AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಬಾ ರಾಮ್​ದೇವ್​ ವಿರುದ್ಧ ಐಎಂಎಯಿಂದ 1000 ಕೋಟಿ ರೂ.ಮಾನನಷ್ಟ ಮೊಕದ್ದಮೆ; ಪ್ರಧಾನಿ ನರೇಂದ್ರ ಮೋದಿಗೆ ಪತ್ರ

ಈ ಬಗ್ಗೆ ಸಮರ್ಥನೆ ನೀಡಿದ್ದ ಪತಂಜಲಿ ಟ್ರಸ್ಟ್​, ಬಾಬಾ ರಾಮ್​ದೇವ್​ ಅವರಿಗೆ ಅಲೋಪಥಿ ಬಗ್ಗೆ ತುಂಬ ಗೌರವ ಇದೆ. ಅವರು ವಾಟ್ಸ್​ಆ್ಯಪ್​​ನಲ್ಲಿ ಬಂದಿದ್ದ ಒಂದು ಸಂದೇಶವನ್ನು ಓದುತ್ತಿದ್ದ ವಿಡಿಯೋ ಅದು ಎಂದು ಹೇಳಿತ್ತು.

ಬಾಬಾ ರಾಮ್​ದೇವ್​ ವಿರುದ್ಧ ಐಎಂಎಯಿಂದ 1000 ಕೋಟಿ ರೂ.ಮಾನನಷ್ಟ ಮೊಕದ್ದಮೆ; ಪ್ರಧಾನಿ ನರೇಂದ್ರ ಮೋದಿಗೆ ಪತ್ರ
ಬಾಬಾ ರಾಮ್​ದೇವ್​
Lakshmi Hegde
|

Updated on: May 26, 2021 | 9:55 PM

Share

ಅಲೋಪಥಿ ವಿರುದ್ಧ ಹೇಳಿಕೆ ನೀಡಿದ್ದ ಯೋಗಗುರು ಬಾಬಾ ರಾಮ್​ ದೇವ್​ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೇಂದ್ರ ಆರೋಗ್ಯ ಸಚಿವಾಲಯವನ್ನು ಒತ್ತಾಯಿಸಿದ್ದ ಭಾರತೀಯ ವೈದ್ಯಕೀಯ ಸಂಘ (IMA), ಅವರ ವಿರುದ್ಧ ಮಾನನಷ್ಟ 1000 ಕೋಟಿ ರೂಪಾಯಿಯ ಮೊಕದ್ದಮೆಯನ್ನೂ ಹೂಡಿದೆ. ಅಷ್ಟಕ್ಕೂ ಸುಮ್ಮನಾಗದೆ ಇದೀಗ ಪ್ರಧಾನಿ ನರೇಂದ್ರ ಮೋದಿಯವರಿಗೇ ಪತ್ರ ಬರೆದು, ಬಾಬಾ ರಾಮ್​ದೇವ್​ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದೆ.

ಅಲೋಪಥಿ ವೈದ್ಯಕೀಯ ಪದ್ಧತಿ ಮತ್ತು ವೈದ್ಯರ ವಿರುದ್ಧ ಬಾಬಾ ರಾಮ್​ದೇವ್​ ಕೆಟ್ಟದಾಗಿ ಮಾತನಾಡಿದ್ದಾರೆ. ಎರಡೂ ಡೋಸ್ ಲಸಿಕೆ ಪಡೆದಿದ್ದರೂ 10,000ಕ್ಕೂ ಹೆಚ್ಚು ಮೃತಪಟ್ಟಿದ್ದಾರೆ ಎಂದು ತಪ್ಪು ಮಾಹಿತಿಯನ್ನು ಜನರಿಗೆ ತಿಳಿಸಿದ್ದಾರೆ. ಅವರ ವಿರುದ್ಧ ದೇಶದ್ರೋಹದ ಪ್ರಕರಣ ದಾಖಲು ಮಾಡಬೇಕು ಎಂದೂ ಆಗ್ರಹಿಸಿದೆ. ಬಾಬಾ ರಾಮ್​ ದೇವ್​ ಮಾತನಾಡಿರುವ, 140 ಸೆಕೆಂಡ್​ಗಳ ವಿಡಿಯೋವೊಂದು ಕಳೆದ ವಾರದಿಂದಲೂ ವೈರಲ್ ಆಗುತ್ತಿದೆ. ಅದರಲ್ಲಿ ಅವರು ಅಲೋಪಥಿಕ್​ ವೈದ್ಯಕೀಯ ಪದ್ಧತಿಯ ವಿರುದ್ಧ ಮಾತನಾಡಿದ್ದಾರೆ. ಕೊವಿಡ್​ 19 ಸೋಂಕಿಗೆ ಬಳಸಲಾಗುತ್ತಿರುವ ಕೆಲವು ಔಷಧಿಗಳ ಬಗ್ಗೆಯೂ ಪ್ರಶ್ನೆ ಎತ್ತಿದ್ದರು. ಅದನ್ನು ನೋಡಿದ ಭಾರತೀಯ ವೈದ್ಯಕೀಯ ಸಂಘ ಇದನ್ನು ಆರೋಗ್ಯ ಸಚಿವರ ಗಮನಕ್ಕೆ ತಂದಿತ್ತು. ಹಾಗೇ ಆರೋಗ್ಯ ಸಚಿವ ಡಾ. ಹರ್ಷವರ್ಧನ್​ ಕೂಡ ಇದನ್ನು ಖಂಡಿಸಿದ್ದರು. ನಿಮ್ಮ ಹೇಳಿಕೆಗಳನ್ನು ವಾಪಸ್ ಪಡೆಯಿರಿ, ಅಲೋಪಥಿಕ್​ ವಿರುದ್ಧ ಮಾತನಾಡಿ ಇಡೀ ದೇಶದ ಭಾವನೆಗೆ ಧಕ್ಕೆ ತಂದಿದ್ದೀರಿ ಎಂದೂ ಹೇಳಿದ್ದರು.

ಆದರೆ ಈ ಬಗ್ಗೆ ಸಮರ್ಥನೆ ನೀಡಿದ್ದ ಪತಂಜಲಿ ಟ್ರಸ್ಟ್​, ಬಾಬಾ ರಾಮ್​ದೇವ್​ ಅವರಿಗೆ ಅಲೋಪಥಿ ಬಗ್ಗೆ ತುಂಬ ಗೌರವ ಇದೆ. ಅವರು ವಾಟ್ಸ್​ಆ್ಯಪ್​​ನಲ್ಲಿ ಬಂದಿದ್ದ ಒಂದು ಸಂದೇಶವನ್ನು ಓದುತ್ತಿದ್ದ ವಿಡಿಯೋ ಅದು ಎಂದು ಹೇಳಿತ್ತು. ಆದರೆ ಐಎಂಎ ಸದ್ಯಕ್ಕೆ ವಿಷಯವನ್ನು ಬಿಡುತ್ತಿಲ್ಲ. ಐಎಂಎ ಉತ್ತರಖಾಂಡ್​ ಕಾರ್ಯದರ್ಶಿ ಅಜಯ್​ ಕುಮಾರ್​ ಅವರು ಸುಮಾರು 6 ಪೇಜ್​​ಗಳುಳ್ಳ ನೋಟಿಸ್​ನ್ನು ವಕೀಲ ನೀರಜ್​ ಪಾಂಡೆ ಮೂಲಕ ಕಳಿಸಿದ್ದಾರೆ.

ಇದನ್ನು ಓದಿ: ದಿ ಫ್ಯಾಮಿಲಿ ಮ್ಯಾನ್​ 2’ ವಿವಾದದ ಬಗ್ಗೆ ಮೌನ ಮುರಿದ ಮನೋಜ್​ ಬಾಜಪೇಯ್

ಅಪ್ರಾಪ್ತನಿಗೆ ಸನ್ಯಾಸ ನೀಡಿದಾಗ ಸರ್ಕಾರ ಮೂಕಪ್ರೇಕ್ಷನಾಗಿರಲು ಸಾಧ್ಯವಿಲ್ಲ: ಉಡುಪಿಯ ಶಿರೂರು ಮಠಕ್ಕೆ ಬಾಲಸನ್ಯಾಸಿ ನೇಮಕಕ್ಕೆ ಹೈಕೋರ್ಟ್​ ಆಕ್ಷೇಪ

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್