AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತದಲ್ಲಿ ಕೊರೊನಾ 2ನೇ ಅಲೆ ಕೊನೆ ಯಾವಾಗ? ಮೂರನೇ ಅಲೆಯ ಪ್ರಾರಂಭಕ್ಕೆ ಇನ್ನೆಷ್ಟು ತಿಂಗಳು ಬಾಕಿ?-ಇಲ್ಲಿದೆ ನೋಡಿ ತಜ್ಞರು ನೀಡಿದ ವರದಿ

ತಮಿಳುನಾಡಿನಲ್ಲಿ ಮೇ 29ರಿಂದ 31ರ ಮಧ್ಯದಲ್ಲಿ ಒಮ್ಮೆ ಕೊರೊನಾ ಸೋಂಕಿತರ ಸಂಖ್ಯೆ ಉಲ್ಬಣವಾಗುತ್ತದೆ ಎಂದು ಸಮಿತಿಯ ಸದಸ್ಯರಲ್ಲಿ ಒಬ್ಬರಾದ ಐಐಟಿ ಕಾನ್ಪುರದ ಪ್ರೊಫರೆಸರ್​ ಮನೀಂದ್ರಾ ಅಗರ್​ವಾಲ್​ ತಿಳಿಸಿದ್ದಾರೆ.

ಭಾರತದಲ್ಲಿ ಕೊರೊನಾ 2ನೇ ಅಲೆ ಕೊನೆ ಯಾವಾಗ? ಮೂರನೇ ಅಲೆಯ ಪ್ರಾರಂಭಕ್ಕೆ ಇನ್ನೆಷ್ಟು ತಿಂಗಳು ಬಾಕಿ?-ಇಲ್ಲಿದೆ ನೋಡಿ ತಜ್ಞರು ನೀಡಿದ ವರದಿ
ಪ್ರಾತಿನಿಧಿಕ ಚಿತ್ರ
Lakshmi Hegde
|

Updated on: May 19, 2021 | 9:15 PM

Share

ಭಾರತದಲ್ಲಿ ಸದ್ಯ ಕೊರೊನಾ ಎರಡನೇ ಅಲೆ ಸಿಕ್ಕಾಪಟೆ ಉಲ್ಬಣಕ್ಕೇರಿದ್ದು, ಇದು ಜುಲೈ ವೇಳೆಗೆ ತಗ್ಗಲಿದೆ. ಹಾಗೇ ಅದಾದ 6-8ತಿಂಗಳಲ್ಲಿ ಮತ್ತೆ ಮೂರನೇ ಅಲೆ ಶುರುವಾಗಲಿದೆ ಎಂದು ಕೇಂದ್ರ ವಿಜ್ಞಾನ ಸಚಿವಾಲಯದ ವಿಜ್ಞಾನ ಮತ್ತು ತಂತ್ರಜ್ಞಾನ ವಿಭಾಗದಿಂದ ರಚಿಸಲ್ಪಟ್ಟ ಮೂವರು ವಿಜ್ಞಾನಿಗಳ ಸಮಿತಿ ವರದಿ ನೀಡಿದೆ. ಮೇ ಅಂತ್ಯದ ಹೊತ್ತಿಗೆ ದೇಶದಲ್ಲಿ ಒಂದು ದಿನಕ್ಕೆ 1.5 ಲಕ್ಷ ಕೊರೊನಾ ಪ್ರಕರಣಗಳು ದಾಖಲಾಗುತ್ತವೆ. ಜೂನ್​ ಅಂತ್ಯದ ಹೊತ್ತಿಗೆ ದಿನವೊಂದಕ್ಕೆ ದಾಖಲಾಗುವ ಕೊರೊನಾ ಕೇಸ್​ಗಳ ಸಂಖ್ಯೆ ಸುಮಾರು 20,000 ಕ್ಕೆ ಇಳಿಯುತ್ತದೆ ಎಂದೂ ಈ ತಜ್ಞರ ಸಮಿತಿ ತನ್ನ ವರದಿಯಲ್ಲಿ ತಿಳಿಸಿದೆ.

ಇನ್ನು ಮಹಾರಾಷ್ಟ್ರ, ಉತ್ತರಪ್ರದೇಶ, ಕರ್ನಾಟಕ, ಮಧ್ಯಪ್ರದೇಶ, ಜಾರ್ಖಂಡ, ರಾಜಸ್ಥಾನ, ಕೇರಳ, ಉತ್ತರಾಖಂಡ್​, ಗುಜರಾತ್​, ಹರ್ಯಾಣ, ದೆಹಲಿ, ಗೋವಾ ರಾಜ್ಯಗಳಲ್ಲಿ ಅದಾಗಲೇ ಕೊರೊನಾ ಉತ್ತುಂಗಕ್ಕೆ ತಲುಪಿದೆ. ಇದರ ಹೊರತಾಗಿ, ತಮಿಳುನಾಡಿನಲ್ಲಿ ಮೇ 29ರಿಂದ 31ರ ಮಧ್ಯದಲ್ಲಿ ಒಮ್ಮೆ ಕೊರೊನಾ ಸೋಂಕಿತರ ಸಂಖ್ಯೆ ಉಲ್ಬಣವಾಗುತ್ತದೆ ಎಂದು ಸಮಿತಿಯ ಸದಸ್ಯರಲ್ಲಿ ಒಬ್ಬರಾದ ಐಐಟಿ ಕಾನ್ಪುರದ ಪ್ರೊಫರೆಸರ್​ ಮನೀಂದ್ರಾ ಅಗರ್​ವಾಲ್​ ತಿಳಿಸಿದ್ದಾರೆ. ಇನ್ನು ಅಸ್ಸಾಂನಲ್ಲಿ 20-21ರಂದು, ಮೇಘಾಲಯದಲ್ಲಿ ಮೇ 30ರಹೊತ್ತಿಗೆ ಹಾಗೇ ತ್ರಿಪುರದಲ್ಲಿ ಮೇ 26-27ರ ಹೊತ್ತಿಗೆ ಕೊರೊನಾ ಉಲ್ಬಣಗೊಳ್ಳಲಿದೆ ಎಂದೂ ಹೇಳಿದ್ದಾರೆ.

ಕೊರೊನಾದ ಮೂರನೇ ಅಲೆ ಸುಮಾರು 6-8ತಿಂಗಳು ಬಿಟ್ಟು ಮತ್ತೊಮ್ಮೆ ಅಬ್ಬರಿಸಲಿದೆ. ಈಗೇನಾಗುತ್ತಿದೆಯೋ ಅದೇ ಮರುಕಳಿಸುತ್ತದೆ. ಅಕ್ಟೋಬರ್​ವರೆಗೆ ಖಂಡಿತ ಮೂರನೇ ಅಲೆಯ ಭಯ ಇಲ್ಲ ಎಂದೂ ತಜ್ಞರ ಸಮಿತಿ ಅಭಿಪ್ರಾಯ ಪಟ್ಟಿದೆ. ಹಾಗಾಗಿ ಕೊರೊನಾ ಎರಡನೇ ಅಲೆ ಮುಗಿದರೂ ಮುನ್ನೆಚ್ಚರಿಕೆ ವಹಿಸಬೇಕು ಎಂದೂ ಹೇಳಿದ್ದಾರೆ.

ಇದನ್ನೂ ಓದಿ: ರೆಮಿಡಿಸಿವಿರ್ ಆಯ್ತು, ಈಗ ಬ್ಲ್ಯಾಕ್ ಫಂಗಸ್ ಚಿಕಿತ್ಸೆಗೆ ಅಂಫೋಟೆರಿಸಿನ್ ಬಿ ಇಂಜೆಕ್ಷನ್ ಸಹ ಸಿಗುತ್ತಿಲ್ಲ!

In India Covid 19 second wave to end in July third wave after 6 months report by Experts

ಬೆಂಗಳೂರು ಶಾಸಕರ ಜತೆ ಪ್ರತ್ಯೇಕ ಸಭೆ ನಡೆಸಿದೆ ಡಿಕೆಶಿ ಹೇಳಿದ್ದೇನು ನೋಡಿ
ಬೆಂಗಳೂರು ಶಾಸಕರ ಜತೆ ಪ್ರತ್ಯೇಕ ಸಭೆ ನಡೆಸಿದೆ ಡಿಕೆಶಿ ಹೇಳಿದ್ದೇನು ನೋಡಿ
Daily Devotional: ಶಿಶು ಮರಣಕ್ಕೆ ಶ್ರಾದ್ಧ ಕಾರ್ಯ ಮಾಡಬೇಕಾ?
Daily Devotional: ಶಿಶು ಮರಣಕ್ಕೆ ಶ್ರಾದ್ಧ ಕಾರ್ಯ ಮಾಡಬೇಕಾ?
Daily horoscope: ರವಿ ಕರ್ಕಾಟಕ ರಾಶಿಯಲ್ಲಿ, ಚಂದ್ರ ಮೀನ ರಾಶಿಯಲ್ಲಿ ಸಂಚಾರ
Daily horoscope: ರವಿ ಕರ್ಕಾಟಕ ರಾಶಿಯಲ್ಲಿ, ಚಂದ್ರ ಮೀನ ರಾಶಿಯಲ್ಲಿ ಸಂಚಾರ
2 ಅಂಕ ಕಡಿಮೆ ಬಂದಿದ್ದಕ್ಕೆ ಶಿಕ್ಷಕಿಯನ್ನು ಚಪ್ಪಲಿಯಿಂದ ಥಳಿಸಿದ ವಿದ್ಯಾರ್ಥಿ
2 ಅಂಕ ಕಡಿಮೆ ಬಂದಿದ್ದಕ್ಕೆ ಶಿಕ್ಷಕಿಯನ್ನು ಚಪ್ಪಲಿಯಿಂದ ಥಳಿಸಿದ ವಿದ್ಯಾರ್ಥಿ
ವಿಷ್ಣುವರ್ಧನ್ ಸಮಾಧಿ ನೆಲಸಮ: ನಿಖಿಲ್ ಕುಮಾರಸ್ವಾಮಿ ಪ್ರತಿಕ್ರಿಯೆ ಏನು?
ವಿಷ್ಣುವರ್ಧನ್ ಸಮಾಧಿ ನೆಲಸಮ: ನಿಖಿಲ್ ಕುಮಾರಸ್ವಾಮಿ ಪ್ರತಿಕ್ರಿಯೆ ಏನು?
ಸೋರುತಿಹುದು ಸಾರಿಗೆ ಬಸ್ ಮೇಲ್ಚಾವಣಿ, ಛತ್ರಿ ಹಿಡಿದು ಕುಳಿತ ಪ್ರಯಾಣಿಕ
ಸೋರುತಿಹುದು ಸಾರಿಗೆ ಬಸ್ ಮೇಲ್ಚಾವಣಿ, ಛತ್ರಿ ಹಿಡಿದು ಕುಳಿತ ಪ್ರಯಾಣಿಕ
ವಿಷ್ಣುವರ್ಧನ್ ಸಮಾಧಿ ಬಗ್ಗೆ ಅಂಬಿ ಮನೆಯಲ್ಲಿ ಸಭೆ ನಡೆದಾಗ ಏನೆಲ್ಲ ಆಯ್ತು?
ವಿಷ್ಣುವರ್ಧನ್ ಸಮಾಧಿ ಬಗ್ಗೆ ಅಂಬಿ ಮನೆಯಲ್ಲಿ ಸಭೆ ನಡೆದಾಗ ಏನೆಲ್ಲ ಆಯ್ತು?
ಮೈಸೂರಿನಲ್ಲಿ ವಿಷ್ಣು ಸ್ಮಾರಕ ನಿರ್ಮಾಣಕ್ಕೆ ಕುಟುಂಬ ಒಪ್ಪಿದ್ದೇಕೆ?
ಮೈಸೂರಿನಲ್ಲಿ ವಿಷ್ಣು ಸ್ಮಾರಕ ನಿರ್ಮಾಣಕ್ಕೆ ಕುಟುಂಬ ಒಪ್ಪಿದ್ದೇಕೆ?
ಕಾಂಗ್ರೆಸ್ ನಾಯಕರಿಗೆ ಸುಧಾಕರ್ ಏಳ್ಗೆ ಸಹಿಸಲಾಗುತ್ತಿಲ್ಲ: ವಿಜಯೇಂದ್ರ
ಕಾಂಗ್ರೆಸ್ ನಾಯಕರಿಗೆ ಸುಧಾಕರ್ ಏಳ್ಗೆ ಸಹಿಸಲಾಗುತ್ತಿಲ್ಲ: ವಿಜಯೇಂದ್ರ
ಸಿಎಂ, ಡಿಸಿಎಂ ಮತ್ತು ಹೆಚ್​ಎಂ ನಾಡಿನ ಬೇಷರತ್ ಕ್ಷಮೆ ಕೇಳಬೇಕು: ಸುರೇಶ್
ಸಿಎಂ, ಡಿಸಿಎಂ ಮತ್ತು ಹೆಚ್​ಎಂ ನಾಡಿನ ಬೇಷರತ್ ಕ್ಷಮೆ ಕೇಳಬೇಕು: ಸುರೇಶ್