AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

6,000 ರೂ. ಹಣಕ್ಕಾಗಿ ಹೆತ್ತ ಮಗುವನ್ನೇ ಮಾರಲು ಹೋದ ತಾಯಿ

ಆ ಭಿಕ್ಷುಕಿ ಅಕ್ರಮ ಸಂಬಂಧದಿಂದ ಗರ್ಭಿಣಿಯಾಗಿದ್ದು, ಪಶ್ಚಿಮ ಬಂಗಾಳದ ಪುರುಲಿಯಾ ಜಿಲ್ಲೆಯ ಗಡಿಭಾಗದ ನಿಮ್ದಿಹ್‌ನಲ್ಲಿ ಮಗುವಿಗೆ ಜನ್ಮ ನೀಡಿರುವುದಾಗಿ ಆರೋಪಿ ತಾಯಿ ಪೊಲೀಸರಿಗೆ ತಿಳಿಸಿದ್ದಾರೆ.

6,000 ರೂ. ಹಣಕ್ಕಾಗಿ ಹೆತ್ತ ಮಗುವನ್ನೇ ಮಾರಲು ಹೋದ ತಾಯಿ
ಮಗು
ಸುಷ್ಮಾ ಚಕ್ರೆ
|

Updated on:Sep 02, 2023 | 6:23 PM

Share

ಕೊಲ್ಕತ್ತಾ: ಪಶ್ಚಿಮ ಬಂಗಾಳ ಮೂಲದ ತಾಯಿಯೊಬ್ಬರು ಜಾರ್ಖಂಡ್‌ನ ಜೆಮ್‌ಶೆಡ್‌ಪುರದಲ್ಲಿ ತನ್ನ ನವಜಾತ ಶಿಶುವನ್ನು 6,000 ರೂ.ಗೆ ಮಾರಾಟ ಮಾಡಲು ಯತ್ನಿಸಿದ ವಿಚಿತ್ರ ಮತ್ತುನ ಆಘಾತಕಾರಿ ಘಟನೆ ನಡೆದಿದೆ. ಮಗುವನ್ನು ಖರೀದಿಸುವ ನಾಟಕವಾಡಿದ ವ್ಯಕ್ತಿಯೊಬ್ಬರು ಆ ಮಗುವನ್ನು ಸುರಕ್ಷಿತವಾಗಿ ಪೊಲೀಸ್ ಠಾಣೆಗೆ ಕರೆದುಕೊಂಡು ಬಂದು ದೂರು ನೀಡಿದ್ದಾರೆ. ಬಳಿಕ ಆ ತಾಯಿಯನ್ನು ಬಂಧಿಸಲಾಗಿದೆ.

ಹಣದಾಸೆಗೆ ಹೆತ್ತ ಕೂಡಲೇ ಮಗುವನ್ನು ಬೇರೆಯವರಿಗೆ ಮಾರಲು ಹೊರಟಿದ್ದ ಮಹಿಳೆಯನ್ನು ವಶಕ್ಕೆ ಪಡೆಯಲಾಗಿದೆ ಎಂದು ಜಮ್ಶೆಡ್‌ಪುರ ಎಸ್‌ಡಿಒ ಪಿಯೂಷ್ ಮಿಶ್ರಾ ಹೇಳಿದ್ದಾರೆ. ನನಗೆ ಈ ವಿಷಯ ಗೊತ್ತಾಗುತ್ತಿದ್ದಂತೆ ಈ ಪ್ರಕರಣವನ್ನು ಸಕ್ಚಿ ಪೊಲೀಸರಿಗೆ ವರ್ಗಾಯಿಸಿದೆ. ಮಾರಾಟ ಮಾಡಿದ ಮಹಿಳೆ ಮತ್ತು ಖರೀದಿಸಿದ ಮಹಿಳೆಯರನ್ನು ಅಲ್ಲಿಗೆ ಕಳುಹಿಸಿದೆ ಎಂದು ಮಿಶ್ರಾ ತಿಳಿಸಿದ್ದಾರೆ.

ಇದನ್ನೂ ಓದಿ: ಗರ್ಭಿಣಿಯರು ಯಾವ ರೀತಿಯ ಡಯಟ್ ಮಾಡಬೇಕು? ಮಗುವಿನ ಆರೋಗ್ಯಕ್ಕೆ ಈ ಆಹಾರ ಬಳಸಿ

ಪಶ್ಚಿಮ ಬಂಗಾಳದ ಪುರುಲಿಯಾ ಜಿಲ್ಲೆಯ ಬಲರಾಮ್‌ಪುರದ ಮಹಿಳೆ ನವಜಾತ ಶಿಶುವಿನ ತಾಯಿ ಎನ್ನಲಾಗಿದೆ. ಆ ಮಹಿಳೆ ಭಿಕ್ಷುಕಿ ಎಂದು ಪೊಲೀಸರು ಮಾಹಿತಿ ಪಡೆದಿದ್ದಾರೆ. ಆಕೆ ರೈಲು ನಿಲ್ದಾಣದಲ್ಲಿ ಭಿಕ್ಷೆ ಬೇಡುತ್ತಾಳೆ ಮತ್ತು ರೈಲಿನಲ್ಲಿಯೇ ಓಡಾಡುತ್ತಾರೆ. ಆಕೆಯಿಂದ ಮಗುವನ್ನು ರಕ್ಷಿಸಿ ಮಕ್ಕಳ ರಕ್ಷಣಾ ಸೇವೆಗೆ ಕಳುಹಿಸಲಾಗಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ: ಗಂಡನ ಜತೆ ಖುಷಿಯಾಗಿರಬೇಕು ಎಂದು ಮಗುವನ್ನು ಹೊತ್ತು ಬಾಂಗ್ಲಾದಿಂದ ಭಾರತಕ್ಕೆ ಬಂದ ಮಹಿಳೆ, ಆದರೆ ನಡೆದಿದ್ದೇ ಬೇರೆ

ಆ ಭಿಕ್ಷುಕಿ ಅಕ್ರಮ ಸಂಬಂಧದಿಂದ ಗರ್ಭಿಣಿಯಾಗಿದ್ದು, ಪಶ್ಚಿಮ ಬಂಗಾಳದ ಪುರುಲಿಯಾ ಜಿಲ್ಲೆಯ ಗಡಿಭಾಗದ ನಿಮ್ದಿಹ್‌ನಲ್ಲಿ ಮಗುವಿಗೆ ಜನ್ಮ ನೀಡಿರುವುದಾಗಿ ಆರೋಪಿ ತಾಯಿ ಪೊಲೀಸರಿಗೆ ತಿಳಿಸಿದ್ದಾರೆ. ನಾನೇ ಭಿಕ್ಷೆ ಬೇಡಿ ತಿನ್ನುತ್ತಿದ್ದೇನೆ. ನನಗೆ ಮಗುವನ್ನು ಬೆಳೆಸಲು ಆಗುವುದಿಲ್ಲ. ನನಗೆ ಆ ಸಾಮರ್ಥ್ಯವಿಲ್ಲ. ಹೀಗಾಗಿ ಮಗುವನ್ನು ಮಾರಲು ಯತ್ನಿಸುತ್ತಿದ್ದೆ ಎಂದು ಪೊಲೀಸರಿಗೆ ತಿಳಿಸಿದ್ದಾರೆ.

ಇನ್ನಷ್ಟು ಕ್ರೈಮ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:23 pm, Sat, 2 September 23

Follow Us
Sushma Chakre
Sushma Chakre

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!