AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

1977ರಲ್ಲಿ ಮೊದಲ ಬಾರಿಗೆ ಲೋಕಸಭಾ ಚುನಾವಣೆಯಲ್ಲಿ ಸೋತಾಗ ಖಿನ್ನತೆಗೆ ಜಾರಿದ್ದ ಇಂದಿರಾ ಗಾಂಧಿ

ಲೋಕಸಭಾ ಚುನಾವಣೆಯಲ್ಲಿ ಸದಾ ಯಶಸ್ಸು ಕಾಣುತ್ತಾ ಬಂದಿದ್ದ ಕಾಂಗ್ರೆಸ್​, 1977ರಲ್ಲಿ ತುರ್ತು ಪರಿಸ್ಥಿತಿ ಬಳಿಕ ಹೀನಾಯ ಸೋಲು ಅನುಭವಿಸಿತ್ತು. ಆ ಬಳಿಕ ಇಂದಿರಾ ಗಾಂಧಿ ನಾಲ್ಕು ದಿನಗಳ ಕಾಲ ರೂಮಿನಿಂದ ಹೊರಬಂದಿರಲಿಲ್ಲ, ಖಿನ್ನತೆಗೆ ಜಾರಿದ್ದರು. ಇದೀಗ 2024ರ ಲೋಕಸಭಾ ಚುನಾವಣೆಯ ದಿನಾಂಕ ಘೋಷಣೆಯಾಗಿದ್ದು, ಏಪ್ರಿಲ್​ 19ರಿಂದ ಚುನಾವಣೆಯು ಜೂನ್ 1ರವರೆಗೆ ಒಟ್ಟು 7 ಹಂತಗಳಲ್ಲಿ ನಡೆಯಲಿದೆ. ಈ ಸಮಯದಲ್ಲಿ ಪ್ರಮುಖವಾಗಿ ಕಾಂಗ್ರೆಸ್​ ಹಾಗೂ ಬಿಜೆಪಿ ನಡುವೆಯೇ ಪೈಪೋಟಿ ಇದೆ.

1977ರಲ್ಲಿ ಮೊದಲ ಬಾರಿಗೆ ಲೋಕಸಭಾ ಚುನಾವಣೆಯಲ್ಲಿ ಸೋತಾಗ ಖಿನ್ನತೆಗೆ ಜಾರಿದ್ದ ಇಂದಿರಾ ಗಾಂಧಿ
ಇಂದಿರಾ ಗಾಂಧಿ Image Credit source: Mint
Follow us
ನಯನಾ ರಾಜೀವ್
|

Updated on:Mar 20, 2024 | 10:32 AM

1952ರಿಂದಲೂ ಲೋಕಸಭಾ ಚುನಾವಣೆ(Lok Sabha Election)ಯಲ್ಲಿ ಸದಾ ಯಶಸ್ಸು ಕಾಣುತ್ತಾ ಬಂದಿದ್ದ ಕಾಂಗ್ರೆಸ್​, 1977ರಲ್ಲಿ ತುರ್ತು ಪರಿಸ್ಥಿತಿ ಬಳಿಕ ಹೀನಾಯ ಸೋಲು ಅನುಭವಿಸಿತ್ತು. ಆ ಬಳಿಕ ಇಂದಿರಾ ಗಾಂಧಿ ನಾಲ್ಕು ದಿನಗಳ ಕಾಲ ರೂಮಿನಿಂದ ಹೊರಬಂದಿರಲಿಲ್ಲ, ಖಿನ್ನತೆಗೆ ಜಾರಿದ್ದರು. ಇದೀಗ 2024ರ ಲೋಕಸಭಾ ಚುನಾವಣೆಯ ದಿನಾಂಕ ಘೋಷಣೆಯಾಗಿದ್ದು, ಏಪ್ರಿಲ್​ 19ರಿಂದ ಚುನಾವಣೆಯು ಜೂನ್ 1ರವರೆಗೆ ಒಟ್ಟು 7 ಹಂತಗಳಲ್ಲಿ ನಡೆಯಲಿದೆ. ಈ ಸಮಯದಲ್ಲಿ ಪ್ರಮುಖವಾಗಿ ಕಾಂಗ್ರೆಸ್​ ಹಾಗೂ ಬಿಜೆಪಿ ನಡುವೆಯೇ ಪೈಪೋಟಿ ಇದೆ.

ಈ ಸಂದರ್ಭದಲ್ಲಿ 1977ರಲ್ಲಿ ಕಾಂಗ್ರೆಸ್​ ಪಕ್ಷವು ಲೋಕಸಭಾ ಚುನಾವಣೆಯಲ್ಲಿ ಮೊದಲ ಬಾರಿಗೆ ಕಂಡ ಸೋಲಿನ ಬಗ್ಗೆ ಮಾತನಾಡೋಣ. ಇಂದಿರಾಳನ್ನು ತೊಲಗಿಸಿ, ದೇಶ ಉಳಿಸಿ ಎಂಬ ಜನತಾದಳದ ಘೋಷಣೆ ಯಶಸ್ವಿಯಾಗಿತ್ತು, ಭಾರತೀಯ ಲೋಕದಳ, ಅಥವಾ ಜನತಾ ದಳವು ಜಯಭೇರಿ ಬಾರಿಸಿತ್ತು.

ಇಂದಿರಾಗೆ ರಾಯ್​ಬರೇಲಿ ಸ್ಥಾನವೂ ಕೈತಪ್ಪಿತ್ತು ಇಂದಿರಾಗಾಂಧಿ ಅವರು ತಮ್ಮ ರಾಯ್ ಬರೇಲಿ ಸ್ಥಾನವನ್ನು ಉಳಿಸಿಕೊಳ್ಳಲು ಸಾಧ್ಯವಾಗದಷ್ಟು ಹೀನಾಯವಾಗಿ ಸೋತಿದ್ದರು. 55 ಸಾವಿರ ಮತಗಳಿಂದ ಸೋಲು ಅನುಭವಿಸಿದ್ದರು. 47 ವರ್ಷಗಳ ಹಿಂದೆ ಮಾರ್ಚ್ 20, 1977 ರಂದು ಚುನಾವಣಾ ಫಲಿತಾಂಶ ಬಂದಾಗ ಇಂದಿರಾಗಾಂಧಿ ಎದೆಗುಂದಿದ್ದರು.

ಚುನಾವಣೆ ಸೋಲಿನ ಬಳಿಕ ವಿನೋಬಾ ಭಾವೆ ಆಶ್ರಮದಲ್ಲಿ ಇಂದಿರಾ

ಸಫ್ದರ್‌ಜಂಗ್ ರಸ್ತೆಯಲ್ಲಿ ಮೌನ ಆವರಿಸಿತ್ತು. ಅವರು ಕೋಣೆಯಲ್ಲಿ ತನ್ನನ್ನು ಬಂಧಿಯಾಗಿಸಿಕೊಂಡಿದ್ದರು. 4 ದಿನಗಳ ಕಾಲ ಕೋಣೆಯಲ್ಲೇ ಬಂಧಿಯಾಗಿದ್ದರು. ಅವರು ಖಿನ್ನತೆಗೆ ಒಳಗಾಗಿದ್ದಳು. ಯಾರನ್ನೂ ಭೇಟಿಯಾಗಿರಲಿಲ್ಲ, ಯಾರೊಂದಿಗೂ ಮಾತನಾಡಿರಲಿಲ್ಲ, ಯಾರನ್ನೂ ಸಮಾಧಾನಪಡಿಸಲಿಲ್ಲ.

ಇಬ್ಬರು ಸೊಸೆಯರಾದ ಸೋನಿಯಾ ಗಾಂಧಿ ಮತ್ತು ಮೇನಕಾ ಗಾಂಧಿ, ಮೊಮ್ಮಕ್ಕಳಾದ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಅವರನ್ನು ಸ್ನೇಹಿತ ಸುಮನ್ ದುಬೆ ಅವರ ಮನೆಗೆ ಕಳುಹಿಸಲಾಗಿತ್ತು. ಅವರು ಸಂಜಯ್ ಗಾಂಧಿ ಬಗ್ಗೆ ಚಿಂತಿತರಾಗಿದ್ದರು. 1980 ರಲ್ಲಿ ಮತ್ತೆ ಕಾಂಗ್ರೆಸ್​ ಅಧಿಕಾರದ ಚುಕ್ಕಾಣಿ ಹಿಡಿದಿತ್ತು.

ಮತ್ತಷ್ಟು ಓದಿ: ಇತರ ಧರ್ಮಗಳ ಬಗ್ಗೆ ಅವಹೇಳನಕಾರಿ ಪದ ಬಳಸಲು ರಾಹುಲ್ ಗಾಂಧಿಗೆ ಧೈರ್ಯವಿದೆಯೇ?: ಬಿಜೆಪಿ

ನೀರ್ಜಾ ಚೌಧರಿ ಅವರು ತಮ್ಮ ‘‘ಹೌ ಪ್ರೈಮ್ ಮಿನಿಸ್ಟರ್ಸ್ ಡಿಸೈಡ್’’ ಪುಸ್ತಕದಲ್ಲಿ ಈ ವಿಷಯವನ್ನು ಉಲ್ಲೇಖಿಸಿದ್ದಾರೆ. ಮಾರ್ಚ್ 22 ರಂದು ಇಂದಿರಾ ಗಾಂಧಿ ಅವರು ಪ್ರಧಾನಿ ಹುದ್ದೆಗೆ ರಾಜೀನಾಮೆ ನೀಡಿದ್ದರು ಎಂದು ನೀರ್ಜಾ ಬರೆದಿದ್ದಾರೆ. ಅವರು ತಮ್ಮ ರಾಜೀನಾಮೆಯನ್ನು ಹಂಗಾಮಿ ಅಧ್ಯಕ್ಷ ಬಿ.ಡಿ.ಜತ್ತಿ ಅವರಿಗೆ ಸಲ್ಲಿಸಿದ್ದರು. ಆಪರೇಷನ್ ಬ್ಲೂ ಸ್ಟಾರ್ ಮತ್ತು 1975 ರಲ್ಲಿ ಹೇರಲಾದ ತುರ್ತು ಪರಿಸ್ಥಿತಿ ಇಂದಿರಾ ಗಾಂಧಿಯವರ ವೃತ್ತಿಜೀವನವನ್ನು ಕೊನೆಗೊಳಿಸಿತು.

ಮೊದಲ ಲೋಕಸಭಾ ಚುನಾವಣೆ 1952ರಲ್ಲಿ ನಡೆಯಿತು, ಎರಡನೇ ಚುನಾವಣೆ 1957, ಮೂರನೇ ಚುನಾವಣೆ 1962, ನಾಲ್ಕನೇ ಚುನಾವಣೆ 1967, ಐದನೇ ಚುನಾವಣೆ 1971, ಆರನೇ ಚುನಾವಣೆ 1977, ಏಳನೇ ಚುನಾವಣೆ 1980, ಎಂಟನೇ ಚುನಾವಣೆ 1984, ಒಂಭತ್ತನೇ ಚುನಾವಣೆ 1989, 10ನೇ ಲೋಕಸಭಾ ಚುನಾವಣೆ 1991, 11ನೇ ಲೋಕಸಭಾ ಚುನಾವಣೆ 1996, 12ನೇ ಲೋಕಸಭಾ ಚುನಾವಣೆ 1998, 13ನೇ ಲೋಕಸಭಾ ಚುನಾವಣೆ 1999, 14ನೇ ಲೋಕಸಭಾ ಚುನಾವಣೆ 2004, 15ನೇ ಚುನಾವಣೆ 2009, 16ನೇ ಚುನಾವಣೆ 2014, 17ನೇ ಚುನಾವಣೆ 2019ರಲ್ಲಿ ನಡೆಯಿತು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 10:31 am, Wed, 20 March 24

ಜೋಶಿಯ ಚಿಕ್ಕಮಕ್ಖಳನ್ನು ನೆನೆದು ಕರುಳು ಕಿತ್ತುಬಂದಂತಾಗುತ್ತಿದೆ: ಸಹಪಾಠಿಗಳು
ಜೋಶಿಯ ಚಿಕ್ಕಮಕ್ಖಳನ್ನು ನೆನೆದು ಕರುಳು ಕಿತ್ತುಬಂದಂತಾಗುತ್ತಿದೆ: ಸಹಪಾಠಿಗಳು
ಶಾಸಕ ವಿನಯ್ ಕುಲಕರ್ಣಿ ಮತ್ತೆ ಜೈಲಿಗೆ: ಸ್ಫೋಟಕ ಅಂಶ ಬಿಚ್ಚಿಟ್ಟ ಲಾಯರ್
ಶಾಸಕ ವಿನಯ್ ಕುಲಕರ್ಣಿ ಮತ್ತೆ ಜೈಲಿಗೆ: ಸ್ಫೋಟಕ ಅಂಶ ಬಿಚ್ಚಿಟ್ಟ ಲಾಯರ್
Ahmedabad Plane Crash: ವೈದ್ಯ ಪ್ರತೀಕ್ ನೆನೆದು ಸ್ನೇಹಿತ ಭಾವುಕ
Ahmedabad Plane Crash: ವೈದ್ಯ ಪ್ರತೀಕ್ ನೆನೆದು ಸ್ನೇಹಿತ ಭಾವುಕ
ಭವಿಷ್ಯ ನುಡಿದ ಎರಡು ತಿಂಗಳು ನಂತರ ಭಾರತದಲ್ಲಿ ವಿಮಾನ ದುರ್ಘಟನೆ ಜರುಗಿದೆ
ಭವಿಷ್ಯ ನುಡಿದ ಎರಡು ತಿಂಗಳು ನಂತರ ಭಾರತದಲ್ಲಿ ವಿಮಾನ ದುರ್ಘಟನೆ ಜರುಗಿದೆ
ಪ್ರತಾಪ್​ಗೆ ಗಗನನ ತಬ್ಬಿಕೊಳ್ಳೋ ಆಸೆ; ವೇದಿಕೆ ಮೇಲೆ ಹೇಳಿಕೊಂಡ ಸ್ಪರ್ಧಿ
ಪ್ರತಾಪ್​ಗೆ ಗಗನನ ತಬ್ಬಿಕೊಳ್ಳೋ ಆಸೆ; ವೇದಿಕೆ ಮೇಲೆ ಹೇಳಿಕೊಂಡ ಸ್ಪರ್ಧಿ
ದುರಂತಕ್ಕೆ ಕಾರಣ ಮತ್ತು ಪರಿಹಾರದ ಬಗ್ಗೆ ಪ್ರಧಾನಿ ಮೋದಿ ಚರ್ಚೆ
ದುರಂತಕ್ಕೆ ಕಾರಣ ಮತ್ತು ಪರಿಹಾರದ ಬಗ್ಗೆ ಪ್ರಧಾನಿ ಮೋದಿ ಚರ್ಚೆ
ಎಮರ್ಜೆನ್ಸಿ ಎಕ್ಸಿಟ್​ನಿಂದ ಕೆಳಗೆ ಹಾರಿ ಜೀವ ಉಳಿಸಿಕೊಂಡೆ: ರಮೇಶ್
ಎಮರ್ಜೆನ್ಸಿ ಎಕ್ಸಿಟ್​ನಿಂದ ಕೆಳಗೆ ಹಾರಿ ಜೀವ ಉಳಿಸಿಕೊಂಡೆ: ರಮೇಶ್
ವಿಮಾನ ದುರಂತ ಸಂಭವಿಸಿದ ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಪಡೆದ ಪ್ರಧಾನಿ ಮೋದಿ
ವಿಮಾನ ದುರಂತ ಸಂಭವಿಸಿದ ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಪಡೆದ ಪ್ರಧಾನಿ ಮೋದಿ
ದುರಂತ ನಡೆದ ಸ್ಥಳದಲ್ಲಿ ದಟ್ಟಹೊಗೆ, ಏನೂ ಕಾಣುತ್ತಿರಲಿಲ್ಲ: ಪ್ರತ್ಯಕ್ಷದರ್ಶಿ
ದುರಂತ ನಡೆದ ಸ್ಥಳದಲ್ಲಿ ದಟ್ಟಹೊಗೆ, ಏನೂ ಕಾಣುತ್ತಿರಲಿಲ್ಲ: ಪ್ರತ್ಯಕ್ಷದರ್ಶಿ
ಸಿದ್ದರಾಮಯ್ಯ ಮನೆ ಸಮೀಪವೇ ಕಳ್ಳತನ: ಕಳ್ಳನ ಕೈಚಳಕ ಸಿಸಿಟಿವಿಯಲ್ಲಿ ಸೆರೆ
ಸಿದ್ದರಾಮಯ್ಯ ಮನೆ ಸಮೀಪವೇ ಕಳ್ಳತನ: ಕಳ್ಳನ ಕೈಚಳಕ ಸಿಸಿಟಿವಿಯಲ್ಲಿ ಸೆರೆ