AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಧ್ಯಪ್ರದೇಶ: ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಕಂದಾಯ ಇಲಾಖೆ ಸಿಬ್ಬಂದಿ, ಸಾಕ್ಷ್ಯ ನಾಶ ಮಾಡಲು ಹಣವನ್ನೇ ನುಂಗಿದ!

ಬರ್ಖೇಡಾ ಗ್ರಾಮದ ವ್ಯಕ್ತಿಯೊಬ್ಬರು ಸಿಂಗ್ ಲಂಚ ಕೇಳುತ್ತಿದ್ದಾರೆ ಎಂದು ನಮಗೆ ದೂರು ನೀಡಿದ್ದರು. ಹಣವನ್ನು ಸ್ವೀಕರಿಸಿದ ಪಟ್ವಾರಿ ಎಸ್‌ಪಿಇ ತಂಡವನ್ನು ಕಂಡೊಡನೇ ಹಣವನ್ನು ನುಂಗಿದರು. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರು ಆರೋಗ್ಯವಾಗಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.

ಮಧ್ಯಪ್ರದೇಶ: ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಕಂದಾಯ ಇಲಾಖೆ ಸಿಬ್ಬಂದಿ, ಸಾಕ್ಷ್ಯ ನಾಶ ಮಾಡಲು ಹಣವನ್ನೇ ನುಂಗಿದ!
ಗಜೇಂದ್ರ ಸಿಂಗ್
ರಶ್ಮಿ ಕಲ್ಲಕಟ್ಟ
|

Updated on: Jul 25, 2023 | 2:39 PM

Share

ಭೋಪಾಲ್  ಜುಲೈ 25: ಮಧ್ಯಪ್ರದೇಶದ (Madhya Pradesh) ಕಟ್ನಿಯಲ್ಲಿ ಕಂದಾಯ ಇಲಾಖೆಯ ಪಟ್ವಾರಿ (ಕಡತಗಳ ದಾಖಲೆ ಇಟ್ಟುಕೊಳ್ಳುವವರು) ಲಂಚ (Bribe) ಸ್ವೀಕರಿಸುತ್ತಿರುವಾಗ ಲೋಕಾಯುಕ್ತ ವಿಶೇಷ ಪೊಲೀಸ್ (SPE) ತಂಡ ರೆಡ್ ಹ್ಯಾಂಡ್ ಆಗಿ ಹಿಡಿದಿದೆ. ಈ ವೇಳೆ ಸಾಕ್ಷ್ಯ ನಾಶಪಡಿಸಲು ಈ ವ್ಯಕ್ತಿ ಲಂಚವಾಗಿ ತೆಗೆದುಕೊಂಡ ಹಣವನ್ನು ನುಂಗಿರುವ ಘಟನೆ ಸೋಮವಾರ ನಡೆದಿದೆ.

ಪಟ್ವಾರಿ ಗಜೇಂದ್ರ ಸಿಂಗ್ ಅವರು ತಮ್ಮ ಖಾಸಗಿ ಕಚೇರಿಯಲ್ಲಿ 4,500 ರೂಪಾಯಿಗಳನ್ನು ಲಂಚವಾಗಿ ಸ್ವೀಕರಿಸುತ್ತಿರುವಾಗ ಎಸ್‌ಪಿಇಯ ಬಲೆಗೆ ಬಿದ್ದಿದ್ದಾರೆ. ಪೊಲೀಸ್ ತಂಡವು ಅವರನ್ನು ಕಚೇರಿಯಿಂದ ಹೊರಗೆ ಕರೆದೊಯ್ಯುವಾಗ ಸಿಂಗ್ ಬ್ಯಾಂಕ್ ನೋಟುಗಳನ್ನು ಜಗಿದು ನುಂಗಿದ್ದಾರೆ. ಈ ಘಟನೆಯ ಹಲವಾರು ವಿಡಿಯೊಗಳು ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿವೆ.

ಸಿಂಗ್ ಹಣವನ್ನು ನುಂಗಿದ ನಂತರ, ಪೊಲೀಸರು ಅವರನ್ನು ಆಸ್ಪತ್ರೆಗೆ ಕರೆದೊಯ್ದು ವೈದ್ಯರ ಸಹಾಯದಿಂದ ಸಾಕ್ಷ್ಯವನ್ನು ಸಂಗ್ರಹಿಸಿದರು.

ಬರ್ಖೇಡಾ ಗ್ರಾಮದ ವ್ಯಕ್ತಿಯೊಬ್ಬರು ಸಿಂಗ್ ಲಂಚ ಕೇಳುತ್ತಿದ್ದಾರೆ ಎಂದು ನಮಗೆ ದೂರು ನೀಡಿದ್ದರು. ಹಣವನ್ನು ಸ್ವೀಕರಿಸಿದ ಪಟ್ವಾರಿ ಎಸ್‌ಪಿಇ ತಂಡವನ್ನು ಕಂಡೊಡನೇ ಹಣವನ್ನು ನುಂಗಿದರು. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರು ಆರೋಗ್ಯವಾಗಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ ಎಂದು ಎಸ್‌ಪಿಇ ಪೊಲೀಸ್ ವರಿಷ್ಠಾಧಿಕಾರಿ ಸಂಜಯ್ ಸಾಹು ತಿಳಿಸಿದ್ದಾರೆ.

ಇದನ್ನೂ ಓದಿ: ಇಂಡಿಯನ್ ಮುಜಾಹಿದ್ದೀನ್, ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಇದೆಲ್ಲದರಲ್ಲೂ ಇಂಡಿಯಾ ಇದೆ; ಪ್ರತಿಪಕ್ಷಗಳ ‘ಇಂಡಿಯಾ’ ಒಕ್ಕೂಟ ಬಗ್ಗೆ ಮೋದಿ ವಾಗ್ದಾಳಿ

ಆತನ ವಿರುದ್ಧ ಪ್ರಕರಣ ದಾಖಲಾಗಿದ್ದು, ಮುಂದಿನ ತನಿಖೆ ನಡೆಸಲಾಗುತ್ತಿದೆ ಎಂದು ಎಸ್ಪಿ ತಿಳಿಸಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ