬಾಸ್, ನಾನು ಏನು ಬೇಕಿದ್ರೂ ಮಾಡಬಹುದು ಎಂದಿದ್ದ ತರುಣ್ ತೇಜ್​ಪಾಲ್
ತರುಣ್ ತೇಜ್​ಪಾಲ್
ನಯನಾ ರಾಜೀವ್
|

Updated on: Aug 07, 2026 | 8:37 AM

Share

ಪಣಜಿ, ಆಗಸ್ಟ್​ 07: ಗೋವಾದ ಪಂಚತಾರಾ ಹೋಟೆಲ್​ ಒಂದರ ಲಿಫ್ಟ್​ನಲ್ಲಿ ತಮ್ಮ ಉದ್ಯೋಗಿ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಪ್ರಕರಣದಲ್ಲಿ ತೆಹಲ್ಕಾ ನಿಯತಕಾಲಿಕೆ ಸಂಸ್ಥಾಪಕ ಹಾಗೂ ಮಾಜಿ ಸಂಪಾದಕ ತರುಣ್ ತೇಜ್​ಪಾಲ್(Tarun Tejpal)​ಗೆ 10 ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಲಾಗಿದೆ. ಈ ಘಟನೆ ನಡೆದಿದ್ದು, 2013ರಲ್ಲಿ, ಪ್ರಕರಣದ ವಿಚಾರಣೆ ನಡೆಸಿದ ಬಾಂಬೆ ಹೈಕೋರ್ಟ್‌ಗೆ ಪ್ರಾಸಿಕ್ಯೂಷನ್ ಸಲ್ಲಿಸಿದ ಸಾಕ್ಷ್ಯಾಧಾರಗಳ ಪೈಕಿ, ಘಟನೆಯ ನಂತರ ತೇಜ್‌ಪಾಲ್ ಸಂತ್ರಸ್ತೆಗೆ ಬರೆದಿದ್ದ ಕ್ಷಮೆಯಾಚನೆಯ ಇ-ಮೇಲ್ ಈ ಐತಿಹಾಸಿಕ ತೀರ್ಪಿಗೆ ಅತ್ಯಂತ ಪ್ರಮುಖ ತಿರುವಾಯಿತು.

ಲಿಫ್ಟ್‌ನಲ್ಲಿ ನಡೆದ ಘಟನೆ: 2013 ರ ನವೆಂಬರ್ 7 ಮತ್ತು 8 ರಂದು ಗೋವಾದಲ್ಲಿ ನಡೆದ ‘ಥಿಂಕ್‌ಫೆಸ್ಟ್’ ಕಾರ್ಯಕ್ರಮದ ವೇಳೆ, ತಮ್ಮ ಸಂಪಾದಕ ಹುದ್ದೆಯ ಅಧಿಕಾರವನ್ನು ದುರುಪಯೋಗಪಡಿಸಿಕೊಂಡು ಕಿರಿಯ ಮಹಿಳಾ ಪತ್ರಕರ್ತೆಯ ಮೇಲೆ ತೇಜ್‌ಪಾಲ್ ಲೈಂಗಿಕ ದೌರ್ಜನ್ಯ ಎಸಗಿದ್ದರು.

ಸಂತ್ರಸ್ತೆ ತೇಜ್‌ಪಾಲ್ ಅವರನ್ನು ತಡೆಯಲು ಯತ್ನಿಸಿದಾಗ, ತೇಜ್‌ಪಾಲ್ ನಾನು ನಿನ್ನ ಬಾಸ್, ನಾನು ಏನು ಬೇಕಾದರೂ ಮಾಡಬಹುದು ಎಂದು ಹೇಳಿದ್ದಾಗಿ ಬರೆದಿದ್ದ ಇ-ಮೇಲ್ ಸಂಭಾಷಣೆಯನ್ನು ಕೋರ್ಟ್ ಗಂಭೀರವಾಗಿ ಪರಿಗಣಿಸಿತು.

ಬೇಷರತ್ ಕ್ಷಮೆಯಾಚನೆ: ಘಟನೆ ನಡೆದ ಕೆಲವೇ ದಿನಗಳಲ್ಲಿ ತೇಜ್‌ಪಾಲ್ ಸಂತ್ರಸ್ತೆಗೆ ಕಳುಹಿಸಿದ ಇಮೇಲ್‌ನಲ್ಲಿ,ನನ್ನ ನಿರ್ಧಾರದ ವೈಫಲ್ಯ ಮತ್ತು ನಾಚಿಕೆಗೇಡಿನ ವರ್ತನೆಗಾಗಿ ನಾನು ಬೇಷರತ್ತಾಗಿ ಕ್ಷಮೆಯಾಚಿಸುತ್ತೇನೆ. ಕಚೇರಿಯ ನಂಬಿಕೆ ಮತ್ತು ಗೌರವದ ಸಂಬಂಧವನ್ನು ನಾನು ಉಲ್ಲಂಘಿಸಿದ್ದೇನೆ ಎಂದು ಬರೆದುಕೊಂಡಿದ್ದರು.

ಮತ್ತಷ್ಟು ಓದಿ: Tarun Tejpal: ತರುಣ್ ತೇಜ್‌ಪಾಲ್‌ಗೆ ಭಾರಿ ಆಘಾತ: 2013ರ ಅತ್ಯಾಚಾರ ಪ್ರಕರಣದಲ್ಲಿ ತೇಜ್‌ಪಾಲ್ ದೋಷಿ, ಹೈಕೋರ್ಟ್ ತೀರ್ಪು

ಸಾಲಿಸಿಟರಲ್ ಜನರಲ್ ತುಷಾರ್ ಮೆಹ್ತಾ ಅವರು ಈ ಇಮೇಲ್ ಅನ್ನು ನ್ಯಾಯಾಲಯದ ಮುಂದೆ ಪ್ರಬಲ ಸಾಕ್ಷಿಯಾಗಿ ಮಂಡಿಸಿ, ಆರೋಪಿಯು ತನ್ನ ಕೃತ್ಯವನ್ನು ಇ-ಮೇಲ್ ಮೂಲಕ ಸ್ಪಷ್ಟವಾಗಿ ಒಪ್ಪಿಕೊಂಡಿದ್ದಾರೆ ಎಂದು ವಾದಿಸಿದರು. 10 ವರ್ಷಗಳ ಜೈಲು ಶಿಕ್ಷೆ ಪ್ರಕಟವಾಗುತ್ತಿದ್ದಂತೆ ಪ್ರತಿಕ್ರಿಯಿಸಿದ62 ವರ್ಷದ ತೇಜ್‌ಪಾಲ್, ಕಳೆದ 13 ವರ್ಷಗಳಿಂದ ನನ್ನನ್ನು  ಗುರಿ ಮಾಡಲಾಗುತ್ತಿದೆ. ತೆಹಲ್ಕಾ ಮಾಡಿದ ಪತ್ರಿಕೋದ್ಯಮದ ತನಿಖೆಗಳಿಂದಾಗಿ ನನ್ನ ವಿರುದ್ಧ ಸೇಡು ತೀರಿಸಿಕೊಳ್ಳಲಾಗುತ್ತಿದೆ ಎಂದು ಆರೋಪಿಸಿದ್ದಾರೆ.

ವಿಚಾರಣಾ ನ್ಯಾಯಾಲಯದ ಖುಲಾಸೆಯನ್ನು ರದ್ದುಗೊಳಿಸಿರುವ ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ, ಶೀಘ್ರದಲ್ಲೇ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸುವುದಾಗಿ ತೇಜ್‌ಪಾಲ್ ವಕೀಲರು ತಿಳಿಸಿದ್ದಾರೆ. ಉದ್ಯೋಗಸ್ಥ ಮಹಿಳೆಯರಿಗೆ ಕೆಲಸದ ಸ್ಥಳದಲ್ಲಿ ಲೈಂಗಿಕ ಕಿರುಕುಳ ತಡೆಯುವ ಕಾನೂನಿನ (POSH Act) ಇತಿಹಾಸದಲ್ಲಿ ಈ ಪ್ರಕರಣ ಅತ್ಯಂತ ಪ್ರಮುಖ ಮೈಲಿಗಲ್ಲಾಗಿದೆ. ಸಂಸ್ಥೆಯ ವರಿಷ್ಠರು ಅಥವಾ ‘ಬಾಸ್’ ಸ್ಥಾನದಲ್ಲಿರುವವರು ತಮ್ಮ ಅಧಿಕಾರವನ್ನು ದುರುಪಯೋಗಪಡಿಸಿಕೊಂಡು ಕಿರಿಯ ನೌಕರರ ಮೇಲೆ ಶೋಷಣೆ ನಡೆಸುವುದಕ್ಕೆ ಈ ತೀರ್ಪು ಬಲವಾದ ಎಚ್ಚರಿಕೆಯಾಗಿದೆ.

ಸಂತ್ರಸ್ತೆಯ ಸುದೀರ್ಘ ಹೋರಾಟ: ಕಳೆದ 13 ವರ್ಷಗಳಿಂದ ಅತ್ಯಂತ ಪ್ರಭಾವಿ ಮಾಧ್ಯಮ ವ್ಯಕ್ತಿಯೊಬ್ಬರ ವಿರುದ್ಧ ಸತತ ಕಾನೂನು ಹೋರಾಟ ನಡೆಸಿದ ಸಂತ್ರಸ್ತೆಗೆ ಕೊನೆಗೂ ನ್ಯಾಯ ಸಿಕ್ಕಂತಾಗಿದೆ ಎಂದು ಮಹಿಳಾ ಹಕ್ಕುಗಳ ಹೋರಾಟಗಾರರು ಶ್ಲಾಘಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಹುಲಗೆಮ್ಮ ದೇವಸ್ಥಾನದ ಹುಂಡಿ ಎಣಿಕೆ
ಹುಲಗೆಮ್ಮ ದೇವಸ್ಥಾನದ ಹುಂಡಿ ಎಣಿಕೆ
ಖಾತೆ ಮಾಡಿಸಲು ಲಂಚ ಕೇಳಿದ ಆರೋಪ: GBA ಅಧಿಕಾರಿಗಳಿಗೆ ಸಾರ್ವಜನಿಕರಿಂದ ತರಾಟೆ
ಖಾತೆ ಮಾಡಿಸಲು ಲಂಚ ಕೇಳಿದ ಆರೋಪ: GBA ಅಧಿಕಾರಿಗಳಿಗೆ ಸಾರ್ವಜನಿಕರಿಂದ ತರಾಟೆ
ಆಷಾಢ ಮಾಸದ ಆಡಿ ಶುಕ್ರವಾರ: ದ್ವಾದಶ ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಆಷಾಢ ಮಾಸದ ಆಡಿ ಶುಕ್ರವಾರ: ದ್ವಾದಶ ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಲಾಲ್ ಬಾಗ್ ಫ್ಲವರ್ ಶೋನಲ್ಲಿ ಬಿಗ್ ಬಾಸ್ ಸೆಲ್ಫಿ ಝೋನ್; ಏನಿದರ ವಿಶೇಷ?
ಲಾಲ್ ಬಾಗ್ ಫ್ಲವರ್ ಶೋನಲ್ಲಿ ಬಿಗ್ ಬಾಸ್ ಸೆಲ್ಫಿ ಝೋನ್; ಏನಿದರ ವಿಶೇಷ?
ನಿವೃತ್ತ ಸರ್ಕಾರಿ ಅಧಿಕಾರಿಗಳು, ಸಿಬ್ಬಂದಿಗೆ ಗುಡ್​ನ್ಯೂಸ್: ವಿಡಿಯೋ ನೋಡಿ
ನಿವೃತ್ತ ಸರ್ಕಾರಿ ಅಧಿಕಾರಿಗಳು, ಸಿಬ್ಬಂದಿಗೆ ಗುಡ್​ನ್ಯೂಸ್: ವಿಡಿಯೋ ನೋಡಿ
‘ಸಿಟಿ ಲೈಟ್ಸ್’ ಸಿನಿಮಾದಲ್ಲಿ ಅನಾವರಣ ಆಗಲಿದೆ ಬೆಂಗಳೂರಿನ ಮೆಜೆಸ್ಟಿಕ್ ಲೋಕ
‘ಸಿಟಿ ಲೈಟ್ಸ್’ ಸಿನಿಮಾದಲ್ಲಿ ಅನಾವರಣ ಆಗಲಿದೆ ಬೆಂಗಳೂರಿನ ಮೆಜೆಸ್ಟಿಕ್ ಲೋಕ
‘ಸಿಟಿ ಲೈಟ್ಸ್’ ಸಿನಿಮಾ ಚಿತ್ರೀಕರಣದ ಅನುಭವ ಹಂಚಿಕೊಂಡ ಮೋನಿಷಾ: ವಿಡಿಯೋ
‘ಸಿಟಿ ಲೈಟ್ಸ್’ ಸಿನಿಮಾ ಚಿತ್ರೀಕರಣದ ಅನುಭವ ಹಂಚಿಕೊಂಡ ಮೋನಿಷಾ: ವಿಡಿಯೋ
ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ಭೀಮಾ: ನದಿ ತೀರಕ್ಕೆ ತೆರಳದಂತೆ ಕಟ್ಟೆಚ್ಚರ
ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ಭೀಮಾ: ನದಿ ತೀರಕ್ಕೆ ತೆರಳದಂತೆ ಕಟ್ಟೆಚ್ಚರ
ಭೈರತಿ ಸುರೇಶ್ ವಿರುದ್ಧ ಅವಹೇಳನಕಾರಿ ಕಮೆಂಟ್: ಸಿದ್ದರಾಮಯ್ಯ ಅಭಿಮಾನಿ ಬಂಧನ
ಭೈರತಿ ಸುರೇಶ್ ವಿರುದ್ಧ ಅವಹೇಳನಕಾರಿ ಕಮೆಂಟ್: ಸಿದ್ದರಾಮಯ್ಯ ಅಭಿಮಾನಿ ಬಂಧನ
ಕಂಚಿನ ಪದಕ ವಿಜೇತೆ ಕನ್ನಡತಿ ಶಿಲ್ಪಾಗೆ ಅದ್ಧೂರಿ ಸ್ವಾಗತ
ಕಂಚಿನ ಪದಕ ವಿಜೇತೆ ಕನ್ನಡತಿ ಶಿಲ್ಪಾಗೆ ಅದ್ಧೂರಿ ಸ್ವಾಗತ