AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಂಡಮಾನ್-ನಿಕೋಬಾರ್ ದ್ವೀಪದ ಬಳಿ ಬರೋಬ್ಬರಿ 25,000 ಕೋಟಿ ರೂ. ಮೌಲ್ಯದ ಡ್ರಗ್ಸ್​ ಜಪ್ತಿ

ಭಾರತೀಯ ಕೋಸ್ಟ್ ಗಾರ್ಡ್ ಅಂಡಮಾನ್ ಜಲಪ್ರದೇಶದಲ್ಲಿ ಮೀನುಗಾರಿಕಾ ದೋಣಿಯಿಂದ ಸುಮಾರು 5500 ಕೆಜಿ (ಸುಮಾರು 5 ಟನ್) ತೂಕದ ಮಾದಕವಸ್ತುಗಳ ದೊಡ್ಡ ಪ್ರಮಾಣವನ್ನು ವಶಪಡಿಸಿಕೊಂಡಿದ್ದಾರೆ. ಇದರ ಬೆಲೆ 25000 ಕೋಟಿ ರೂ. ಆಗಿದೆ. ಈ ಸರಕು ಎಲ್ಲಿಂದ ಬರುತ್ತಿತ್ತು ಮತ್ತು ಯಾರಿಗೆ ಮತ್ತು ಎಲ್ಲಿಗೆ ಸರಬರಾಜು ಮಾಡಬೇಕಿತ್ತು ಎಂಬುದರ ಕುರಿತು ತನಿಖೆ ನಡೆಸಲಾಗುತ್ತಿದೆ.

ಅಂಡಮಾನ್-ನಿಕೋಬಾರ್ ದ್ವೀಪದ ಬಳಿ ಬರೋಬ್ಬರಿ 25,000 ಕೋಟಿ ರೂ. ಮೌಲ್ಯದ ಡ್ರಗ್ಸ್​ ಜಪ್ತಿ
ಡ್ರಗ್ಸ್​
ನಯನಾ ರಾಜೀವ್
|

Updated on:Nov 26, 2024 | 7:54 AM

Share

ಭಾರತೀಯ ಕೋಸ್ಟ್ ಗಾರ್ಡ್ ಅಂಡಮಾನ್ ಜಲಪ್ರದೇಶದಲ್ಲಿ ಮೀನುಗಾರಿಕಾ ದೋಣಿಯಿಂದ ಸುಮಾರು 5500 ಕೆಜಿ (ಸುಮಾರು 5 ಟನ್) ತೂಕದ ಮಾದಕವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಇದರ ಬೆಲೆ 25000 ಕೋಟಿ ರೂ. ಆಗಿದೆ. ಈ ಸರಕು ಎಲ್ಲಿಂದ ಬರುತ್ತಿತ್ತು ಮತ್ತು ಯಾರಿಗೆ ಮತ್ತು ಎಲ್ಲಿಗೆ ಸರಬರಾಜು ಮಾಡಬೇಕಿತ್ತು ಎಂಬುದರ ಕುರಿತು ತನಿಖೆ ನಡೆಸಲಾಗುತ್ತಿದೆ.

ಕೇಂದ್ರ ಗೃಹ ಸಚಿವ ಅಮಿತ್ ಶಾ ಮಾತನಾಡಿ, ವಶಪಡಿಸಿಕೊಂಡ ದೊಡ್ಡ ಪ್ರಮಾಣದ ಮಾದಕ ದ್ರವ್ಯವು ಸರ್ಕಾರದ ಬದ್ಧತೆ ಮತ್ತು ಅದರ ಏಜೆನ್ಸಿಗಳ ನಡುವಿನ ಸಮನ್ವಯಕ್ಕೆ ಉತ್ತಮ ಉದಾಹರಣೆಯಾಗಿದೆ ಎಂದು ಹೇಳಿದರು. ಎರಡು ಕಿಲೋ ತೂಕದ ಡ್ರಗ್ಸ್‌ನ ಮೂರು ಸಾವಿರ ಪ್ಯಾಕೆಟ್‌ಗಳನ್ನು ವಶಪಡಿಸಿಕೊಂಡಿದ್ದು, ಕೋಸ್ಟ್‌ಗಾರ್ಡ್‌ನ ಡೋರ್ನಿಯರ್ ವಿಮಾನವು ಅನುಮಾನಾಸ್ಪದ ದೋಣಿಯನ್ನು ಗುರುತಿಸಿತು ಮತ್ತು ತಕ್ಷಣ ಹತ್ತಿರದ ಕಮಾಂಡ್‌ಗೆ ತಿಳಿಸಿತು.

ಅದರ ಹಿನ್ನೆಲೆಯಲ್ಲಿ ಗಸ್ತು ಹಡಗುಗಳು ತಕ್ಷಣವೇ ಧಾವಿಸಿವೆ. ಹಡಗನ್ನು ತಕ್ಷಣವೇ ಹತ್ತಿರದ ದ್ವೀಪಕ್ಕೆ ಎಳೆಯಲಾಯಿತು. ಇದರಲ್ಲಿ ಆರು ಮಂದಿ ಮ್ಯಾನ್ಮಾರ್ ಪ್ರಜೆಗಳನ್ನು ಬಂಧಿಸಲಾಗಿದೆ. ವಶಪಡಿಸಿಕೊಂಡ ಡ್ರಗ್ಸ್ ಮೆಥಾಂಫೆಟಮೈನ್ ಎಂದು ನಂಬಲಾಗಿದೆ. ಜಂಟಿ ವಿಚಾರಣೆಗಾಗಿ ಅಂಡಮಾನ್ ನಿಕೋಬಾರ್ ಪೊಲೀಸರಿಗೆ ಮಾಹಿತಿ ನೀಡಲಾಗಿದೆ.

ಮತ್ತಷ್ಟು ಓದಿ: ಬೆಂಗಳೂರು: ಹೊಸ ವರ್ಷಾಚರಣೆಗೆ ಸಂಗ್ರಹಿಸಿಟ್ಟಿದ್ದ 6 ಕೋಟಿ ರೂ. ಮೌಲ್ಯದ ಕ್ವಿಂಟಾಲ್​ಗಟ್ಟಲೆ ಮಾದಕ ವಸ್ತು ಜಪ್ತಿ

ಸಾಗರ್​ಮಂಥನ್-4 ಹೆಸರಿನ ಅಭಿಯಾನವು ಗುಪ್ತಚರ ಸಂಸ್ಥೆಗಳ ಸುಳಿವು ಆಧರಿಸಿದೆ ಎಂದು ಹೇಳಿದೆ. ಕರಾವಳಿ ಕಾವಲು ಪಡೆ ಕಡಲಾಚೆಯ ಗಸ್ತು ನೌಕೆಗಳನ್ನು ಬಳಸಿ ಹಡಗನ್ನು ಗುರುತಿಸಿ ತಡೆದಿದೆ. ಎನ್‌ಸಿಬಿ, ನೌಕಾಪಡೆ ಮತ್ತು ಗುಜರಾತ್ ಪೊಲೀಸ್‌ನ ಭಯೋತ್ಪಾದನಾ ನಿಗ್ರಹ ದಳ ಜಂಟಿಯಾಗಿ ಕಾರ್ಯಾಚರಣೆ ನಡೆಸಿದೆ.

ಇದಲ್ಲದೇ ನವೆಂಬರ್ 15 ರಂದು ಗುಜರಾತ್‌ನ ಪೋರಬಂದರ್ ಕರಾವಳಿಯಲ್ಲಿ ಭಾರತೀಯ ಕೋಸ್ಟ್ ಗಾರ್ಡ್ ಮತ್ತು ಗುಜರಾತ್ ಎಟಿಎಸ್ 500 ಕೆಜಿ ಡ್ರಗ್ಸ್ ವಶಪಡಿಸಿಕೊಂಡಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 7:48 am, Tue, 26 November 24

Follow Us
ಜಾಗತಿಕ ನಾಯಕರಿಂದ ಭಾರತದ ಸಾಂಪ್ರದಾಯಿಕ ಸಿರಿಧಾನ್ಯಗಳ ಮೆನುಗೆ ಮೆಚ್ಚುಗೆ
ಜಾಗತಿಕ ನಾಯಕರಿಂದ ಭಾರತದ ಸಾಂಪ್ರದಾಯಿಕ ಸಿರಿಧಾನ್ಯಗಳ ಮೆನುಗೆ ಮೆಚ್ಚುಗೆ
ವಂದೇ ಮಾತರಂ ಗೀತೆ ವಿವಾದ: ಸರ್ಕಾರದ ಆದೇಶಕ್ಕೆ ಜನಾರ್ದನ ರೆಡ್ಡಿ ಸೆಡ್ಡು
ವಂದೇ ಮಾತರಂ ಗೀತೆ ವಿವಾದ: ಸರ್ಕಾರದ ಆದೇಶಕ್ಕೆ ಜನಾರ್ದನ ರೆಡ್ಡಿ ಸೆಡ್ಡು
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು