AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉತ್ತರಾಖಂಡ್​​ನಲ್ಲಿ ಭಾರಿ ಮಳೆ ಸಾಧ್ಯತೆ; 13 ಜಿಲ್ಲೆಗಳಲ್ಲಿ ರೆಡ್​ ಅಲರ್ಟ್​, ರಕ್ಷಣಾ ತಂಡಗಳು ಸಜ್ಜು

ಇನ್ನು ಹವಾಮಾನ ಇಲಾಖೆ ಮುನ್ಸೂಚನೆ ಮೇರೆಗೆ ಉತ್ತರಾಖಂಡ್​ ಮುಖ್ಯಮಂತ್ರಿ ಪುಷ್ಕರ್​ ಸಿಂಗ್​ ಧಮಿ ಈಗಾಗಲೇ ಪೊಲೀಸರು, ರಾಜ್ಯ ವಿಪತ್ರು ಪ್ರತಿಕ್ರಿಯಾ ಪಡೆಗಳು, ಎಲ್ಲ ಜಿಲ್ಲಾಧಿಕಾರಿಗಳಿಗೂ ಅಲರ್ಟ್​ ಆಗಿರುವಂತೆ ಸೂಚಿಸಿದ್ದಾರೆ. 

ಉತ್ತರಾಖಂಡ್​​ನಲ್ಲಿ ಭಾರಿ ಮಳೆ ಸಾಧ್ಯತೆ; 13 ಜಿಲ್ಲೆಗಳಲ್ಲಿ ರೆಡ್​ ಅಲರ್ಟ್​, ರಕ್ಷಣಾ ತಂಡಗಳು ಸಜ್ಜು
ಮಳೆ
TV9 Web
| Edited By: |

Updated on: Oct 17, 2021 | 5:33 PM

Share

ಉತ್ತರಾಖಂಡ್(Uttarakhand)​​ನಲ್ಲಿ ಇಂದಿನಿಂದ ಮೂರು ದಿನ ಅಂದರೆ ಅಕ್ಟೋಬರ್​ 19ರವರೆಗೆ ವಿಪರೀತ ಮಳೆಯಾಗುವ ಮುನ್ಸೂಚನೆ ನೀಡಿರುವ ಭಾರತೀಯ ಹವಾಮಾನ ಇಲಾಖೆ (IMD) ಒಟ್ಟು 13 ಜಿಲ್ಲೆಗಳಲ್ಲಿ ಅ.19ರವರೆಗೂ ರೆಡ್​ ಅಲರ್ಟ್​ ಘೋಷಣೆ ಮಾಡಿದೆ.  ಹೀಗಾಗಿ ಬದರಿನಾಥ ಯಾತ್ರೆಯೂ ಸದ್ಯದ ಮಟ್ಟಿಗೆ ತಾತ್ಕಾಲಿಕವಾಗಿ ಸ್ಥಗಿತಗೊಳ್ಳಲಿದೆ. ಯಾತ್ರಾರ್ಥಿಗಳನ್ನು ಪಾಂಡುಕೇಶ್ವರದಲ್ಲಿಯೇ ನಿಲ್ಲಿಸಲಾಗಿದೆ.  ಸದ್ಯ ರೆಡ್​ ಅಲರ್ಟ್​ ಘೋಷಣೆಯಾಗಿದ್ದರಿಂದ ಭಕ್ತರಿಗೆ ಪ್ರಯಾಣ ಮಾಡದಂತೆ ಸೂಚಿಸಿದ್ದೇವೆ. ಬದರಿನಾಥಕ್ಕೆ ಬರುತ್ತಿದ್ದ ಹಲವು ಯಾತ್ರಾರ್ಥಿಗಳನ್ನು ಅವರಿದ್ದಲ್ಲೇ ತಡೆಯಲಾಗಿದೆ. ಹಾಗೇ, ಅವರ ಸುರಕ್ಷತೆಯ ಬಗ್ಗೆಯೂ ಗಮನಹರಿಸಲಾಗಿದೆ ಎಂದು ಚಮೋಲಿ ಜಿಲ್ಲಾಧಿಕಾರಿ ಹಿಮಾಂಶು ಖುರಾನಾ ತಿಳಿಸಿದ್ದಾರೆ. ಹಾಗೇ, ಸೋಮವಾರ ಚಮೋಲಿಯಲ್ಲಿ ಎಲ್ಲ ಶಾಲೆ, ಕಾಲೇಜುಗಳಿಗೂ ರಜೆ ಘೋಷಣೆಯಾಗಿದೆ ಎಂದು ಮಾಹಿತಿ ನೀಡಿದ್ದಾರೆ.  

ಇಡೀ ಉತ್ತರಾಖಂಡ್​​ನಲ್ಲಿ ಒಟ್ಟು 13 ಜಿಲ್ಲೆಗಳಿಗೆ ರೆಡ್​ ಅಲರ್ಟ್​ ಘೋಷಣೆಯಾಗಿದ್ದು, ಜನರು ಎಚ್ಚರಿಕೆಯಿಂದ ಇರಬೇಕು. ಇನ್ನೆರಡು ದಿನ ಎಲ್ಲಿಯೂ ಪ್ರಯಾಣ ಮಾಡಬೇಡಿ. ಆದಷ್ಟು ಮನೆಯಲ್ಲೇ ಸುರಕ್ಷಿತವಾಗಿರಿ ಎಂದು ಹವಾಮಾನ ಇಲಾಖೆ ನಿರ್ದೇಶಕ ವಿಕ್ರಮ್​ ಸಿಂಗ್​ ಸಲಹೆ ನೀಡಿದ್ದಾರೆ. ಹಾಗೇ ಇಲ್ಲಿ, ಇನ್ನು ಮೂರು ದಿನ ವಿಪರೀತ ಮಿಂಚು ಸಹಿತ ಆಲಿಕಲ್ಲು ಮಳೆಯಾಗುವ ಸಾಧ್ಯತೆಯಿದೆ. ಸುಮಾರು 80 ಕಿಮೀ ವೇಗದಲ್ಲಿ ಬಲವಾದ ಗಾಳಿಯೂ ಬೀಸಬಹುದು ಎಂದು ಐಎಂಡಿ ಮಾಹಿತಿ ನೀಡಿದೆ.

ಇನ್ನು ಹವಾಮಾನ ಇಲಾಖೆ ಮುನ್ಸೂಚನೆ ಮೇರೆಗೆ ಉತ್ತರಾಖಂಡ್​ ಮುಖ್ಯಮಂತ್ರಿ ಪುಷ್ಕರ್​ ಸಿಂಗ್​ ಧಮಿ ಈಗಾಗಲೇ ಪೊಲೀಸರು, ರಾಜ್ಯ ವಿಪತ್ರು ಪ್ರತಿಕ್ರಿಯಾ ಪಡೆಗಳು, ಎಲ್ಲ ಜಿಲ್ಲಾಧಿಕಾರಿಗಳಿಗೂ ಅಲರ್ಟ್​ ಆಗಿರುವಂತೆ ಸೂಚಿಸಿದ್ದಾರೆ.  ಜನರ ಸುರಕ್ಷತೆ ಮಾಡುವ ಜವಾಬ್ದಾರಿಯನ್ನು ಸರಿಯಾಗಿ ನಿಭಾಯಿಸಬೇಕು ಎಂದೂ ಹೇಳಿದ್ದಾರೆ.  ಇನ್ನು ಉತ್ತರಾಖಂಡ್​​ನಲ್ಲಿ ಪಾಕೃತಿಕ ವಿಪತ್ತು ಸದಾ ಉಂಟಾಗುತ್ತಿರುತ್ತದೆ. ಅತಿಯಾದ ಮಳೆ ಬಿದ್ದ ಕೂಡಲೇ ಪ್ರವಾಹ, ಭೂಕುಸಿತ, ಸಿಡಿಲುಬಡಿತ, ಮೇಘಸ್ಫೋಟದಂಥ ದೊಡ್ಡಮಟ್ಟದ ಅಪಾಯಗಳು ಎದುರಾಗುತ್ತವೆ. ಹೀಗಾಗಿ ಅಲ್ಲಿನ ರಕ್ಷಣಾ ಪಡೆಗಳು ಸದಾ ಅಲರ್ಟ್​ ಆಗಿಯೇ ಇರುತ್ತವೆ. ಈಗ ಕೂಡ ಹವಾಮಾನ ಇಲಾಖೆ ನೀಡಿದ ವರದಿ ಅನ್ವಯಿಸಿ, ರಾಜ್ಯಾದ್ಯಂತ ಸುಮಾರು 29 ಎಸ್​ಡಿಆರ್​ಎಫ್​ ತಂಡಗಳು ಸಜ್ಜಾಗಿವೆ.

ಇದನ್ನೂ ಓದಿ: ಕರ್ನಾಟಕದವರನ್ನು ಕಡೆಗಣಿಸಿದ ಬಾಲಿವುಡ್​ ಮಂದಿಗೆ ಸರಿಯಾಗಿ ತಿರುಗೇಟು ನೀಡಿದ ರಶ್ಮಿಕಾ ಮಂದಣ್ಣ

ಭಾರತ-ಪಾಕ್ ಪಂದ್ಯದ ದಿನ ಸೋಶಿಯಲ್ ಮೀಡಿಯಾದಿಂದ ದೂರವಾಗಲಿದ್ದಾರೆ ಸಾನಿಯಾ ಮಿರ್ಜಾ! ಕಾರಣವೇನು ಗೊತ್ತಾ?

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ