ಮಣಿಪುರ: ವಾಯು ಪ್ರದೇಶದಲ್ಲಿ ಅಪರಿಚಿತ ಡ್ರೋನ್​ಗಳ ಹಾರಾಟ ಇಂಫಾಲ್ ವಿಮಾನ ನಿಲ್ದಾಣ ಬಂದ್

ಮಣಿಪುರದ ರಾಜಧಾನಿ ಇಂಫಾಲ್‌(Imphal)ನಲ್ಲಿರುವ ಬಿರ್ ಟಿಕೇಂದ್ರಜಿತ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ವಾಯು ಪ್ರದೇಶದಲ್ಲಿ ಅಪರಿಚಿತ ಡ್ರೋನ್​ಗಳ ಹಾರಾಟ ಕಂಡುಬಂದಿರುವ ಹಿನ್ನೆಲೆಯಲ್ಲಿ ವಿಮಾನ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಲಾಗಿದೆ. ಭಾನುವಾರ ಮಧ್ಯಾಹ್ನ 2.30ರ ಸುಮಾರಿಗೆ ವಾಯು ಪ್ರದೇಶದಲ್ಲಿ ಡ್ರೋನ್​ಗಳ ಹಾರಾಟ ಕಂಡುಬಂದಿತ್ತು.

ಮಣಿಪುರ: ವಾಯು ಪ್ರದೇಶದಲ್ಲಿ ಅಪರಿಚಿತ ಡ್ರೋನ್​ಗಳ ಹಾರಾಟ ಇಂಫಾಲ್ ವಿಮಾನ ನಿಲ್ದಾಣ ಬಂದ್
ಡ್ರೋನ್- ಸಾಂದರ್ಭಿಕ ಚಿತ್ರImage Credit source: ABP Live
Follow us
|

Updated on: Nov 20, 2023 | 10:44 AM

ಮಣಿಪುರದ ರಾಜಧಾನಿ ಇಂಫಾಲ್‌(Imphal)ನಲ್ಲಿರುವ ಬೀರ್ ಟಿಕೇಂದ್ರಜಿತ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ವಾಯು ಪ್ರದೇಶದಲ್ಲಿ ಅಪರಿಚಿತ ಡ್ರೋನ್​ಗಳ ಹಾರಾಟ ಕಂಡುಬಂದಿರುವ ಹಿನ್ನೆಲೆಯಲ್ಲಿ ವಿಮಾನ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಲಾಗಿದೆ. ಭಾನುವಾರ ಮಧ್ಯಾಹ್ನ 2.30ರ ಸುಮಾರಿಗೆ ವಾಯು ಪ್ರದೇಶದಲ್ಲಿ ಡ್ರೋನ್​ಗಳ ಹಾರಾಟ ಕಂಡುಬಂದಿತ್ತು.

ಇಂಫಾಲ್‌ಗೆ ಮತ್ತು ಅಲ್ಲಿಂದ ಹೊರಡುವ ಕೆಲವು ವಿಮಾನಗಳನ್ನು ರದ್ದುಗೊಳಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಏತನ್ಮಧ್ಯೆ, ಇತರ ಒಳಬರುವ ವಿಮಾನಗಳು ಇಂಫಾಲ್ ಏರ್‌ಫೀಲ್ಡ್‌ನಿಂದ ಹಿಂತಿರುಗಿದವು ಮತ್ತು ಇತರ ಸ್ಥಳಗಳಿಗೆ ತಿರುಗಿಸಲಾಯಿತು.

ಹಿಂಸಾಚಾರ ಪೀಡಿತ ರಾಜ್ಯವಾದ ಮಣಿಪುರದಲ್ಲಿ ಕಾನೂನು ಸುವ್ಯವಸ್ಥೆ ಉತ್ತಮವಾಗಿಲ್ಲ. ಈ ಹಿನ್ನೆಲೆಯಲ್ಲಿ ಮಣಿಪುರ ಸರ್ಕಾರವು ಇಂಟರ್ನೆಟ್ ಸೇವೆಗಳ ಮೇಲಿನ ನಿಷೇಧವನ್ನು ನವೆಂಬರ್ 23 ರವರೆಗೆ 5 ದಿನಗಳವರೆಗೆ ವಿಸ್ತರಿಸಿದೆ. ಇದಾದ ಬೆನ್ನಲ್ಲೇ ಈ ಘಟನೆ ಬೆಳಕಿಗೆ ಬಂದಿದೆ.

ಮತ್ತಷ್ಟು ಓದಿ: Manipur Violence: ಮಣಿಪುರ ಹಿಂಸಾಚಾರ ವಿಚಾರ: ಕೇಂದ್ರ ಸರ್ಕಾರದ ವಿರುದ್ಧ ಪ್ರತಿಪಕ್ಷಗಳಿಂದ ಅವಿಶ್ವಾಸ ನಿರ್ಣಯ ಮಂಡನೆ

ತಮಗೆ ಪರಿಶಿಷ್ಟ ಪಂಗಡ (ಎಸ್‌ಟಿ) ಸ್ಥಾನಮಾನ ನೀಡಬೇಕೆಂಬ ಮೈಥಿ ಸಮುದಾಯದ ಬೇಡಿಕೆಯನ್ನು ವಿರೋಧಿಸಿ ಮಣಿಪುರದ ಗುಡ್ಡಗಾಡು ಜಿಲ್ಲೆಗಳಲ್ಲಿ ಕುಕಿ ಬುಡಕಟ್ಟು ಐಕ್ಯತಾ ಮೆರವಣಿಗೆ ಬಳಿಕ ರಾಜ್ಯದಲ್ಲಿ ಹಿಂಸಾಚಾರ ನಡೆಯುತ್ತಲೇ ಇದೆ. ಮೇ 3 ರಿಂದ ಆರಂಭವಾದ ಸಂಘರ್ಷದಲ್ಲಿ ಇಲ್ಲಿಯವರೆಗೆ 200 ಮಂದಿ ಸಾವನ್ನಪ್ಪಿದ್ದಾರೆ.

ಏತನ್ಮಧ್ಯೆ, ಮಣಿಪುರದಲ್ಲಿ ಗಸ್ತು ತಿರುಗುತ್ತಿದ್ದ ಅಸ್ಸಾಂ ರೈಫಲ್ಸ್ ಯೋಧರ ಮೇಲೆ ಕಳೆದ ಗುರುವಾರ (ನವೆಂಬರ್ 16) ಹೊಂಚು ಹಾಕಿ ದಾಳಿ ನಡೆಸಿದ್ದರು. ಈ ಹಿಂದೆ ಉಗ್ರರು ಸುಧಾರಿತ ಸ್ಫೋಟಕ ಸಾಧನ (ಐಇಡಿ) ಅಳವಡಿಸಿ ಸ್ಫೋಟ ನಡೆಸಿದ್ದರು. ಆಗ ಅಸ್ಸಾಂ ರೈಫಲ್ಸ್‌ನ ತುಕಡಿಯ ಮೇಲೂ ದಾಳಿಗಳು ನಡೆದಿವೆ.

ರಾಜ್ಯದ ತೆಂಗನೋಪಾಲ್ ಜಿಲ್ಲೆಯ ಸೈಬೋಲ್ ಪ್ರದೇಶದಲ್ಲಿ ಉಗ್ರರು ಈ ದಾಳಿ ನಡೆಸಿದ್ದಾರೆ. ಭಾರತೀಯ ಸೇನೆಯ ಅಸ್ಸಾಂ ರೈಫಲ್ಸ್ ಯೋಧರು ನಿಯಮಿತವಾಗಿ ಗಸ್ತು ತಿರುಗುತ್ತಿದ್ದಾಗ ದಾಳಿ ನಡೆಸಿದ್ದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ತಾಜಾ ಸುದ್ದಿ
ಬರ ಮತ್ತು ಉತ್ತರ ಕರ್ನಾಟಕ ಚರ್ಚೆಗೆ ಅಧಿವೇಶನ ವಾರ ವಿಸ್ತರಿಸಲಿ: ಯತ್ನಾಳ್
ಬರ ಮತ್ತು ಉತ್ತರ ಕರ್ನಾಟಕ ಚರ್ಚೆಗೆ ಅಧಿವೇಶನ ವಾರ ವಿಸ್ತರಿಸಲಿ: ಯತ್ನಾಳ್
ಸ್ಪೀಕರ್ ಗೆ ಎಲ್ಲ ನಮಸ್ಕಾರ್ ಸಾರ್ ಅನ್ನಬೇಕು ಅಂದರೆ ತಪ್ಪೇನು?ಜಮೀರ್ ಅಹ್ಮದ್
ಸ್ಪೀಕರ್ ಗೆ ಎಲ್ಲ ನಮಸ್ಕಾರ್ ಸಾರ್ ಅನ್ನಬೇಕು ಅಂದರೆ ತಪ್ಪೇನು?ಜಮೀರ್ ಅಹ್ಮದ್
ಸ್ಪೀಕರ್ ಖಾದರ್ ಹೇಳುವ ಮಾತು ಸದನದಲ್ಲಿರುವವರೆಲ್ಲರ ಮನಸ್ಸಿಗೆ ನಾಟುತ್ತದೆ
ಸ್ಪೀಕರ್ ಖಾದರ್ ಹೇಳುವ ಮಾತು ಸದನದಲ್ಲಿರುವವರೆಲ್ಲರ ಮನಸ್ಸಿಗೆ ನಾಟುತ್ತದೆ
ಹುಟ್ಟೂರು ಹರದನಹಳ್ಳಿಯಲ್ಲಿ ಮನೆ ದೇವರಿಗೆ ಹೆಚ್​ಡಿಡಿ ದಂಪತಿ ಪೂಜೆ
ಹುಟ್ಟೂರು ಹರದನಹಳ್ಳಿಯಲ್ಲಿ ಮನೆ ದೇವರಿಗೆ ಹೆಚ್​ಡಿಡಿ ದಂಪತಿ ಪೂಜೆ
ಬಿಗ್ ಬಾಸ್​ನಲ್ಲಿ ಆಪ್ತರನ್ನೇ ನಾಮಿನೇಟ್ ಮಾಡಿದ ಕಂಟೆಸ್ಟಂಟ್​ಗಳು
ಬಿಗ್ ಬಾಸ್​ನಲ್ಲಿ ಆಪ್ತರನ್ನೇ ನಾಮಿನೇಟ್ ಮಾಡಿದ ಕಂಟೆಸ್ಟಂಟ್​ಗಳು
ಬೆಂಗಳೂರಿನ ಜಯನಗರದಲ್ಲಿ ಹಾಡಹಗಲೇ ಸ್ಕೂಟರ್‌ ಕಳ್ಳತನ
ಬೆಂಗಳೂರಿನ ಜಯನಗರದಲ್ಲಿ ಹಾಡಹಗಲೇ ಸ್ಕೂಟರ್‌ ಕಳ್ಳತನ
ಶಿವಮೊಗ್ಗ ಫ್ರೀಡಂ ಪಾರ್ಕ್​ನಲ್ಲಿ ಸ್ವದೇಶಿ ಮೇಳದ ಕಲರವ
ಶಿವಮೊಗ್ಗ ಫ್ರೀಡಂ ಪಾರ್ಕ್​ನಲ್ಲಿ ಸ್ವದೇಶಿ ಮೇಳದ ಕಲರವ
ಜಮೀರ್ ಅಹ್ಮದ್ ವಜಾ ಮಾಡುವಂತೆ  ಸದನದಲ್ಲಿ ಬಿಜೆಪಿ ಶಾಸಕರಿಂದ ಪ್ರತಿಭಟನೆ
ಜಮೀರ್ ಅಹ್ಮದ್ ವಜಾ ಮಾಡುವಂತೆ  ಸದನದಲ್ಲಿ ಬಿಜೆಪಿ ಶಾಸಕರಿಂದ ಪ್ರತಿಭಟನೆ
ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ ನಡೆಸಿದವರ ವಿರುದ್ಧ ಕಠಿಣ ಕ್ರಮ: ಸಿಎಂ
ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ ನಡೆಸಿದವರ ವಿರುದ್ಧ ಕಠಿಣ ಕ್ರಮ: ಸಿಎಂ
ಮಹಿಳೆ ಬೆತ್ತಲೆಗೊಳಿಸಿದ ಪ್ರಕರಣ; 7 ಜನರನ್ನು ಬಂಧಿಸಲಾಗಿದೆ: ಪೊಲೀಸ್ ಆಯುಕ್ತ
ಮಹಿಳೆ ಬೆತ್ತಲೆಗೊಳಿಸಿದ ಪ್ರಕರಣ; 7 ಜನರನ್ನು ಬಂಧಿಸಲಾಗಿದೆ: ಪೊಲೀಸ್ ಆಯುಕ್ತ