AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಂಡೀಗಢವನ್ನು ಕೂಡಲೇ ಪಂಜಾಬ್​ಗೆ ವರ್ಗಾಯಿಸಬೇಕು; ಸದನದಲ್ಲಿ ಸಿಎಂ ಭಗವಂತ್ ಮಾನ್ ನಿರ್ಣಯ ಮಂಡನೆ

ಇಂದು ಸದನದಲ್ಲಿ ನಿರ್ಣಯವನ್ನು ಮಂಡಿಸಿದ ಪಂಜಾಬ್ ಸಿಎಂ ಭಗವಂತ್ ಮಾನ್ ಸಂವಿಧಾನದಲ್ಲಿ ಪ್ರತಿಪಾದಿಸಲಾದ ಫೆಡರಲಿಸಂನ ತತ್ವಗಳನ್ನು ಗೌರವಿಸುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಿದರು.

ಚಂಡೀಗಢವನ್ನು ಕೂಡಲೇ ಪಂಜಾಬ್​ಗೆ ವರ್ಗಾಯಿಸಬೇಕು; ಸದನದಲ್ಲಿ ಸಿಎಂ ಭಗವಂತ್ ಮಾನ್ ನಿರ್ಣಯ ಮಂಡನೆ
ಭಗವಂತ್ ಮಾನ್
TV9 Web
| Edited By: |

Updated on: Apr 01, 2022 | 1:47 PM

Share

ಚಂಡೀಗಢ: ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ (Bhagwant Mann) ಪಂಜಾಬ್ ರಾಜ್ಯ ವಿಧಾನಸಭೆಯ ಒಂದು ದಿನದ ವಿಶೇಷ ಅಧಿವೇಶನದಲ್ಲಿ ಚಂಡೀಗಢವನ್ನು ತಕ್ಷಣವೇ ಪಂಜಾಬ್​ಗೆ ವರ್ಗಾಯಿಸುವಂತೆ ನಿರ್ಣಯವನ್ನು ಮಂಡಿಸಿದ್ದಾರೆ. ಚಂಡೀಗಢವು ಪಂಜಾಬ್ ಮತ್ತು ಹರಿಯಾಣದ ಜಂಟಿ ರಾಜಧಾನಿಯಾಗಿದೆ. ಚಂಡೀಗಢದ ಉದ್ಯೋಗಿಗಳಿಗೆ ಕೇಂದ್ರ ಸರ್ಕಾರದ ಸೇವಾ ನಿಯಮಗಳು ಅನ್ವಯಿಸುತ್ತವೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಅವರ ಘೋಷಣೆಯಿಂದ ರಾಜಕೀಯ ಗದ್ದಲದ ನಡುವೆ ಒಂದು ದಿನದ ವಿಶೇಷ ಅಧಿವೇಶನ ಕರೆಯಲಾಗಿದೆ.

ಇಂದು ಸದನದಲ್ಲಿ ನಿರ್ಣಯವನ್ನು ಮಂಡಿಸಿದ ಸಿಎಂ ಭಗವಂತ್ ಮಾನ್, ಸಂವಿಧಾನದಲ್ಲಿ ಪ್ರತಿಪಾದಿಸಲಾದ ಫೆಡರಲಿಸಂನ ತತ್ವಗಳನ್ನು ಗೌರವಿಸುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಿದರು. ಚಂಡೀಗಢದ ಆಡಳಿತದ ಸಮತೋಲನ ಮತ್ತು ಇತರ ಸಾಮಾನ್ಯ ಆಸ್ತಿಗಳಿಗೆ ಭಂಗ ತರುವಂತಹ ಯಾವುದೇ ಕ್ರಮಗಳನ್ನು ತೆಗೆದುಕೊಳ್ಳಬಾರದು. “ಪಂಜಾಬ್ ಅನ್ನು ಪಂಜಾಬ್ ಮರುಸಂಘಟನೆ ಕಾಯಿದೆ, 1966ರ ಮೂಲಕ ಮರುಸಂಘಟಿಸಲಾಯಿತು. ಇದರಲ್ಲಿ ಪಂಜಾಬ್ ರಾಜ್ಯವನ್ನು ಹರಿಯಾಣ ರಾಜ್ಯವಾಗಿ ಮರುಸಂಘಟಿಸಲಾಯಿತು. ಚಂಡೀಗಢದ ಕೇಂದ್ರಾಡಳಿತ ಪ್ರದೇಶ ಮತ್ತು ಪಂಜಾಬ್‌ನ ಕೆಲವು ಭಾಗಗಳನ್ನು ಅಂದಿನ ಕೇಂದ್ರಾಡಳಿತ ಪ್ರದೇಶವಾದ ಹಿಮಾಚಲ ಪ್ರದೇಶಕ್ಕೆ ನೀಡಲಾಯಿತು” ಎಂದು ನಿರ್ಣಯವು ಹೇಳಿದೆ.

ಸೌಹಾರ್ದತೆ ಕಾಪಾಡಲು ಮತ್ತು ಜನರ ಭಾವನೆಗಳನ್ನು ಗಣನೆಗೆ ತೆಗೆದುಕೊಂಡು ಚಂಡೀಗಢವನ್ನು ತಕ್ಷಣವೇ ಪಂಜಾಬ್‌ಗೆ ವರ್ಗಾಯಿಸಲು ಕೇಂದ್ರ ಸರ್ಕಾರಕ್ಕೆ ವಿಷಯ ಪ್ರಸ್ತಾಪಿಸಲು ಈ ಸದನವು ಮತ್ತೊಮ್ಮೆ ರಾಜ್ಯ ಸರ್ಕಾರಕ್ಕೆ ಶಿಫಾರಸು ಮಾಡುತ್ತದೆ ಎಂದು ನಿರ್ಣಯವನ್ನು ಓದಿದ್ದಾರೆ. ಚಂಡೀಗಢ ನಗರವನ್ನು ಪಂಜಾಬ್‌ನ ರಾಜಧಾನಿಯಾಗಿ ರಚಿಸಲಾಗಿದೆ ಎಂದು ಅದು ಹೇಳಿದೆ. 1966ರಲ್ಲಿ ಹಿಂದಿ ಮಾತನಾಡುವ ಪ್ರದೇಶಗಳನ್ನು ಒಳಗೊಂಡಿರುವ ಪಂಜಾಬ್‌ನಿಂದ ಹರಿಯಾಣವನ್ನು ಬೇರ್ಪಡಿಸಿದ ನಂತರ ಚಂಡೀಗಢವು ಪಂಜಾಬ್ ಮತ್ತು ಹರಿಯಾಣದ ಜಂಟಿ ರಾಜಧಾನಿಯಾಯಿತು.

ಚಂಡೀಗಢದ ಆಡಳಿತವನ್ನು ಯಾವಾಗಲೂ ಪಂಜಾಬ್ ಮತ್ತು ಹರಿಯಾಣದ ಅಧಿಕಾರಿಗಳು 60:40 ಅನುಪಾತದಲ್ಲಿ ನಿರ್ವಹಿಸುತ್ತಾರೆ. ಆದರೆ, ಇತ್ತೀಚೆಗೆ ಕೇಂದ್ರ ಸರ್ಕಾರ ಚಂಡೀಗಢಕ್ಕೆ ಹೊರಗಿನ ಅಧಿಕಾರಿಗಳನ್ನು ನಿಯೋಜಿಸಿದೆ ಮತ್ತು ಚಂಡೀಗಢ ಆಡಳಿತದ ನೌಕರರಿಗೆ ಕೇಂದ್ರ ನಾಗರಿಕ ಸೇವಾ ನಿಯಮಗಳನ್ನು ಪರಿಚಯಿಸಿದೆ. ಇದು ಹಿಂದಿನ ತಿಳುವಳಿಕೆಗೆ ಸಂಪೂರ್ಣವಾಗಿ ವಿರುದ್ಧವಾಗಿದೆ ಎಂದು ಅವರು ನೋಟಿಸ್‌ನಲ್ಲಿ ತಿಳಿಸಿದ್ದಾರೆ.

ಕಳೆದ ವಾರ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಚಂಡೀಗಢ ಆಡಳಿತದ ನೌಕರರು ಕೇಂದ್ರ ಸರ್ಕಾರದಲ್ಲಿ ಕೆಲಸ ಮಾಡುವ ಅವರ ಸಹವರ್ತಿಗಳಿಗೆ ಸಮಾನವಾದ ಪ್ರಯೋಜನಗಳನ್ನು ಪಡೆಯುತ್ತಾರೆ ಎಂದು ಘೋಷಿಸಿದ ನಂತರ ಇತ್ತೀಚಿನ ಜಗಳ ಪ್ರಾರಂಭವಾಯಿತು. ಇದು ಚಂಡೀಗಢದ ಮೇಲಿನ ಪಂಜಾಬ್‌ನ ಹಕ್ಕನ್ನು ದುರ್ಬಲಗೊಳಿಸುತ್ತದೆ ಎಂದು ಪಂಜಾಬ್ ರಾಜ್ಯದ ವಿರೋಧ ಪಕ್ಷಗಳು ಆರೋಪಿಸುತ್ತಿವೆ.

ಇದನ್ನೂ ಓದಿ: ಪಂಜಾಬ್​​ಗೆ ವರ್ಷಕ್ಕೆ 50 ಸಾವಿರ ಕೋಟಿ ರೂ. ಬಿಡುಗಡೆ ಮಾಡಿ; ಪ್ರಧಾನಿ ಮೋದಿಯವರನ್ನು ಭೇಟಿ ಮಾಡಿ ಬೇಡಿಕೆ ಮುಂದಿಟ್ಟ ಭಗವಂತ್ ಮಾನ್​

ಚಂಡೀಗಢದ ಮೇಲಿನ ಹಕ್ಕುಗಳಿಗಾಗಿ ನಾವು ಹೋರಾಡುತ್ತೇವೆ: ಪಂಜಾಬ್ ಸಿಎಂ ಭಗವಂತ್ ಮಾನ್

Follow Us
Web contact
Web contact

TV9 Kannada

Read More
ಅಯ್ಯೋ 19 ವರ್ಷಗಳಿಂದ ಮಗುವಂತೆ ಸಾಕಿದ್ದ ಬೆಕ್ಕು ಹೋಗಿ ಬಿಡ್ತಾ
ಅಯ್ಯೋ 19 ವರ್ಷಗಳಿಂದ ಮಗುವಂತೆ ಸಾಕಿದ್ದ ಬೆಕ್ಕು ಹೋಗಿ ಬಿಡ್ತಾ
ತರಗತಿಯೊಳಗೆ ಮಗುವನ್ನು ಎತ್ತಿಕೊಂಡು ಬಂದು ಕುಳಿತ ವಿದ್ಯಾರ್ಥಿನಿ
ತರಗತಿಯೊಳಗೆ ಮಗುವನ್ನು ಎತ್ತಿಕೊಂಡು ಬಂದು ಕುಳಿತ ವಿದ್ಯಾರ್ಥಿನಿ
ಎಷ್ಟೇ ಕಷ್ಟಪಟ್ಟರೂ ಮನೆ ಕಟ್ಟೋಕೆ ಸಾಧ್ಯವಾಗ್ತಿಲ್ವಾ?
ಎಷ್ಟೇ ಕಷ್ಟಪಟ್ಟರೂ ಮನೆ ಕಟ್ಟೋಕೆ ಸಾಧ್ಯವಾಗ್ತಿಲ್ವಾ?
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್