AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಬಾ ರಾಮ್​ದೇವ್​ ವಿರುದ್ಧ ಐಎಂಎಯಿಂದ 1000 ಕೋಟಿ ರೂ.ಮಾನನಷ್ಟ ಮೊಕದ್ದಮೆ; ಪ್ರಧಾನಿ ನರೇಂದ್ರ ಮೋದಿಗೆ ಪತ್ರ

ಈ ಬಗ್ಗೆ ಸಮರ್ಥನೆ ನೀಡಿದ್ದ ಪತಂಜಲಿ ಟ್ರಸ್ಟ್​, ಬಾಬಾ ರಾಮ್​ದೇವ್​ ಅವರಿಗೆ ಅಲೋಪಥಿ ಬಗ್ಗೆ ತುಂಬ ಗೌರವ ಇದೆ. ಅವರು ವಾಟ್ಸ್​ಆ್ಯಪ್​​ನಲ್ಲಿ ಬಂದಿದ್ದ ಒಂದು ಸಂದೇಶವನ್ನು ಓದುತ್ತಿದ್ದ ವಿಡಿಯೋ ಅದು ಎಂದು ಹೇಳಿತ್ತು.

ಬಾಬಾ ರಾಮ್​ದೇವ್​ ವಿರುದ್ಧ ಐಎಂಎಯಿಂದ 1000 ಕೋಟಿ ರೂ.ಮಾನನಷ್ಟ ಮೊಕದ್ದಮೆ; ಪ್ರಧಾನಿ ನರೇಂದ್ರ ಮೋದಿಗೆ ಪತ್ರ
ಬಾಬಾ ರಾಮ್​ದೇವ್​
Lakshmi Hegde
|

Updated on: May 26, 2021 | 9:55 PM

Share

ಅಲೋಪಥಿ ವಿರುದ್ಧ ಹೇಳಿಕೆ ನೀಡಿದ್ದ ಯೋಗಗುರು ಬಾಬಾ ರಾಮ್​ ದೇವ್​ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೇಂದ್ರ ಆರೋಗ್ಯ ಸಚಿವಾಲಯವನ್ನು ಒತ್ತಾಯಿಸಿದ್ದ ಭಾರತೀಯ ವೈದ್ಯಕೀಯ ಸಂಘ (IMA), ಅವರ ವಿರುದ್ಧ ಮಾನನಷ್ಟ 1000 ಕೋಟಿ ರೂಪಾಯಿಯ ಮೊಕದ್ದಮೆಯನ್ನೂ ಹೂಡಿದೆ. ಅಷ್ಟಕ್ಕೂ ಸುಮ್ಮನಾಗದೆ ಇದೀಗ ಪ್ರಧಾನಿ ನರೇಂದ್ರ ಮೋದಿಯವರಿಗೇ ಪತ್ರ ಬರೆದು, ಬಾಬಾ ರಾಮ್​ದೇವ್​ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದೆ.

ಅಲೋಪಥಿ ವೈದ್ಯಕೀಯ ಪದ್ಧತಿ ಮತ್ತು ವೈದ್ಯರ ವಿರುದ್ಧ ಬಾಬಾ ರಾಮ್​ದೇವ್​ ಕೆಟ್ಟದಾಗಿ ಮಾತನಾಡಿದ್ದಾರೆ. ಎರಡೂ ಡೋಸ್ ಲಸಿಕೆ ಪಡೆದಿದ್ದರೂ 10,000ಕ್ಕೂ ಹೆಚ್ಚು ಮೃತಪಟ್ಟಿದ್ದಾರೆ ಎಂದು ತಪ್ಪು ಮಾಹಿತಿಯನ್ನು ಜನರಿಗೆ ತಿಳಿಸಿದ್ದಾರೆ. ಅವರ ವಿರುದ್ಧ ದೇಶದ್ರೋಹದ ಪ್ರಕರಣ ದಾಖಲು ಮಾಡಬೇಕು ಎಂದೂ ಆಗ್ರಹಿಸಿದೆ. ಬಾಬಾ ರಾಮ್​ ದೇವ್​ ಮಾತನಾಡಿರುವ, 140 ಸೆಕೆಂಡ್​ಗಳ ವಿಡಿಯೋವೊಂದು ಕಳೆದ ವಾರದಿಂದಲೂ ವೈರಲ್ ಆಗುತ್ತಿದೆ. ಅದರಲ್ಲಿ ಅವರು ಅಲೋಪಥಿಕ್​ ವೈದ್ಯಕೀಯ ಪದ್ಧತಿಯ ವಿರುದ್ಧ ಮಾತನಾಡಿದ್ದಾರೆ. ಕೊವಿಡ್​ 19 ಸೋಂಕಿಗೆ ಬಳಸಲಾಗುತ್ತಿರುವ ಕೆಲವು ಔಷಧಿಗಳ ಬಗ್ಗೆಯೂ ಪ್ರಶ್ನೆ ಎತ್ತಿದ್ದರು. ಅದನ್ನು ನೋಡಿದ ಭಾರತೀಯ ವೈದ್ಯಕೀಯ ಸಂಘ ಇದನ್ನು ಆರೋಗ್ಯ ಸಚಿವರ ಗಮನಕ್ಕೆ ತಂದಿತ್ತು. ಹಾಗೇ ಆರೋಗ್ಯ ಸಚಿವ ಡಾ. ಹರ್ಷವರ್ಧನ್​ ಕೂಡ ಇದನ್ನು ಖಂಡಿಸಿದ್ದರು. ನಿಮ್ಮ ಹೇಳಿಕೆಗಳನ್ನು ವಾಪಸ್ ಪಡೆಯಿರಿ, ಅಲೋಪಥಿಕ್​ ವಿರುದ್ಧ ಮಾತನಾಡಿ ಇಡೀ ದೇಶದ ಭಾವನೆಗೆ ಧಕ್ಕೆ ತಂದಿದ್ದೀರಿ ಎಂದೂ ಹೇಳಿದ್ದರು.

ಆದರೆ ಈ ಬಗ್ಗೆ ಸಮರ್ಥನೆ ನೀಡಿದ್ದ ಪತಂಜಲಿ ಟ್ರಸ್ಟ್​, ಬಾಬಾ ರಾಮ್​ದೇವ್​ ಅವರಿಗೆ ಅಲೋಪಥಿ ಬಗ್ಗೆ ತುಂಬ ಗೌರವ ಇದೆ. ಅವರು ವಾಟ್ಸ್​ಆ್ಯಪ್​​ನಲ್ಲಿ ಬಂದಿದ್ದ ಒಂದು ಸಂದೇಶವನ್ನು ಓದುತ್ತಿದ್ದ ವಿಡಿಯೋ ಅದು ಎಂದು ಹೇಳಿತ್ತು. ಆದರೆ ಐಎಂಎ ಸದ್ಯಕ್ಕೆ ವಿಷಯವನ್ನು ಬಿಡುತ್ತಿಲ್ಲ. ಐಎಂಎ ಉತ್ತರಖಾಂಡ್​ ಕಾರ್ಯದರ್ಶಿ ಅಜಯ್​ ಕುಮಾರ್​ ಅವರು ಸುಮಾರು 6 ಪೇಜ್​​ಗಳುಳ್ಳ ನೋಟಿಸ್​ನ್ನು ವಕೀಲ ನೀರಜ್​ ಪಾಂಡೆ ಮೂಲಕ ಕಳಿಸಿದ್ದಾರೆ.

ಇದನ್ನು ಓದಿ: ದಿ ಫ್ಯಾಮಿಲಿ ಮ್ಯಾನ್​ 2’ ವಿವಾದದ ಬಗ್ಗೆ ಮೌನ ಮುರಿದ ಮನೋಜ್​ ಬಾಜಪೇಯ್

ಅಪ್ರಾಪ್ತನಿಗೆ ಸನ್ಯಾಸ ನೀಡಿದಾಗ ಸರ್ಕಾರ ಮೂಕಪ್ರೇಕ್ಷನಾಗಿರಲು ಸಾಧ್ಯವಿಲ್ಲ: ಉಡುಪಿಯ ಶಿರೂರು ಮಠಕ್ಕೆ ಬಾಲಸನ್ಯಾಸಿ ನೇಮಕಕ್ಕೆ ಹೈಕೋರ್ಟ್​ ಆಕ್ಷೇಪ

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ