ಕಳೆದ 24 ಗಂಟೆಯಲ್ಲಿ ಕೊರೊನಾದಿಂದ 1,341 ಜನರು ಮೃತಪಟ್ಟಿದ್ದು, ಒಟ್ಟೂ ಸಾವಿನ ಸಂಖ್ಯೆ 1,75,649ಕ್ಕೆ ತಲುಪಿದೆ ಎಂದು ಆರೋಗ್ಯ ಇಲಾಖೆ ಮಾಹಿತಿ ಬಿಡುಗಡೆ ಮಾಡಿದೆ. ಹಾಗೇ, ಕಳೆದೊಂದು ದಿನದಲ್ಲಿ 1,23,354 ಮಂದಿ ಕೊರೊನಾದಿಂದ ಚೇತರಿಸಿಕೊಂಡು ಡಿಸ್ಚಾರ್ಜ್ ಆಗಿದ್ದಾರೆ. ಅಲ್ಲಿಗೆ ದೇಶದಲ್ಲಿ ಕೊರೊನಾದಿಂದ ಗುಣಮುಖರಾದವರ ಒಟ್ಟು ಸಂಖ್ಯೆ 1,26,71,220 ಆಗಿದೆ. ಕೊರೊನಾ ಸಕ್ರಿಯ ಪ್ರಕರಣಗಳು 16,79,740 ಇವೆ.
ಕೊರೊನಾ ಎರಡನೇ ಅಲೆಯಲ್ಲಿ ಸೋಂಕು ಅತಿ ವೇಗವಾಗಿ ಹರಡುತ್ತಿರುವುದು ಆತಂಕ ತಂದಿದೆ. ಕರ್ನಾಟಕ ಸೇರಿ ಅನೇಕ ರಾಜ್ಯಗಳಲ್ಲಿ ಕಠಿಣ ನಿಯಮಗಳನ್ನು ಜಾರಿಗೊಳಿಸಲಾಗಿದೆ. ಇತ್ತೀಚೆಗೆ ಶುರುವಾದ ಕುಂಭಮೇಳ ಕೊರೊನಾ ಹಾಟ್ಸ್ಪಾಟ್ ಆಗಿ ಬದಲಾಗಿದ್ದು, 80ಕ್ಕೂ ಹೆಚ್ಚು ಸಾಧುಗಳಿಗೆ ಸೋಂಕು ತಗುಲಿದೆ. ಈ ಬಾರಿ ಕುಂಭಮೇಳ ಆಚರಣೆ ಸರಳವಾಗಿದ್ದರೆ ಸಾಕು ಪ್ರಧಾನಿ ನರೇಂದ್ರ ಮೋದಿಯವರು ಟ್ವೀಟ್ ಮಾಡಿದ್ದಾರೆ.
ಇದನ್ನೂ ಓದಿ: ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿಗೆ ಕೊರೊನಾ ಸೋಂಕು ದೃಢ
ಮಂಗಳಮುಖಿಯರೂ ಯಾಕೆ ಕಮ್ಮಿ ಅಂತ ಚುನಾವಣೆಗೆ ಸ್ಪರ್ಧಿಸಿದ ಮಂಗಳಮುಖಿ ದೀಕ್ಷಾ