AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಲೋಪಥಿಕ್​ ವೈದ್ಯಕೀಯ ಪದ್ಧತಿಗೆ ಅಗೌರವ ತೋರಿದ ಆರೋಪ; ಬಾಬಾ ರಾಮ್​ದೇವ್​ ವಿರುದ್ಧ ಎಫ್​ಐಆರ್​

ಯೋಗಗುರು ಬಾಬಾ ರಾಮ್​ದೇವ್ ಅವರು ಅಲೋಪಥಿಕ್​​ ವೈದ್ಯಕೀಯ ಪದ್ಧತಿಯನ್ನು ಅವಮಾನಿಸಿದ್ದಾರೆ ಎಂದು ತೀವ್ರವಾಗಿ ಅಸಮಾಧಾನ ವ್ಯಕ್ತಪಡಿಸಿದ ಭಾರತೀಯ ವೈದ್ಯಕೀಯ ಸಂಘ ಈ ಬಗ್ಗೆ ಮೊದಲು ಆರೋಗ್ಯ ಸಚಿವ ಹರ್ಷವರ್ಧನ್​​ಗೆ ಪತ್ರ ಬರೆದು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿತ್ತು.

ಅಲೋಪಥಿಕ್​ ವೈದ್ಯಕೀಯ ಪದ್ಧತಿಗೆ ಅಗೌರವ ತೋರಿದ ಆರೋಪ; ಬಾಬಾ ರಾಮ್​ದೇವ್​ ವಿರುದ್ಧ ಎಫ್​ಐಆರ್​
ಯೋಗ ಗುರು ಬಾಬಾ ರಾಮ್​ದೇವ್​
Lakshmi Hegde
|

Updated on: May 27, 2021 | 7:10 PM

Share

ಯೋಗಗುರು ಬಾಬಾ ರಾಮ್​ದೇವ್ ವಿರುದ್ಧ ಭಾರತೀಯ ವೈದ್ಯಕೀಯ ಸಂಘ ನೀಡಿದ ದೂರಿನ ಅನ್ವಯ ಇದೀಗ ನವದೆಹಲಿಯ ಐಪಿ ಎಸ್ಟೇಟ್ ಪೊಲೀಸ್​ ಠಾಣೆಯಲ್ಲಿ ಎಫ್​ಐಆರ್​ ದಾಖಲಾಗಿದೆ. ಬಾಬಾ ರಾಮ್​ ದೇವ್ ಅವರು ಅಲೋಫಥಿಕ್​ ವೈದ್ಯಕೀಯ ಪದ್ಧತಿಯನ್ನು ಒಂದು ಮೂರ್ಖ ವಿಜ್ಞಾನ ಎಂದು ಕರೆದ ವಿಡಿಯೋ ವೈರಲ್ ಆದಾಗಿನಿಂದ ಐಎಂಎ ಅವರ ವಿರುದ್ಧ ಕ್ರಮಕ್ಕೆ ಒತ್ತಾಯಿಸುತ್ತಲೇ ಇದೆ. ಬಾಬಾ ರಾಮ್​ ದೇವ್​ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಪ್ರಧಾನಿ ನರೇಂದ್ರ ಮೋದಿಯವರಿಗೂ ಪತ್ರ ಬರೆದಿದೆ.

ಯೋಗಗುರು ಬಾಬಾ ರಾಮ್​ದೇವ್ ಅವರು ಅಲೋಪಥಿಕ್​​ ವೈದ್ಯಕೀಯ ಪದ್ಧತಿಯನ್ನು ಅವಮಾನಿಸಿದ್ದಾರೆ ಎಂದು ತೀವ್ರವಾಗಿ ಅಸಮಾಧಾನ ವ್ಯಕ್ತಪಡಿಸಿದ ಭಾರತೀಯ ವೈದ್ಯಕೀಯ ಸಂಘ ಈ ಬಗ್ಗೆ ಮೊದಲು ಆರೋಗ್ಯ ಸಚಿವ ಹರ್ಷವರ್ಧನ್​​ಗೆ ಪತ್ರ ಬರೆದು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿತ್ತು. ಅದಾದ ಬಳಿಕ ಬಾಬಾ ರಾಮ್​ ದೇವ್​ಗೆ ಪತ್ರ ಬರೆದಿದ್ದ ಹರ್ಷವರ್ಧನ್​, ಅಲೋಪಥಿಕ್​ಗೆ ಅವಮಾನ ಮಾಡುವ ಮೂಲಕ ಇಡೀ ದೇಶದ ಭಾವನೆಗೆ ಧಕ್ಕೆ ತಂದಿದ್ದೀರಿ. ನೀವು ಹೇಳಿಕೆಯನ್ನು ವಾಪಸ್ ಪಡೆಯಬೇಕು ಎಂದು ಹೇಳಿದ್ದರು.

ಇನ್ನು ಈ ಬಗ್ಗೆ ಸ್ಪಷ್ಟನೆ ನೀಡಿದ್ದ ಪತಂಜಲಿ ಯೋಗ ಟ್ರಸ್ಟ್​, ಬಾಬಾ ರಾಮ್​ದೇವ್​ ಅವರಿಗೆ ಅಲೋಪಥಿಕ್ ಬಗ್ಗೆ ಅಗೌರವ ಇಲ್ಲ. ಅವರು ವಾಟ್ಸ್​ಆ್ಯಪ್​​ನಲ್ಲಿ ಬಂದಿದ್ದ ಸಂದೇಶವೊಂದನ್ನು ಓದುತ್ತಿದ್ದರು ಎಂದು ಹೇಳಿತ್ತು. ಆದರೆ ಐಎಂಎ ಈ ಸಮರ್ಥನೆಯಿಂದ ಸಮಾಧಾನಗೊಂಡಿಲ್ಲ. ರಾಮ್​ ದೇವ್ ವಿರುದ್ಧ 1000 ಕೋಟಿ ರೂ.ಮಾನನಷ್ಟ ಮೊಕದ್ದಮೆಯನ್ನು ಹೂಡಿದೆ. ಇದೀಗ ಪೊಲೀಸರಿಗೂ ದೂರು ನೀಡಿದ್ದು, ಎಫ್​​ಐಆರ್ ದಾಖಲಾಗಿದೆ.

ಇದನ್ನೂ ಓದಿ: Cyclone Yaas ಯಾಸ್ ಚಂಡಮಾರುತದ ಪರಿಣಾಮಗಳ ಬಗ್ಗೆ ನಾಳೆ ಮೋದಿ ಜತೆ ಅವಲೋಕನ ಸಭೆ ನಡೆಸಲಿದ್ದಾರೆ ಮಮತಾ ಬ್ಯಾನರ್ಜಿ

Follow Us
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!