AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Watch ಬಿರಿಯಾನಿ ಮುಗಿದಿದೆ ಎಂದು ಹೇಳಿದ ರೆಸ್ಟೊರೆಂಟ್‌ನ ಸಿಬ್ಬಂದಿ ಮೇಲೆ ಗ್ರಾಹಕರಿಂದ ಹಲ್ಲೆ, ಪ್ರಕರಣ ದಾಖಲು

ರೆಸ್ಟೊರೆಂಟ್‌ನ ಟೇಬಲ್‌ನಲ್ಲಿ ಕುಳಿತಿರುವ ಮೂವರು ವ್ಯಕ್ತಿಗಳು ಆಹಾರಕ್ಕಾಗಿ ಕಾಯುತ್ತಿರುವುದನ್ನು ವೀಡಿಯೊ ತೋರಿಸುತ್ತದೆ. ಅವರಲ್ಲಿ ಒಬ್ಬನು ಇದ್ದಕ್ಕಿದ್ದಂತೆ ತನ್ನ ಸೀಟಿನಿಂದ ಎದ್ದು ತನ್ನ ಕಂಪ್ಯೂಟರ್‌ನಲ್ಲಿ ಕೆಲಸದಲ್ಲಿ...

Watch ಬಿರಿಯಾನಿ ಮುಗಿದಿದೆ ಎಂದು ಹೇಳಿದ ರೆಸ್ಟೊರೆಂಟ್‌ನ ಸಿಬ್ಬಂದಿ ಮೇಲೆ ಗ್ರಾಹಕರಿಂದ ಹಲ್ಲೆ, ಪ್ರಕರಣ ದಾಖಲು
ಹೋಟೆಲ್ ಸಿಬ್ಬಂದಿಗೆ ಥಳಿಸಿದ ಗ್ರಾಹಕರು
TV9 Web
| Updated By: ರಶ್ಮಿ ಕಲ್ಲಕಟ್ಟ|

Updated on: Nov 11, 2022 | 1:52 PM

Share

ಗ್ರೇಟರ್ ನೋಯ್ಡಾ: ನಗರದ ರೆಸ್ಟೊರೆಂಟ್‌ನಲ್ಲಿ (Restaurant) ಊಟಕ್ಕೆಂದು ಹೊರಟಿದ್ದ ಮೂವರು ವ್ಯಕ್ತಿಗಳು ತಡವಾಗಿ ಬಿರಿಯಾನಿ(Biryani)ಆರ್ಡರ್ ನೀಡಿದ್ದಿರಂದ ಅದನ್ನು ನೀಡಲು ಸಾಧ್ಯವಿಲ್ಲ ಎಂದು ಹೇಳಿದ್ದಕ್ಕೆ ಹೋಟೆಲ್ ಸಿಬ್ಬಂದಿಗೆ ಥಳಿಸಿದ್ದು, ವಿಡಿಯೊ ವೈರಲ್ ಆಗಿದೆ. ಗ್ರೇಟರ್ ನೋಯ್ಡಾದ ಅನ್ಸಲ್ ಪ್ಲಾಜಾ ಮಾಲ್‌ನಲ್ಲಿರುವ ಝೌಕ್ ರೆಸ್ಟೋರೆಂಟ್‌ನಲ್ಲಿ ಬುಧವಾರ ರಾತ್ರಿ 10: 30 ರ ಸುಮಾರಿಗೆ ಈ ಘಟನೆ ನಡೆದಿದೆ. ಇದೀಗ ಬಂಧಿತರಾಗಿರುವ ಮೂವರನ್ನು ಮನೋಜ್, ರವೇಶ್ ಮತ್ತು ಕ್ರಿಶ್ ಎಂದು ಗುರುತಿಸಲಾಗಿದೆ. ಅವರೆಲ್ಲರೂ ದಾದ್ರಿ ನಿವಾಸಿಗಳು.ರೆಸ್ಟೊರೆಂಟ್‌ನ ಟೇಬಲ್‌ನಲ್ಲಿ ಕುಳಿತಿರುವ ಮೂವರು ವ್ಯಕ್ತಿಗಳು ಆಹಾರಕ್ಕಾಗಿ ಕಾಯುತ್ತಿರುವುದನ್ನು ವೀಡಿಯೊ ತೋರಿಸುತ್ತದೆ. ಅವರಲ್ಲಿ ಒಬ್ಬನು ಇದ್ದಕ್ಕಿದ್ದಂತೆ ತನ್ನ ಸೀಟಿನಿಂದ ಎದ್ದು ತನ್ನ ಕಂಪ್ಯೂಟರ್‌ನಲ್ಲಿ ಕೆಲಸದಲ್ಲಿ ನಿರತನಾಗಿದ್ದ ರೆಸ್ಟೋರೆಂಟ್ ಉದ್ಯೋಗಿಯನ್ನು ಥಳಿಸಲು ಪ್ರಾರಂಭಿಸುತ್ತಾನೆ.

ಕುಪಿತನಾಗಿದ್ದ ಆ ವ್ಯಕ್ತಿ ನೌಕರನನ್ನು ಅವನ ಕುತ್ತಿಗೆ ಹಿಡಿದು ಎಳೆದುಕೊಂಡು ಹೊರಗೆ ಹೋಗುತ್ತಾಮೆ. ಅಲ್ಲಿಗೆ ಹಲ್ಲೆ ನಿಲ್ಲಲಿಲ್ಲ. ಮೂವರು ವ್ಯಕ್ತಿಗಳು ನೌಕರನನ್ನು ರೆಸ್ಟೋರೆಂಟ್‌ನಿಂದ ಹೊರಗೆಳೆದು ಒದೆಯುವುದು ಮತ್ತು ಥಳಿಸುವುದು ವಿಡಿಯೊದಲ್ಲಿದೆ.

ಬುಧವಾರ ರಾತ್ರಿ ಮೂವರು ಆರೋಪಿಗಳು ಊಟಕ್ಕೆಂದು ರೆಸ್ಟೋರೆಂಟ್‌ಗೆ ತೆರಳಿ ಚಿಕನ್ ಬಿರಿಯಾನಿ ಆರ್ಡರ್ ಮಾಡಿದ್ದರು. ಸ್ವಲ್ಪ ಸಮಯದ ನಂತರ, ಅಲ್ತಾಫ್ ಎಂಬ ಸಿಬ್ಬಂದಿ ಬಿರಿಯಾನಿ ಮುಗಿದಿದೆ ಎಂದು ಹೇಳಿದರು. ಆರೋಪಿಗಳಲ್ಲಿ ಒಬ್ಬ ಸಿಟ್ಟಿಗೆದ್ದು, ಸಿಬ್ಬಂದಿಯ ಕಾಲರ್ ಹಿಡಿದಿದ್ದಾನೆ ಎಂದು ಎಂದು ಗ್ರೇಟರ್ ನೋಯ್ಡಾದ ಎಸಿಪಿ -1 ಮಹೇಂದ್ರ ದೇವ್ ಅವರನ್ನು ಉಲ್ಲೇಖಿಸಿ ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ. ನಾಲೆಡ್ಜ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ 323 (ಸ್ವಯಂಪ್ರೇರಿತವಾಗಿ ನೋವುಂಟು ಮಾಡಿದ್ದಕ್ಕಾಗಿ ಶಿಕ್ಷೆ) ಮತ್ತು 147 (ಗಲಭೆಗೆ ಶಿಕ್ಷೆ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ