Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಂಗ್ರೆಸ್ ಮುಂದೆ​ ಮೂರು ಸವಾಲುಗಳೊಡ್ಡಿದ ಪ್ರಧಾನಿ ಮೋದಿ

ಪ್ರಧಾನಿ ನರೇಂದ್ರ ಮೋದಿ ಕಾಂಗ್ರೆಸ್​ ವಿರುದ್ಧ ವಾಗ್ದಾಳಿ ನಡೆಸಿದ್ದು, ಮೂರು ಸವಾಲುಗಳನ್ನು ಹಾಕಿದ್ದಾರೆ. ಅವರು ಸಂವಿಧಾನವನ್ನು ಬದಲಿಸಿ ಧರ್ಮದ ಆಧಾರದಲ್ಲಿ ಮುಸಲ್ಮಾನರಿಗೆ ರಕ್ಷಣೆ ನೀಡುವುದಿಲ್ಲ. ದೇಶವನ್ನು ಹಂಚಿಕೆ ಮಾಡುವ ಕೆಲಸವನ್ನು ಮಾಡುವುದಿಲ್ಲ ಎಂದು ಬರೆದುಕೊಡಬೇಕು.

Follow us
ನಯನಾ ರಾಜೀವ್
|

Updated on:May 03, 2024 | 11:04 AM

ಕಾಂಗ್ರೆಸ್​ಗೆ ಪ್ರಧಾನಿ ನರೇಂದ್ರ ಮೋದಿ(Narendra Modi) ಮೂರು ಸವಾಲುಗಳನ್ನು ಹಾಕಿದ್ದಾರೆ. ಗುಜರಾತ್​ನಲ್ಲಿ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್​ ಹಾಗೂ ಅವರ ಚೇಲಾಗಳು ದೇಶಕ್ಕೆ ಲಿಖಿತ ರೂಪದಲ್ಲಿ ಗ್ಯಾರಂಟಿ ನೀಡಬೇಕು. ಅವರು ಸಂವಿಧಾನವನ್ನು ಬದಲಿಸಿ ಧರ್ಮದ ಆಧಾರದಲ್ಲಿ ಮುಸಲ್ಮಾನರಿಗೆ ರಕ್ಷಣೆ ನೀಡುವುದಿಲ್ಲ. ದೇಶವನ್ನು ಹಂಚಿಕೆ ಮಾಡುವ ಕೆಲಸವನ್ನು ಮಾಡುವುದಿಲ್ಲ ಎಂದು ಬರೆದುಕೊಡಬೇಕು.

ಎರಡನೆಯದಾಗಿ ಎಸ್​ಸಿ, ಎಸ್​ಟಿ, ಒಬಿಸಿಗೆ ಸಿಗುವ ಮೀಸಲಾತಿಯಲ್ಲಿ ಬದಲಾವಣೆ ಮಾಡಿ ಅವರ ಅಧಿಕಾರವನ್ನು ಕಸಿದುಕೊಳ್ಳುವ ಪ್ರಯತ್ನ ಮಾಡುವುದಿಲ್ಲ ಎಂದು ಲಿಖಿತವಾಗಿ ಬರೆದುಕೊಡಬೇಕು. ಮೂರನೆಯದಾಗಿ ಯಾವ ಯಾವ ರಾಜ್ಯಗಳಲ್ಲಿ ಕಾಂಗ್ರೆಸ್​ ಹಾಗೂ ಅವರ ಮೈತ್ರಿ ಸರ್ಕಾರವಿದೆ ಅಲ್ಲಿ ಜನರ ಹಕ್ಕುಗಳನ್ನು ಕಸಿದುಕೊಳ್ಳುವ ಪ್ರಯತ್ನ ಮಾಡುವುದಿಲ್ಲ, ಯಾವುದೇ ತಾರತಮ್ಯ ಮಾಡದೆ ಹಿಂಬಾಗಲಿನಿಂದ ಒಬಿಸಿ ಕೋಟಾವನ್ನು ಮುಸ್ಲಿಮರಿಗೆ ಕೊಡುವ ಕೆಲಸ ಮಾಡುವುದಿಲ್ಲ ಎಂದು ಬರೆದುಕೊಡಬೇಕೆಂದರು.

ಮೋದಿ ಬದುಕಿರುವವರೆಗೂ ಸಂವಿಧಾನದ ಹೆಸರಿನಲ್ಲಿ ಮೀಸಲಾತಿಯ ಆಟವಾಡಲು ನಾನು ಬಿಡುವುದಿಲ್ಲ. ಮೋದಿ ಬರುವ ಮೊದಲು ಎರಡು ಸಂವಿಧಾನಗಳಿದ್ದವು, ಎರಡು ಧ್ವಜಗಳಿದ್ದವು, ಈ ಸಂವಿಧಾನವನ್ನು ಹೊತ್ತು ಕುಣಿದ ಪ್ರಭುಗಳ ಕುಟುಂಬ ದೇಶದಲ್ಲಿ ಸಂವಿಧಾನ ಜಾರಿಯಾಗಲು ಬಿಡಲಿಲ್ಲ, ಕಾಕತಾಳೀಯವೆಂಬಂತೆ ಇಂದು ಭಾರತದಲ್ಲಿ ಕಾಂಗ್ರೆಸ್ ದುರ್ಬಲವಾಗುತ್ತಿದೆ. ತಮಾಷೆ ಎಂದರೆ ಇಲ್ಲಿ ಕಾಂಗ್ರೆಸ್ ಸಾಯುತ್ತಿದೆ ಮತ್ತು ಅಲ್ಲಿ ಪಾಕಿಸ್ತಾನ ಅಳುತ್ತಿದೆ. ಈಗ ಪಾಕಿಸ್ತಾನದ ನಾಯಕರು ಕಾಂಗ್ರೆಸ್‌ಗಾಗಿ ಪ್ರಾರ್ಥಿಸುತ್ತಿದ್ದಾರೆ ಎಂದು ಹೇಳಿದರು.

ಮತ್ತಷ್ಟು ಓದಿ: ಇಲ್ಲಿ ಕಾಂಗ್ರೆಸ್​ ಸಾಯುತ್ತಿದೆ, ಅಲ್ಲಿ ಪಾಕಿಸ್ತಾನ ಅಳುತ್ತಿದೆ: ಪ್ರಧಾನಿ ಮೋದಿ

ಕಾಂಗ್ರೆಸ್​ ಸರ್ಕಾರ ನಮ್ಮ ದೇಶದಲ್ಲಿದ್ದ ವರ್ಷಗಳಲ್ಲಿ ದೊಡ್ಡ ರೌಡಿಯಂತೆ ವರ್ತಿಸಿತ್ತು, ಆದರೆ ಈಗ ಭಯೋತ್ಪಾದನೆಯ ಟೈರ್ ಪಂಕ್ಚರ್ ಆಗಿದೆ. ಒಂದು ಕಾಲದಲ್ಲಿ ಭಯೋತ್ಪಾದಕರನ್ನು ರಫ್ತು ಮಾಡುತ್ತಿದ್ದ ದೇಶ ಈಗ ಹಿಟ್ಟು ಆಮದು ಮಾಡಿಕೊಳ್ಳುತ್ತಿದೆ, ಕೈಯಲ್ಲಿ ಬಾಂಬ್​ ಹಿಡಿದಿದ್ದವರು ಇಂದು ಭಿಕ್ಷಾ ಪಾತ್ರೆ ಹಿಡಿದಿದ್ದಾರೆ ಎಂದು ಮೋದಿ ಹೇಳಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 2:07 pm, Thu, 2 May 24

ದಿನನಿತ್ಯ ತುಪ್ಪ ಸೇವನೆಯಿಂದ ಏನೆಲ್ಲಾ ಲಾಭಗಳಿವೆ ಗೊತ್ತಾ? ವಿಡಿಯೋ ನೋಡಿ
ದಿನನಿತ್ಯ ತುಪ್ಪ ಸೇವನೆಯಿಂದ ಏನೆಲ್ಲಾ ಲಾಭಗಳಿವೆ ಗೊತ್ತಾ? ವಿಡಿಯೋ ನೋಡಿ
Horoscope: ಸೂರ್ಯ ಮೇಷ ರಾಶಿಯಲ್ಲಿ, ಚಂದ್ರ ಧನುಸ್ಸು ರಾಶಿಯಲ್ಲಿ ಸಂಚಾರ
Horoscope: ಸೂರ್ಯ ಮೇಷ ರಾಶಿಯಲ್ಲಿ, ಚಂದ್ರ ಧನುಸ್ಸು ರಾಶಿಯಲ್ಲಿ ಸಂಚಾರ
ನಾಯಿ ನಮಗಿಂತಲೂ ಚೆನ್ನಾಗಿ ಆಕ್ಟ್ ಮಾಡಿದೆ: ರಚನಾ ಇಂದರ್
ನಾಯಿ ನಮಗಿಂತಲೂ ಚೆನ್ನಾಗಿ ಆಕ್ಟ್ ಮಾಡಿದೆ: ರಚನಾ ಇಂದರ್
ಮಾಲೂರು ಆಸ್ಪತ್ರೆ ಸಿಬ್ಬಂದಿ ಪೋನ್​ ಪೇ ವಹಿವಾಟು ನೋಡಿ ದಂಗಾದ ಉಪ ಲೋಕಾಯುಕ್ತ
ಮಾಲೂರು ಆಸ್ಪತ್ರೆ ಸಿಬ್ಬಂದಿ ಪೋನ್​ ಪೇ ವಹಿವಾಟು ನೋಡಿ ದಂಗಾದ ಉಪ ಲೋಕಾಯುಕ್ತ
ನೀರಿಗಾಗಿ ಪ್ರಾಣ ಕಳೆದುಕೊಂಡ ಕೋತಿ ಮರಿ: ಇಲ್ಲಿದೆ ಮನಕಲಕುವ ದೃಶ್ಯ
ನೀರಿಗಾಗಿ ಪ್ರಾಣ ಕಳೆದುಕೊಂಡ ಕೋತಿ ಮರಿ: ಇಲ್ಲಿದೆ ಮನಕಲಕುವ ದೃಶ್ಯ
ರೋಹಿತ್ ಶರ್ಮಾಗೆ ಬಿಸಿಸಿಐನಿಂದ ವಿಶೇಷ ಗೌರವ; ವಿಡಿಯೋ ನೋಡಿ
ರೋಹಿತ್ ಶರ್ಮಾಗೆ ಬಿಸಿಸಿಐನಿಂದ ವಿಶೇಷ ಗೌರವ; ವಿಡಿಯೋ ನೋಡಿ
ಬುಸ್ ಬುಸ್ ನಾಗಪ್ಪನಿಂದ ಬೈಕ್ ಸವಾರ ಬಚಾವ್: ಎದೆ ಝಲ್​ ಎನ್ನಿಸುವ ವಿಡಿಯೋ
ಬುಸ್ ಬುಸ್ ನಾಗಪ್ಪನಿಂದ ಬೈಕ್ ಸವಾರ ಬಚಾವ್: ಎದೆ ಝಲ್​ ಎನ್ನಿಸುವ ವಿಡಿಯೋ
‘ಹಾಯ್ ಜನರೇ’: ರೀಲ್ಸ್ ಮಾತ್ರವಲ್ಲ ಈಗ ಸಿನಿಮಾಕ್ಕೂ ಬಂದ ಕಿಪಿ ಕೀರ್ತಿ
‘ಹಾಯ್ ಜನರೇ’: ರೀಲ್ಸ್ ಮಾತ್ರವಲ್ಲ ಈಗ ಸಿನಿಮಾಕ್ಕೂ ಬಂದ ಕಿಪಿ ಕೀರ್ತಿ
ವರದಿಯ ಬಗ್ಗೆ ಸಿಎಂ ಎಲ್ಲರ ಅಭಿಪ್ರಾಯ ಕೇಳಿದ್ದಾರೆ: ರಾಮಲಿಂಗಾರೆಡ್ಡಿ
ವರದಿಯ ಬಗ್ಗೆ ಸಿಎಂ ಎಲ್ಲರ ಅಭಿಪ್ರಾಯ ಕೇಳಿದ್ದಾರೆ: ರಾಮಲಿಂಗಾರೆಡ್ಡಿ
ಬಿಜೆಪಿಯನ್ನು ಬಹುಮತದೊಂದಿಗೆ ಅಧಿಕಾರಕ್ಕೆ ತರೋದು ಎಲ್ಲರ ಸಂಕಲ್ಪ: ವಿಜಯೇಂದ್ರ
ಬಿಜೆಪಿಯನ್ನು ಬಹುಮತದೊಂದಿಗೆ ಅಧಿಕಾರಕ್ಕೆ ತರೋದು ಎಲ್ಲರ ಸಂಕಲ್ಪ: ವಿಜಯೇಂದ್ರ