AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪತಾಂಜಲಿಯ ಕೊರೋನಿಲ್ ಅನ್ನು ಕೋವಿಡ್ ಔಷಧಿ ಕಿಟ್​ನಲ್ಲಿ ಸೇರಿಸದಿರುವಂತೆ ಐಎಮ್​ಎ ಆಗ್ರಹ

ಈಗ ಜಾರಿಯಲ್ಲಿರುವ ತಿಕ್ಕಾಟದ ನಡುವೆಯೇ ಉತ್ತರಾಖಂಡ್ ಕೋವಿಡ್-10ಕಿಟ್​ನಲ್ಲಿ ಕೊರೋನಿಲ್ ಸೇರಿಸಬೇಕೆನ್ನುವ ಪ್ರಸ್ತಾಪವನ್ನು ಪತಾಂಜಲಿ ಮಾಡಿದೆ. ಅಲೋಪಥಿ ಮತ್ತು ಅಯುರ್ವೇದವನ್ನು ಬೆರೆಸುವುದು ವೈದ್ಯಕೀಯ ಪ್ರಮಾದ ಎಂದು ಐಎಮ್​ಎ ಹೇಳಿದೆ.

ಪತಾಂಜಲಿಯ ಕೊರೋನಿಲ್ ಅನ್ನು ಕೋವಿಡ್ ಔಷಧಿ ಕಿಟ್​ನಲ್ಲಿ ಸೇರಿಸದಿರುವಂತೆ ಐಎಮ್​ಎ ಆಗ್ರಹ
ಪತಾಂಜಲಿಯ ಕೊರೋನಾ ಕಿಟ್
TV9 Web
| Edited By: ಅರುಣ್​ ಕುಮಾರ್​ ಬೆಳ್ಳಿ|

Updated on:Jun 06, 2021 | 1:44 AM

Share

ಭಾರತೀಯ ವೈದ್ಯಕೀಯ ಸಂಸ್ಥೆ (ಐಎಮ್​ಎ)ಯ ಉತ್ತರಾಖಂಡ್ ಚಾಪ್ಟರ್ ಪತಾಂಜಲಿ ಆಯುರ್ವೇದ ಸಂಸ್ಥೆಯ ಕೊರೋನಿಲ್ ಔಷಧಿಯನ್ನು ಉತ್ತರಾಖಂಡ್ ಸರ್ಕಾರದ ಕೋವಿಡ್-19 ಕಿಟ್​ನಲ್ಲಿ ಸೇರಿಸುವುದನ್ನು ವಿರೋಧಿಸಿದೆ. ವೈದ್ಯರ ಮಂಡಳಿಯು ಕರೋನಿಲ್ ವಿಶ್ವ ಆರೋಗ್ಯ ಸಂಸ್ಥೆಯಿಂದ ಅನುಮೋದನೆ ಪಡೆದಿಲ್ಲ ಮತ್ತ ಭಾರತದ ಔಷಧ ಮಹಾ ನಿಯಂತ್ರಕರಿಂದಲೂ (ಡಿಸಿಜಿಐ ) ಅದೊಂದು ಔಷಧಿ ಎಂಬಂತೆ ದೃಢಪಟ್ಟಿಲ್ಲ ಎಂದು ಹೇಳಿದೆ. ‘ಆದರೆ ಕೇಂದ್ರ ಸರ್ಕಾರದ ಆಯುಷ್ ವಿಭಾಗದಿಂದ ಕೊರೋನಿಲ್ ಒಂದು ಪೂರಕ ಆಹಾರ ವಸ್ತುವಾಗಿ ಅಂಗೀಕೃತಗೊಂಡಿದೆ ಮತ್ತು ಬಾಬಾ ರಾಮದೇವ್ ಅವರು ರಾಷ್ಟ್ರೀಯ ಟಿವಿ ಚ್ಯಾನಲ್​ಗಳಲ್ಲಿ ಪ್ರತಿಗಂಟೆ ಜಾಹೀರಾತುಗಳ ಮೂಲಕ ದಾವೆ ಮಾಡುತ್ತಿರುವ ಹಾಗೆ ಅದು ಡ್ರಗ್ ಅಥವಾ ಔಷಧಿ ಅಲ್ಲ,’ ಎಂದು ಉತ್ತರಾಖಂಡ್ ಐಎಮ್​ಎನ ರಾಜ್ಯ ಕಾರ್ಯದರ್ಶಿಯಾಗಿರುವ ಡಾ ಅಜಯ ಖನ್ನಾ ಅವರು ರಾಜ್ಯದ ಮುಖ್ಯ ಕಾರ್ಯದರ್ಶಿಗಳಿಗೆ ಬರೆದಿರುವ ಪತ್ರದಲ್ಲಿ ಹೇಳಿದ್ದಾರೆ.

ಅಲೋಫೆಥಿಕ್ ಔಷಧಿಗಳ ಬಗ್ಗೆ ಯೋಗ ಗುರು ಬಾಬಾ ರಾಮ್​​ದೇವ್ ಅವರು ಹಗುರವಾಗಿ ಮಾತಾಡಿದ ನಂತರ ರೊಚ್ಚಿಗೆದ್ದಿರುವ ಭಾರತೀಯ ವೈದ್ಯಕೀಯ ಸಂಸ್ಥೆ ಅವರ ವಿರುದ್ಧ ಯುದ್ಧವನ್ನೇ ಸಾರಿದೆ. ವಿವಾದ ಇನ್ನೂ ಬಿಸಿಯಾಗಿದ್ದು ರಾಮ್​ದೇವ್ ಅವರ ವಿರುದ್ಧ ಐಎಮ್​ಎ ದೂರುಗಳನ್ನು ದಾಖಲಿಸಿದೆ.

ಈಗ ಜಾರಿಯಲ್ಲಿರುವ ತಿಕ್ಕಾಟದ ನಡುವೆಯೇ ಉತ್ತರಾಖಂಡ್ ಕೋವಿಡ್-10ಕಿಟ್​ನಲ್ಲಿ ಕೊರೋನಿಲ್ ಸೇರಿಸಬೇಕೆನ್ನುವ ಪ್ರಸ್ತಾಪವನ್ನು ಪತಾಂಜಲಿ ಮಾಡಿದೆ. ಅಲೋಪಥಿ ಮತ್ತು ಅಯುರ್ವೇದವನ್ನು ಬೆರೆಸುವುದು ವೈದ್ಯಕೀಯ ಪ್ರಮಾದ ಎಂದು ಐಎಮ್​ಎ ಹೇಳಿದೆ.

‘ಕೊರೋನಿಲ್ ಅನ್ನು ಅಲೋಪೆಥಿಕ್ ಔಷಧಿಗಳೊಂದಿಗೆ ಬೆರಸುವುದು ಮಿಕ್ಸೊಪಥಿಗೆ ಎಡೆಮಾಡಿಕೊಟ್ಟಂತಾಗುತ್ತದೆ ಹಾಗೂ ಗೌರವಾನ್ವಿತ ಸುಪ್ರೀಮ್ ಕೋರ್ಟಿನ ರೂಲಿಂಗ್ ಒಂದರ ಪ್ರಕಾರ ಅಲೋಪಥಿ ಮತ್ತು ಅಯುರ್ವೇದದ ಕಾಕ್​ಟೇಲ್​ಗೆ ಅನುಮತಿಯಿಲ್ಲ. ಅಪೆಕ್ಸ್ ಕೋರ್ಟ್​ ಅಲ್ಲದೆ ವಿವಿಧ ರಾಜ್ಯಗಳಲ್ಲಿನ ಕೋರ್ಟುಗಳೂ ಮಿಕ್ಸೊಪಥಿ ಸಲ್ಲದು ಎಂದು ಹೇಳಿವೆ,’ ಎಂದು ಐಎಮ್​ಎ ಹೇಳಿದೆ.

ಕೊರೋನಿಲ್ ಲಾಂಚ್​ ಆದಾಗಿನಿಂದ ವಿವಾದದಲ್ಲಿ ಮುಳುಗಿದೆ. ಕಳೆದ ವರ್ಷ ಉತ್ತರಾಖಂಡ್ ಸರ್ಕಾರವು ಪತಾಂಜಲಿಗೆ ರೋಗ ಇರೋಧಕ ಶಕ್ತಿಯನ್ನು ಹೆಚ್ಚಿಸುವ ಉತ್ಪಾದನೆ ತಯಾರಿಸಲು ಅನುಮತಿ ನೀಡಲಾಗಿತ್ತೇ ಹೊರತು ಕೊರೋನಾ ವೈರಸ್​ ಸೋಂಕಿನ ಚಿಕಿತ್ಸೆಗೆ ಸಂಬಂಧಿಸಿದ ಯಾವುದೇ ಔಷಧಿ ತಯಾರಿಸಲು ಅಲ್ಲವೆಂದು ಹೇಳಿತ್ತು.

ರೂ. 545 ಬೆಲೆಯ ಈ ಕಿಟ್ ಮೂರು ವಸ್ತುಗಳನ್ನು ಹೊಂದಿದೆ-ಕೊರೋನಿಲ್ ಮಾತ್ರೆ, ಸ್ವಸಾರಿ ವಾಟಿ, ಮತ್ತು ಅನು ತೈಲ. ಹರಿಯಾಣ ಸರ್ಕಾರವು ಒಂದು ಲಕ್ಷ ಕೊರೋನಿಲ್ ಕಿಟ್​ಗಳನ್ನು ಕೋವಿಡ್​-19 ಸೋಂಕಿತರಿಗೆ ಉಚಿತವಾಗಿ ಹಂಚಲಾಗುವುದು ಎಂದು ಕಳೆದ ತಿಂಗಳು ಹೇಳಿತ್ತು.

ಇದನ್ನೂ ಓದಿ: Ramdev: ಅಲೋಪತಿ ವೈದ್ಯವನ್ನು ಸ್ಟುಪಿಡ್​ ಅಂದಿದ್ದ ಪತಂಜಲಿ ಬಾಬಾ ರಾಮದೇವ್​​ಗೆ ದೆಹಲಿ ಹೈಕೋರ್ಟ್​ ಸಮನ್ಸ್​

Published On - 1:44 am, Sun, 6 June 21

Follow Us
ಡಿಕೆಶಿ ಸಿಟಿ ರೌಂಡ್ಸ್: ಫುಟ್​ಪಾತ್ ತೆರವು ವೀಕ್ಷಿಸಿ ಹೇಳಿದ್ದೇನು ನೋಡಿ
ಡಿಕೆಶಿ ಸಿಟಿ ರೌಂಡ್ಸ್: ಫುಟ್​ಪಾತ್ ತೆರವು ವೀಕ್ಷಿಸಿ ಹೇಳಿದ್ದೇನು ನೋಡಿ
ರಸ್ತೆ ಬದಿ ನಿಂತಲ್ಲೇ ನಿಂತ ವಾಹನಗಳಿಗೆ ಎಷ್ಟು ದಂಡ ಗೊತ್ತಾ?
ರಸ್ತೆ ಬದಿ ನಿಂತಲ್ಲೇ ನಿಂತ ವಾಹನಗಳಿಗೆ ಎಷ್ಟು ದಂಡ ಗೊತ್ತಾ?
‘ದರ್ಶನ್ ಅಭಿಮಾನಿಗಳು ತಪ್ಪು ಮಾಡಲ್ಲ, ಅದು ಕಿಡಿಗೇಡಿಗಳ ಕೆಲಸ’
‘ದರ್ಶನ್ ಅಭಿಮಾನಿಗಳು ತಪ್ಪು ಮಾಡಲ್ಲ, ಅದು ಕಿಡಿಗೇಡಿಗಳ ಕೆಲಸ’
ಬೆಂಗಳೂರಲ್ಲಿ ಡಿಸಿಪಿ ಅಕ್ಷಯ್ ಮಚೀಂದ್ರ ನೇತೃತ್ವದಲ್ಲಿ ಮಿಡ್‌ನೈಟ್ ಆಪರೇಷನ್
ಬೆಂಗಳೂರಲ್ಲಿ ಡಿಸಿಪಿ ಅಕ್ಷಯ್ ಮಚೀಂದ್ರ ನೇತೃತ್ವದಲ್ಲಿ ಮಿಡ್‌ನೈಟ್ ಆಪರೇಷನ್
ಬ್ಯಾಡರಹಳ್ಳಿ ಜನರಿಗೆ ಎದುರಾಯ್ತು ಚಿರತೆ ಭಯ!
ಬ್ಯಾಡರಹಳ್ಳಿ ಜನರಿಗೆ ಎದುರಾಯ್ತು ಚಿರತೆ ಭಯ!
1.79 ಕೋಟಿ ಹಣವಿದ್ದ ಎಟಿಎಂ ವಾಹನ ಅಡ್ಡಗಟ್ಟಿ ಕೀ ಎಗರಿಸಿದ ಕಿಡಿಗೇಡಿಗಳು
1.79 ಕೋಟಿ ಹಣವಿದ್ದ ಎಟಿಎಂ ವಾಹನ ಅಡ್ಡಗಟ್ಟಿ ಕೀ ಎಗರಿಸಿದ ಕಿಡಿಗೇಡಿಗಳು
ಹುಂಡಿ ಎಣಿಕೆ ವೇಳೆ 1.98 ಲಕ್ಷ ರೂ. ಜಾಕೆಟ್ ಒಳಗೆ ಇಳಿಸಿ ಎಗರಿಸಿದ ಆಸಾಮಿ!
ಹುಂಡಿ ಎಣಿಕೆ ವೇಳೆ 1.98 ಲಕ್ಷ ರೂ. ಜಾಕೆಟ್ ಒಳಗೆ ಇಳಿಸಿ ಎಗರಿಸಿದ ಆಸಾಮಿ!
ಇಂದು ಯೋಗಿನಿ ಏಕಾದಶಿ, ಬುಧ ಜಯಂತಿ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಯೋಗಿನಿ ಏಕಾದಶಿ, ಬುಧ ಜಯಂತಿ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಪ್ರವಾಹದಲ್ಲಿ ಕೊಚ್ಚಿಹೋದ 3,000 ಎಲ್‌ಪಿಜಿ ಸಿಲಿಂಡರ್‌ಗಳು; ವಿಡಿಯೋ ವೈರಲ್!
ಪ್ರವಾಹದಲ್ಲಿ ಕೊಚ್ಚಿಹೋದ 3,000 ಎಲ್‌ಪಿಜಿ ಸಿಲಿಂಡರ್‌ಗಳು; ವಿಡಿಯೋ ವೈರಲ್!
‘ದೇವಿ’ ಸಿನಿಮಾದ ನಟ, ಯುವ ರೈತ ಚೇತನ್​ಗೆ 10 ನಿರ್ದೇಶಕರಿಂದ ಮೋಸ
‘ದೇವಿ’ ಸಿನಿಮಾದ ನಟ, ಯುವ ರೈತ ಚೇತನ್​ಗೆ 10 ನಿರ್ದೇಶಕರಿಂದ ಮೋಸ