AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಲೋಪಥಿಕ್​ ವೈದ್ಯಕೀಯ ಪದ್ಧತಿಗೆ ಅಗೌರವ ತೋರಿದ ಆರೋಪ; ಬಾಬಾ ರಾಮ್​ದೇವ್​ ವಿರುದ್ಧ ಎಫ್​ಐಆರ್​

ಯೋಗಗುರು ಬಾಬಾ ರಾಮ್​ದೇವ್ ಅವರು ಅಲೋಪಥಿಕ್​​ ವೈದ್ಯಕೀಯ ಪದ್ಧತಿಯನ್ನು ಅವಮಾನಿಸಿದ್ದಾರೆ ಎಂದು ತೀವ್ರವಾಗಿ ಅಸಮಾಧಾನ ವ್ಯಕ್ತಪಡಿಸಿದ ಭಾರತೀಯ ವೈದ್ಯಕೀಯ ಸಂಘ ಈ ಬಗ್ಗೆ ಮೊದಲು ಆರೋಗ್ಯ ಸಚಿವ ಹರ್ಷವರ್ಧನ್​​ಗೆ ಪತ್ರ ಬರೆದು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿತ್ತು.

ಅಲೋಪಥಿಕ್​ ವೈದ್ಯಕೀಯ ಪದ್ಧತಿಗೆ ಅಗೌರವ ತೋರಿದ ಆರೋಪ; ಬಾಬಾ ರಾಮ್​ದೇವ್​ ವಿರುದ್ಧ ಎಫ್​ಐಆರ್​
ಯೋಗ ಗುರು ಬಾಬಾ ರಾಮ್​ದೇವ್​
Lakshmi Hegde
|

Updated on: May 27, 2021 | 7:10 PM

Share

ಯೋಗಗುರು ಬಾಬಾ ರಾಮ್​ದೇವ್ ವಿರುದ್ಧ ಭಾರತೀಯ ವೈದ್ಯಕೀಯ ಸಂಘ ನೀಡಿದ ದೂರಿನ ಅನ್ವಯ ಇದೀಗ ನವದೆಹಲಿಯ ಐಪಿ ಎಸ್ಟೇಟ್ ಪೊಲೀಸ್​ ಠಾಣೆಯಲ್ಲಿ ಎಫ್​ಐಆರ್​ ದಾಖಲಾಗಿದೆ. ಬಾಬಾ ರಾಮ್​ ದೇವ್ ಅವರು ಅಲೋಫಥಿಕ್​ ವೈದ್ಯಕೀಯ ಪದ್ಧತಿಯನ್ನು ಒಂದು ಮೂರ್ಖ ವಿಜ್ಞಾನ ಎಂದು ಕರೆದ ವಿಡಿಯೋ ವೈರಲ್ ಆದಾಗಿನಿಂದ ಐಎಂಎ ಅವರ ವಿರುದ್ಧ ಕ್ರಮಕ್ಕೆ ಒತ್ತಾಯಿಸುತ್ತಲೇ ಇದೆ. ಬಾಬಾ ರಾಮ್​ ದೇವ್​ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಪ್ರಧಾನಿ ನರೇಂದ್ರ ಮೋದಿಯವರಿಗೂ ಪತ್ರ ಬರೆದಿದೆ.

ಯೋಗಗುರು ಬಾಬಾ ರಾಮ್​ದೇವ್ ಅವರು ಅಲೋಪಥಿಕ್​​ ವೈದ್ಯಕೀಯ ಪದ್ಧತಿಯನ್ನು ಅವಮಾನಿಸಿದ್ದಾರೆ ಎಂದು ತೀವ್ರವಾಗಿ ಅಸಮಾಧಾನ ವ್ಯಕ್ತಪಡಿಸಿದ ಭಾರತೀಯ ವೈದ್ಯಕೀಯ ಸಂಘ ಈ ಬಗ್ಗೆ ಮೊದಲು ಆರೋಗ್ಯ ಸಚಿವ ಹರ್ಷವರ್ಧನ್​​ಗೆ ಪತ್ರ ಬರೆದು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿತ್ತು. ಅದಾದ ಬಳಿಕ ಬಾಬಾ ರಾಮ್​ ದೇವ್​ಗೆ ಪತ್ರ ಬರೆದಿದ್ದ ಹರ್ಷವರ್ಧನ್​, ಅಲೋಪಥಿಕ್​ಗೆ ಅವಮಾನ ಮಾಡುವ ಮೂಲಕ ಇಡೀ ದೇಶದ ಭಾವನೆಗೆ ಧಕ್ಕೆ ತಂದಿದ್ದೀರಿ. ನೀವು ಹೇಳಿಕೆಯನ್ನು ವಾಪಸ್ ಪಡೆಯಬೇಕು ಎಂದು ಹೇಳಿದ್ದರು.

ಇನ್ನು ಈ ಬಗ್ಗೆ ಸ್ಪಷ್ಟನೆ ನೀಡಿದ್ದ ಪತಂಜಲಿ ಯೋಗ ಟ್ರಸ್ಟ್​, ಬಾಬಾ ರಾಮ್​ದೇವ್​ ಅವರಿಗೆ ಅಲೋಪಥಿಕ್ ಬಗ್ಗೆ ಅಗೌರವ ಇಲ್ಲ. ಅವರು ವಾಟ್ಸ್​ಆ್ಯಪ್​​ನಲ್ಲಿ ಬಂದಿದ್ದ ಸಂದೇಶವೊಂದನ್ನು ಓದುತ್ತಿದ್ದರು ಎಂದು ಹೇಳಿತ್ತು. ಆದರೆ ಐಎಂಎ ಈ ಸಮರ್ಥನೆಯಿಂದ ಸಮಾಧಾನಗೊಂಡಿಲ್ಲ. ರಾಮ್​ ದೇವ್ ವಿರುದ್ಧ 1000 ಕೋಟಿ ರೂ.ಮಾನನಷ್ಟ ಮೊಕದ್ದಮೆಯನ್ನು ಹೂಡಿದೆ. ಇದೀಗ ಪೊಲೀಸರಿಗೂ ದೂರು ನೀಡಿದ್ದು, ಎಫ್​​ಐಆರ್ ದಾಖಲಾಗಿದೆ.

ಇದನ್ನೂ ಓದಿ: Cyclone Yaas ಯಾಸ್ ಚಂಡಮಾರುತದ ಪರಿಣಾಮಗಳ ಬಗ್ಗೆ ನಾಳೆ ಮೋದಿ ಜತೆ ಅವಲೋಕನ ಸಭೆ ನಡೆಸಲಿದ್ದಾರೆ ಮಮತಾ ಬ್ಯಾನರ್ಜಿ

Follow Us
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ವಂಚನೆ ಆರೋಪ, ಸ್ಪಷ್ಟನೆ ನೀಡಿದ ನಿರ್ದೇಶಕ ಓಂ ಪ್ರಕಾಶ್ ರಾವ್
ವಂಚನೆ ಆರೋಪ, ಸ್ಪಷ್ಟನೆ ನೀಡಿದ ನಿರ್ದೇಶಕ ಓಂ ಪ್ರಕಾಶ್ ರಾವ್
ತಹಶೀಲ್ದಾರ್ ಕಚೇರಿಯ ಶೌಚಾಲಯ ಸ್ವಚ್ಛಗೊಳಿಸಿದ ಸಚಿವ
ತಹಶೀಲ್ದಾರ್ ಕಚೇರಿಯ ಶೌಚಾಲಯ ಸ್ವಚ್ಛಗೊಳಿಸಿದ ಸಚಿವ
'ಜೈಲಿನಲ್ಲಿ ಹಣ ಕೊಟ್ಟರೆ ಅದು ಸಿಗುತ್ತೆ': ಆತ ಬಿಚ್ಚಿಟ್ಟ ಸ್ಫೋಟಕ ಸತ್ಯ
'ಜೈಲಿನಲ್ಲಿ ಹಣ ಕೊಟ್ಟರೆ ಅದು ಸಿಗುತ್ತೆ': ಆತ ಬಿಚ್ಚಿಟ್ಟ ಸ್ಫೋಟಕ ಸತ್ಯ
ಅವೈಜ್ಞಾನಿಕ ಪಾರ್ಕಿಂಗ್‌ಗೆ 3 ದಿನಗಳಲ್ಲಿ ಮೂರು ಬಲಿ
ಅವೈಜ್ಞಾನಿಕ ಪಾರ್ಕಿಂಗ್‌ಗೆ 3 ದಿನಗಳಲ್ಲಿ ಮೂರು ಬಲಿ
ಸಕ್ಕರೆ ಬೆಲೆ ಏರಿಕೆ ಕಡಿವಾಣಕ್ಕೆ ಸರ್ಕಾರ ಪ್ಲಾನ್; ಸೆ. 1ರಿಂದ ಹೊಸ ನಿಯಮ
ಸಕ್ಕರೆ ಬೆಲೆ ಏರಿಕೆ ಕಡಿವಾಣಕ್ಕೆ ಸರ್ಕಾರ ಪ್ಲಾನ್; ಸೆ. 1ರಿಂದ ಹೊಸ ನಿಯಮ
ಮೈಸೂರಿನಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋ.. ಸ್ಪೆಷಾಲಿಟಿ ಏನ್ಗೊತ್ತಾ?
ಮೈಸೂರಿನಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋ.. ಸ್ಪೆಷಾಲಿಟಿ ಏನ್ಗೊತ್ತಾ?
TV9 ರಿಯಲ್ ಎಸ್ಟೇಟ್ ಎಕ್ಸ್​ಪೋ ಬಗ್ಗೆ ಅರುಣ್ ಯೋಗಿರಾಜ್ ಹೇಳಿದ್ದಿಷ್ಟು!
TV9 ರಿಯಲ್ ಎಸ್ಟೇಟ್ ಎಕ್ಸ್​ಪೋ ಬಗ್ಗೆ ಅರುಣ್ ಯೋಗಿರಾಜ್ ಹೇಳಿದ್ದಿಷ್ಟು!