AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

6,000 ರೂ. ಹಣಕ್ಕಾಗಿ ಹೆತ್ತ ಮಗುವನ್ನೇ ಮಾರಲು ಹೋದ ತಾಯಿ

ಆ ಭಿಕ್ಷುಕಿ ಅಕ್ರಮ ಸಂಬಂಧದಿಂದ ಗರ್ಭಿಣಿಯಾಗಿದ್ದು, ಪಶ್ಚಿಮ ಬಂಗಾಳದ ಪುರುಲಿಯಾ ಜಿಲ್ಲೆಯ ಗಡಿಭಾಗದ ನಿಮ್ದಿಹ್‌ನಲ್ಲಿ ಮಗುವಿಗೆ ಜನ್ಮ ನೀಡಿರುವುದಾಗಿ ಆರೋಪಿ ತಾಯಿ ಪೊಲೀಸರಿಗೆ ತಿಳಿಸಿದ್ದಾರೆ.

6,000 ರೂ. ಹಣಕ್ಕಾಗಿ ಹೆತ್ತ ಮಗುವನ್ನೇ ಮಾರಲು ಹೋದ ತಾಯಿ
ಮಗು
ಸುಷ್ಮಾ ಚಕ್ರೆ
|

Updated on:Sep 02, 2023 | 6:23 PM

Share

ಕೊಲ್ಕತ್ತಾ: ಪಶ್ಚಿಮ ಬಂಗಾಳ ಮೂಲದ ತಾಯಿಯೊಬ್ಬರು ಜಾರ್ಖಂಡ್‌ನ ಜೆಮ್‌ಶೆಡ್‌ಪುರದಲ್ಲಿ ತನ್ನ ನವಜಾತ ಶಿಶುವನ್ನು 6,000 ರೂ.ಗೆ ಮಾರಾಟ ಮಾಡಲು ಯತ್ನಿಸಿದ ವಿಚಿತ್ರ ಮತ್ತುನ ಆಘಾತಕಾರಿ ಘಟನೆ ನಡೆದಿದೆ. ಮಗುವನ್ನು ಖರೀದಿಸುವ ನಾಟಕವಾಡಿದ ವ್ಯಕ್ತಿಯೊಬ್ಬರು ಆ ಮಗುವನ್ನು ಸುರಕ್ಷಿತವಾಗಿ ಪೊಲೀಸ್ ಠಾಣೆಗೆ ಕರೆದುಕೊಂಡು ಬಂದು ದೂರು ನೀಡಿದ್ದಾರೆ. ಬಳಿಕ ಆ ತಾಯಿಯನ್ನು ಬಂಧಿಸಲಾಗಿದೆ.

ಹಣದಾಸೆಗೆ ಹೆತ್ತ ಕೂಡಲೇ ಮಗುವನ್ನು ಬೇರೆಯವರಿಗೆ ಮಾರಲು ಹೊರಟಿದ್ದ ಮಹಿಳೆಯನ್ನು ವಶಕ್ಕೆ ಪಡೆಯಲಾಗಿದೆ ಎಂದು ಜಮ್ಶೆಡ್‌ಪುರ ಎಸ್‌ಡಿಒ ಪಿಯೂಷ್ ಮಿಶ್ರಾ ಹೇಳಿದ್ದಾರೆ. ನನಗೆ ಈ ವಿಷಯ ಗೊತ್ತಾಗುತ್ತಿದ್ದಂತೆ ಈ ಪ್ರಕರಣವನ್ನು ಸಕ್ಚಿ ಪೊಲೀಸರಿಗೆ ವರ್ಗಾಯಿಸಿದೆ. ಮಾರಾಟ ಮಾಡಿದ ಮಹಿಳೆ ಮತ್ತು ಖರೀದಿಸಿದ ಮಹಿಳೆಯರನ್ನು ಅಲ್ಲಿಗೆ ಕಳುಹಿಸಿದೆ ಎಂದು ಮಿಶ್ರಾ ತಿಳಿಸಿದ್ದಾರೆ.

ಇದನ್ನೂ ಓದಿ: ಗರ್ಭಿಣಿಯರು ಯಾವ ರೀತಿಯ ಡಯಟ್ ಮಾಡಬೇಕು? ಮಗುವಿನ ಆರೋಗ್ಯಕ್ಕೆ ಈ ಆಹಾರ ಬಳಸಿ

ಪಶ್ಚಿಮ ಬಂಗಾಳದ ಪುರುಲಿಯಾ ಜಿಲ್ಲೆಯ ಬಲರಾಮ್‌ಪುರದ ಮಹಿಳೆ ನವಜಾತ ಶಿಶುವಿನ ತಾಯಿ ಎನ್ನಲಾಗಿದೆ. ಆ ಮಹಿಳೆ ಭಿಕ್ಷುಕಿ ಎಂದು ಪೊಲೀಸರು ಮಾಹಿತಿ ಪಡೆದಿದ್ದಾರೆ. ಆಕೆ ರೈಲು ನಿಲ್ದಾಣದಲ್ಲಿ ಭಿಕ್ಷೆ ಬೇಡುತ್ತಾಳೆ ಮತ್ತು ರೈಲಿನಲ್ಲಿಯೇ ಓಡಾಡುತ್ತಾರೆ. ಆಕೆಯಿಂದ ಮಗುವನ್ನು ರಕ್ಷಿಸಿ ಮಕ್ಕಳ ರಕ್ಷಣಾ ಸೇವೆಗೆ ಕಳುಹಿಸಲಾಗಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ: ಗಂಡನ ಜತೆ ಖುಷಿಯಾಗಿರಬೇಕು ಎಂದು ಮಗುವನ್ನು ಹೊತ್ತು ಬಾಂಗ್ಲಾದಿಂದ ಭಾರತಕ್ಕೆ ಬಂದ ಮಹಿಳೆ, ಆದರೆ ನಡೆದಿದ್ದೇ ಬೇರೆ

ಆ ಭಿಕ್ಷುಕಿ ಅಕ್ರಮ ಸಂಬಂಧದಿಂದ ಗರ್ಭಿಣಿಯಾಗಿದ್ದು, ಪಶ್ಚಿಮ ಬಂಗಾಳದ ಪುರುಲಿಯಾ ಜಿಲ್ಲೆಯ ಗಡಿಭಾಗದ ನಿಮ್ದಿಹ್‌ನಲ್ಲಿ ಮಗುವಿಗೆ ಜನ್ಮ ನೀಡಿರುವುದಾಗಿ ಆರೋಪಿ ತಾಯಿ ಪೊಲೀಸರಿಗೆ ತಿಳಿಸಿದ್ದಾರೆ. ನಾನೇ ಭಿಕ್ಷೆ ಬೇಡಿ ತಿನ್ನುತ್ತಿದ್ದೇನೆ. ನನಗೆ ಮಗುವನ್ನು ಬೆಳೆಸಲು ಆಗುವುದಿಲ್ಲ. ನನಗೆ ಆ ಸಾಮರ್ಥ್ಯವಿಲ್ಲ. ಹೀಗಾಗಿ ಮಗುವನ್ನು ಮಾರಲು ಯತ್ನಿಸುತ್ತಿದ್ದೆ ಎಂದು ಪೊಲೀಸರಿಗೆ ತಿಳಿಸಿದ್ದಾರೆ.

ಇನ್ನಷ್ಟು ಕ್ರೈಮ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:23 pm, Sat, 2 September 23

Follow Us
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ