AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೀಟ್​ ಪರೀಕ್ಷೆ ಅಕ್ರಮ ತನಿಖೆ ಜವಾಬ್ದಾರಿ ಸಿಬಿಐಗೆ ವಹಿಸಿರುವ ನಿರ್ಧಾರ ಸ್ವಾಗತಿಸಿದ ಐಎಂಎ

ನೀಟ್​ ಪರೀಕ್ಷೆಯಲ್ಲಿನ ಅಕ್ರಮಗಳ ತನಿಖೆ ಜವಾಬ್ದಾರಿಯನ್ನು ಸಿಬಿಐಗೆ ವಹಿಸಿರುವ ಕೇಂದ್ರ ಸರ್ಕಾರದ ನಿರ್ಧಾರವನ್ನು ಐಎಂಎ ಸ್ವಾಗತಿಸಿದೆ. ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿಯ ಡೈರೆಕ್ಟರ್ ಜನರಲ್ ಅಂದರೆ ಎನ್‌ಟಿಎ ಅವರನ್ನು ಹುದ್ದೆಯಿಂದ ತೆಗೆದುಹಾಕುವ ನಿರ್ಧಾರದ ಕುರಿತು ಕೂಡ ಸಂತಸ ವ್ಯಕ್ತಪಡಿಸಿದೆ.

ನೀಟ್​ ಪರೀಕ್ಷೆ ಅಕ್ರಮ ತನಿಖೆ ಜವಾಬ್ದಾರಿ ಸಿಬಿಐಗೆ ವಹಿಸಿರುವ ನಿರ್ಧಾರ ಸ್ವಾಗತಿಸಿದ ಐಎಂಎ
ವಿದ್ಯಾರ್ಥಿಗಳು
Follow us
ನಯನಾ ರಾಜೀವ್
|

Updated on: Jun 24, 2024 | 9:58 AM

ನೀಟ್​-ಯುಜಿ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಿರುವ ಸರ್ಕಾರದ ನಿರ್ಧಾರವನ್ನು ಭಾರತೀಯ ವೈದ್ಯಕೀಯ ಸಂಘ(ಐಎಂಎ) ಸ್ವಾಗತಿಸಿದೆ. ನೀಟ್​-ಯುಜಿಯಲ್ಲಿನ ಅಕ್ರಮಗಳನ್ನು ಗಂಭೀರವಾಗಿ ತನಿಖೆ ಮಾಡಲು ಪ್ರಕರಣವನ್ನು ಸಿಬಿಐಗೆ ವರ್ಗಾಯಿಸಿದ್ದಕ್ಕಾಗಿ ಕೇಂದ್ರ ಶಿಕ್ಷಣ ಸಚಿವಾಲಯಕ್ಕೆ ನಾವು ನಮ್ಮ ಕೃತಜ್ಞತೆಯನ್ನು ವ್ಯಕ್ತಪಡಿಸುತ್ತೇವೆ ಎಂದು ಐಎಂಎ ಹೇಳಿಕೆಯಲ್ಲಿ ತಿಳಿಸಿದೆ.

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿಯ ಡೈರೆಕ್ಟರ್ ಜನರಲ್ ಅಂದರೆ ಎನ್‌ಟಿಎ ಅವರನ್ನು ಹುದ್ದೆಯಿಂದ ತೆಗೆದುಹಾಕುವ ನಿರ್ಧಾರವನ್ನು ಐಎಂಎ ಸ್ವಾಗತಿಸಿದೆ. ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿನ ಅಕ್ರಮಗಳನ್ನು ತೆಗೆದುಹಾಕಲು ಕಠಿಣ ಕಾನೂನುಗಳನ್ನು ಜಾರಿಗೊಳಿಸುವ ಸರ್ಕಾರದ ನಿರ್ಧಾರವನ್ನು ನಾವು ಪ್ರಶಂಸಿಸುತ್ತೇವೆ ಎಂದು ಐಎಂಎ ಹೇಳಿಕೆ ತಿಳಿಸಿದೆ.

ವಿದ್ಯಾರ್ಥಿಗಳೇ ಭಾರತದ ಭವಿಷ್ಯ. ಸರ್ಕಾರ ನೀಡಿದ ಭರವಸೆಯಂತೆ ಬಲಿಷ್ಠ ವ್ಯವಸ್ಥೆಯನ್ನು ನಿರೀಕ್ಷಿಸುತ್ತೇವೆ. ಪರೀಕ್ಷೆಗಳಲ್ಲಿ ಅವ್ಯವಹಾರಗಳನ್ನು ತಡೆಗಟ್ಟಲು ಕಾನೂನು ಜಾರಿಗೆ ತರುವುದರೊಂದಿಗೆ ಪರೀಕ್ಷಾ ಅಧಿಕಾರಿಗಳು, ಸೇವಾ ಪೂರೈಕೆದಾರರು ಅಥವಾ ಇತರ ಸಂಸ್ಥೆಗಳನ್ನು ಒಳಗೊಂಡ ಸಂಘಟಿತ ಅಪರಾಧ ಪ್ರಕರಣಗಳಲ್ಲಿ, ಅಪರಾಧಿಗಳಿಗೆ 10 ವರ್ಷಗಳವರೆಗೆ ಜೈಲು ಶಿಕ್ಷೆ ಮತ್ತು ಕನಿಷ್ಠ 1 ಕೋಟಿ ರೂ. ದಂಡ ವಿಧಿಸಲಾಗುತ್ತದೆ.

ಮತ್ತಷ್ಟು ಓದಿ: ನೀಟ್​ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ: ತನಿಖೆ ಜವಾಬ್ದಾರಿ ಸಿಬಿಐಗೆ ವಹಿಸಿದ ಶಿಕ್ಷಣ ಸಚಿವಾಲಯ

ನೀಟ್​-ಯುಜಿ ಪರೀಕ್ಷೆಯಲ್ಲಿನ ಅಕ್ರಮಗಳ ತನಿಖೆಯನ್ನು ಸಿಬಿಐ ವಹಿಸಿಕೊಂಡಿದೆ. ಈ ಪ್ರಕರಣದ ಮೊದಲ ಎಫ್‌ಐಆರ್ ಕೂಡ ಸಿಬಿಐ ಭಾನುವಾರ ದಾಖಲಿಸಿದೆ. ಆಪಾದಿತ ಅಕ್ರಮಗಳ ತನಿಖೆಯನ್ನು ಕೇಂದ್ರ ಏಜೆನ್ಸಿಗೆ ಹಸ್ತಾಂತರಿಸುವುದಾಗಿ ಶಿಕ್ಷಣ ಸಚಿವಾಲಯ ಘೋಷಿಸಿದ ಒಂದು ದಿನದ ನಂತರ ಸಿಬಿಐನ ಈ ಕ್ರಮವನ್ನು ತೆಗೆದುಕೊಳ್ಳಲಾಗಿದೆ.

ನೀಟ್​-ಯುಜಿ ಪರೀಕ್ಷೆಯಲ್ಲಿನ ಅಕ್ರಮಗಳು ಮತ್ತು ಆರೋಪಗಳ ಗಂಭೀರತೆಯನ್ನು ಗಮನದಲ್ಲಿಟ್ಟುಕೊಂಡು, ಎನ್​ಟಿಎ ಮುನ್ನೆಚ್ಚರಿಕೆ ಕ್ರಮವಾಗಿ ಜೂನ್ 23 ರ ಶನಿವಾರ ನಡೆಯಲಿರುವ ನೀಟ್​-ಪಿಜಿ ಪರೀಕ್ಷೆಯನ್ನು ಮುಂದೂಡಿದೆ. ನೀಟ್-ಯುಜಿಯಲ್ಲಿ ಗ್ರೇಸ್ ಅಂಕ ಪಡೆದ ವಿದ್ಯಾರ್ಥಿಗಳಿಗೆ ಭಾನುವಾರ ಮರು ಪರೀಕ್ಷೆ ನಡೆಸಲಾಯಿತು. ಈ ಪರೀಕ್ಷೆಯಲ್ಲಿ ಒಟ್ಟು 1563 ವಿದ್ಯಾರ್ಥಿಗಳು ಹಾಜರಾಗಬೇಕಿತ್ತು, ಆದರೆ 813 ಅಭ್ಯರ್ಥಿಗಳು ಮಾತ್ರ ಹಾಜರಾಗಿದ್ದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Daily Devotional: ಬೂದುಗುಂಬಳ ಕಾಯಿಯ ಮಹತ್ವ ಹಾಗೂ ಅದರ ಉಪಯೋಗ ತಿಳಿಯಿರಿ
Daily Devotional: ಬೂದುಗುಂಬಳ ಕಾಯಿಯ ಮಹತ್ವ ಹಾಗೂ ಅದರ ಉಪಯೋಗ ತಿಳಿಯಿರಿ
Daily Horoscope: ಕೆಲಸದಲ್ಲಿನ ನಿಮ್ಮ ಚುರುಕುತನದಿಂದ ಮೆಚ್ಚುಗೆ ಗಳಿಸುವಿರಿ
Daily Horoscope: ಕೆಲಸದಲ್ಲಿನ ನಿಮ್ಮ ಚುರುಕುತನದಿಂದ ಮೆಚ್ಚುಗೆ ಗಳಿಸುವಿರಿ
ಸಾಧು ಕೋಕಿಲ ಸಿನಿಮಾ ಕಡಿಮೆ ಆಗಿದ್ದು ಯಾಕೆ? ಕಾರಣ ತಿಳಿಸಿದ ಕಾಮಿಡಿ ಕಿಂಗ್
ಸಾಧು ಕೋಕಿಲ ಸಿನಿಮಾ ಕಡಿಮೆ ಆಗಿದ್ದು ಯಾಕೆ? ಕಾರಣ ತಿಳಿಸಿದ ಕಾಮಿಡಿ ಕಿಂಗ್
ಜಾನಪದವೇ ಎಲ್ಲ ಕಲೆಗಳ ಮೂಲ, ಅದು ಜಾನಪದವಲ್ಲ ಜ್ಞಾನಪದ: ವೆಂಕಪ್ಪ
ಜಾನಪದವೇ ಎಲ್ಲ ಕಲೆಗಳ ಮೂಲ, ಅದು ಜಾನಪದವಲ್ಲ ಜ್ಞಾನಪದ: ವೆಂಕಪ್ಪ
ಜಪಾನ್​ನಲ್ಲಿ ಭಾರತದ ಮೊದಲ ಬುಲೆಟ್ ರೈಲಿನ ಪ್ರಾಯೋಗಿಕ ಸಂಚಾರ ಆರಂಭ
ಜಪಾನ್​ನಲ್ಲಿ ಭಾರತದ ಮೊದಲ ಬುಲೆಟ್ ರೈಲಿನ ಪ್ರಾಯೋಗಿಕ ಸಂಚಾರ ಆರಂಭ
ಐಪಿಎಲ್‌ನಲ್ಲಿ 7 ಸಾವಿರ ರನ್ ಪೂರೈಸಿದ ರೋಹಿತ್
ಐಪಿಎಲ್‌ನಲ್ಲಿ 7 ಸಾವಿರ ರನ್ ಪೂರೈಸಿದ ರೋಹಿತ್
ನೈಜೀರಿಯಾದ ಮೊಕ್ವಾ ನಗರದಲ್ಲಿ ಡ್ಯಾಂ ಕುಸಿದು ಭಾರೀ ಪ್ರವಾಹ; 111 ಜನ ಸಾವು
ನೈಜೀರಿಯಾದ ಮೊಕ್ವಾ ನಗರದಲ್ಲಿ ಡ್ಯಾಂ ಕುಸಿದು ಭಾರೀ ಪ್ರವಾಹ; 111 ಜನ ಸಾವು
‘ಕಮಲ್ ಹಾಸನ್​ನ ಪ್ರೀತಿಸುತ್ತೇವೆ, ಆದ್ರೆ ಅವರು ಮಾಡಿದ್ದು ತಪ್ಪು’: ವಸಿಷ್ಠ
‘ಕಮಲ್ ಹಾಸನ್​ನ ಪ್ರೀತಿಸುತ್ತೇವೆ, ಆದ್ರೆ ಅವರು ಮಾಡಿದ್ದು ತಪ್ಪು’: ವಸಿಷ್ಠ
ಹಂಚಿಕೆದಾರರಿಗೆ ನಷ್ಟವಾದರೆ ಕಮಲ್ ಹಾಸನ್​ನಿಂದ ವಸೂಲಿ ಮಾಡಲಿ: ನಾರಾಯಣಗೌಡ
ಹಂಚಿಕೆದಾರರಿಗೆ ನಷ್ಟವಾದರೆ ಕಮಲ್ ಹಾಸನ್​ನಿಂದ ವಸೂಲಿ ಮಾಡಲಿ: ನಾರಾಯಣಗೌಡ
ಶಿವಣ್ಣ ಆರೋಗ್ಯದಲ್ಲಿ ಏರುಪೇರಾಗಿದೆ, ಅವರನ್ನು ದಶಕಗಳಿಂದ ಬಲ್ಲೆ: ಸೋಮಣ್ಣ
ಶಿವಣ್ಣ ಆರೋಗ್ಯದಲ್ಲಿ ಏರುಪೇರಾಗಿದೆ, ಅವರನ್ನು ದಶಕಗಳಿಂದ ಬಲ್ಲೆ: ಸೋಮಣ್ಣ