AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಶ್ಚಿಮ ಬಂಗಾಳ: ಬಡತನದಿಂದ ಬೇಸತ್ತು ಒಂದೂವರೆ ವರ್ಷದ ಮಗುವನ್ನು ನದಿಗೆ ಎಸೆದ ತಾಯಿ

ಬಡತನದಿಂದ ಬೇಸತ್ತು ತಾಯಿಯೊಬ್ಬಳು ತನ್ನ ಒಂದೂವರೆ ವರ್ಷದ ಮಗುವನ್ನು ತೀಸ್ತಾ ನದಿಗೆ ಎಸೆದಿರುವ ಘಟನೆ ಪಶ್ಚಿಮ ಬಂಗಾಳದ ಜಲ್ಪೈಗುರಿಯಲ್ಲಿ ನಡೆದಿದೆ.  ಘಟನೆ ಸಮಯದಲ್ಲಿ ಅಲ್ಲೇ ಇದ್ದ ಸ್ಥಳೀಯರು ಕೂಡಲೇ ಓಡಿ ಬಂದು ಮಗುವನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಸೀಮಾ ದಿನಗಟ್ಟಲೆ ಹೊಟ್ಟೆಗೆ ಕೂಳಿಲ್ಲದೆ ಇದ್ದರು, ಗಂಡ ಬಿಪುಲ್ ಬವಾಲಿ ಬಡಗಿ ಮತ್ತು ದಿನಗೂಲಿ ನೌಕರರಾಗಿದ್ದು, ಉತ್ತರ ಬಂಗಾಳದಲ್ಲಿ ಭಾರಿ ಮಳೆಯಿಂದಲಾಗಿ ಎಷ್ಟೇ ಹುಡುಕಿದರೂ ಕೆಲಸ ಸಿಕ್ಕಿರಲಿಲ್ಲ.

ಪಶ್ಚಿಮ ಬಂಗಾಳ: ಬಡತನದಿಂದ ಬೇಸತ್ತು ಒಂದೂವರೆ ವರ್ಷದ ಮಗುವನ್ನು ನದಿಗೆ ಎಸೆದ ತಾಯಿ
ನದಿ
ನಯನಾ ರಾಜೀವ್
|

Updated on: Jul 04, 2025 | 3:04 PM

Share

ಜಲ್ಪೈಗುರಿ, ಜುಲೈ 04: ಬಡತನದಿಂದ ಬೇಸತ್ತು ತಾಯಿಯೊಬ್ಬಳು ತನ್ನ ಒಂದೂವರೆ ವರ್ಷದ ಮಗುವನ್ನು ತೀಸ್ತಾ ನದಿಗೆ ಎಸೆದಿರುವ ಘಟನೆ ಪಶ್ಚಿಮ ಬಂಗಾಳದ ಜಲ್ಪೈಗುರಿಯಲ್ಲಿ ನಡೆದಿದೆ.  ಘಟನೆ ಸಮಯದಲ್ಲಿ ಅಲ್ಲೇ ಇದ್ದ ಸ್ಥಳೀಯರು ಕೂಡಲೇ ಓಡಿ ಬಂದು ಮಗುವನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಸೀಮಾ ದಿನಗಟ್ಟಲೆ ಹೊಟ್ಟೆಗೆ ಕೂಳಿಲ್ಲದೆ ಇದ್ದರು, ಗಂಡ ಬಿಪುಲ್ ಬವಾಲಿ ಬಡಗಿ ಮತ್ತು ದಿನಗೂಲಿ ನೌಕರರಾಗಿದ್ದು, ಉತ್ತರ ಬಂಗಾಳದಲ್ಲಿ ಭಾರಿ ಮಳೆಯಿಂದಾಗಿ ಎಷ್ಟೇ ಹುಡುಕಿದರೂ ಕೆಲಸ ಸಿಕ್ಕಿರಲಿಲ್ಲ. ಹೀಗಾಗಿ ಚಿಂತಿತರಾಗಿದ್ದರು. ಗಂಡ ಕೆಲಸ ಹುಡುಕಿಕೊಂಡು ಹೊರಗೆ ಹೋಗಿದ್ದಾಗ ಪತ್ನಿ ಈ ದುಡುಕಿನ ನಿರ್ಧಾರ ಮಾಡಿದ್ದಾರೆ.

ಮನೆಯಲ್ಲಿ ಅಡುಗೆ ಸಾಮಗ್ರಿಗಳೆಲ್ಲಾ ಖಾಲಿಯಾಗಿತ್ತು, ಹಸಿದ ಮಗು ದಿನವಿಡೀ ಅಳುತ್ತಿತ್ತು. ತಾಯಿಗೆ ಏನು ಮಾಡಬೇಕು ಎಂಬುದೇ ತೋಚಲಿಲ್ಲ. ಹಾಗಾಗಿ ಮಗು ಬದುಕಿದ್ದರೆ ತನಗೆ ಆ ಮಗುವಿನ ಹೊಟ್ಟೆ ತುಂಬಿಸುವ ಶಕ್ತಿಯೂ ಇಲ್ಲ ಎಂದು ಭಾವಿಸಿ ತಪ್ಪು ನಿರ್ಧಾರ ಮಾಡಿದ್ದರು. ಆದರೆ ಮಹಿಳೆ ಹೇಳುವ ಪ್ರಕಾರ, ತಾನು ಮಗುವನ್ನು ಹೆದರಿಸುವ ಉದ್ದೇಶದಿಂದ ಎಸೆದಿದ್ದೆ ಕೊಲ್ಲುವ ಆಲೋಚನೆ ಇರಲಿಲ್ಲ ಎಂದಿದ್ದಾರೆ. ಪಲ್ಲವಿ ಕೀರ್ತಾನಿಯಾ ಮತ್ತು ಮಲ್ಲಿಕಾ ಪಾಲ್ ಎಂಬ ಇಬ್ಬರು ಮಗುವನ್ನು ರಕ್ಷಿಸಿದ್ದಾರೆ.ನದಿಯಲ್ಲಿ ನೀರು ಉಕ್ಕುತ್ತಿತ್ತು. ಹೇಗೋ ಸಾಹಸ ಮಾಡಿ ಮಗುವನ್ನು ಹೊರಕ್ಕೆ ತೆಗೆದಿದ್ದಾರೆ.

ಮತ್ತಷ್ಟು ಓದಿ:ಲಕ್ನೋ: ಮಕ್ಕಳ ಜಗಳ ತಪ್ಪಿಸಲು ಹೋದ ಮಹಿಳೆಯ ಬರ್ಬರ ಹತ್ಯೆ

ಸೀಮಾ ಮಗುವನ್ನು ಕಸಿದುಕೊಳ್ಳಲು ಪ್ರಯತ್ನಿಸಿದಾಗ ಅಲ್ಲಿದ್ದ ಸ್ಥಳೀಯರು ಸ್ಥಳದಲ್ಲಿ ಜಮಾಯಿಸಿದರು. ಪೊಲೀಸರು ಶೀಘ್ರದಲ್ಲೇ ಸ್ಥಳಕ್ಕೆ ಆಗಮಿಸಿ, ಉದ್ವಿಗ್ನತೆಯನ್ನು ಶಾಂತಗೊಳಿಸಿ ಹೇಳಿಕೆಗಳನ್ನು ದಾಖಲಿಸಿಕೊಂಡರು. ಮನೆಯಲ್ಲಿ ಆಹಾರದ ಕೊರತೆ ಇದೆ. ಮಗುವಿಗೆ ಕುಡಿಯಲು ಹಾಲು ಇಲ್ಲ. ಬೆಳಗ್ಗೆಯಿಂದ ಅಳುತ್ತಿತ್ತು. ಮಗು ನೋಡಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ನದಿಗೆ ಎಸೆಯಲು ಬಯಸಿದ್ದೆ ಎಂದು ಪೊಲೀಸರೆದುರು ಒಪ್ಪಿಕೊಂಡಿದ್ದಾಳೆ.

ಸುದ್ದಿ ತಿಳಿದು ಓಡೋಡಿ ಬಂದ ಪತಿ ಬಿಪುಲ್, ತಾನು ಕೆಲಸ ಹುಡುಕಿಕೊಂಡು ಹೊರಗೆ ಹೋಗಿದ್ದೆ, ಸುದ್ದಿ ತಿಳಿದ ತಕ್ಷಣ ಬಂದಿದ್ದೇನೆ.ಕೆಲ ದಿನಗಳ ಹಿಂದೆ ಹಣ ಸಂಪಾದಿಸಿ ತಂದ ಅಕ್ಕಿಯೂ ಮುಗಿದುಹೋಗಿದೆ ಎಂದು ಅಸಹಾಯಕತೆಯನ್ನು ವಿವರಿಸಿದ್ದಾರೆ.

ದಂಪತಿಗೆ ಮೂರು ವರ್ಷದ ಮಗಳು ಕೂಡ ಇದ್ದಾಳೆ. ಬಿಪುಲ್ ಅವರ ಅಣ್ಣ ಪಲಾಶ್ ಸೇರಿದಂತೆ ಕುಟುಂಬ ಸದಸ್ಯರ ಪ್ರಕಾರ, ದಂಪತಿ ನಡುವೆ ವಾದಗಳು ನಡೆದಿದ್ದರೂ, ಇಷ್ಟೊಂದು ದುರಂತ ತಿರುವು ಸಿಗುತ್ತದೆ ಎಂದು ಯಾರೂ ಊಹಿಸಿರಲಿಲ್ಲ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
‘ಬಾಸ್’ ಸಿನಿಮಾಗೆ ದರ್ಶನ್ ಲಾಯರ್ ನೋಟಿಸ್: ನಿರ್ದೇಶಕರ ಖಡಕ್ ಪ್ರತಿಕ್ರಿಯೆ
‘ಬಾಸ್’ ಸಿನಿಮಾಗೆ ದರ್ಶನ್ ಲಾಯರ್ ನೋಟಿಸ್: ನಿರ್ದೇಶಕರ ಖಡಕ್ ಪ್ರತಿಕ್ರಿಯೆ
ಬಾವಿಗೆ ಬಿದ್ದರೂ ಪವಾಡ ಸದೃಶ್ಯವಾಗಿ ಬದುಕುಳಿದ 2 ವರ್ಷದ ಮಗು
ಬಾವಿಗೆ ಬಿದ್ದರೂ ಪವಾಡ ಸದೃಶ್ಯವಾಗಿ ಬದುಕುಳಿದ 2 ವರ್ಷದ ಮಗು
ಸರ್ಕಾರಕ್ಕೆ ಮುಜುಗರ ಆಗ್ತಿದೆ: ಗೃಹ ಸಚಿವರು ಸದನದಲ್ಲೇ ಹೀಗಂದಿದ್ದೇಕೆ?
ಸರ್ಕಾರಕ್ಕೆ ಮುಜುಗರ ಆಗ್ತಿದೆ: ಗೃಹ ಸಚಿವರು ಸದನದಲ್ಲೇ ಹೀಗಂದಿದ್ದೇಕೆ?
ದಾವಣಗೆರೆ ಬೈ ಎಲೆಕ್ಷನ್: ಹೊಸ ಬಾಂಬ್ ಸಿಡಿಸಿದ ಜೆಡಿಎಸ್ ಮುಖಂಡ
ದಾವಣಗೆರೆ ಬೈ ಎಲೆಕ್ಷನ್: ಹೊಸ ಬಾಂಬ್ ಸಿಡಿಸಿದ ಜೆಡಿಎಸ್ ಮುಖಂಡ
ಹೊಟ್ಟೆ ಆಯ್ತು ಈಗ ಬಟ್ಟೆಗೂ ತಟ್ಟಿದ ಯುದ್ಧದ ಎಫೆಕ್ಟ್​​!
ಹೊಟ್ಟೆ ಆಯ್ತು ಈಗ ಬಟ್ಟೆಗೂ ತಟ್ಟಿದ ಯುದ್ಧದ ಎಫೆಕ್ಟ್​​!
ಡೆಡ್ಲಿ ರೋಡ್​ರೇಜ್, ಕಾರು ಬಾನೆಟ್​ನಲ್ಲಿ ನೇತಾಡಿದ ಪೊಲೀಸ್! ವಿಡಿಯೋ ವೈರಲ್
ಡೆಡ್ಲಿ ರೋಡ್​ರೇಜ್, ಕಾರು ಬಾನೆಟ್​ನಲ್ಲಿ ನೇತಾಡಿದ ಪೊಲೀಸ್! ವಿಡಿಯೋ ವೈರಲ್
ಕ್ಯೂ ನೆಟ್, ವಿಹಾನ್ ಬಗ್ಗೆ ಸುಳ್ಳು ಸುದ್ದಿ ಬೇಡ: ಹೈಕೋರ್ಟ್ ತಡೆಯಾಜ್ಞೆ!
ಕ್ಯೂ ನೆಟ್, ವಿಹಾನ್ ಬಗ್ಗೆ ಸುಳ್ಳು ಸುದ್ದಿ ಬೇಡ: ಹೈಕೋರ್ಟ್ ತಡೆಯಾಜ್ಞೆ!
ಸೌದೆ ಒಲೆ ಬಳಸುವ ಮುನ್ನ ಹುಷಾರ್​​: ಕ್ಯಾನ್ಸರ್​​ ಬರಬಹುದು ಎಂದ ಡಾಕ್ಟರ್ಸ್​
ಸೌದೆ ಒಲೆ ಬಳಸುವ ಮುನ್ನ ಹುಷಾರ್​​: ಕ್ಯಾನ್ಸರ್​​ ಬರಬಹುದು ಎಂದ ಡಾಕ್ಟರ್ಸ್​
ಸೆಲ್ಫಿಗೆ ಕಾಜೋಲ್ ಮೇಲೆ ಮುಗಿಬಿದ್ದ ಫ್ಯಾನ್ಸ್; ಭಯಪಡುತ್ತಾ ಸಾಗಿದ ನಟಿ
ಸೆಲ್ಫಿಗೆ ಕಾಜೋಲ್ ಮೇಲೆ ಮುಗಿಬಿದ್ದ ಫ್ಯಾನ್ಸ್; ಭಯಪಡುತ್ತಾ ಸಾಗಿದ ನಟಿ
ಬಾಗಲಕೋಟೆ ಉಪಚುನಾವಣೆ: ಬಿಜೆಪಿ ಟಿಕೆಟ್​​ಗಾಗಿ ಹೈಕಮಾಂಡ್​​ ಮಟ್ಟದಲ್ಲಿ ಲಾಭಿ
ಬಾಗಲಕೋಟೆ ಉಪಚುನಾವಣೆ: ಬಿಜೆಪಿ ಟಿಕೆಟ್​​ಗಾಗಿ ಹೈಕಮಾಂಡ್​​ ಮಟ್ಟದಲ್ಲಿ ಲಾಭಿ