AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆ ಮಹಿಳೆ ಮನೆಯಲ್ಲಿ ಟಾಯ್ಲೆಟ್​​ಗೆ ಅಂತಾ ಒಳಹೋದಾಗ, ಈ ಕಳ್ಳ ಏನು ಮಾಡಿದ ನೋಡಿ!

ಗುಂಟೂರಿನಲ್ಲಿ ಕಳ್ಳ ಮನೆಗೆ ನುಗ್ಗಿ ಚಿನ್ನಾಭರಣ ದೋಚಿರುವುದನ್ನು ಕಂಡು ದಂಪತಿ ಪೊಲೀಸರಿಗೆ ದೂರು ನೀಡಿದ್ದಾರೆ. ಸ್ಥಳಕ್ಕಾಗಮಿಸಿದ ಪೊಲೀಸರು ತಾಂತ್ರಿಕ ಸಾಕ್ಷ್ಯ ಸಂಗ್ರಹಿಸಿದ್ದಾರೆ. ಸದ್ಯದಲ್ಲೇ ಕಳ್ಳನನ್ನು ಹಿಡಿಯುತ್ತೇವೆ ಎಂದು ಪೊಲೀಸರು ತಿಳಿಸಿದ್ದಾರೆ. ಆದರೆ, ಈ ಘಟನೆ ಸ್ಥಳೀಯವಾಗಿ ಸಂಚಲನ ಮೂಡಿಸಿದೆ.

ಆ ಮಹಿಳೆ ಮನೆಯಲ್ಲಿ ಟಾಯ್ಲೆಟ್​​ಗೆ ಅಂತಾ ಒಳಹೋದಾಗ, ಈ ಕಳ್ಳ ಏನು ಮಾಡಿದ ನೋಡಿ!
ಆ ಮಹಿಳೆ ಟಾಯ್ಲೆಟ್​​ಗೆ ಅಂತಾ ಒಳಹೋದಾಗ...ಕಳ್ಳ ಏನು ಮಾಡಿದ ನೋಡಿ!
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Sep 28, 2023 | 4:43 PM

Share

ಗುಂಟೂರು, ಸೆಪ್ಟೆಂಬರ್ 28: ಕಳ್ಳರ ಬುದ್ದಿವಂತಿಕೆ ಮಾಮೂಲಿಯಲ್ಲ.. ಕಳ್ಳತನಕ್ಕೆ ಏನೆಲ್ಲಾ ಪ್ಲಾನ್ ಮಾಡುತ್ತಾರೆ ನೋಡಿ.. ಕಳ್ಳರ ಬುದ್ದಿವಂತಿಕೆ ಮಾಮೂಲಿಯಲ್ಲ.. ಕಳ್ಳತನಕ್ಕೆ ಎಂತೆಂಥಾ ಪ್ಲಾನ್ ಮಾಡುತ್ತಾರೆ ನೋಡಿ. ಅದರಲ್ಲೂ ಬಂಗಾರದ ಬೆಲೆ ಜಾಸ್ತಿಯಾಗಿರುವುದರಿಂದ ಕಳ್ಳರು ಚಿನ್ನಾಭರಣ ಕದಿಯಲು ವಿನೂತನ ವಿಧಾನಗಳನ್ನು ಅನುಸರಿಸುತ್ತಿದ್ದಾರೆ. ಹೊಸ ರೀತಿಯಲ್ಲಿ ಕಳ್ಳತನ ಮಾಡಲಾಗುತ್ತಿದೆ. ಪೊಲೀಸರ ಕಣ್ಗಾವಲು ಎಷ್ಟು ಹೆಚ್ಚಿದೆಯೋ ಅದೇ ಮಟ್ಟದಲ್ಲಿ ಕಳ್ಳರು ಕೂಡ ಹೊಸ ವಿಧಾನಗಳನ್ನು ಆರಿಸಿಕೊಳ್ಳುತ್ತಿದ್ದಾರೆ. ಗುಂಟೂರಿನಲ್ಲಿ ಇದೇ ರೀತಿಯ ಕಳ್ಳತನ ನಡೆದಿದೆ.

ಗುಂಟೂರಿನಲ್ಲಿ ಬುಧವಾರ ಮಧ್ಯಾಹ್ನ ರಸ್ತೆಗಳು ನಿರ್ಜನವಾಗಿದ್ದವು. ಬಿಸಿಲು ತುಂಬಾ ತೀವ್ರವಾಗಿತ್ತು. ಚಂದ್ರಮೌಳಿ ನಗರದಲ್ಲಿ ಮೋಹನ್ ರೆಡ್ಡಿ ಮತ್ತು ಅನುರಾಧ ದಂಪತಿ ವಾಸವಿದ್ದಾರೆ. ಮಧ್ಯಾಹ್ನ ಮನೆಯಲ್ಲಿ ಅನುರಾಧಳನ್ನು ಬಿಟ್ಟರೆ ಯಾರೂ ಇಲ್ಲ. ಇನ್ನು ಮೋಹನ್ ರೆಡ್ಡಿ ಮಿರ್ಚಿ ಯಾರ್ಡ್​​​ನಲ್ಲಿ ಕೆಲಸ ಮಾಡುತ್ತಿದ್ದು, ಅಲ್ಲಿಗೆ ಹೋಗಿದ್ದಾರೆ. ಮಕ್ಕಳು ಕಾಲೇಜಿಗೆ ಹೋಗಿದ್ದರಿಂದ ಅನುರಾಧ ಒಬ್ಬಳೇ ಮನೆಯಲ್ಲಿದ್ದಳು.

ಈ ವೇಳೆ ಅನುರಾಧ ಬಾತ್ ರೂಮ್ ಗೆ ಹೋಗಿದ್ದಾರೆ. ಬಾತ್ ರೂಮಿಗೆ ಹೋಗುವ ಮುನ್ನ ಮನೆ ಬಾಗಿಲು ಮುಚ್ಚಲು ಮರೆತಿದ್ದರು. ಅದೇ ವೇಳೆಯಲ್ಲಿ ಅನುರಾಧ ಟಾಯ್ಲೆಟ್​​​ಗೆ ಹೋಗುವುದನ್ನು ಕಂಡ ಕಳ್ಳ ಮನೆಗೆ ನುಗ್ಗಿದ್ದಾನೆ. ಮನೆಯೊಳಗೆ ಬೀರುವಿನಲ್ಲಿದ್ದ ಎರಡೂವರೆ ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣಗಳನ್ನು ತೆಗೆದುಕೊಂಡು ಅಲ್ಲಿಂದ ಸೈಲೆಂಟಾಗಿ ಪರಾರಿಯಾಗಿದ್ದಾನೆ. ಹೋಗುವ ಮುನ್ನ ಬಾತ್ ರೂಂ ಬಾಗಿಲು ಬಂದ್​ ಮಾಡಿಟ್ಟು ಹೋಗಿದ್ದಾನೆ.

ಸ್ವಲ್ಪ ಸಮಯದ ನಂತರ ಅನುರಾಧ ಹೊರಬರಲು ಯತ್ನಿಸಿದ್ದಾರೆ. ಆದರೆ ಹೊರಗಿನಿಂದ ಬಾತ್ ರೂಂ ಬಾಗಿಲು ಬಂದ್​ ಆಗಿತ್ತು. ಆಗ ಕಿರುಚಿಕೊಂಡಿದ್ದಾರೆ. ಪಕ್ಕದ ಅಪಾರ್ಟ್‌ಮೆಂಟ್‌ನ ವಾಚ್‌ಮನ್.. ಅನುರಾಧಾಳ ಅಳು ಕೂಗಾಟ ಕೇಳಿ ಮನೆಯೊಳಗೆ ಬಂದಿದ್ದಾನೆ. ಅನುರಾಧ ಬಾತ್ ರೂಂನಿಂದ ಕಿರುಚುತ್ತಿರುವುದನ್ನು ಕಂಡು ಅಲ್ಲಿಗೆ ಹೋಗಿ ನೋಡಿದರೆ ಹೊರಗಿನಿಂದ ಚಿಲುಕ ಹಾಕಿರುವುದು ಕಂಡುಬಂದಿದೆ.

ಆಗ ವಾಚ್​​ಮನ್​​ ಚಿಲಕ ತೆಗೆಯುತ್ತಿದ್ದಂತೆ ಅನುರಾದ ತಕ್ಷಣ ಹೊರಗೆ ಬಂದಿದ್ದಾರೆ. ಬಾತ್ ರೂಂನಿಂದ ಹೊರ ಬಂದ ಅನುರಾಧ ಅನುಮಾನಗೊಂಡು ರೂಮಿನೊಳಕ್ಕೆ ಹೋಗಿ ನೋಡಿದಾಗ ಬಾಗಿಲು ಹಾಕಿರುವುದು ಕಂಡು ಬಂದಿದೆ. ಬೀರುವನ್ನು ಪರಿಶೀಲಿಸಲಾಗಿ ಎರಡೂವರೆ ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣಗಳು ನಾಪತ್ತೆಯಾಗಿರುವುದು ಕಂಡುಬಂದಿದೆ.

ಕಳ್ಳ ಮನೆಗೆ ನುಗ್ಗಿ ಚಿನ್ನಾಭರಣ ದೋಚಿರುವುದನ್ನು ಕಂಡು ದಂಪತಿ ಪೊಲೀಸರಿಗೆ ದೂರು ನೀಡಿದ್ದಾರೆ. ಸ್ಥಳಕ್ಕಾಗಮಿಸಿದ ಪೊಲೀಸರು ತಾಂತ್ರಿಕ ಸಾಕ್ಷ್ಯ ಸಂಗ್ರಹಿಸಿದ್ದಾರೆ. ಸದ್ಯದಲ್ಲೇ ಕಳ್ಳನನ್ನು ಹಿಡಿಯುತ್ತೇವೆ ಎಂದು ಪೊಲೀಸರು ತಿಳಿಸಿದ್ದಾರೆ. ಆದರೆ, ಈ ಘಟನೆ ಸ್ಥಳೀಯವಾಗಿ ಸಂಚಲನ ಮೂಡಿಸಿದೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

ಸಿದ್ದರಾಮಯ್ಯ ಹಾಗೂ ವಿದೇಶಾಂಗ ಸಚಿವ ಎಸ್ ಜೈಶಂಕರ್ ಆಕಸ್ಮಿಕ ಭೇಟಿ!
ಸಿದ್ದರಾಮಯ್ಯ ಹಾಗೂ ವಿದೇಶಾಂಗ ಸಚಿವ ಎಸ್ ಜೈಶಂಕರ್ ಆಕಸ್ಮಿಕ ಭೇಟಿ!
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್