AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

AIADMK Tussle: ಎಐಎಡಿಎಂಕೆ ಸಂಘರ್ಷ; ಇಪಿಎಸ್​ ಈಗ ಹೊಸ ಬಾಸ್​, ಪನ್ನೀರ್​ಸೆಲ್ವಂ ಉಚ್ಛಾಟನೆ

ಜನರಲ್ ಕೌನ್ಸಿಲ್ ಸಭೆಯಲ್ಲಿ ಓ ಪನ್ನೀರ್​ಸೆಲ್ವಂಗೆ ಭಾರೀ ಹಿನ್ನಡೆಯಾಗಿದ್ದು, ಇ. ಪಳನಿಸ್ವಾಮಿ ಎಐಎಡಿಎಂಕೆ ಮಧ್ಯಂತರ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆಯಾಗಿದ್ದಾರೆ.

AIADMK Tussle: ಎಐಎಡಿಎಂಕೆ ಸಂಘರ್ಷ; ಇಪಿಎಸ್​ ಈಗ ಹೊಸ ಬಾಸ್​, ಪನ್ನೀರ್​ಸೆಲ್ವಂ ಉಚ್ಛಾಟನೆ
ಪಳನಿಸ್ವಾಮಿ
TV9 Web
| Edited By: |

Updated on:Jul 11, 2022 | 12:29 PM

Share

ಚೆನ್ನೈ: ತಮಿಳುನಾಡಿನ ಎಐಎಡಿಎಂಕೆಯಲ್ಲಿ ನಾಯಕತ್ವಕ್ಕಾಗಿ ಓಪಿಎಸ್​ (OPS) ಮತ್ತು ಇಪಿಎಸ್​ ಬಣಗಳ ನಡುವೆ ಹಗ್ಗಜಗ್ಗಾಟ ನಡೆದಿತ್ತು. ಇಂದು ಮುಂಜಾನೆ ಈ ಸಂಬಂಧ ಭಾರೀ ಹೈಡ್ರಾಮಾ ನಡೆದಿದ್ದು, ರಸ್ತೆಯಲ್ಲೇ ಕಲ್ಲು, ದೊಣ್ಣೆಗಳಿಂದ ಹೊಡೆದಾಡಿಕೊಂಡು ಗಲಾಟೆಯೆಬ್ಬಿಸಿದ್ದರು. ಇದೀಗ ಜನರಲ್ ಕೌನ್ಸಿಲ್ ಸಭೆಯಲ್ಲಿ ಓ ಪನ್ನೀರ್​ಸೆಲ್ವಂಗೆ (O Panneerselvam) ಭಾರೀ ಹಿನ್ನಡೆಯಾಗಿದ್ದು, ಇ. ಪಳನಿಸ್ವಾಮಿ (Edappadi Palaniswami) ಎಐಎಡಿಎಂಕೆ ಮಧ್ಯಂತರ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆಯಾಗಿದ್ದಾರೆ. ಹಾಗೇ, ಎಐಎಡಿಎಂಕೆ ಪಕ್ಷದ ಹೊಸ ಬಾಸ್ ಆಗಿ ಇಪಿಎಸ್​ (ಇ. ಪಳನಿಸ್ವಾಮಿ) ಘೋಷಣೆಯಾಗಿದ್ದು, ಪಕ್ಷ ವಿರೋಧಿ ಚಟುವಟಿಕೆ ನಡೆಸಿದ ಓಪಿಎಸ್​ (ಓ ಪನ್ನೀರ್​ಸೆಲ್ವಂ) ಅವರನ್ನು ಪಕ್ಷದಿಂದ ಉಚ್ಛಾಟನೆ ಮಾಡಲಾಗಿದೆ.

ಇಂದಿನ ಎಐಎಡಿಎಂಕೆ ಜನರಲ್ ಕೌನ್ಸಿಲ್ ಸಭೆಯು ಪೆರಿಯಾರ್, ಎಂಜಿ ರಾಮಚಂದ್ರನ್ (ಎಂಜಿಆರ್) ಮತ್ತು ಜೆ ಜಯಲಲಿತಾ ಅವರಿಗೆ ಭಾರತ ರತ್ನಕ್ಕೆ ಬೇಡಿಕೆಯ ನಿರ್ಣಯವನ್ನು ಅಂಗೀಕರಿಸಿತು. ಪಕ್ಷದ ಸಭೆಯಲ್ಲಿ ಎಐಎಡಿಎಂಕೆಯ ಹೊಣೆಗಾರಿಕೆಯನ್ನು ಪಳನಿಸ್ವಾಮಿ ಪಡೆದಿದ್ದಾರೆ ಎಂದು ಎಎನ್‌ಐ ವರದಿ ಮಾಡಿದೆ.

ಎಡಪ್ಪಾಡಿ ಪಳನಿಸ್ವಾಮಿ ಅವರು ಎಐಎಡಿಎಂಕೆಯ ಹಂಗಾಮಿ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆಯಾಗಿದ್ದಾರೆ. ತಮಿಳುನಾಡಿನ ವನಗಾರಂನಲ್ಲಿ ನಡೆದ ಜನರಲ್ ಕೌನ್ಸಿಲ್ ಸಭೆಯಲ್ಲಿ ಈ ಆಯ್ಕೆ ಮಾಡಲಾಗಿದೆ. ಇ. ಪಳನಿಸ್ವಾಮಿ ಅವರ ಅಧ್ಯಕ್ಷತೆಯಲ್ಲಿ ಎಐಎಡಿಎಂಕೆ ಜನರಲ್ ಕೌನ್ಸಿಲ್ ಸಭೆಯು ವನಗಾರಂನಲ್ಲಿರುವ ಪಕ್ಷದ ಕಚೇರಿಯಲ್ಲಿ ನಡೆಯುತ್ತಿದೆ. ಈ ಸಭೆಯಲ್ಲಿ 16 ನಿರ್ಣಯಗಳು ಅಂಗೀಕಾರವಾಗುವ ನಿರೀಕ್ಷೆಯಿದೆ.

ಇ. ಪಳನಿಸ್ವಾಮಿ ನೇತೃತ್ವದಲ್ಲಿ ಇಂದು ಪಕ್ಷದ ಸಾಮಾನ್ಯ ಮಂಡಳಿ ಸಭೆ ನಡೆಯಲಿದ್ದು, ಓ. ಪನೀರ್‌ಸೆಲ್ವಂ ಬೆಂಬಲಿಗರು ಎಐಎಡಿಎಂಕೆ ಕಚೇರಿಯ ಬಾಗಿಲು ಒಡೆದಿದ್ದಾರೆ. ಇಂದು ನಡೆಯಲಿರುವ ಜನರಲ್ ಕೌನ್ಸಿಲ್ ಸಭೆಗೂ ಮುನ್ನ ಎಐಎಡಿಎಂಕೆ ನಾಯಕರಾದ ಇ. ಪಳನಿಸ್ವಾಮಿ ಮತ್ತು ಓ. ಪನ್ನೀರಸೆಲ್ವಂ ಅವರ ಬೆಂಬಲಿಗರ ನಡುವೆ ಪಕ್ಷದ ಪ್ರಧಾನ ಕಚೇರಿಯ ಬಳಿ ಘರ್ಷಣೆ ಉಂಟಾಗಿದೆ.

Published On - 10:32 am, Mon, 11 July 22

Follow Us
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ