AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಛತ್ತೀಸ್​ಗಢ: ಗೆಳೆಯನ ಮೇಲೆ ಕೋಪಗೊಂಡು 80 ಅಡಿ ಎತ್ತರದ ಹೈಟೆನ್ಷನ್ ವಿದ್ಯುತ್ ಟವರ್ ಏರಿದ ಯುವತಿ

ತನ್ನ ಪ್ರಿಯಕರನ ಮೇಲಿನ ಕೋಪದ ಭರದಲ್ಲಿ, ಹುಡುಗಿಯೊಬ್ಬಳು 80 ಅಡಿ ಎತ್ತರದ ಹೈ ಟೆನ್ಷನ್ ವಿದ್ಯುತ್ ಟವರ್ ಹತ್ತಿದ ಘಟನೆ ಛತ್ತೀಸ್‌ಗಢದ ಗೌರೆಲಾ ಪೇಂದ್ರ ಮಾರ್ವಾಹಿ ಜಿಲ್ಲೆಯಲ್ಲಿ ನಡೆದಿದೆ.

ಛತ್ತೀಸ್​ಗಢ: ಗೆಳೆಯನ ಮೇಲೆ ಕೋಪಗೊಂಡು 80 ಅಡಿ ಎತ್ತರದ ಹೈಟೆನ್ಷನ್ ವಿದ್ಯುತ್ ಟವರ್ ಏರಿದ ಯುವತಿ
ಛತ್ತೀಸ್​ಗಢ ಯುವತಿImage Credit source: India Today
ನಯನಾ ರಾಜೀವ್
|

Updated on: Aug 07, 2023 | 8:26 AM

Share

ತನ್ನ ಪ್ರಿಯಕರನ ಮೇಲಿನ ಕೋಪದ ಭರದಲ್ಲಿ, ಹುಡುಗಿಯೊಬ್ಬಳು 80 ಅಡಿ ಎತ್ತರದ ಹೈ ಟೆನ್ಷನ್ ವಿದ್ಯುತ್ ಟವರ್ ಹತ್ತಿದ ಘಟನೆ ಛತ್ತೀಸ್‌ಗಢದ ಗೌರೆಲಾ ಪೇಂದ್ರ ಮಾರ್ವಾಹಿ ಜಿಲ್ಲೆಯಲ್ಲಿ ನಡೆದಿದೆ. ಆಕೆಯ ಗೆಳೆಯ ಕೂಡ ಆಕೆಯನ್ನು ಹಿಂಬಾಲಿಸಿ ಟವರ್ ಅನ್ನು ಹತ್ತಿದ್ದಾನೆ. ಈ ಘಟನೆ ವಿಡಿಯೋದಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

ಕೆಲ ಸ್ಥಳೀಯರು ಟವರ್​ ಅಲ್ಲಿ ಇಬ್ಬರಿರುವುದನ್ನು ಗಮನಿಸಿದ್ದರು ತಕ್ಷಣ ಪೆಂಡ್ರಾ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ. ಘಟನೆಯ ಬಗ್ಗೆ ಇಬ್ಬರ ಕುಟುಂಬಗಳಿಗೂ ಮಾಹಿತಿ ನೀಡಿದ್ದರು, ಪೊಲೀಸರು ಬರುವಷ್ಟರಲ್ಲಿ ಗ್ರಾಮಸ್ಥರು ಅಲ್ಲಿ ಜಮಾಯಿಸಿದ್ದರು.

ಪೊಲೀಸ್ ಅಧಿಕಾರಿಗಳು ಇಬ್ಬರ ಜತೆ ದೀರ್ಘಕಾಲ ಮಾತುಕತೆ ನಡೆಸಿ, ಕೆಳಗೆ ಇಳಿಸಲು ಮನವೊಲಿಸಲು ಪ್ರಯತ್ನಿಸಿದರು. ಗಂಟೆಗಟ್ಟಲೆ ಹೋರಾಟ ನಡೆಸಿದ ಪೊಲೀಸರು ಕೊನೆಗೂ ಯಶಸ್ವಿಯಾಗಿದ್ದಾರೆ. ಅಲ್ಲೇ ಇದ್ದ ವ್ಯಕ್ತಿಯೊಬನ್ಬ ಇಡೀ ಘಟನೆಯ ವಿಡಿಯೋ ಚಿತ್ರೀಕರಿಸಿ ಸಾಮಾಜಿಕ ಜಾಲತಾಣಗಳಲ್ಲಿ ಹಾಕಿದ್ದಾರೆ.

ಮತ್ತಷ್ಟು ಓದಿ: ಪ್ರೀತಿ ಪ್ರೇಮದ ಹೆಸರಿನಲ್ಲಿ ಮೋಸ: ಆತನನ್ನು ಬಿಟ್ಟಿರಲಾರೆಂದು ಯುವಕನ ಮನೆ ಮುಂದೆ ಯುವತಿ ಧರಣಿ

ಯುವತಿ ಟವರ್ ಏರುವ ಕೆಲವೇ ಗಂಟೆಗಳ ಮೊದಲು ತನ್ನ ಗೆಳೆಯನೊಂದಿಗೆ ಕರೆ ಮಾಡಿ ತೀವ್ರ ವಾಗ್ವಾದ ನಡೆಸಿದ್ದಳು. ಕೆಳಗೆ ಬರುವಂತೆ ಮನವೊಲಿಸಲು ಆಕೆಯ ಗೆಳೆಯನೂ ಅವಳನ್ನು ಹಿಂಬಾಲಿಸಿದ. ಇಬ್ಬರೂ ಕೂಡ ಯಾವುದೇ ತೊಂದರೆ ಆಗದೆ ಕೆಳಗಿಳಿದಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ