AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Monsoon 2023: ಕರ್ನಾಟಕ, ಕೇರಳ, ಮಹಾರಾಷ್ಟ್ರ ಸೇರಿದಂತೆ 20ಕ್ಕೂ ಅಧಿಕ ರಾಜ್ಯಗಳಲ್ಲಿ ಭಾರಿ ಮಳೆಯ ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ

ಕೆಲವು ರಾಜ್ಯಗಳಲ್ಲಿ ಮುಂಗಾರು(Monsoon) ಶುರುವಾದರೆ ಇನ್ನೂ ಕೆಲವು ರಾಜ್ಯಗಳಲ್ಲಿ ಉಷ್ಣಗಾಳಿ ಮುಂದುವರೆದಿದೆ. ಹಾಗೆಯೇ ಮುಂದಿನ 24 ಗಂಟೆಗಳಲ್ಲಿ ಹಲವು ರಾಜ್ಯಗಳಲ್ಲಿ ಭಾರಿ ಮಳೆ(Rain)ಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

Monsoon 2023: ಕರ್ನಾಟಕ, ಕೇರಳ, ಮಹಾರಾಷ್ಟ್ರ ಸೇರಿದಂತೆ 20ಕ್ಕೂ ಅಧಿಕ ರಾಜ್ಯಗಳಲ್ಲಿ ಭಾರಿ ಮಳೆಯ ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ
ಮಳೆImage Credit source: India Today
ನಯನಾ ರಾಜೀವ್
|

Updated on: Jun 26, 2023 | 10:43 AM

Share

ಕೆಲವು ರಾಜ್ಯಗಳಲ್ಲಿ ಮುಂಗಾರು(Monsoon) ಶುರುವಾದರೆ ಇನ್ನೂ ಕೆಲವು ರಾಜ್ಯಗಳಲ್ಲಿ ಉಷ್ಣಗಾಳಿ ಮುಂದುವರೆದಿದೆ. ಹಾಗೆಯೇ ಮುಂದಿನ 24 ಗಂಟೆಗಳಲ್ಲಿ ಹಲವು ರಾಜ್ಯಗಳಲ್ಲಿ ಭಾರಿ ಮಳೆ(Rain)ಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಜೂನ್ 29ರವರೆಗೂ ಮಹಾರಾಷ್ಟ್ರ, ಮಧ್ಯಪ್ರದೇಶ, ಗುಜರಾತ್,ರಾಜಸ್ಥಾನ, ಛತ್ತೀಸ್​ಗಢ, ಒಡಿಶಾ, ಕೇರಳ, ಮೇಘಾಲಯ, ಪಶ್ಚಿಮ ಬಂಗಾಳ, ಜಾರ್ಖಂಡ್, ಪಂಜಾಬ್, ಜಮ್ಮು ಮತ್ತು ಕಾಶ್ಮೀರ, ಹಿಮಾಚಲಪ್ರದೇಶ, ಉತ್ತರಾಖಂಡ, ಹರ್ಯಾಣ, ಉತ್ತರ ಪ್ರದೇಶ, ದೆಹಲಿ,ಅರುಣಾಚಲಪ್ರದೇಶ, ಕರ್ನಾಟಕ, ಅಸ್ಸಾಂನಲ್ಲಿ ಭಾರಿ ಮಳೆಯಾಗಲಿದೆ.

ಮಧ್ಯಪ್ರದೇಶದ ಮೂರು ಜಿಲ್ಲೆಗಳಿಗೆ ‘ರೆಡ್ ಅಲರ್ಟ್’ ನೀಡಲಾಗಿದ್ದು, ರಾಜಸ್ಥಾನ, ಮಹಾರಾಷ್ಟ್ರ, ಕೇರಳ, ಮೇಘಾಲಯ, ಒಡಿಶಾ, ಛತ್ತೀಸ್‌ಗಢ ಮತ್ತು ಅಸ್ಸಾಂನ ಹಲವು ಜಿಲ್ಲೆಗಳಲ್ಲಿ ‘ಹಳದಿ’ ಮತ್ತು ‘ಆರೆಂಜ್’ ಅಲರ್ಟ್‌ಗಳನ್ನು ನೀಡಲಾಗಿದೆ.

ಮತ್ತಷ್ಟು ಓದಿ: Monsoon 2023: ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಮುಂದಿನ 5 ದಿನ ಭಾರಿ ಮಳೆ, ಯೆಲ್ಲೋ ಅಲರ್ಟ್​ ಘೋಷಣೆ

ಪೂರ್ವ ಮತ್ತು ಈಶಾನ್ಯ ಭಾರತ ಜೂನ್ 26 ರಂದು ಒಡಿಶಾದಲ್ಲಿ ಭಾರಿ ಮಳೆಯಾಗಲಿದೆ, ಜೂನ್ 28 ಮತ್ತು ಜೂನ್ 29 ರಂದು ಅಸ್ಸಾಂ ಮತ್ತು ಮೇಘಾಲಯದಲ್ಲಿ ಮಳೆಯಾಗಲಿದ್ದು, ಜೂನ್ 29 ರಂದು ಅರುಣಾಚಲ ಪ್ರದೇಶದಲ್ಲಿ ಮಳೆಯಾಗಲಿದೆ ಎನ್ನುವ ಮಾಹಿತಿಯನ್ನು ನೀಡಿದೆ.

ವಾಯುವ್ಯ ಭಾರತ ಜೂನ್ 28 ರಂದು ಪೂರ್ವ ರಾಜಸ್ಥಾನದ ಮೇಲೆ ಅತಿ ಹೆಚ್ಚು ಮಳೆ ಬೀಳುವ ಸಾಧ್ಯತೆ ಇದೆ. ಜೂನ್ 26 ರಂದು ಉತ್ತರಾಖಂಡ, ಪಶ್ಚಿಮ ಉತ್ತರ ಪ್ರದೇಶ ಮತ್ತು ಹಿಮಾಚಲ ಪ್ರದೇಶದಲ್ಲಿ ಭಾರಿ ಮಳೆ ಬೀಳಲಿದೆ.

ಮಧ್ಯ ಭಾರತ ಮುಂದಿನ 5 ದಿನಗಳಲ್ಲಿ ಮಧ್ಯಪ್ರದೇಶ, ಛತ್ತೀಸ್‌ಗಢ ಮತ್ತು ವಿದರ್ಭದಲ್ಲಿ ಗುಡುಗು ಸಹಿತ ವ್ಯಾಪಕ ಮಳೆ ಸುರಿಯುವ ಸಾಧ್ಯತೆ ಇದೆ.

ದಕ್ಷಿಣ ಭಾರತ ಮುಂದಿನ 5 ದಿನಗಳಲ್ಲಿ ವ್ಯಾಪಕ ಮಳೆಯಾಗಲಿದೆ ಮತ್ತು ಮುಂದಿನ 2 ದಿನಗಳಲ್ಲಿ ಈ ಪ್ರದೇಶದಲ್ಲಿ ಗುಡುಗು ಸಹಿತ ಮಳೆಯಾಗಲಿದೆ. ಜೂನ್ 27 ರಂದು ಕೇರಳ ಮತ್ತು ಮಹಾರಾಷ್ಟ್ರದಲ್ಲಿ ಭಾರಿ ಮಳೆಯಾಗಲಿದೆ. ಜೂನ್ 29 ರವರೆಗೆ ಕರಾವಳಿ ಕರ್ನಾಟಕದಲ್ಲಿ ಭಾರೀ ಮಳೆಯಾಗುವ ನಿರೀಕ್ಷೆಯಿದೆ.

ಪಶ್ಚಿಮ ಭಾರತ ಜೂನ್ 26 ರಂದು ಮಹಾರಾಷ್ಟ್ರ ಮತ್ತು ಗೋವಾದ ಕೆಲವು ಭಾಗಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ.

ಮತ್ತೊಂದೆಡೆ, ಸೌರಾಷ್ಟ್ರ ಮತ್ತು ಕಚ್ ಸೇರಿದಂತೆ ಗುಜರಾತ್‌ನ ಕೆಲವು ಭಾಗಗಳಲ್ಲಿ ಜೂನ್ 29 ರವರೆಗೆ ಲಘು ಅಥವಾ ಸಾಧಾರಣ ಮಳೆಯಾಗಲಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Video: ಮದುವೆ ಒಂದು ವಾರವಿರುವಾಗ ಪ್ರೇಮಿಯೊಂದಿಗೆ ಓಡಿ ಹೋಗಲು ಯುವತಿ ಯತ್ನ
Video: ಮದುವೆ ಒಂದು ವಾರವಿರುವಾಗ ಪ್ರೇಮಿಯೊಂದಿಗೆ ಓಡಿ ಹೋಗಲು ಯುವತಿ ಯತ್ನ
ಕೇವಲ 3.30 ರೂಪಾಯಿಗೆ ಒಂದು ಮೊಟ್ಟೆ ಲಭ್ಯ
ಕೇವಲ 3.30 ರೂಪಾಯಿಗೆ ಒಂದು ಮೊಟ್ಟೆ ಲಭ್ಯ
18 ಹಲ್ಲುಗಳಿಗೆ ಶಸ್ತ್ರ ಚಿಕಿತ್ಸೆ ಮಾಡಲು ದಂತ ವೈದ್ಯರ ಯತ್ನ, ಬಾಲಕಿ ಸಾವು
18 ಹಲ್ಲುಗಳಿಗೆ ಶಸ್ತ್ರ ಚಿಕಿತ್ಸೆ ಮಾಡಲು ದಂತ ವೈದ್ಯರ ಯತ್ನ, ಬಾಲಕಿ ಸಾವು
ರಾಯಚೂರು: ಸ್ಟೀರಿಂಗ್ ಕಟ್ ಆಗಿ ಪಲ್ಟಿಯಾದ KKRTC ಬಸ್, ತಪ್ಪಿದ ಭಾರಿ ದುರಂತ
ರಾಯಚೂರು: ಸ್ಟೀರಿಂಗ್ ಕಟ್ ಆಗಿ ಪಲ್ಟಿಯಾದ KKRTC ಬಸ್, ತಪ್ಪಿದ ಭಾರಿ ದುರಂತ
ಕೊಡಗು: ವಿದೇಶಿ ಮಹಿಳೆ ಮೇಲೆ ಅತ್ಯಾಚಾರ ಆರೋಪ, ಹೋಂಸ್ಟೇ ಪರವಾನಗಿ ರದ್ದು
ಕೊಡಗು: ವಿದೇಶಿ ಮಹಿಳೆ ಮೇಲೆ ಅತ್ಯಾಚಾರ ಆರೋಪ, ಹೋಂಸ್ಟೇ ಪರವಾನಗಿ ರದ್ದು
ಸಾಮಾನ್ಯ ವ್ಯಕ್ತಿಯಂತೆ ಬಂದು ಮತ ಚಲಾಯಿಸಿದ ಸೂಪರ್ ಸ್ಟಾರ್ ರಜನಿಕಾಂತ್ 
ಸಾಮಾನ್ಯ ವ್ಯಕ್ತಿಯಂತೆ ಬಂದು ಮತ ಚಲಾಯಿಸಿದ ಸೂಪರ್ ಸ್ಟಾರ್ ರಜನಿಕಾಂತ್ 
ರಾಜಗಾಂಭಿರ್ಯದಿಂದ ರಸ್ತೆಗೆ ಬಂದ ಹುಲಿ: ಅಪರೂಪದ ವಿಡಿಯೋ ಇಲ್ಲಿದೆ
ರಾಜಗಾಂಭಿರ್ಯದಿಂದ ರಸ್ತೆಗೆ ಬಂದ ಹುಲಿ: ಅಪರೂಪದ ವಿಡಿಯೋ ಇಲ್ಲಿದೆ
‘ರಕ್ಷಿತಾ ರೀತಿ ನಾನು ಪ್ರೇಮ್ ಜೊತೆ ಸಂಸಾರ ಮಾಡ್ತಿದೀನಿ’; ಅರ್ಜುನ್ ಜನ್ಯ
‘ರಕ್ಷಿತಾ ರೀತಿ ನಾನು ಪ್ರೇಮ್ ಜೊತೆ ಸಂಸಾರ ಮಾಡ್ತಿದೀನಿ’; ಅರ್ಜುನ್ ಜನ್ಯ
17 ಗಂಟೆಗಳ ಹೋರಾಟದ ಬಳಿಕವೂ ಚಿಕಿತ್ಸೆ ಫಲಿಸದೆ ಹೆಣ್ಣಾನೆ ಸಾವು!
17 ಗಂಟೆಗಳ ಹೋರಾಟದ ಬಳಿಕವೂ ಚಿಕಿತ್ಸೆ ಫಲಿಸದೆ ಹೆಣ್ಣಾನೆ ಸಾವು!
ಶಾಸಕರ ಕಚೇರಿಗೇ ವಿದ್ಯುತ್ ಸಂಪರ್ಕ ಕಟ್! ಬಿಲ್ ಬಾಕಿ ಉಳಿಸಿಕೊಂಡಿದ್ದೇ ಕಾರಣ
ಶಾಸಕರ ಕಚೇರಿಗೇ ವಿದ್ಯುತ್ ಸಂಪರ್ಕ ಕಟ್! ಬಿಲ್ ಬಾಕಿ ಉಳಿಸಿಕೊಂಡಿದ್ದೇ ಕಾರಣ