AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

6,000 ರೂ. ಹಣಕ್ಕಾಗಿ ಹೆತ್ತ ಮಗುವನ್ನೇ ಮಾರಲು ಹೋದ ತಾಯಿ

ಆ ಭಿಕ್ಷುಕಿ ಅಕ್ರಮ ಸಂಬಂಧದಿಂದ ಗರ್ಭಿಣಿಯಾಗಿದ್ದು, ಪಶ್ಚಿಮ ಬಂಗಾಳದ ಪುರುಲಿಯಾ ಜಿಲ್ಲೆಯ ಗಡಿಭಾಗದ ನಿಮ್ದಿಹ್‌ನಲ್ಲಿ ಮಗುವಿಗೆ ಜನ್ಮ ನೀಡಿರುವುದಾಗಿ ಆರೋಪಿ ತಾಯಿ ಪೊಲೀಸರಿಗೆ ತಿಳಿಸಿದ್ದಾರೆ.

6,000 ರೂ. ಹಣಕ್ಕಾಗಿ ಹೆತ್ತ ಮಗುವನ್ನೇ ಮಾರಲು ಹೋದ ತಾಯಿ
ಮಗು
ಸುಷ್ಮಾ ಚಕ್ರೆ
|

Updated on:Sep 02, 2023 | 6:23 PM

Share

ಕೊಲ್ಕತ್ತಾ: ಪಶ್ಚಿಮ ಬಂಗಾಳ ಮೂಲದ ತಾಯಿಯೊಬ್ಬರು ಜಾರ್ಖಂಡ್‌ನ ಜೆಮ್‌ಶೆಡ್‌ಪುರದಲ್ಲಿ ತನ್ನ ನವಜಾತ ಶಿಶುವನ್ನು 6,000 ರೂ.ಗೆ ಮಾರಾಟ ಮಾಡಲು ಯತ್ನಿಸಿದ ವಿಚಿತ್ರ ಮತ್ತುನ ಆಘಾತಕಾರಿ ಘಟನೆ ನಡೆದಿದೆ. ಮಗುವನ್ನು ಖರೀದಿಸುವ ನಾಟಕವಾಡಿದ ವ್ಯಕ್ತಿಯೊಬ್ಬರು ಆ ಮಗುವನ್ನು ಸುರಕ್ಷಿತವಾಗಿ ಪೊಲೀಸ್ ಠಾಣೆಗೆ ಕರೆದುಕೊಂಡು ಬಂದು ದೂರು ನೀಡಿದ್ದಾರೆ. ಬಳಿಕ ಆ ತಾಯಿಯನ್ನು ಬಂಧಿಸಲಾಗಿದೆ.

ಹಣದಾಸೆಗೆ ಹೆತ್ತ ಕೂಡಲೇ ಮಗುವನ್ನು ಬೇರೆಯವರಿಗೆ ಮಾರಲು ಹೊರಟಿದ್ದ ಮಹಿಳೆಯನ್ನು ವಶಕ್ಕೆ ಪಡೆಯಲಾಗಿದೆ ಎಂದು ಜಮ್ಶೆಡ್‌ಪುರ ಎಸ್‌ಡಿಒ ಪಿಯೂಷ್ ಮಿಶ್ರಾ ಹೇಳಿದ್ದಾರೆ. ನನಗೆ ಈ ವಿಷಯ ಗೊತ್ತಾಗುತ್ತಿದ್ದಂತೆ ಈ ಪ್ರಕರಣವನ್ನು ಸಕ್ಚಿ ಪೊಲೀಸರಿಗೆ ವರ್ಗಾಯಿಸಿದೆ. ಮಾರಾಟ ಮಾಡಿದ ಮಹಿಳೆ ಮತ್ತು ಖರೀದಿಸಿದ ಮಹಿಳೆಯರನ್ನು ಅಲ್ಲಿಗೆ ಕಳುಹಿಸಿದೆ ಎಂದು ಮಿಶ್ರಾ ತಿಳಿಸಿದ್ದಾರೆ.

ಇದನ್ನೂ ಓದಿ: ಗರ್ಭಿಣಿಯರು ಯಾವ ರೀತಿಯ ಡಯಟ್ ಮಾಡಬೇಕು? ಮಗುವಿನ ಆರೋಗ್ಯಕ್ಕೆ ಈ ಆಹಾರ ಬಳಸಿ

ಪಶ್ಚಿಮ ಬಂಗಾಳದ ಪುರುಲಿಯಾ ಜಿಲ್ಲೆಯ ಬಲರಾಮ್‌ಪುರದ ಮಹಿಳೆ ನವಜಾತ ಶಿಶುವಿನ ತಾಯಿ ಎನ್ನಲಾಗಿದೆ. ಆ ಮಹಿಳೆ ಭಿಕ್ಷುಕಿ ಎಂದು ಪೊಲೀಸರು ಮಾಹಿತಿ ಪಡೆದಿದ್ದಾರೆ. ಆಕೆ ರೈಲು ನಿಲ್ದಾಣದಲ್ಲಿ ಭಿಕ್ಷೆ ಬೇಡುತ್ತಾಳೆ ಮತ್ತು ರೈಲಿನಲ್ಲಿಯೇ ಓಡಾಡುತ್ತಾರೆ. ಆಕೆಯಿಂದ ಮಗುವನ್ನು ರಕ್ಷಿಸಿ ಮಕ್ಕಳ ರಕ್ಷಣಾ ಸೇವೆಗೆ ಕಳುಹಿಸಲಾಗಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ: ಗಂಡನ ಜತೆ ಖುಷಿಯಾಗಿರಬೇಕು ಎಂದು ಮಗುವನ್ನು ಹೊತ್ತು ಬಾಂಗ್ಲಾದಿಂದ ಭಾರತಕ್ಕೆ ಬಂದ ಮಹಿಳೆ, ಆದರೆ ನಡೆದಿದ್ದೇ ಬೇರೆ

ಆ ಭಿಕ್ಷುಕಿ ಅಕ್ರಮ ಸಂಬಂಧದಿಂದ ಗರ್ಭಿಣಿಯಾಗಿದ್ದು, ಪಶ್ಚಿಮ ಬಂಗಾಳದ ಪುರುಲಿಯಾ ಜಿಲ್ಲೆಯ ಗಡಿಭಾಗದ ನಿಮ್ದಿಹ್‌ನಲ್ಲಿ ಮಗುವಿಗೆ ಜನ್ಮ ನೀಡಿರುವುದಾಗಿ ಆರೋಪಿ ತಾಯಿ ಪೊಲೀಸರಿಗೆ ತಿಳಿಸಿದ್ದಾರೆ. ನಾನೇ ಭಿಕ್ಷೆ ಬೇಡಿ ತಿನ್ನುತ್ತಿದ್ದೇನೆ. ನನಗೆ ಮಗುವನ್ನು ಬೆಳೆಸಲು ಆಗುವುದಿಲ್ಲ. ನನಗೆ ಆ ಸಾಮರ್ಥ್ಯವಿಲ್ಲ. ಹೀಗಾಗಿ ಮಗುವನ್ನು ಮಾರಲು ಯತ್ನಿಸುತ್ತಿದ್ದೆ ಎಂದು ಪೊಲೀಸರಿಗೆ ತಿಳಿಸಿದ್ದಾರೆ.

ಇನ್ನಷ್ಟು ಕ್ರೈಮ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:23 pm, Sat, 2 September 23

ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?