AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಣಿಪುರ ಹಿಂಸಾಚಾರದ ವೇಳೆ ಸ್ವಾತಂತ್ರ್ಯ ಹೋರಾಟಗಾರನ ಪತ್ನಿ ಸಜೀವ ದಹನ

ಸ್ವಾತಂತ್ರ್ಯ ಹೋರಾಟಗಾರರ ಪತ್ನಿ 80 ವರ್ಷದ ಇಬೆತೊಂಬಿ ಮನೆಯೊಳಗೆ ಇದ್ದಾಗ ಆಕೆಯ ಗ್ರಾಮದ ಮೇಲೆ ದಾಳಿ ಮಾಡಿದವರು ಹೊರಗಿನಿಂದ ಬೀಗ ಹಾಕಿದ್ದರು. ಆನಂತರ ಮನೆಗೆ ಬೆಂಕಿ ಹಚ್ಚಲಾಗಿದೆ, ಕುಟುಂಬ ರಕ್ಷಿಸಲು ಬರುವಷ್ಟರಲ್ಲಿ ಬೆಂಕಿಯು ಸಂಪೂರ್ಣ ಕಟ್ಟಡವನ್ನು ಆವರಿಸಿದೆ ಎಂದು ಇಬೆಟೊಂಬಿಯ ಮೊಮ್ಮಗ 22ರ ಹರೆಯದ ಪ್ರೇಮಕಾಂತ ಹೇಳಿದ್ದಾರೆ.

ಮಣಿಪುರ ಹಿಂಸಾಚಾರದ ವೇಳೆ ಸ್ವಾತಂತ್ರ್ಯ ಹೋರಾಟಗಾರನ ಪತ್ನಿ ಸಜೀವ ದಹನ
ಮಣಿಪುರ ಹಿಂಸಾಚಾರ ವಿರೋಧಿಸಿ ಪ್ರತಿಭಟನೆ
ರಶ್ಮಿ ಕಲ್ಲಕಟ್ಟ
|

Updated on:Jul 22, 2023 | 9:01 PM

Share

ಸೆರೌ (ಕಾಕ್ಚಿಂಗ್) ಜುಲೈ 22: ಜನಾಂಗೀಯ ಹಿಂಸಾಚಾರ ಪೀಡಿತ ಮಣಿಪುರದಲ್ಲಿ (Manipur) ಮಹಿಳೆಯರ ಮೇಲಿನ ದೌರ್ಜನ್ಯದ ಕತೆ ಒಂದೊಂದೇ ವರದಿಯಾಗುತ್ತಿದೆ. ಬುಡಕಟ್ಟು ಮಹಿಳೆಯರನ್ನು ಪುರುಷರ ಗುಂಪೊಂದು ಬೆತ್ತಲೆಯಾಗಿ ಮೆರವಣಿಗೆ ಮಾಡಿದ ಘಟನೆ ಬೆನ್ನಲ್ಲೇ ಮತ್ತೊಂದು ಘಟನೆ ಬೆಚ್ಚಿಬೀಳಿಸುವಂತಿದೆ. ಕಾಕ್ಚಿಂಗ್ ಜಿಲ್ಲೆಯ ಸೆರೌ ಗ್ರಾಮದಲ್ಲಿ (Serou village) ಸ್ವಾತಂತ್ರ್ಯ ಹೋರಾಟಗಾರರೊಬ್ಬರ ಪತ್ನಿಯನ್ನು (80 ವರ್ಷ ವಯಸ್ಸು) ಮನೆಯೊಳಗೆ ಬೀಗ ಹಾಕಿ ಸಶಸ್ತ್ರ ಗುಂಪು ಬೆಂಕಿ ಹಚ್ಚಿದೆ ಎಂದು ಸೆರೌ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಮಹಿಳೆಯ ಪತಿ ಎಸ್ ಚುರಚಂದ್ ಸಿಂಗ್ (Churachand Singh) ಅವರು ಸ್ವಾತಂತ್ರ್ಯ ಹೋರಾಟಗಾರರಾಗಿದ್ದರು, ಅವರನ್ನು ಮಾಜಿ ರಾಷ್ಟ್ರಪತಿ ಎಪಿಜೆ ಅಬ್ದುಲ್ ಕಲಾಂ ಗೌರವಿಸಿದ್ದರು ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಈ ಘಟನೆಯು ಮೇ 28ರಂದು ಬೆಳಗ್ಗೆ ನಡೆದ್ದು, ಸೆರೌನಂತಹ ಸ್ಥಳಗಳಲ್ಲಿ ಭಾರಿ ಹಿಂಸಾಚಾರ ಮತ್ತು ಗುಂಡಿನ ಚಕಮಕಿಯನ್ನು ನಡೆದಿತ್ತು. ಮೇ 3 ರಂದು ಹಿಂಸಾಚಾರ ಪ್ರಾರಂಭವಾಗುವ ಮೊದಲು, ಸೆರೌ ರಾಜ್ಯ ರಾಜಧಾನಿ ಇಂಫಾಲ್‌ನಿಂದ ಸುಮಾರು 45 ಕಿಮೀ ದೂರದಲ್ಲಿರುವ ಒಂದು ಸುಂದರವಾದ ಗ್ರಾಮವಾಗಿತ್ತು. ಆದರೆ ಈಗ ಅಲ್ಲಿ ಸುಟ್ಟ ಮನೆಗಳು ಮತ್ತು ಗೋಡೆಗಳ ಮೇಲೆ ಗುಂಡಿನ ರಂಧ್ರಗಳು ಮಾತ್ರ ಉಳಿದಿವೆ ಎಂದು ಎನ್‌ಡಿಟಿವಿ ವರದಿ ಹೇಳಿದೆ

ಪರಿಶಿಷ್ಟ ಪಂಗಡಗಳ (ST) ಸ್ಥಾನಮಾನಕ್ಕಾಗಿ ಮೈತಿ ಬೇಡಿಕೆಯ ಮೇಲೆ ಕಣಿವೆಯ ಬಹುಸಂಖ್ಯಾತ ಮೈತಿ ಮತ್ತು ಬೆಟ್ಟದ ಬಹುಸಂಖ್ಯಾತ ಕುಕಿ ಬುಡಕಟ್ಟಿನ ನಡುವಿನ ಘರ್ಷಣೆಯ ಸಮಯದಲ್ಲಿ ಹೆಚ್ಚು ಹಾನಿಗೊಳಗಾದ ಹಳ್ಳಿಗಳಲ್ಲಿ ಇದೂ ಒಂದು.

ಸ್ವಾತಂತ್ರ್ಯ ಹೋರಾಟಗಾರರ ಪತ್ನಿ 80 ವರ್ಷದ ಇಬೆತೊಂಬಿ ಮನೆಯೊಳಗೆ ಇದ್ದಾಗ ಆಕೆಯ ಗ್ರಾಮದ ಮೇಲೆ ದಾಳಿ ಮಾಡಿದವರು ಹೊರಗಿನಿಂದ ಬೀಗ ಹಾಕಿದ್ದರು. ಆನಂತರ ಮನೆಗೆ ಬೆಂಕಿ ಹಚ್ಚಲಾಗಿದೆ, ಕುಟುಂಬ ರಕ್ಷಿಸಲು ಬರುವಷ್ಟರಲ್ಲಿ ಬೆಂಕಿಯು ಸಂಪೂರ್ಣ ಕಟ್ಟಡವನ್ನು ಆವರಿಸಿದೆ ಎಂದು ಇಬೆಟೊಂಬಿಯ ಮೊಮ್ಮಗ 22ರ ಹರೆಯದ ಪ್ರೇಮಕಾಂತ ಹೇಳಿದ್ದಾರೆ.

ಅಜ್ಜಿಯನ್ನು ಉಳಿಸಲು ಪ್ರಯತ್ನಿಸಿದಾಗ ಗುಂಡುಗಳು ತೋಳು ಮತ್ತು ತೊಡೆಗೆ ತಾಗಿತ್ತು. ನಾವು ದಾಳಿಗೆ ಒಳಗಾದಾಗ, ನನ್ನ ಅಜ್ಜಿ ನಮಗೆ ಈಗ ಓಡಿಹೋಗಿ ಸ್ವಲ್ಪ ಸಮಯದ ನಂತರ ಹಿಂತಿರುಗಿ ಬನ್ನಿ ಎಂದು ಹೇಳಿದ್ದರು.ನಾವು ಹೊರಡುವಾಗ ನನ್ನನ್ನು ಕರೆದೊಯ್ಯಲು ವಾಪಸ್ ಬನ್ನಿ ಎಂದು ಆಕೆ ಹೇಳಿದ್ದರು.ದುರದೃಷ್ಟವಶಾತ್ ಅದು ಅವರ ಕೊನೆಯ ಮಾತುಗಳಾಗಿತ್ತು. ಅಜ್ಜಿಗೆ ಓಡಲಾಗದ ಕಾರಣ ಮನೆಯಲ್ಲೇ ಬಾಕಿಯಾದರು ಅಂತಾರೆ ಮೊಮ್ಮಗ.

ಇದನ್ನೂ ಓದಿ: ಕಾರ್ಗಿಲ್ ಯುದ್ದದಲ್ಲಿ ಹೋರಾಡಿದ್ದೆ, ಆದರೆ ಮಣಿಪುರದಲ್ಲಿ ನನ್ನ ಪತ್ನಿಯನ್ನು ವಿವಸ್ತ್ರಗೊಳಿಸಿದಾಗ ಕಾಪಾಡಲು ನನ್ನಿಂದಾಗಲಿಲ್ಲ: ಕಣ್ಣೀರಿಟ್ಟ ಮಾಜಿ ಯೋಧ

ಜನಾಂಗೀಯ ಘರ್ಷಣೆಗಳು ಭುಗಿಲೆದ್ದ ಸುಮಾರು ಎರಡು ತಿಂಗಳ ನಂತರ, ಪ್ರೇಮಕಾಂತ ಅವರು ತಮ್ಮ ಮನೆಯಿದ್ದ ಜಾಗಕ್ಕೆ ಮರಳಿದ್ದಾರೆ.ಇನ್ನುಳಿದ ಅವಶೇಷ ವೆಂದರೆ ಇಬೆಟೊಂಬಿ ಅವರು ಬಹಳ ಪ್ರೀತಿಯಿಂದ ಹಿಡಿದಿದ್ದ ಅಮೂಲ್ಯವಾದ ಛಾಯಾಚಿತ್ರ. ಸ್ವಾತಂತ್ರ್ಯ ಹೋರಾಟಗಾರನಾದ ತನ್ನ ಪತಿ ರಾಷ್ಟ್ರಪತಿ ಎಪಿಜೆ ಅಬ್ದುಲ್ ಕಲಾಂ ಜತೆಗಿದ್ದ ಫೋಟೊ ಅದು.

ಹಳ್ಳಿಯಿಂದ ಸ್ವಲ್ಪ ದೂರದಲ್ಲಿರುವ ಸೆರೌ ಮಾರುಕಟ್ಟೆ ಬಿಕೋ ಅನ್ನುತ್ತಿದೆ. ಇಲ್ಲಿ ವ್ಯಾಪಾರ ಮಾಡಿ ವಾಸವಿದ್ದವರೆಲ್ಲ ಸ್ಥಳದಿಂದ ಗುಳೆ ಹೋಗಿದ್ದಾರೆ.ಈಗಲೂ ಸಹ ಈ ಪ್ರದೇಶದಲ್ಲಿ ಎರಡು ಸಮುದಾಯಗಳ ನಡುವೆ ಯಾವುದೇ ಹೊಸ ಘರ್ಷಣೆಯನ್ನು ತಡೆಯಲು ಭದ್ರತಾ ಪಡೆಗಳು ಕಟ್ಟೆಚ್ಚರದಲ್ಲಿವೆ. ಗ್ರಾಮಸ್ಥರು ದಾಳಿಯಿಂದ ತಮ್ಮನ್ನು ರಕ್ಷಿಸಿಕೊಳ್ಳಲು ನೋಡುವುದರಿಂದ ಚಲನೆಯ ಮೇಲೆ ನಿರ್ಬಂಧಗಳಿವೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 8:56 pm, Sat, 22 July 23

ಪೊಲೀಸಪ್ಪನ ಜತೆ ಓಡಿಹೋಗಿದ್ದ ಮೋನಿಕಾಳ ಅಸಲಿಯತ್ತು ಬಯಲು
ಪೊಲೀಸಪ್ಪನ ಜತೆ ಓಡಿಹೋಗಿದ್ದ ಮೋನಿಕಾಳ ಅಸಲಿಯತ್ತು ಬಯಲು
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?