AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಬಾ ರಾಮ್​ದೇವ್​ ವಿರುದ್ಧ ಐಎಂಎಯಿಂದ 1000 ಕೋಟಿ ರೂ.ಮಾನನಷ್ಟ ಮೊಕದ್ದಮೆ; ಪ್ರಧಾನಿ ನರೇಂದ್ರ ಮೋದಿಗೆ ಪತ್ರ

ಈ ಬಗ್ಗೆ ಸಮರ್ಥನೆ ನೀಡಿದ್ದ ಪತಂಜಲಿ ಟ್ರಸ್ಟ್​, ಬಾಬಾ ರಾಮ್​ದೇವ್​ ಅವರಿಗೆ ಅಲೋಪಥಿ ಬಗ್ಗೆ ತುಂಬ ಗೌರವ ಇದೆ. ಅವರು ವಾಟ್ಸ್​ಆ್ಯಪ್​​ನಲ್ಲಿ ಬಂದಿದ್ದ ಒಂದು ಸಂದೇಶವನ್ನು ಓದುತ್ತಿದ್ದ ವಿಡಿಯೋ ಅದು ಎಂದು ಹೇಳಿತ್ತು.

ಬಾಬಾ ರಾಮ್​ದೇವ್​ ವಿರುದ್ಧ ಐಎಂಎಯಿಂದ 1000 ಕೋಟಿ ರೂ.ಮಾನನಷ್ಟ ಮೊಕದ್ದಮೆ; ಪ್ರಧಾನಿ ನರೇಂದ್ರ ಮೋದಿಗೆ ಪತ್ರ
ಬಾಬಾ ರಾಮ್​ದೇವ್​
Lakshmi Hegde
|

Updated on: May 26, 2021 | 9:55 PM

Share

ಅಲೋಪಥಿ ವಿರುದ್ಧ ಹೇಳಿಕೆ ನೀಡಿದ್ದ ಯೋಗಗುರು ಬಾಬಾ ರಾಮ್​ ದೇವ್​ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೇಂದ್ರ ಆರೋಗ್ಯ ಸಚಿವಾಲಯವನ್ನು ಒತ್ತಾಯಿಸಿದ್ದ ಭಾರತೀಯ ವೈದ್ಯಕೀಯ ಸಂಘ (IMA), ಅವರ ವಿರುದ್ಧ ಮಾನನಷ್ಟ 1000 ಕೋಟಿ ರೂಪಾಯಿಯ ಮೊಕದ್ದಮೆಯನ್ನೂ ಹೂಡಿದೆ. ಅಷ್ಟಕ್ಕೂ ಸುಮ್ಮನಾಗದೆ ಇದೀಗ ಪ್ರಧಾನಿ ನರೇಂದ್ರ ಮೋದಿಯವರಿಗೇ ಪತ್ರ ಬರೆದು, ಬಾಬಾ ರಾಮ್​ದೇವ್​ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದೆ.

ಅಲೋಪಥಿ ವೈದ್ಯಕೀಯ ಪದ್ಧತಿ ಮತ್ತು ವೈದ್ಯರ ವಿರುದ್ಧ ಬಾಬಾ ರಾಮ್​ದೇವ್​ ಕೆಟ್ಟದಾಗಿ ಮಾತನಾಡಿದ್ದಾರೆ. ಎರಡೂ ಡೋಸ್ ಲಸಿಕೆ ಪಡೆದಿದ್ದರೂ 10,000ಕ್ಕೂ ಹೆಚ್ಚು ಮೃತಪಟ್ಟಿದ್ದಾರೆ ಎಂದು ತಪ್ಪು ಮಾಹಿತಿಯನ್ನು ಜನರಿಗೆ ತಿಳಿಸಿದ್ದಾರೆ. ಅವರ ವಿರುದ್ಧ ದೇಶದ್ರೋಹದ ಪ್ರಕರಣ ದಾಖಲು ಮಾಡಬೇಕು ಎಂದೂ ಆಗ್ರಹಿಸಿದೆ. ಬಾಬಾ ರಾಮ್​ ದೇವ್​ ಮಾತನಾಡಿರುವ, 140 ಸೆಕೆಂಡ್​ಗಳ ವಿಡಿಯೋವೊಂದು ಕಳೆದ ವಾರದಿಂದಲೂ ವೈರಲ್ ಆಗುತ್ತಿದೆ. ಅದರಲ್ಲಿ ಅವರು ಅಲೋಪಥಿಕ್​ ವೈದ್ಯಕೀಯ ಪದ್ಧತಿಯ ವಿರುದ್ಧ ಮಾತನಾಡಿದ್ದಾರೆ. ಕೊವಿಡ್​ 19 ಸೋಂಕಿಗೆ ಬಳಸಲಾಗುತ್ತಿರುವ ಕೆಲವು ಔಷಧಿಗಳ ಬಗ್ಗೆಯೂ ಪ್ರಶ್ನೆ ಎತ್ತಿದ್ದರು. ಅದನ್ನು ನೋಡಿದ ಭಾರತೀಯ ವೈದ್ಯಕೀಯ ಸಂಘ ಇದನ್ನು ಆರೋಗ್ಯ ಸಚಿವರ ಗಮನಕ್ಕೆ ತಂದಿತ್ತು. ಹಾಗೇ ಆರೋಗ್ಯ ಸಚಿವ ಡಾ. ಹರ್ಷವರ್ಧನ್​ ಕೂಡ ಇದನ್ನು ಖಂಡಿಸಿದ್ದರು. ನಿಮ್ಮ ಹೇಳಿಕೆಗಳನ್ನು ವಾಪಸ್ ಪಡೆಯಿರಿ, ಅಲೋಪಥಿಕ್​ ವಿರುದ್ಧ ಮಾತನಾಡಿ ಇಡೀ ದೇಶದ ಭಾವನೆಗೆ ಧಕ್ಕೆ ತಂದಿದ್ದೀರಿ ಎಂದೂ ಹೇಳಿದ್ದರು.

ಆದರೆ ಈ ಬಗ್ಗೆ ಸಮರ್ಥನೆ ನೀಡಿದ್ದ ಪತಂಜಲಿ ಟ್ರಸ್ಟ್​, ಬಾಬಾ ರಾಮ್​ದೇವ್​ ಅವರಿಗೆ ಅಲೋಪಥಿ ಬಗ್ಗೆ ತುಂಬ ಗೌರವ ಇದೆ. ಅವರು ವಾಟ್ಸ್​ಆ್ಯಪ್​​ನಲ್ಲಿ ಬಂದಿದ್ದ ಒಂದು ಸಂದೇಶವನ್ನು ಓದುತ್ತಿದ್ದ ವಿಡಿಯೋ ಅದು ಎಂದು ಹೇಳಿತ್ತು. ಆದರೆ ಐಎಂಎ ಸದ್ಯಕ್ಕೆ ವಿಷಯವನ್ನು ಬಿಡುತ್ತಿಲ್ಲ. ಐಎಂಎ ಉತ್ತರಖಾಂಡ್​ ಕಾರ್ಯದರ್ಶಿ ಅಜಯ್​ ಕುಮಾರ್​ ಅವರು ಸುಮಾರು 6 ಪೇಜ್​​ಗಳುಳ್ಳ ನೋಟಿಸ್​ನ್ನು ವಕೀಲ ನೀರಜ್​ ಪಾಂಡೆ ಮೂಲಕ ಕಳಿಸಿದ್ದಾರೆ.

ಇದನ್ನು ಓದಿ: ದಿ ಫ್ಯಾಮಿಲಿ ಮ್ಯಾನ್​ 2’ ವಿವಾದದ ಬಗ್ಗೆ ಮೌನ ಮುರಿದ ಮನೋಜ್​ ಬಾಜಪೇಯ್

ಅಪ್ರಾಪ್ತನಿಗೆ ಸನ್ಯಾಸ ನೀಡಿದಾಗ ಸರ್ಕಾರ ಮೂಕಪ್ರೇಕ್ಷನಾಗಿರಲು ಸಾಧ್ಯವಿಲ್ಲ: ಉಡುಪಿಯ ಶಿರೂರು ಮಠಕ್ಕೆ ಬಾಲಸನ್ಯಾಸಿ ನೇಮಕಕ್ಕೆ ಹೈಕೋರ್ಟ್​ ಆಕ್ಷೇಪ

Follow Us
ಪ್ರಧಾನಿ ಮೋದಿ ಹೇಳಿಕೆಗೆ ಖಾಸಗಿ ಶಾಲಾ ಒಕ್ಕೂಟದಿಂದ ಆಕ್ಷೇಪ
ಪ್ರಧಾನಿ ಮೋದಿ ಹೇಳಿಕೆಗೆ ಖಾಸಗಿ ಶಾಲಾ ಒಕ್ಕೂಟದಿಂದ ಆಕ್ಷೇಪ
ನೀಟ್: ರಾಜ್ಯದಲ್ಲಿ ಅಕ್ರಮವಾಗಿದೆಯಾ? ಬಂಗಾರಪ್ಪ ಏನಂದ್ರು ನೋಡಿ
ನೀಟ್: ರಾಜ್ಯದಲ್ಲಿ ಅಕ್ರಮವಾಗಿದೆಯಾ? ಬಂಗಾರಪ್ಪ ಏನಂದ್ರು ನೋಡಿ
ಪ್ರಧಾನಿ ಮೋದಿ ಹೇಳಿದ್ದಕ್ಕೆ BMTC ಬಸ್​ನಲ್ಲಿ ಬಂದೆ ಎಂದ ಪ್ರಯಾಣಿಕ!
ಪ್ರಧಾನಿ ಮೋದಿ ಹೇಳಿದ್ದಕ್ಕೆ BMTC ಬಸ್​ನಲ್ಲಿ ಬಂದೆ ಎಂದ ಪ್ರಯಾಣಿಕ!
ವಿಧಾನಸಭೇಲಿ ಸಿಎಂ ವಿಜಯ್ ಕಾಲೆಳೆದ ಉದಯನಿಧಿ ಬಿಚ್ಚಿಟ್ಟರು ಹಳೇ ಕಾಲದ ರಹಸ್ಯ!
ವಿಧಾನಸಭೇಲಿ ಸಿಎಂ ವಿಜಯ್ ಕಾಲೆಳೆದ ಉದಯನಿಧಿ ಬಿಚ್ಚಿಟ್ಟರು ಹಳೇ ಕಾಲದ ರಹಸ್ಯ!
ನಿದ್ದೆಯ ಮಂಪರಿನಲ್ಲಿ ಡಿವೈಡರ್​​ಗೆ ಗುದ್ದಿದ ಟ್ರಕ್​ ಡ್ರೈವರ್
ನಿದ್ದೆಯ ಮಂಪರಿನಲ್ಲಿ ಡಿವೈಡರ್​​ಗೆ ಗುದ್ದಿದ ಟ್ರಕ್​ ಡ್ರೈವರ್
ತಮಿಳುನಾಡು ರಾಜಕಾರಣದಲ್ಲಿ ಸ್ಫೋಟಕ ಬೆಳವಣಿಗೆ: ಎಐಎಡಿಎಂಕೆಯಲ್ಲಿ ಭಾರಿ ಬಂಡಾಯ
ತಮಿಳುನಾಡು ರಾಜಕಾರಣದಲ್ಲಿ ಸ್ಫೋಟಕ ಬೆಳವಣಿಗೆ: ಎಐಎಡಿಎಂಕೆಯಲ್ಲಿ ಭಾರಿ ಬಂಡಾಯ
Live: ಅಸ್ಸಾಂ ಸಿಎಂ ಆಗಿ ಹಿಮಂತ್ ಬಿಸ್ವಾ ಶರ್ಮಾ ಪದಗ್ರಹಣದ ನೇರಪ್ರಸಾರ
Live: ಅಸ್ಸಾಂ ಸಿಎಂ ಆಗಿ ಹಿಮಂತ್ ಬಿಸ್ವಾ ಶರ್ಮಾ ಪದಗ್ರಹಣದ ನೇರಪ್ರಸಾರ
ಶೃಂಗೇರಿ ವೋಟ್ ಟ್ಯಾಂಪರಿಂಗ್ ಆರೋಪ: FSL​ನಲ್ಲಿ ಎಲ್ಲ ಗೊತ್ತಾಗಲಿದೆ: ಪರಮೇಶ್
ಶೃಂಗೇರಿ ವೋಟ್ ಟ್ಯಾಂಪರಿಂಗ್ ಆರೋಪ: FSL​ನಲ್ಲಿ ಎಲ್ಲ ಗೊತ್ತಾಗಲಿದೆ: ಪರಮೇಶ್
ಸುಪ್ರೀಂ ಕೋರ್ಟ್ ಆದೇಶವನ್ನು ಒಪ್ಪಿಕೊಳ್ಳುತ್ತೇನೆ ಎಂದ ಜೀವರಾಜ್
ಸುಪ್ರೀಂ ಕೋರ್ಟ್ ಆದೇಶವನ್ನು ಒಪ್ಪಿಕೊಳ್ಳುತ್ತೇನೆ ಎಂದ ಜೀವರಾಜ್
ವಿಜಯನಗರ: ಮನೆಗಳಿಗೆ ಕನ್ನ ಹಾಕ್ತಿದ್ದ ಇಬ್ಬರು ಖದೀಮರು ಅರೆಸ್ಟ್
ವಿಜಯನಗರ: ಮನೆಗಳಿಗೆ ಕನ್ನ ಹಾಕ್ತಿದ್ದ ಇಬ್ಬರು ಖದೀಮರು ಅರೆಸ್ಟ್