AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಂಗ್ರೆಸ್ ಮುಂದೆ​ ಮೂರು ಸವಾಲುಗಳೊಡ್ಡಿದ ಪ್ರಧಾನಿ ಮೋದಿ

ಪ್ರಧಾನಿ ನರೇಂದ್ರ ಮೋದಿ ಕಾಂಗ್ರೆಸ್​ ವಿರುದ್ಧ ವಾಗ್ದಾಳಿ ನಡೆಸಿದ್ದು, ಮೂರು ಸವಾಲುಗಳನ್ನು ಹಾಕಿದ್ದಾರೆ. ಅವರು ಸಂವಿಧಾನವನ್ನು ಬದಲಿಸಿ ಧರ್ಮದ ಆಧಾರದಲ್ಲಿ ಮುಸಲ್ಮಾನರಿಗೆ ರಕ್ಷಣೆ ನೀಡುವುದಿಲ್ಲ. ದೇಶವನ್ನು ಹಂಚಿಕೆ ಮಾಡುವ ಕೆಲಸವನ್ನು ಮಾಡುವುದಿಲ್ಲ ಎಂದು ಬರೆದುಕೊಡಬೇಕು.

ನಯನಾ ರಾಜೀವ್
|

Updated on:May 03, 2024 | 11:04 AM

Share

ಕಾಂಗ್ರೆಸ್​ಗೆ ಪ್ರಧಾನಿ ನರೇಂದ್ರ ಮೋದಿ(Narendra Modi) ಮೂರು ಸವಾಲುಗಳನ್ನು ಹಾಕಿದ್ದಾರೆ. ಗುಜರಾತ್​ನಲ್ಲಿ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್​ ಹಾಗೂ ಅವರ ಚೇಲಾಗಳು ದೇಶಕ್ಕೆ ಲಿಖಿತ ರೂಪದಲ್ಲಿ ಗ್ಯಾರಂಟಿ ನೀಡಬೇಕು. ಅವರು ಸಂವಿಧಾನವನ್ನು ಬದಲಿಸಿ ಧರ್ಮದ ಆಧಾರದಲ್ಲಿ ಮುಸಲ್ಮಾನರಿಗೆ ರಕ್ಷಣೆ ನೀಡುವುದಿಲ್ಲ. ದೇಶವನ್ನು ಹಂಚಿಕೆ ಮಾಡುವ ಕೆಲಸವನ್ನು ಮಾಡುವುದಿಲ್ಲ ಎಂದು ಬರೆದುಕೊಡಬೇಕು.

ಎರಡನೆಯದಾಗಿ ಎಸ್​ಸಿ, ಎಸ್​ಟಿ, ಒಬಿಸಿಗೆ ಸಿಗುವ ಮೀಸಲಾತಿಯಲ್ಲಿ ಬದಲಾವಣೆ ಮಾಡಿ ಅವರ ಅಧಿಕಾರವನ್ನು ಕಸಿದುಕೊಳ್ಳುವ ಪ್ರಯತ್ನ ಮಾಡುವುದಿಲ್ಲ ಎಂದು ಲಿಖಿತವಾಗಿ ಬರೆದುಕೊಡಬೇಕು. ಮೂರನೆಯದಾಗಿ ಯಾವ ಯಾವ ರಾಜ್ಯಗಳಲ್ಲಿ ಕಾಂಗ್ರೆಸ್​ ಹಾಗೂ ಅವರ ಮೈತ್ರಿ ಸರ್ಕಾರವಿದೆ ಅಲ್ಲಿ ಜನರ ಹಕ್ಕುಗಳನ್ನು ಕಸಿದುಕೊಳ್ಳುವ ಪ್ರಯತ್ನ ಮಾಡುವುದಿಲ್ಲ, ಯಾವುದೇ ತಾರತಮ್ಯ ಮಾಡದೆ ಹಿಂಬಾಗಲಿನಿಂದ ಒಬಿಸಿ ಕೋಟಾವನ್ನು ಮುಸ್ಲಿಮರಿಗೆ ಕೊಡುವ ಕೆಲಸ ಮಾಡುವುದಿಲ್ಲ ಎಂದು ಬರೆದುಕೊಡಬೇಕೆಂದರು.

ಮೋದಿ ಬದುಕಿರುವವರೆಗೂ ಸಂವಿಧಾನದ ಹೆಸರಿನಲ್ಲಿ ಮೀಸಲಾತಿಯ ಆಟವಾಡಲು ನಾನು ಬಿಡುವುದಿಲ್ಲ. ಮೋದಿ ಬರುವ ಮೊದಲು ಎರಡು ಸಂವಿಧಾನಗಳಿದ್ದವು, ಎರಡು ಧ್ವಜಗಳಿದ್ದವು, ಈ ಸಂವಿಧಾನವನ್ನು ಹೊತ್ತು ಕುಣಿದ ಪ್ರಭುಗಳ ಕುಟುಂಬ ದೇಶದಲ್ಲಿ ಸಂವಿಧಾನ ಜಾರಿಯಾಗಲು ಬಿಡಲಿಲ್ಲ, ಕಾಕತಾಳೀಯವೆಂಬಂತೆ ಇಂದು ಭಾರತದಲ್ಲಿ ಕಾಂಗ್ರೆಸ್ ದುರ್ಬಲವಾಗುತ್ತಿದೆ. ತಮಾಷೆ ಎಂದರೆ ಇಲ್ಲಿ ಕಾಂಗ್ರೆಸ್ ಸಾಯುತ್ತಿದೆ ಮತ್ತು ಅಲ್ಲಿ ಪಾಕಿಸ್ತಾನ ಅಳುತ್ತಿದೆ. ಈಗ ಪಾಕಿಸ್ತಾನದ ನಾಯಕರು ಕಾಂಗ್ರೆಸ್‌ಗಾಗಿ ಪ್ರಾರ್ಥಿಸುತ್ತಿದ್ದಾರೆ ಎಂದು ಹೇಳಿದರು.

ಮತ್ತಷ್ಟು ಓದಿ: ಇಲ್ಲಿ ಕಾಂಗ್ರೆಸ್​ ಸಾಯುತ್ತಿದೆ, ಅಲ್ಲಿ ಪಾಕಿಸ್ತಾನ ಅಳುತ್ತಿದೆ: ಪ್ರಧಾನಿ ಮೋದಿ

ಕಾಂಗ್ರೆಸ್​ ಸರ್ಕಾರ ನಮ್ಮ ದೇಶದಲ್ಲಿದ್ದ ವರ್ಷಗಳಲ್ಲಿ ದೊಡ್ಡ ರೌಡಿಯಂತೆ ವರ್ತಿಸಿತ್ತು, ಆದರೆ ಈಗ ಭಯೋತ್ಪಾದನೆಯ ಟೈರ್ ಪಂಕ್ಚರ್ ಆಗಿದೆ. ಒಂದು ಕಾಲದಲ್ಲಿ ಭಯೋತ್ಪಾದಕರನ್ನು ರಫ್ತು ಮಾಡುತ್ತಿದ್ದ ದೇಶ ಈಗ ಹಿಟ್ಟು ಆಮದು ಮಾಡಿಕೊಳ್ಳುತ್ತಿದೆ, ಕೈಯಲ್ಲಿ ಬಾಂಬ್​ ಹಿಡಿದಿದ್ದವರು ಇಂದು ಭಿಕ್ಷಾ ಪಾತ್ರೆ ಹಿಡಿದಿದ್ದಾರೆ ಎಂದು ಮೋದಿ ಹೇಳಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 2:07 pm, Thu, 2 May 24

Follow Us
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?