AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತದ ಕೊವಿಡ್ ಲಸಿಕೆಯ ಸರ್ಟಿಫಿಕೆಟ್​ಗೆ 96 ದೇಶಗಳಲ್ಲಿ ಮನ್ನಣೆ; ಇನ್ನು ಭಾರತೀಯರಿಗೆ ವಿದೇಶ ಪ್ರಯಾಣ ಸುಲಭ

ಸದ್ಯಕ್ಕೆ 96 ದೇಶಗಳು ಭಾರತದ ಕೊವಿಡ್ ಲಸಿಕೆ ಪ್ರಮಾಣಪತ್ರಗಳ ಪರಸ್ಪರ ಗುರುತಿಸುವಿಕೆಗೆ ಒಪ್ಪಿಕೊಂಡಿವೆ. ವಿಶ್ವ ಆರೋಗ್ಯ ಸಂಸ್ಥೆ ಅನುಮೋದಿಸಿದ ಕೋವಿಡ್ ಲಸಿಕೆಗಳೊಂದಿಗೆ ಸಂಪೂರ್ಣವಾಗಿ ಲಸಿಕೆ ಪಡೆದ ಪ್ರಯಾಣಿಕರ ಭಾರತೀಯ ವ್ಯಾಕ್ಸಿನೇಷನ್ ಪ್ರಮಾಣಪತ್ರಗಳನ್ನು ಮಾನ್ಯಗೊಳಿಸಲು ಒಪ್ಪಿದ್ದಾರೆ

ಭಾರತದ ಕೊವಿಡ್ ಲಸಿಕೆಯ ಸರ್ಟಿಫಿಕೆಟ್​ಗೆ 96 ದೇಶಗಳಲ್ಲಿ ಮನ್ನಣೆ; ಇನ್ನು ಭಾರತೀಯರಿಗೆ ವಿದೇಶ ಪ್ರಯಾಣ ಸುಲಭ
ಕೋವಿನ್ ಆ್ಯಪ್
TV9 Web
| Edited By: |

Updated on:Nov 09, 2021 | 6:44 PM

Share

ನವದೆಹಲಿ: ಭಾರತದ ಕೊವಿಡ್ ಲಸಿಕೆಗಳ ಪ್ರಮಾಣಪತ್ರಗಳನ್ನು ಪರಸ್ಪರ ಗುರುತಿಸಲು ವಿಶ್ವದ 96 ದೇಶಗಳು ಒಪ್ಪಿಕೊಂಡಿವೆ. ಇದರಿಂದ ಭಾರತದಲ್ಲಿ ಉತ್ಪಾದನೆಯಾಗಿರುವ ಕೊವ್ಯಾಕ್ಸಿನ್ (Covaxin) ಮತ್ತು ಕೋವಿಶೀಲ್ಡ್​ (Covishield) ಲಸಿಕೆಗಳನ್ನು ಪಡೆದಿರುವ ಜನರಿಗೆ ಬೇರೆ ದೇಶಗಳಿಗೆ ಪ್ರಯಾಣಿಸಲು ಇದರಿಂದ ಅನುಕೂಲವಾದಂತಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಮಂಗಳವಾರ ಹೇಳಿದ್ದಾರೆ. ಭಾರತದಲ್ಲಿ ವಿಶ್ವದ ಅತಿದೊಡ್ಡ ಕೊವಿಡ್-19 ಲಸಿಕೆ (Covid-19 Vaccine Drive) ಕಾರ್ಯಕ್ರಮದ ಫಲಾನುಭವಿಗಳನ್ನು ಸ್ವೀಕರಿಸಲು ಮತ್ತು ಗುರುತಿಸಲು ಸರ್ಕಾರವು ಪ್ರಪಂಚದ ಇತರ ಭಾಗಗಳೊಂದಿಗೆ ಸಂವಹನವನ್ನು ಮುಂದುವರೆಸಿದೆ. ಇದರಿಂದಾಗಿ ಶಿಕ್ಷಣ, ವ್ಯಾಪಾರ ಮತ್ತು ಪ್ರವಾಸೋದ್ಯಮ ಉದ್ದೇಶಗಳಿಗಾಗಿ ಬೇರೆ ದೇಶಗಳಿಗೆ ತೆರಳುವವರಿಗೆ ಪ್ರಯಾಣ ಸುಗಮವಾಗುತ್ತದೆ ಎಂದು ಸಚಿವ ಮಾಂಡವಿಯಾ ತಿಳಿಸಿದ್ದಾರೆ.

ಸದ್ಯಕ್ಕೆ 96 ದೇಶಗಳು ಭಾರತದ ಕೊವಿಡ್ ಲಸಿಕೆ ಪ್ರಮಾಣಪತ್ರಗಳ ಪರಸ್ಪರ ಗುರುತಿಸುವಿಕೆಗೆ ಒಪ್ಪಿಕೊಂಡಿವೆ. ವಿಶ್ವ ಆರೋಗ್ಯ ಸಂಸ್ಥೆ ಅನುಮೋದಿಸಿದ ಕೋವಿಡ್ ಲಸಿಕೆಗಳೊಂದಿಗೆ ಸಂಪೂರ್ಣವಾಗಿ ಲಸಿಕೆ ಪಡೆದ ಪ್ರಯಾಣಿಕರ ಭಾರತೀಯ ವ್ಯಾಕ್ಸಿನೇಷನ್ ಪ್ರಮಾಣಪತ್ರಗಳನ್ನು ಮಾನ್ಯಗೊಳಿಸಲು ಒಪ್ಪಿದ್ದಾರೆ ಎಂದು ಮಾಂಡವೀಯ ಹೇಳಿದ್ದಾರೆ.

ವಿದೇಶಕ್ಕೆ ಪ್ರಯಾಣಿಸಲು ಬಯಸುವವರು ಅಂತಾರಾಷ್ಟ್ರೀಯ ಪ್ರಯಾಣ ವ್ಯಾಕ್ಸಿನೇಷನ್ ಪ್ರಮಾಣಪತ್ರವನ್ನು COWIN ಪೋರ್ಟಲ್‌ನಿಂದ ಡೌನ್‌ಲೋಡ್ ಮಾಡಬಹುದು ಎಂದು ಸಚಿವಾಲಯ ತಿಳಿಸಿದೆ. 96 ದೇಶಗಳಾದ ಕೆನಡಾ, ಅಮೆರಿಕ, ಇಂಗ್ಲೆಂಡ್, ಫ್ರಾನ್ಸ್, ಜರ್ಮನಿ, ಬೆಲ್ಜಿಯಂ, ಐರ್ಲೆಂಡ್, ನೆದರ್ಲ್ಯಾಂಡ್ಸ್, ಸ್ಪೇನ್, ಬಾಂಗ್ಲಾದೇಶ, ಮಾಲಿ, ಘಾನಾ, ಸಿಯೆರಾ ಲಿಯೋನ್, ಅಂಗೋಲಾ, ನೈಜೀರಿಯಾ, ಬೆನಿನ್, ಚಾಡ್, ಹಂಗೇರಿ, ಸರ್ಬಿಯಾ, ಪೋಲೆಂಡ್, ಸ್ಲೋವಾಕ್ ರಿಪಬ್ಲಿಕ್ , ಸ್ಲೊವೇನಿಯಾ, ಕ್ರೊಯೇಷಿಯಾ, ಬಲ್ಗೇರಿಯಾ, ಟರ್ಕಿ, ಗ್ರೀಸ್, ಫಿನ್ಲ್ಯಾಂಡ್, ಎಸ್ಟೋನಿಯಾ, ರೊಮೇನಿಯಾ, ಮೊಲ್ಡೊವಾ, ಅಲ್ಬೇನಿಯಾ, ಜೆಕ್ ರಿಪಬ್ಲಿಕ್, ಸ್ವಿಟ್ಜರ್ಲೆಂಡ್, ಲಿಚ್ಟೆನ್‌ಸ್ಟೈನ್, ಸ್ವೀಡನ್, ಆಸ್ಟ್ರಿಯಾ, ಮಾಂಟೆನೆಗ್ರೊ, ಐಸ್‌ಲ್ಯಾಂಡ್, ಇಸ್ವಾಟಿನಿ, ರುವಾಂಡಾ, ಜಿಂಬಾಬ್ವೆ, ಉಗಾಂಡಾ, ಮಲಾವಿ, ಬೋಟ್ಸ್ವಾನ, ನಮೀಬಿಯಾ, ಕಿರ್ಗಿಜ್ ರಿಪಬ್ಲಿಕ್, ಬೆಲಾರಸ್, ಅರ್ಮೇನಿಯಾ, ಉಕ್ರೇನ್, ಅಜೆರ್ಬೈಜಾನ್, ಕಝಾಕಿಸ್ತಾನ್, ರಷ್ಯಾ, ಜಾರ್ಜಿಯಾ, ಅಂಡೋರಾ, ಕುವೈತ್, ಒಮಾನ್, ಯುಎಇ, ಬಹ್ರೇನ್, ಕತಾರ್, ಮಾಲ್ಡೀವ್ಸ್, ಶ್ರೀಲಂಕಾ ಕೊಮಾರ್, ಮಾಲ್ಡೀವ್ಸ್ , ಮಾರಿಷಸ್, ಪೆರು, ಜಮೈಕಾ, ಬಹಾಮಾಸ್ ಮತ್ತು ಬ್ರೆಜಿಲ್ ಸಹ ಭಾರತದೊಂದಿಗೆ ಕೊವಿಡ್ ಲಸಿಕೆಯ ಪ್ರಮಾಣಪತ್ರಗಳನ್ನು ಪರಸ್ಪರ ಗುರುತಿಸಲು ಒಪ್ಪಿಕೊಂಡಿವೆ.

ಗಯಾನಾ, ಆಂಟಿಗುವಾ ಮತ್ತು ಬಾರ್ಬುಡಾ, ಮೆಕ್ಸಿಕೋ, ಪನಾಮ, ಕೋಸ್ಟರಿಕಾ, ನಿಕರಾಗುವಾ, ಅರ್ಜೆಂಟೀನಾ, ಉರುಗ್ವೆ, ಪರಾಗ್ವೆ, ಕೊಲಂಬಿಯಾ, ಟ್ರಿನಿಡಾಡ್ ಮತ್ತು ಟೊಬಾಗೊ, ಕಾಮನ್‌ವೆಲ್ತ್ ಆಫ್ ಡೊಮಿನಿಕಾ, ಗ್ವಾಟೆಮಾಲಾ, ಎಲ್ ಸಾಲ್ವಡಾರ್, ಹೊಂಡುರಾಸ್, ಡೊಮಿನಿಕನ್ ರಿಪಬ್ಲಿಕ್, ಹೈಟಿ, ನೇಪಾಳ, ಇರಾನ್, ರಾಜ್ಯ ಪ್ಯಾಲೆಸ್ಟೈನ್, ಸಿರಿಯಾ, ದಕ್ಷಿಣ ಸುಡಾನ್, ಟುನೀಶಿಯಾ, ಸುಡಾನ್, ಈಜಿಪ್ಟ್, ಆಸ್ಟ್ರೇಲಿಯಾ, ಮಂಗೋಲಿಯಾ ಮತ್ತು ಫಿಲಿಪೈನ್ಸ್ ಇತರ ದೇಶಗಳು ಕೂಡ ಈ 96 ದೇಶಗಳ ಪಟ್ಟಿಯಲ್ಲಿವೆ.

ಇದನ್ನೂ ಓದಿ: Covid Vaccines: ಭಾರತದಲ್ಲಿ ಬಳಕೆಯಾಗದೆ ಉಳಿದ ಕೊವಿಡ್ ಲಸಿಕೆಗಳ ಪ್ರಮಾಣ 15 ಕೋಟಿ!

ಮಹಾರಾಷ್ಟ್ರದಿಂದ ಕರ್ನಾಟಕಕ್ಕೆ ಬರುವವರಿಗೆ ಹೊಸ ಕೊವಿಡ್ ನಿಯಮಾವಳಿಗಳು ಇಲ್ಲಿವೆ

Published On - 6:41 pm, Tue, 9 November 21

ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ