AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಣಿಪುರ: ವಾಯು ಪ್ರದೇಶದಲ್ಲಿ ಅಪರಿಚಿತ ಡ್ರೋನ್​ಗಳ ಹಾರಾಟ ಇಂಫಾಲ್ ವಿಮಾನ ನಿಲ್ದಾಣ ಬಂದ್

ಮಣಿಪುರದ ರಾಜಧಾನಿ ಇಂಫಾಲ್‌(Imphal)ನಲ್ಲಿರುವ ಬಿರ್ ಟಿಕೇಂದ್ರಜಿತ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ವಾಯು ಪ್ರದೇಶದಲ್ಲಿ ಅಪರಿಚಿತ ಡ್ರೋನ್​ಗಳ ಹಾರಾಟ ಕಂಡುಬಂದಿರುವ ಹಿನ್ನೆಲೆಯಲ್ಲಿ ವಿಮಾನ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಲಾಗಿದೆ. ಭಾನುವಾರ ಮಧ್ಯಾಹ್ನ 2.30ರ ಸುಮಾರಿಗೆ ವಾಯು ಪ್ರದೇಶದಲ್ಲಿ ಡ್ರೋನ್​ಗಳ ಹಾರಾಟ ಕಂಡುಬಂದಿತ್ತು.

ಮಣಿಪುರ: ವಾಯು ಪ್ರದೇಶದಲ್ಲಿ ಅಪರಿಚಿತ ಡ್ರೋನ್​ಗಳ ಹಾರಾಟ ಇಂಫಾಲ್ ವಿಮಾನ ನಿಲ್ದಾಣ ಬಂದ್
ಡ್ರೋನ್- ಸಾಂದರ್ಭಿಕ ಚಿತ್ರImage Credit source: ABP Live
ನಯನಾ ರಾಜೀವ್
|

Updated on: Nov 20, 2023 | 10:44 AM

Share

ಮಣಿಪುರದ ರಾಜಧಾನಿ ಇಂಫಾಲ್‌(Imphal)ನಲ್ಲಿರುವ ಬೀರ್ ಟಿಕೇಂದ್ರಜಿತ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ವಾಯು ಪ್ರದೇಶದಲ್ಲಿ ಅಪರಿಚಿತ ಡ್ರೋನ್​ಗಳ ಹಾರಾಟ ಕಂಡುಬಂದಿರುವ ಹಿನ್ನೆಲೆಯಲ್ಲಿ ವಿಮಾನ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಲಾಗಿದೆ. ಭಾನುವಾರ ಮಧ್ಯಾಹ್ನ 2.30ರ ಸುಮಾರಿಗೆ ವಾಯು ಪ್ರದೇಶದಲ್ಲಿ ಡ್ರೋನ್​ಗಳ ಹಾರಾಟ ಕಂಡುಬಂದಿತ್ತು.

ಇಂಫಾಲ್‌ಗೆ ಮತ್ತು ಅಲ್ಲಿಂದ ಹೊರಡುವ ಕೆಲವು ವಿಮಾನಗಳನ್ನು ರದ್ದುಗೊಳಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಏತನ್ಮಧ್ಯೆ, ಇತರ ಒಳಬರುವ ವಿಮಾನಗಳು ಇಂಫಾಲ್ ಏರ್‌ಫೀಲ್ಡ್‌ನಿಂದ ಹಿಂತಿರುಗಿದವು ಮತ್ತು ಇತರ ಸ್ಥಳಗಳಿಗೆ ತಿರುಗಿಸಲಾಯಿತು.

ಹಿಂಸಾಚಾರ ಪೀಡಿತ ರಾಜ್ಯವಾದ ಮಣಿಪುರದಲ್ಲಿ ಕಾನೂನು ಸುವ್ಯವಸ್ಥೆ ಉತ್ತಮವಾಗಿಲ್ಲ. ಈ ಹಿನ್ನೆಲೆಯಲ್ಲಿ ಮಣಿಪುರ ಸರ್ಕಾರವು ಇಂಟರ್ನೆಟ್ ಸೇವೆಗಳ ಮೇಲಿನ ನಿಷೇಧವನ್ನು ನವೆಂಬರ್ 23 ರವರೆಗೆ 5 ದಿನಗಳವರೆಗೆ ವಿಸ್ತರಿಸಿದೆ. ಇದಾದ ಬೆನ್ನಲ್ಲೇ ಈ ಘಟನೆ ಬೆಳಕಿಗೆ ಬಂದಿದೆ.

ಮತ್ತಷ್ಟು ಓದಿ: Manipur Violence: ಮಣಿಪುರ ಹಿಂಸಾಚಾರ ವಿಚಾರ: ಕೇಂದ್ರ ಸರ್ಕಾರದ ವಿರುದ್ಧ ಪ್ರತಿಪಕ್ಷಗಳಿಂದ ಅವಿಶ್ವಾಸ ನಿರ್ಣಯ ಮಂಡನೆ

ತಮಗೆ ಪರಿಶಿಷ್ಟ ಪಂಗಡ (ಎಸ್‌ಟಿ) ಸ್ಥಾನಮಾನ ನೀಡಬೇಕೆಂಬ ಮೈಥಿ ಸಮುದಾಯದ ಬೇಡಿಕೆಯನ್ನು ವಿರೋಧಿಸಿ ಮಣಿಪುರದ ಗುಡ್ಡಗಾಡು ಜಿಲ್ಲೆಗಳಲ್ಲಿ ಕುಕಿ ಬುಡಕಟ್ಟು ಐಕ್ಯತಾ ಮೆರವಣಿಗೆ ಬಳಿಕ ರಾಜ್ಯದಲ್ಲಿ ಹಿಂಸಾಚಾರ ನಡೆಯುತ್ತಲೇ ಇದೆ. ಮೇ 3 ರಿಂದ ಆರಂಭವಾದ ಸಂಘರ್ಷದಲ್ಲಿ ಇಲ್ಲಿಯವರೆಗೆ 200 ಮಂದಿ ಸಾವನ್ನಪ್ಪಿದ್ದಾರೆ.

ಏತನ್ಮಧ್ಯೆ, ಮಣಿಪುರದಲ್ಲಿ ಗಸ್ತು ತಿರುಗುತ್ತಿದ್ದ ಅಸ್ಸಾಂ ರೈಫಲ್ಸ್ ಯೋಧರ ಮೇಲೆ ಕಳೆದ ಗುರುವಾರ (ನವೆಂಬರ್ 16) ಹೊಂಚು ಹಾಕಿ ದಾಳಿ ನಡೆಸಿದ್ದರು. ಈ ಹಿಂದೆ ಉಗ್ರರು ಸುಧಾರಿತ ಸ್ಫೋಟಕ ಸಾಧನ (ಐಇಡಿ) ಅಳವಡಿಸಿ ಸ್ಫೋಟ ನಡೆಸಿದ್ದರು. ಆಗ ಅಸ್ಸಾಂ ರೈಫಲ್ಸ್‌ನ ತುಕಡಿಯ ಮೇಲೂ ದಾಳಿಗಳು ನಡೆದಿವೆ.

ರಾಜ್ಯದ ತೆಂಗನೋಪಾಲ್ ಜಿಲ್ಲೆಯ ಸೈಬೋಲ್ ಪ್ರದೇಶದಲ್ಲಿ ಉಗ್ರರು ಈ ದಾಳಿ ನಡೆಸಿದ್ದಾರೆ. ಭಾರತೀಯ ಸೇನೆಯ ಅಸ್ಸಾಂ ರೈಫಲ್ಸ್ ಯೋಧರು ನಿಯಮಿತವಾಗಿ ಗಸ್ತು ತಿರುಗುತ್ತಿದ್ದಾಗ ದಾಳಿ ನಡೆಸಿದ್ದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಹೊಸ ವರ್ಷಕ್ಕೆ ಬೆಂಗಳೂರು ಸಜ್ಜು; ನಗರಾದ್ಯಂತ ಪೊಲೀಸ್ ಕಣ್ಗಾವಲು
ಹೊಸ ವರ್ಷಕ್ಕೆ ಬೆಂಗಳೂರು ಸಜ್ಜು; ನಗರಾದ್ಯಂತ ಪೊಲೀಸ್ ಕಣ್ಗಾವಲು
ಮಹಾರಾಷ್ಟ್ರ ಪೊಲೀಸರ ಹೇಳಿಕೆ ಸತ್ಯಕ್ಕೆ ದೂರವಾಗಿದೆ; ಜಿ ಪರಮೇಶ್ವರ್
ಮಹಾರಾಷ್ಟ್ರ ಪೊಲೀಸರ ಹೇಳಿಕೆ ಸತ್ಯಕ್ಕೆ ದೂರವಾಗಿದೆ; ಜಿ ಪರಮೇಶ್ವರ್
ಮತ್ತೊಂದು ಬಿಗ್ ಎಲಿಮಿನೇಷನ್: ಸ್ಪಂದನಾ-ಮಾಳು ನಡುವೆ ಯಾರು ಹೊರಗೆ?
ಮತ್ತೊಂದು ಬಿಗ್ ಎಲಿಮಿನೇಷನ್: ಸ್ಪಂದನಾ-ಮಾಳು ನಡುವೆ ಯಾರು ಹೊರಗೆ?
ಹಾಲು ಕುಡಿಯಬೇಕಿದ್ದ 5 ವರ್ಷದ ಮೊಮ್ಮಗನಿಗೆ ಮದ್ಯ ಕುಡಿಸಿದ ಅಜ್ಜ!
ಹಾಲು ಕುಡಿಯಬೇಕಿದ್ದ 5 ವರ್ಷದ ಮೊಮ್ಮಗನಿಗೆ ಮದ್ಯ ಕುಡಿಸಿದ ಅಜ್ಜ!
ಟಿ20 ಕ್ರಿಕೆಟ್​ನಲ್ಲಿ ಅತೀ ವೇಗದ ಅರ್ಧಶತಕ ಸಿಡಿಸಿದ ಲಾರಾ ಹ್ಯಾರಿಸ್
ಟಿ20 ಕ್ರಿಕೆಟ್​ನಲ್ಲಿ ಅತೀ ವೇಗದ ಅರ್ಧಶತಕ ಸಿಡಿಸಿದ ಲಾರಾ ಹ್ಯಾರಿಸ್
ಅಲ್ಲಾ ತೆಗೆದುಕೊಳ್ಳುವ ನಿರ್ಧಾರವೇ ಅಂತಿಮ: ಮುಫ್ತಿ
ಅಲ್ಲಾ ತೆಗೆದುಕೊಳ್ಳುವ ನಿರ್ಧಾರವೇ ಅಂತಿಮ: ಮುಫ್ತಿ
ಅಯ್ಯಪ್ಪಸ್ವಾಮಿ ಮಾಲಾಧಾರಿಗಳಿಗೆ ಮುಸ್ಲಿಂ ಮನೆಯಲ್ಲಿ ಪ್ರಸಾದ ವ್ಯವಸ್ಥೆ
ಅಯ್ಯಪ್ಪಸ್ವಾಮಿ ಮಾಲಾಧಾರಿಗಳಿಗೆ ಮುಸ್ಲಿಂ ಮನೆಯಲ್ಲಿ ಪ್ರಸಾದ ವ್ಯವಸ್ಥೆ
ಬೆಳಗಾವಿ ಉತ್ಸವದಲ್ಲಿ ಡಾಲಿ ಮಾಸ್ ಡೈಲಾಗ್; ಅಭಿಮಾನಿಗಳ ಖುಷಿ ನೋಡಿ..
ಬೆಳಗಾವಿ ಉತ್ಸವದಲ್ಲಿ ಡಾಲಿ ಮಾಸ್ ಡೈಲಾಗ್; ಅಭಿಮಾನಿಗಳ ಖುಷಿ ನೋಡಿ..
2026ರಲ್ಲಿ ಮೀನ ರಾಶಿಗೆ ಸಾಡೇಸಾತಿ ಇದ್ದರೂ, ಆರ್ಥಿಕ ಚೇತರಿಕೆ, ಆಸ್ತಿ ಯೋಗ
2026ರಲ್ಲಿ ಮೀನ ರಾಶಿಗೆ ಸಾಡೇಸಾತಿ ಇದ್ದರೂ, ಆರ್ಥಿಕ ಚೇತರಿಕೆ, ಆಸ್ತಿ ಯೋಗ
ಬಾಳೆಹಣ್ಣಿಗಾಗಿ ನಡುರಸ್ತೆಯಲ್ಲಿಯೇ ಲಾರಿ ತಡೆದ 'ಬನಾನಾ ಬೇಬಿ'!
ಬಾಳೆಹಣ್ಣಿಗಾಗಿ ನಡುರಸ್ತೆಯಲ್ಲಿಯೇ ಲಾರಿ ತಡೆದ 'ಬನಾನಾ ಬೇಬಿ'!