AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೀಟ್​ ಪರೀಕ್ಷೆ ಅಕ್ರಮ ತನಿಖೆ ಜವಾಬ್ದಾರಿ ಸಿಬಿಐಗೆ ವಹಿಸಿರುವ ನಿರ್ಧಾರ ಸ್ವಾಗತಿಸಿದ ಐಎಂಎ

ನೀಟ್​ ಪರೀಕ್ಷೆಯಲ್ಲಿನ ಅಕ್ರಮಗಳ ತನಿಖೆ ಜವಾಬ್ದಾರಿಯನ್ನು ಸಿಬಿಐಗೆ ವಹಿಸಿರುವ ಕೇಂದ್ರ ಸರ್ಕಾರದ ನಿರ್ಧಾರವನ್ನು ಐಎಂಎ ಸ್ವಾಗತಿಸಿದೆ. ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿಯ ಡೈರೆಕ್ಟರ್ ಜನರಲ್ ಅಂದರೆ ಎನ್‌ಟಿಎ ಅವರನ್ನು ಹುದ್ದೆಯಿಂದ ತೆಗೆದುಹಾಕುವ ನಿರ್ಧಾರದ ಕುರಿತು ಕೂಡ ಸಂತಸ ವ್ಯಕ್ತಪಡಿಸಿದೆ.

ನೀಟ್​ ಪರೀಕ್ಷೆ ಅಕ್ರಮ ತನಿಖೆ ಜವಾಬ್ದಾರಿ ಸಿಬಿಐಗೆ ವಹಿಸಿರುವ ನಿರ್ಧಾರ ಸ್ವಾಗತಿಸಿದ ಐಎಂಎ
ವಿದ್ಯಾರ್ಥಿಗಳು
ನಯನಾ ರಾಜೀವ್
|

Updated on: Jun 24, 2024 | 9:58 AM

Share

ನೀಟ್​-ಯುಜಿ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಿರುವ ಸರ್ಕಾರದ ನಿರ್ಧಾರವನ್ನು ಭಾರತೀಯ ವೈದ್ಯಕೀಯ ಸಂಘ(ಐಎಂಎ) ಸ್ವಾಗತಿಸಿದೆ. ನೀಟ್​-ಯುಜಿಯಲ್ಲಿನ ಅಕ್ರಮಗಳನ್ನು ಗಂಭೀರವಾಗಿ ತನಿಖೆ ಮಾಡಲು ಪ್ರಕರಣವನ್ನು ಸಿಬಿಐಗೆ ವರ್ಗಾಯಿಸಿದ್ದಕ್ಕಾಗಿ ಕೇಂದ್ರ ಶಿಕ್ಷಣ ಸಚಿವಾಲಯಕ್ಕೆ ನಾವು ನಮ್ಮ ಕೃತಜ್ಞತೆಯನ್ನು ವ್ಯಕ್ತಪಡಿಸುತ್ತೇವೆ ಎಂದು ಐಎಂಎ ಹೇಳಿಕೆಯಲ್ಲಿ ತಿಳಿಸಿದೆ.

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿಯ ಡೈರೆಕ್ಟರ್ ಜನರಲ್ ಅಂದರೆ ಎನ್‌ಟಿಎ ಅವರನ್ನು ಹುದ್ದೆಯಿಂದ ತೆಗೆದುಹಾಕುವ ನಿರ್ಧಾರವನ್ನು ಐಎಂಎ ಸ್ವಾಗತಿಸಿದೆ. ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿನ ಅಕ್ರಮಗಳನ್ನು ತೆಗೆದುಹಾಕಲು ಕಠಿಣ ಕಾನೂನುಗಳನ್ನು ಜಾರಿಗೊಳಿಸುವ ಸರ್ಕಾರದ ನಿರ್ಧಾರವನ್ನು ನಾವು ಪ್ರಶಂಸಿಸುತ್ತೇವೆ ಎಂದು ಐಎಂಎ ಹೇಳಿಕೆ ತಿಳಿಸಿದೆ.

ವಿದ್ಯಾರ್ಥಿಗಳೇ ಭಾರತದ ಭವಿಷ್ಯ. ಸರ್ಕಾರ ನೀಡಿದ ಭರವಸೆಯಂತೆ ಬಲಿಷ್ಠ ವ್ಯವಸ್ಥೆಯನ್ನು ನಿರೀಕ್ಷಿಸುತ್ತೇವೆ. ಪರೀಕ್ಷೆಗಳಲ್ಲಿ ಅವ್ಯವಹಾರಗಳನ್ನು ತಡೆಗಟ್ಟಲು ಕಾನೂನು ಜಾರಿಗೆ ತರುವುದರೊಂದಿಗೆ ಪರೀಕ್ಷಾ ಅಧಿಕಾರಿಗಳು, ಸೇವಾ ಪೂರೈಕೆದಾರರು ಅಥವಾ ಇತರ ಸಂಸ್ಥೆಗಳನ್ನು ಒಳಗೊಂಡ ಸಂಘಟಿತ ಅಪರಾಧ ಪ್ರಕರಣಗಳಲ್ಲಿ, ಅಪರಾಧಿಗಳಿಗೆ 10 ವರ್ಷಗಳವರೆಗೆ ಜೈಲು ಶಿಕ್ಷೆ ಮತ್ತು ಕನಿಷ್ಠ 1 ಕೋಟಿ ರೂ. ದಂಡ ವಿಧಿಸಲಾಗುತ್ತದೆ.

ಮತ್ತಷ್ಟು ಓದಿ: ನೀಟ್​ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ: ತನಿಖೆ ಜವಾಬ್ದಾರಿ ಸಿಬಿಐಗೆ ವಹಿಸಿದ ಶಿಕ್ಷಣ ಸಚಿವಾಲಯ

ನೀಟ್​-ಯುಜಿ ಪರೀಕ್ಷೆಯಲ್ಲಿನ ಅಕ್ರಮಗಳ ತನಿಖೆಯನ್ನು ಸಿಬಿಐ ವಹಿಸಿಕೊಂಡಿದೆ. ಈ ಪ್ರಕರಣದ ಮೊದಲ ಎಫ್‌ಐಆರ್ ಕೂಡ ಸಿಬಿಐ ಭಾನುವಾರ ದಾಖಲಿಸಿದೆ. ಆಪಾದಿತ ಅಕ್ರಮಗಳ ತನಿಖೆಯನ್ನು ಕೇಂದ್ರ ಏಜೆನ್ಸಿಗೆ ಹಸ್ತಾಂತರಿಸುವುದಾಗಿ ಶಿಕ್ಷಣ ಸಚಿವಾಲಯ ಘೋಷಿಸಿದ ಒಂದು ದಿನದ ನಂತರ ಸಿಬಿಐನ ಈ ಕ್ರಮವನ್ನು ತೆಗೆದುಕೊಳ್ಳಲಾಗಿದೆ.

ನೀಟ್​-ಯುಜಿ ಪರೀಕ್ಷೆಯಲ್ಲಿನ ಅಕ್ರಮಗಳು ಮತ್ತು ಆರೋಪಗಳ ಗಂಭೀರತೆಯನ್ನು ಗಮನದಲ್ಲಿಟ್ಟುಕೊಂಡು, ಎನ್​ಟಿಎ ಮುನ್ನೆಚ್ಚರಿಕೆ ಕ್ರಮವಾಗಿ ಜೂನ್ 23 ರ ಶನಿವಾರ ನಡೆಯಲಿರುವ ನೀಟ್​-ಪಿಜಿ ಪರೀಕ್ಷೆಯನ್ನು ಮುಂದೂಡಿದೆ. ನೀಟ್-ಯುಜಿಯಲ್ಲಿ ಗ್ರೇಸ್ ಅಂಕ ಪಡೆದ ವಿದ್ಯಾರ್ಥಿಗಳಿಗೆ ಭಾನುವಾರ ಮರು ಪರೀಕ್ಷೆ ನಡೆಸಲಾಯಿತು. ಈ ಪರೀಕ್ಷೆಯಲ್ಲಿ ಒಟ್ಟು 1563 ವಿದ್ಯಾರ್ಥಿಗಳು ಹಾಜರಾಗಬೇಕಿತ್ತು, ಆದರೆ 813 ಅಭ್ಯರ್ಥಿಗಳು ಮಾತ್ರ ಹಾಜರಾಗಿದ್ದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಎಕ್ಸಾಂ ಹಾಲ್ ಟಿಕೆಟ್ ತೋರಿಸಿದ್ರೆ ಬಾಲಕರಿಗೂ ಉಚಿತ ಪ್ರಯಾಣ
ಎಕ್ಸಾಂ ಹಾಲ್ ಟಿಕೆಟ್ ತೋರಿಸಿದ್ರೆ ಬಾಲಕರಿಗೂ ಉಚಿತ ಪ್ರಯಾಣ
ಮಕ್ಕಳ ಪರೀಕ್ಷಾ ಒತ್ತಡ ನಿವಾರಣೆಗೆ ಪೋಷಕರು ಮಾಡಬೇಕಾದ್ದು ಏನು?
ಮಕ್ಕಳ ಪರೀಕ್ಷಾ ಒತ್ತಡ ನಿವಾರಣೆಗೆ ಪೋಷಕರು ಮಾಡಬೇಕಾದ್ದು ಏನು?
ಮಧುರ ಪ್ರೇಮಕ್ಕೆ 10 ವರ್ಷ; ಮೊದಲ ಭೇಟಿಯ ಫೋಟೋ ಹಂಚಿಕೊಂಡ ಚೈತ್ರಾ ಕುಂದಾಪುರ
ಮಧುರ ಪ್ರೇಮಕ್ಕೆ 10 ವರ್ಷ; ಮೊದಲ ಭೇಟಿಯ ಫೋಟೋ ಹಂಚಿಕೊಂಡ ಚೈತ್ರಾ ಕುಂದಾಪುರ
ಬೇಸಿಗೆಗೂ ಮುನ್ನ ಮಂತ್ರಾಲಯದಲ್ಲಿ ನೀರಿಗೆ ತತ್ವಾರ: ಪುಣ್ಯಸ್ನಾನಕ್ಕೂ ಪರದಾಟ
ಬೇಸಿಗೆಗೂ ಮುನ್ನ ಮಂತ್ರಾಲಯದಲ್ಲಿ ನೀರಿಗೆ ತತ್ವಾರ: ಪುಣ್ಯಸ್ನಾನಕ್ಕೂ ಪರದಾಟ
ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?
ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ