AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಂಡಮಾನ್-ನಿಕೋಬಾರ್ ದ್ವೀಪದ ಬಳಿ ಬರೋಬ್ಬರಿ 25,000 ಕೋಟಿ ರೂ. ಮೌಲ್ಯದ ಡ್ರಗ್ಸ್​ ಜಪ್ತಿ

ಭಾರತೀಯ ಕೋಸ್ಟ್ ಗಾರ್ಡ್ ಅಂಡಮಾನ್ ಜಲಪ್ರದೇಶದಲ್ಲಿ ಮೀನುಗಾರಿಕಾ ದೋಣಿಯಿಂದ ಸುಮಾರು 5500 ಕೆಜಿ (ಸುಮಾರು 5 ಟನ್) ತೂಕದ ಮಾದಕವಸ್ತುಗಳ ದೊಡ್ಡ ಪ್ರಮಾಣವನ್ನು ವಶಪಡಿಸಿಕೊಂಡಿದ್ದಾರೆ. ಇದರ ಬೆಲೆ 25000 ಕೋಟಿ ರೂ. ಆಗಿದೆ. ಈ ಸರಕು ಎಲ್ಲಿಂದ ಬರುತ್ತಿತ್ತು ಮತ್ತು ಯಾರಿಗೆ ಮತ್ತು ಎಲ್ಲಿಗೆ ಸರಬರಾಜು ಮಾಡಬೇಕಿತ್ತು ಎಂಬುದರ ಕುರಿತು ತನಿಖೆ ನಡೆಸಲಾಗುತ್ತಿದೆ.

ಅಂಡಮಾನ್-ನಿಕೋಬಾರ್ ದ್ವೀಪದ ಬಳಿ ಬರೋಬ್ಬರಿ 25,000 ಕೋಟಿ ರೂ. ಮೌಲ್ಯದ ಡ್ರಗ್ಸ್​ ಜಪ್ತಿ
ಡ್ರಗ್ಸ್​
ನಯನಾ ರಾಜೀವ್
|

Updated on:Nov 26, 2024 | 7:54 AM

Share

ಭಾರತೀಯ ಕೋಸ್ಟ್ ಗಾರ್ಡ್ ಅಂಡಮಾನ್ ಜಲಪ್ರದೇಶದಲ್ಲಿ ಮೀನುಗಾರಿಕಾ ದೋಣಿಯಿಂದ ಸುಮಾರು 5500 ಕೆಜಿ (ಸುಮಾರು 5 ಟನ್) ತೂಕದ ಮಾದಕವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಇದರ ಬೆಲೆ 25000 ಕೋಟಿ ರೂ. ಆಗಿದೆ. ಈ ಸರಕು ಎಲ್ಲಿಂದ ಬರುತ್ತಿತ್ತು ಮತ್ತು ಯಾರಿಗೆ ಮತ್ತು ಎಲ್ಲಿಗೆ ಸರಬರಾಜು ಮಾಡಬೇಕಿತ್ತು ಎಂಬುದರ ಕುರಿತು ತನಿಖೆ ನಡೆಸಲಾಗುತ್ತಿದೆ.

ಕೇಂದ್ರ ಗೃಹ ಸಚಿವ ಅಮಿತ್ ಶಾ ಮಾತನಾಡಿ, ವಶಪಡಿಸಿಕೊಂಡ ದೊಡ್ಡ ಪ್ರಮಾಣದ ಮಾದಕ ದ್ರವ್ಯವು ಸರ್ಕಾರದ ಬದ್ಧತೆ ಮತ್ತು ಅದರ ಏಜೆನ್ಸಿಗಳ ನಡುವಿನ ಸಮನ್ವಯಕ್ಕೆ ಉತ್ತಮ ಉದಾಹರಣೆಯಾಗಿದೆ ಎಂದು ಹೇಳಿದರು. ಎರಡು ಕಿಲೋ ತೂಕದ ಡ್ರಗ್ಸ್‌ನ ಮೂರು ಸಾವಿರ ಪ್ಯಾಕೆಟ್‌ಗಳನ್ನು ವಶಪಡಿಸಿಕೊಂಡಿದ್ದು, ಕೋಸ್ಟ್‌ಗಾರ್ಡ್‌ನ ಡೋರ್ನಿಯರ್ ವಿಮಾನವು ಅನುಮಾನಾಸ್ಪದ ದೋಣಿಯನ್ನು ಗುರುತಿಸಿತು ಮತ್ತು ತಕ್ಷಣ ಹತ್ತಿರದ ಕಮಾಂಡ್‌ಗೆ ತಿಳಿಸಿತು.

ಅದರ ಹಿನ್ನೆಲೆಯಲ್ಲಿ ಗಸ್ತು ಹಡಗುಗಳು ತಕ್ಷಣವೇ ಧಾವಿಸಿವೆ. ಹಡಗನ್ನು ತಕ್ಷಣವೇ ಹತ್ತಿರದ ದ್ವೀಪಕ್ಕೆ ಎಳೆಯಲಾಯಿತು. ಇದರಲ್ಲಿ ಆರು ಮಂದಿ ಮ್ಯಾನ್ಮಾರ್ ಪ್ರಜೆಗಳನ್ನು ಬಂಧಿಸಲಾಗಿದೆ. ವಶಪಡಿಸಿಕೊಂಡ ಡ್ರಗ್ಸ್ ಮೆಥಾಂಫೆಟಮೈನ್ ಎಂದು ನಂಬಲಾಗಿದೆ. ಜಂಟಿ ವಿಚಾರಣೆಗಾಗಿ ಅಂಡಮಾನ್ ನಿಕೋಬಾರ್ ಪೊಲೀಸರಿಗೆ ಮಾಹಿತಿ ನೀಡಲಾಗಿದೆ.

ಮತ್ತಷ್ಟು ಓದಿ: ಬೆಂಗಳೂರು: ಹೊಸ ವರ್ಷಾಚರಣೆಗೆ ಸಂಗ್ರಹಿಸಿಟ್ಟಿದ್ದ 6 ಕೋಟಿ ರೂ. ಮೌಲ್ಯದ ಕ್ವಿಂಟಾಲ್​ಗಟ್ಟಲೆ ಮಾದಕ ವಸ್ತು ಜಪ್ತಿ

ಸಾಗರ್​ಮಂಥನ್-4 ಹೆಸರಿನ ಅಭಿಯಾನವು ಗುಪ್ತಚರ ಸಂಸ್ಥೆಗಳ ಸುಳಿವು ಆಧರಿಸಿದೆ ಎಂದು ಹೇಳಿದೆ. ಕರಾವಳಿ ಕಾವಲು ಪಡೆ ಕಡಲಾಚೆಯ ಗಸ್ತು ನೌಕೆಗಳನ್ನು ಬಳಸಿ ಹಡಗನ್ನು ಗುರುತಿಸಿ ತಡೆದಿದೆ. ಎನ್‌ಸಿಬಿ, ನೌಕಾಪಡೆ ಮತ್ತು ಗುಜರಾತ್ ಪೊಲೀಸ್‌ನ ಭಯೋತ್ಪಾದನಾ ನಿಗ್ರಹ ದಳ ಜಂಟಿಯಾಗಿ ಕಾರ್ಯಾಚರಣೆ ನಡೆಸಿದೆ.

ಇದಲ್ಲದೇ ನವೆಂಬರ್ 15 ರಂದು ಗುಜರಾತ್‌ನ ಪೋರಬಂದರ್ ಕರಾವಳಿಯಲ್ಲಿ ಭಾರತೀಯ ಕೋಸ್ಟ್ ಗಾರ್ಡ್ ಮತ್ತು ಗುಜರಾತ್ ಎಟಿಎಸ್ 500 ಕೆಜಿ ಡ್ರಗ್ಸ್ ವಶಪಡಿಸಿಕೊಂಡಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 7:48 am, Tue, 26 November 24

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್