AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಿರಿಯ ಅಧಿಕಾರಿ ಮೇಲೆ ಮರಳು ಎರಚಿದ ಆಂಧ್ರದ ಮಹಿಳಾ ಉದ್ಯೋಗಿ; ದೌರ್ಜನ್ಯ ಆರೋಪ, ಸಿಸಿಟಿವಿಯಲ್ಲಿ ದೃಶ್ಯ ಸೆರೆ

ಈ ಘಟನೆಯು ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಉಪ ಆಯುಕ್ತರೊಂದಿಗಿನ ಸಭೆಯ ವೇಳೆ ಇತರ ಮೂರು ಅಧಿಕಾರಿಗಳ ಮುಂದೆಯೇ ನಡೆದಿದೆ. ಶಾಂತಿ ಕೋಣೆಗೆ ನುಗ್ಗಿ ಮರಳನ್ನು ಪುಷ್ಪವರ್ಧನ್ ಮುಖಕ್ಕೆ ಎಸೆಯುತ್ತಿರುವುದನ್ನು ಸಿಸಿಟಿವಿ ದೃಶ್ಯದಲ್ಲಿದೆ.

ಹಿರಿಯ ಅಧಿಕಾರಿ ಮೇಲೆ ಮರಳು ಎರಚಿದ ಆಂಧ್ರದ ಮಹಿಳಾ ಉದ್ಯೋಗಿ; ದೌರ್ಜನ್ಯ ಆರೋಪ, ಸಿಸಿಟಿವಿಯಲ್ಲಿ ದೃಶ್ಯ ಸೆರೆ
ಸಿಸಿಟಿವಿ ದೃಶ್ಯ
TV9 Web
| Edited By: |

Updated on:Aug 06, 2021 | 7:22 PM

Share

ಹೈದರಾಬಾದ್: ಆಂಧ್ರಪ್ರದೇಶದ ವೈಜಾಗ್‌ನಲ್ಲಿನ ಸರ್ಕಾರಿ ಕಚೇರಿಯಲ್ಲಿ ನಡೆದನಾಟಕೀಯ ಕ್ಷಣವೊಂದು ಸಿಸಿಟಿವಿಯಲ್ಲಿ ಸೆರೆಯಾಗಿದೆ, ದತ್ತಿ ಇಲಾಖೆಯ ಸಹಾಯಕ ಆಯುಕ್ತರಾಗಿ ಕೆಲಸ ಮಾಡುತ್ತಿರುವ ಮಹಿಳಾ ಅಧಿಕಾರಿಯೊಬ್ಬರು ಉಪ ಆಯುಕ್ತರ ಕಚೇರಿಗೆ ನುಗ್ಗಿದರು ಅವರ ಮುಖಕ್ಕೆ ಮರಳು ಎರಚುತ್ತಿರುವ ದೃಶ್ಯ ಅದು. ಶಾಂತಿ ಎಂಬ ಮಹಿಳೆ ಡೆಪ್ಯುಟಿ ಕಮೀಷನರ್ ವಿ ಪುಷ್ಪವರ್ಧನ್ ವಿರುದ್ಧ ದೌರ್ಜನ್ಯ ಆರೋಪ ಮಾಡಿದ್ದು ಕಳೆದ ಒಂದು ತಿಂಗಳಿನಿಂದ ಕಿರುಕುಳ ನೀಡುತ್ತಿದ್ದಾರೆ ಎಂದು ದೂರಿದ್ದಾರೆ . ದೇವಾಲಯದ ಆಸ್ತಿಗಳನ್ನು ರಕ್ಷಿಸುವ ಕೆಲಸ ಮಾಡುವ ಅಧಿಕಾರಿಗಳ ಬಗ್ಗೆ ಅವರ ಟೀಕೆಗಳಿಂದ ಮಹಿಳೆ ಅಸಮಾಧಾನಗೊಂಡಿದ್ದರು ಎಂದು ಹೇಳಲಾಗುತ್ತಿದೆ.

ಈ ಘಟನೆಯು ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಉಪ ಆಯುಕ್ತರೊಂದಿಗಿನ ಸಭೆಯ ವೇಳೆ ಇತರ ಮೂರು ಅಧಿಕಾರಿಗಳ ಮುಂದೆಯೇ ನಡೆದಿದೆ. ಶಾಂತಿ ಕೋಣೆಗೆ ನುಗ್ಗಿ ಮರಳನ್ನು ಪುಷ್ಪವರ್ಧನ್ ಮುಖಕ್ಕೆ ಎಸೆಯುತ್ತಿರುವುದನ್ನು ಸಿಸಿಟಿವಿ ದೃಶ್ಯದಲ್ಲಿದೆ. ಇತರ ಮೂವರು ಅಧಿಕಾರಿಗಳು ಆಕೆಯನ್ನು ಕೊಠಡಿಯಿಂದ ಹೊರಹೋಗುವಂತೆ ಸೂಚಿಸುತ್ತಿರುವುದು ವಿಡಿಯೊದಲ್ಲಿದೆ.

ಪುಷ್ಪವರ್ಧನ್ ಈ ಘಟನೆ ಬಗ್ಗೆ ಇಲಾಖೆಯ ಹಿರಿಯ ಅಧಿಕಾರಿಗಳ ಗಮನಕ್ಕೆ ತಂದಿದ್ದಾರೆ. ಎರಡು ತಿಂಗಳ ಹಿಂದೆಯೇ ಪುಷ್ಪವರ್ಧನ್ ಅವರನ್ನು ಉಪ ಆಯುಕ್ತರನ್ನಾಗಿ ಕರೆತರಲಾಯಿತು ಮತ್ತು ಇತ್ತೀಚೆಗೆ ಹಣಕಾಸಿನ ಅಕ್ರಮಗಳ ಕುರಿತು ದೇವಸ್ಥಾನದ ಕಾರ್ಯನಿರ್ವಾಹಕ ಅಧಿಕಾರಿಯನ್ನು ಅಮಾನತುಗೊಳಿಸಲಾಗಿದೆ. ಆದಾಗ್ಯೂ, ಶಾಂತಿಯೊಂದಿಗೆ ಯಾವುದೇ ವೈಯಕ್ತಿಕ ಭಿನ್ನಾಭಿಪ್ರಾಯಗಳು ಅಥವಾ ದ್ವೇಷಗಳಿಲ್ಲ ಎಂದು ಅವರು ಒತ್ತಿ ಹೇಳಿದ್ದಾರೆ.

ಇದನ್ನೂ ಓದಿ:  ಚಿಕ್ಕಮಗಳೂರು: ಕೊಪ್ಪದಲ್ಲಿ ಮಿತಿಮೀರಿದ ದನಗಳ್ಳರ ಹಾವಳಿ; ಸಿಸಿಟಿವಿಯಲ್ಲಿ ಸೆರೆಯಾಯ್ತು ಕಳ್ಳರ ಆಟಾಟೋಪ

(In Andhra Pradesh’s Vizag woman officer Throws Sand At Superior alleges Harassment incident caught on CCTV camera)

Published On - 6:55 pm, Fri, 6 August 21

ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?