Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಟಿಎಂನಲ್ಲಿ ಒಂದಕ್ಕೆ ಐದರಷ್ಟು ಹಣ: ಎಟಿಎಂ ಎದುರು ಮುಗಿಬಿದ್ದ ಗ್ರಾಹಕರು

ನೀವು 10000ರೂ. ನಗದು ಪಡೆಯಲು ಎಟಿಎಂಗೆ ಹೋಗಿ ಬದಲಾಗಿ ನಿಮಗೆ 50000ರೂ. ಸಿಕ್ಕರೆ ನೀವು ಏನು ಮಾಡುತ್ತೀರಿ? ಮತ್ತಷ್ಟು ಹಣವನ್ನು ಪಡೆಯಲು ಪ್ರಯತ್ನಿಸುತ್ತೀರಿ ಅಲ್ಲವೇ? ಮಹಾರಾಷ್ಟ್ರದ ನಾಗ್ಪುರ ಜಿಲ್ಲೆಯಲ್ಲಿ ಇಂತಹದ್ದೇ ಘಟನೆ ನಡೆದಿದೆ. ನಾಗ್ಪುರ ನಗರದಿಂದ ಸುಮಾರು 30 ಕಿಮೀ ದೂರದಲ್ಲಿರುವ ಖಪರ್ಖೇಡಾ ಪಟ್ಟಣದ ಖಾಸಗಿ ಬ್ಯಾಂಕ್‌ನ ಎಟಿಎಂನಲ್ಲಿ ಗ್ರಾಹಕರೊಬ್ಬರಿಗೆ 500 ರೂ ಬದಲಿಗೆ 500ರೂ. ಮುಖಬೆಲೆಯ 5 ನೋಟುಗಳು ದೊರೆತಿವೆ.

ಎಟಿಎಂನಲ್ಲಿ ಒಂದಕ್ಕೆ ಐದರಷ್ಟು ಹಣ: ಎಟಿಎಂ ಎದುರು ಮುಗಿಬಿದ್ದ ಗ್ರಾಹಕರು
ATMImage Credit source: NDTV
Follow us
TV9 Web
| Updated By: ನಯನಾ ರಾಜೀವ್

Updated on:Jun 16, 2022 | 12:18 PM

ನೀವು 10000ರೂ. ನಗದು ಪಡೆಯಲು ಎಟಿಎಂಗೆ ಹೋಗಿ ಬದಲಾಗಿ ನಿಮಗೆ 50000ರೂ. ಸಿಕ್ಕರೆ ಏನು ಮಾಡುತ್ತೀರಿ? ಮತ್ತಷ್ಟು ಹಣವನ್ನು ಪಡೆಯಲು ಪ್ರಯತ್ನಿಸುತ್ತೀರಿ ಅಲ್ಲವೇ?  ಮಹಾರಾಷ್ಟ್ರದ ನಾಗ್ಪುರ ಜಿಲ್ಲೆಯಲ್ಲಿ ಇಂತಹದ್ದೇ ಘಟನೆ ನಡೆದಿದೆ. ನಾಗ್ಪುರ ನಗರದಿಂದ ಸುಮಾರು 30 ಕಿಮೀ ದೂರದಲ್ಲಿರುವ ಖಪರ್ಖೇಡಾ ಪಟ್ಟಣದ ಖಾಸಗಿ ಬ್ಯಾಂಕ್‌ನ ಎಟಿಎಂನಲ್ಲಿ ಗ್ರಾಹಕರೊಬ್ಬರಿಗೆ 500 ರೂ ಬದಲಿಗೆ 500ರೂ. ಮುಖಬೆಲೆಯ 5 ನೋಟುಗಳು ದೊರೆತಿವೆ.

ಎಟಿಎಂನಿಂದ ಗ್ರಾಹಕರೊಬ್ಬರು 500 ಡ್ರಾ ಮಾಡಲು ಪ್ರಯತ್ನಿಸಿದಾಗ ಅವರಿಗೆ ಆಶ್ಚರ್ಯ ಕಾದಿತ್ತು, 500 ರೂ,ಗಳ ಬದಲು 2,500 ರೂ ಸಿಕ್ಕಿತ್ತು. ಈ ಸುದ್ದಿ ಕಾಳ್ಗಿಚ್ಚಿನಂತೆ ಎಲ್ಲೆಡೆ ಹರಡಿ ಕೆಲವೇ ನಿಮಿಷಗಳಲ್ಲಿ ಎಟಿಎಂ ಎದುರು ಗ್ರಾಹಕರ ಕ್ಯೂ ನಿಂತಿತ್ತು. ಬಳಿಕ ಗ್ರಾಹಕರೊಬ್ಬರು ಸ್ಥಳೀಯ ಪೊಲೀಸರಿಗೆ ಮಾಹಿತಿ ನೀಡಿದ್ದು ಪೊಲೀಸರು ಸ್ಥಳಕ್ಕಾಗಮಿಸಿ ಎಟಿಎಂ ಕೇದ್ರವನ್ನು ಮುಚ್ಚಿ ಬ್ಯಾಂಕ್​ಗೆ ಮಾಹಿತಿ ರವಾನಿಸಿದ್ದಾರೆ.

ತಾಂತ್ರಿಕ ದೋಷದಿಂದ ಎಟಿಎಂನಲ್ಲಿ ಹೆಚ್ಚಿನ ಹಣ ಬರುತ್ತಿತ್ತು, ಎಂದು ಖಪರ್ಖೇಡ ಪೊಲೀಸ್ ಠಾಣೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

100 ರೂ. ಇರಿಸುವ ಜಾಗದಲ್ಲಿ 500 ರೂ. ಇರಿಸಿದ್ದು, ಈ ಗೊಂದಲಕ್ಕೆ ಕಾರಣವಾಗಿದೆ. ಹಾಗಾಗಿ 500 ರೂ. ಎಂಟ್ರಿ ಮಾಡಿದಾಗ 100ರೂ. ಬದಲು 500 ರೂ. ಮುಖಬೆಲೆಯ 5 ನೋಟುಗಳು ಸಿಕ್ಕಿದ್ದವು.

ಈ ಘಟನೆಯ ಸಂಬಂಧ ಯಾವುದೇ ಪ್ರಕರಣ ದಾಖಲಾಗಿಲ್ಲ ಎನ್ನುವ ಮಾಹಿತಿಯನ್ನು ಪೊಲೀಸರು ನೀಡಿದ್ದಾರೆ.

ದೇಶದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 12:13 pm, Thu, 16 June 22

ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಪಕ್ಷದ ಸಂಘಟನೆ ವಿಜಯೇಂದ್ರ ನೇತೃತ್ವದಲ್ಲಿ ನಮ್ಮಆದ್ಯತೆಯಾಗಿದೆ: ಶ್ರೀರಾಮುಲು
ಪಕ್ಷದ ಸಂಘಟನೆ ವಿಜಯೇಂದ್ರ ನೇತೃತ್ವದಲ್ಲಿ ನಮ್ಮಆದ್ಯತೆಯಾಗಿದೆ: ಶ್ರೀರಾಮುಲು
ದೇಗುಲದ ಭಕ್ತಿಗೀತೆ ಸೌಂಡ್ ಕಡಿಮೆ ಮಾಡುವಂತೆ ಮುಸ್ಲಿಂ ಯುವಕರಿಂದ ಅವಾಜ್
ದೇಗುಲದ ಭಕ್ತಿಗೀತೆ ಸೌಂಡ್ ಕಡಿಮೆ ಮಾಡುವಂತೆ ಮುಸ್ಲಿಂ ಯುವಕರಿಂದ ಅವಾಜ್
ಅಬ್ಬಬ್ಬಾ ಚಿನ್ನವೋ ಚಿನ್ನ...ಬಂಗಾರದಂಗಡಿಯಾದ ದಾವಣಗೆರೆ ಎಸ್ಪಿ ಕಚೇರಿ!
ಅಬ್ಬಬ್ಬಾ ಚಿನ್ನವೋ ಚಿನ್ನ...ಬಂಗಾರದಂಗಡಿಯಾದ ದಾವಣಗೆರೆ ಎಸ್ಪಿ ಕಚೇರಿ!
ರಾಜ್ಯ ಘಟಕವನ್ನು ಯಡಿಯೂರಪ್ಪ ಕುಟುಂಬಕ್ಕೆ ಲೀಸ್​ಗೆ ನೀಡಿರುವಂತಿದೆ:ಯತ್ನಾಳ್
ರಾಜ್ಯ ಘಟಕವನ್ನು ಯಡಿಯೂರಪ್ಪ ಕುಟುಂಬಕ್ಕೆ ಲೀಸ್​ಗೆ ನೀಡಿರುವಂತಿದೆ:ಯತ್ನಾಳ್
ನಿವೃತ್ತಿ ಪ್ಲಾನ್ ಘೋಷಿಸಲು ಮೋದಿ ಆರ್‌ಎಸ್‌ಎಸ್ ಕಚೇರಿಗೆ ಭೇಟಿ;ಸಂಜಯ್ ರಾವತ್
ನಿವೃತ್ತಿ ಪ್ಲಾನ್ ಘೋಷಿಸಲು ಮೋದಿ ಆರ್‌ಎಸ್‌ಎಸ್ ಕಚೇರಿಗೆ ಭೇಟಿ;ಸಂಜಯ್ ರಾವತ್
ಮೊದಲ ಬಾರಿ ಶಾಸಕನಾದಾಗಿನಿಂದ ನಾನು ಪಕ್ಷದ ಶಿಸ್ತಿನ ಸಿಪಾಯಿ: ತುಕಾರಾಂ
ಮೊದಲ ಬಾರಿ ಶಾಸಕನಾದಾಗಿನಿಂದ ನಾನು ಪಕ್ಷದ ಶಿಸ್ತಿನ ಸಿಪಾಯಿ: ತುಕಾರಾಂ
ಯತ್ನಾಳ್ ಉಚ್ಚಾಟನೆಯಿಂದ ಉತ್ತರ ಕರ್ನಾಟಕದಲ್ಲಿ ಕಾಂಗ್ರೆಸ್​ಗೆ ಲಾಭ: ತಂಗಡಿಗಿ
ಯತ್ನಾಳ್ ಉಚ್ಚಾಟನೆಯಿಂದ ಉತ್ತರ ಕರ್ನಾಟಕದಲ್ಲಿ ಕಾಂಗ್ರೆಸ್​ಗೆ ಲಾಭ: ತಂಗಡಿಗಿ