AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಲೋಪಥಿಕ್​ ವೈದ್ಯಕೀಯ ಪದ್ಧತಿಗೆ ಅಗೌರವ ತೋರಿದ ಆರೋಪ; ಬಾಬಾ ರಾಮ್​ದೇವ್​ ವಿರುದ್ಧ ಎಫ್​ಐಆರ್​

ಯೋಗಗುರು ಬಾಬಾ ರಾಮ್​ದೇವ್ ಅವರು ಅಲೋಪಥಿಕ್​​ ವೈದ್ಯಕೀಯ ಪದ್ಧತಿಯನ್ನು ಅವಮಾನಿಸಿದ್ದಾರೆ ಎಂದು ತೀವ್ರವಾಗಿ ಅಸಮಾಧಾನ ವ್ಯಕ್ತಪಡಿಸಿದ ಭಾರತೀಯ ವೈದ್ಯಕೀಯ ಸಂಘ ಈ ಬಗ್ಗೆ ಮೊದಲು ಆರೋಗ್ಯ ಸಚಿವ ಹರ್ಷವರ್ಧನ್​​ಗೆ ಪತ್ರ ಬರೆದು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿತ್ತು.

ಅಲೋಪಥಿಕ್​ ವೈದ್ಯಕೀಯ ಪದ್ಧತಿಗೆ ಅಗೌರವ ತೋರಿದ ಆರೋಪ; ಬಾಬಾ ರಾಮ್​ದೇವ್​ ವಿರುದ್ಧ ಎಫ್​ಐಆರ್​
ಯೋಗ ಗುರು ಬಾಬಾ ರಾಮ್​ದೇವ್​
Lakshmi Hegde
|

Updated on: May 27, 2021 | 7:10 PM

Share

ಯೋಗಗುರು ಬಾಬಾ ರಾಮ್​ದೇವ್ ವಿರುದ್ಧ ಭಾರತೀಯ ವೈದ್ಯಕೀಯ ಸಂಘ ನೀಡಿದ ದೂರಿನ ಅನ್ವಯ ಇದೀಗ ನವದೆಹಲಿಯ ಐಪಿ ಎಸ್ಟೇಟ್ ಪೊಲೀಸ್​ ಠಾಣೆಯಲ್ಲಿ ಎಫ್​ಐಆರ್​ ದಾಖಲಾಗಿದೆ. ಬಾಬಾ ರಾಮ್​ ದೇವ್ ಅವರು ಅಲೋಫಥಿಕ್​ ವೈದ್ಯಕೀಯ ಪದ್ಧತಿಯನ್ನು ಒಂದು ಮೂರ್ಖ ವಿಜ್ಞಾನ ಎಂದು ಕರೆದ ವಿಡಿಯೋ ವೈರಲ್ ಆದಾಗಿನಿಂದ ಐಎಂಎ ಅವರ ವಿರುದ್ಧ ಕ್ರಮಕ್ಕೆ ಒತ್ತಾಯಿಸುತ್ತಲೇ ಇದೆ. ಬಾಬಾ ರಾಮ್​ ದೇವ್​ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಪ್ರಧಾನಿ ನರೇಂದ್ರ ಮೋದಿಯವರಿಗೂ ಪತ್ರ ಬರೆದಿದೆ.

ಯೋಗಗುರು ಬಾಬಾ ರಾಮ್​ದೇವ್ ಅವರು ಅಲೋಪಥಿಕ್​​ ವೈದ್ಯಕೀಯ ಪದ್ಧತಿಯನ್ನು ಅವಮಾನಿಸಿದ್ದಾರೆ ಎಂದು ತೀವ್ರವಾಗಿ ಅಸಮಾಧಾನ ವ್ಯಕ್ತಪಡಿಸಿದ ಭಾರತೀಯ ವೈದ್ಯಕೀಯ ಸಂಘ ಈ ಬಗ್ಗೆ ಮೊದಲು ಆರೋಗ್ಯ ಸಚಿವ ಹರ್ಷವರ್ಧನ್​​ಗೆ ಪತ್ರ ಬರೆದು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿತ್ತು. ಅದಾದ ಬಳಿಕ ಬಾಬಾ ರಾಮ್​ ದೇವ್​ಗೆ ಪತ್ರ ಬರೆದಿದ್ದ ಹರ್ಷವರ್ಧನ್​, ಅಲೋಪಥಿಕ್​ಗೆ ಅವಮಾನ ಮಾಡುವ ಮೂಲಕ ಇಡೀ ದೇಶದ ಭಾವನೆಗೆ ಧಕ್ಕೆ ತಂದಿದ್ದೀರಿ. ನೀವು ಹೇಳಿಕೆಯನ್ನು ವಾಪಸ್ ಪಡೆಯಬೇಕು ಎಂದು ಹೇಳಿದ್ದರು.

ಇನ್ನು ಈ ಬಗ್ಗೆ ಸ್ಪಷ್ಟನೆ ನೀಡಿದ್ದ ಪತಂಜಲಿ ಯೋಗ ಟ್ರಸ್ಟ್​, ಬಾಬಾ ರಾಮ್​ದೇವ್​ ಅವರಿಗೆ ಅಲೋಪಥಿಕ್ ಬಗ್ಗೆ ಅಗೌರವ ಇಲ್ಲ. ಅವರು ವಾಟ್ಸ್​ಆ್ಯಪ್​​ನಲ್ಲಿ ಬಂದಿದ್ದ ಸಂದೇಶವೊಂದನ್ನು ಓದುತ್ತಿದ್ದರು ಎಂದು ಹೇಳಿತ್ತು. ಆದರೆ ಐಎಂಎ ಈ ಸಮರ್ಥನೆಯಿಂದ ಸಮಾಧಾನಗೊಂಡಿಲ್ಲ. ರಾಮ್​ ದೇವ್ ವಿರುದ್ಧ 1000 ಕೋಟಿ ರೂ.ಮಾನನಷ್ಟ ಮೊಕದ್ದಮೆಯನ್ನು ಹೂಡಿದೆ. ಇದೀಗ ಪೊಲೀಸರಿಗೂ ದೂರು ನೀಡಿದ್ದು, ಎಫ್​​ಐಆರ್ ದಾಖಲಾಗಿದೆ.

ಇದನ್ನೂ ಓದಿ: Cyclone Yaas ಯಾಸ್ ಚಂಡಮಾರುತದ ಪರಿಣಾಮಗಳ ಬಗ್ಗೆ ನಾಳೆ ಮೋದಿ ಜತೆ ಅವಲೋಕನ ಸಭೆ ನಡೆಸಲಿದ್ದಾರೆ ಮಮತಾ ಬ್ಯಾನರ್ಜಿ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ