AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಲೋಪಥಿಕ್​ ವೈದ್ಯಕೀಯ ಪದ್ಧತಿಗೆ ಅಗೌರವ ತೋರಿದ ಆರೋಪ; ಬಾಬಾ ರಾಮ್​ದೇವ್​ ವಿರುದ್ಧ ಎಫ್​ಐಆರ್​

ಯೋಗಗುರು ಬಾಬಾ ರಾಮ್​ದೇವ್ ಅವರು ಅಲೋಪಥಿಕ್​​ ವೈದ್ಯಕೀಯ ಪದ್ಧತಿಯನ್ನು ಅವಮಾನಿಸಿದ್ದಾರೆ ಎಂದು ತೀವ್ರವಾಗಿ ಅಸಮಾಧಾನ ವ್ಯಕ್ತಪಡಿಸಿದ ಭಾರತೀಯ ವೈದ್ಯಕೀಯ ಸಂಘ ಈ ಬಗ್ಗೆ ಮೊದಲು ಆರೋಗ್ಯ ಸಚಿವ ಹರ್ಷವರ್ಧನ್​​ಗೆ ಪತ್ರ ಬರೆದು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿತ್ತು.

ಅಲೋಪಥಿಕ್​ ವೈದ್ಯಕೀಯ ಪದ್ಧತಿಗೆ ಅಗೌರವ ತೋರಿದ ಆರೋಪ; ಬಾಬಾ ರಾಮ್​ದೇವ್​ ವಿರುದ್ಧ ಎಫ್​ಐಆರ್​
ಯೋಗ ಗುರು ಬಾಬಾ ರಾಮ್​ದೇವ್​
Lakshmi Hegde
|

Updated on: May 27, 2021 | 7:10 PM

Share

ಯೋಗಗುರು ಬಾಬಾ ರಾಮ್​ದೇವ್ ವಿರುದ್ಧ ಭಾರತೀಯ ವೈದ್ಯಕೀಯ ಸಂಘ ನೀಡಿದ ದೂರಿನ ಅನ್ವಯ ಇದೀಗ ನವದೆಹಲಿಯ ಐಪಿ ಎಸ್ಟೇಟ್ ಪೊಲೀಸ್​ ಠಾಣೆಯಲ್ಲಿ ಎಫ್​ಐಆರ್​ ದಾಖಲಾಗಿದೆ. ಬಾಬಾ ರಾಮ್​ ದೇವ್ ಅವರು ಅಲೋಫಥಿಕ್​ ವೈದ್ಯಕೀಯ ಪದ್ಧತಿಯನ್ನು ಒಂದು ಮೂರ್ಖ ವಿಜ್ಞಾನ ಎಂದು ಕರೆದ ವಿಡಿಯೋ ವೈರಲ್ ಆದಾಗಿನಿಂದ ಐಎಂಎ ಅವರ ವಿರುದ್ಧ ಕ್ರಮಕ್ಕೆ ಒತ್ತಾಯಿಸುತ್ತಲೇ ಇದೆ. ಬಾಬಾ ರಾಮ್​ ದೇವ್​ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಪ್ರಧಾನಿ ನರೇಂದ್ರ ಮೋದಿಯವರಿಗೂ ಪತ್ರ ಬರೆದಿದೆ.

ಯೋಗಗುರು ಬಾಬಾ ರಾಮ್​ದೇವ್ ಅವರು ಅಲೋಪಥಿಕ್​​ ವೈದ್ಯಕೀಯ ಪದ್ಧತಿಯನ್ನು ಅವಮಾನಿಸಿದ್ದಾರೆ ಎಂದು ತೀವ್ರವಾಗಿ ಅಸಮಾಧಾನ ವ್ಯಕ್ತಪಡಿಸಿದ ಭಾರತೀಯ ವೈದ್ಯಕೀಯ ಸಂಘ ಈ ಬಗ್ಗೆ ಮೊದಲು ಆರೋಗ್ಯ ಸಚಿವ ಹರ್ಷವರ್ಧನ್​​ಗೆ ಪತ್ರ ಬರೆದು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿತ್ತು. ಅದಾದ ಬಳಿಕ ಬಾಬಾ ರಾಮ್​ ದೇವ್​ಗೆ ಪತ್ರ ಬರೆದಿದ್ದ ಹರ್ಷವರ್ಧನ್​, ಅಲೋಪಥಿಕ್​ಗೆ ಅವಮಾನ ಮಾಡುವ ಮೂಲಕ ಇಡೀ ದೇಶದ ಭಾವನೆಗೆ ಧಕ್ಕೆ ತಂದಿದ್ದೀರಿ. ನೀವು ಹೇಳಿಕೆಯನ್ನು ವಾಪಸ್ ಪಡೆಯಬೇಕು ಎಂದು ಹೇಳಿದ್ದರು.

ಇನ್ನು ಈ ಬಗ್ಗೆ ಸ್ಪಷ್ಟನೆ ನೀಡಿದ್ದ ಪತಂಜಲಿ ಯೋಗ ಟ್ರಸ್ಟ್​, ಬಾಬಾ ರಾಮ್​ದೇವ್​ ಅವರಿಗೆ ಅಲೋಪಥಿಕ್ ಬಗ್ಗೆ ಅಗೌರವ ಇಲ್ಲ. ಅವರು ವಾಟ್ಸ್​ಆ್ಯಪ್​​ನಲ್ಲಿ ಬಂದಿದ್ದ ಸಂದೇಶವೊಂದನ್ನು ಓದುತ್ತಿದ್ದರು ಎಂದು ಹೇಳಿತ್ತು. ಆದರೆ ಐಎಂಎ ಈ ಸಮರ್ಥನೆಯಿಂದ ಸಮಾಧಾನಗೊಂಡಿಲ್ಲ. ರಾಮ್​ ದೇವ್ ವಿರುದ್ಧ 1000 ಕೋಟಿ ರೂ.ಮಾನನಷ್ಟ ಮೊಕದ್ದಮೆಯನ್ನು ಹೂಡಿದೆ. ಇದೀಗ ಪೊಲೀಸರಿಗೂ ದೂರು ನೀಡಿದ್ದು, ಎಫ್​​ಐಆರ್ ದಾಖಲಾಗಿದೆ.

ಇದನ್ನೂ ಓದಿ: Cyclone Yaas ಯಾಸ್ ಚಂಡಮಾರುತದ ಪರಿಣಾಮಗಳ ಬಗ್ಗೆ ನಾಳೆ ಮೋದಿ ಜತೆ ಅವಲೋಕನ ಸಭೆ ನಡೆಸಲಿದ್ದಾರೆ ಮಮತಾ ಬ್ಯಾನರ್ಜಿ

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ