AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Coronavirus India Update: 3.86 ಲಕ್ಷ ಹೊಸ ಕೊವಿಡ್ ಪ್ರಕರಣಗಳೊಂದಿಗೆ ದಾಖಲೆ ಬರೆದ ಭಾರತ , ಒಂದೇದಿನ 3,498 ಮಂದಿ ಸಾವು

Covid 19 in India: ದೇಶದಲ್ಲಿ ಕೊವಿಡ್ ರೋಗಿಗಳ ಸಂಖ್ಯೆ 1.87 ಕೋಟಿ ತಲುಪಿದೆ. 31 ಲಕ್ಷಕ್ಕಿಂತಲೂ ಹೆಚ್ಚು ಸಕ್ರಿಯ ಪ್ರಕರಣಗಳು ಇಲ್ಲಿದ್ದು 1.53 ಕೋಟಿ ಜನರು ರೋಗದಿಂದ ಚೇತರಿಸಿಕೊಂಡಿದ್ದಾರೆ. ಆದಾಗ್ಯೂ ,ದೇಶದಲ್ಲಿ ಒಂದೇ ದಿನ 3,498 ಮಂದಿ ಸಾವಿಗೀಡಾಗಿದ್ದು, ಸಾವಿನ ಸಂಖ್ಯೆ 2.08 ಲಕ್ಷಕ್ಕೆ ತಲುಪಿದೆ.

Coronavirus India Update: 3.86 ಲಕ್ಷ ಹೊಸ ಕೊವಿಡ್ ಪ್ರಕರಣಗಳೊಂದಿಗೆ ದಾಖಲೆ ಬರೆದ ಭಾರತ , ಒಂದೇದಿನ 3,498 ಮಂದಿ ಸಾವು
ಪ್ರಾತಿನಿಧಿಕ ಚಿತ್ರ
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ|

Updated on:Apr 30, 2021 | 11:10 AM

Share

ದೆಹಲಿ: ಕೊರೊನಾವೈರಸ್ ಸೋಂಕು ವ್ಯಾಪಕವಾಗಿ ಹರಡುತ್ತಿದ್ದು ಎರಡನೇ ಅಲೆ ಅತೀ ಗಂಭೀರ ಸ್ವರೂಪ ತಾಳುತ್ತಿದೆ . ಕಳೆದ 24 ಗಂಟೆಗಳಲ್ಲಿ 3.86 ಲಕ್ಷ ಹೊಸ ಕೊವಿಡ್ ಪ್ರಕರಣ ಪತ್ತೆಯಾಗಿದ್ದು, ಸಾಂಕ್ರಾಮಿಕ ರೋಗ ಆರಂಭವಾದಂದಿನಿಂದ ಇಲ್ಲಿಯವರೆಗೆ ಅತೀ ಹೆಚ್ಚು ರೋಗ ಪ್ರಕರಣಗಳು ಗುರುವಾರ ಪತ್ತೆಯಾಗಿದೆ. ದೇಶದಲ್ಲಿ ಕೊವಿಡ್ ರೋಗಿಗಳ ಸಂಖ್ಯೆ 1.87 ಕೋಟಿ ತಲುಪಿದೆ. 31 ಲಕ್ಷಕ್ಕಿಂತಲೂ ಹೆಚ್ಚು ಸಕ್ರಿಯ ಪ್ರಕರಣಗಳು ಇಲ್ಲಿದ್ದು 1.53 ಕೋಟಿ ಜನರು ರೋಗದಿಂದ ಚೇತರಿಸಿಕೊಂಡಿದ್ದಾರೆ. ಆದಾಗ್ಯೂ ,ದೇಶದಲ್ಲಿ ಒಂದೇ ದಿನ 3,498 ಮಂದಿ ಸಾವಿಗೀಡಾಗಿದ್ದು, ಸಾವಿನ ಸಂಖ್ಯೆ 2.08 ಲಕ್ಷಕ್ಕೆ ತಲುಪಿದೆ.

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಗುರುವಾರ 395 ಮಂದಿ ಸಾವಿಗೀಡಾಗಿದ್ದು ಕೊವಿಡ್ ಪ್ರಕರಣಗಳ ಸಂಖ್ಯೆ 24, 235ಕ್ಕೇರಿದೆ. ದೆಹಲಿಯ ಆರೋಗ್ಯ ಸಚಿವಾಲಯದ ಮಾಹಿತಿ ಪ್ರಕಾರ ಇಲ್ಲಿ 32.82 ಪಾಸಿಟಿವಿಟಿ ದರ ಇದೆ. ಕೊವಿಡ್ ಸೋಂಕಿತರ ಸಂಖ್ಯೆ 11,22,286 ಆಗಿದ್ದು, 10.08ಲಕ್ಷಕ್ಕಿಂತ ಹೆಚ್ಚು ಮಂದಿ ಚೇತರಿಸಿಕೊಂಡಿದ್ದಾರೆ. ಈವರೆಗೆ ಮೃತಪಟ್ಟವರ ಸಂಖ್ಯೆ 15,772 ಆಗಿದೆ.

ಕೊವಿಡ್ ರೋಗ ನಿಯಂತ್ರಣಕ್ಕಾಗಿ ಕಟ್ಟು ನಿಟ್ಟಿನ ಕ್ರಮಗಳನ್ನು ಕೈಗೊಳ್ಳಿ ಎಂದು ಕೇಂದ್ರ ಸರ್ಕಾರ ರಾಜ್ಯ ಸರ್ಕಾರಗಳಿಗೆ ನಿರ್ದೇಶನ ನೀಡಿದೆ.

ಮಹಾರಾಷ್ಟ್ರದಲ್ಲಿ ಕೊವಿಡ್ ನಿರ್ಬಂಧಗಳನ್ನು ಮೇ 15ರವರೆಗೆ ವಿಸ್ತರಿಸಲಾಗಿದೆ. ಈ ಬಗ್ಗೆ ಪ್ರಕಟಣೆ ಹೊರಡಿಸಿದ ರಾಜ್ಯ ಸರ್ಕಾರ ವಿಪತ್ತು ನಿರ್ವಹಣಾ ಕಾಯ್ದೆ 2005 ಪ್ರಕಾರ ಪ್ರಸರಣ ಸರಪಳಿಯನ್ನು ಪರಿಣಾಮಕಾರಿಯಾಗಿ ಬ್ರೇಕ್ ಮಾಡಲು 2021 ರ ಮೇ 1 ರಂದು ಬೆಳಿಗ್ಗೆ 7 ಗಂಟೆಗೆಯಿಂದ 2021 ಮೇ 15 ರಂದು ಬೆಳಿಗ್ಗೆ 7 ಗಂಟೆಯವರೆಗೆ ರಾಜ್ಯದಾದ್ಯಂತ ಪ್ರಸ್ತುತ ನಿರ್ಬಂಧಗಳ ಜಾರಿಗೊಳಿಸುವಿಕೆಯನ್ನು ಮುಂದುವರಿಸುವುದು ಅವಶ್ಯಕ ಎಂದು ಹೇಳಿದೆ.

ಒಂದು ಪ್ರಮುಖ ಬೆಳವಣಿಗೆಯಲ್ಲಿ, ಭಾರತ್ ಬಯೋಟೆಕ್ ಗುರುವಾರ ಕೋವಾಕ್ಸಿನ್ ರಾಜ್ಯ ಸರ್ಕಾರಗಳಿಗೆ ಪ್ರತಿ ಡೋಸ್‌ಗೆ 400 ರೂ.ಗಳ ದರದಲ್ಲಿ ಲಭ್ಯವಾಗಲಿದೆ ಎಂದು ಘೋಷಿಸಿತು. ಈ ಹಿಂದೆ ಲಸಿಕೆಯ ಬೆಲೆಯನ್ನು ರಾಜ್ಯ ಸರ್ಕಾರಗಳಿಗೆ ಪ್ರತಿ ಡೋಸ್‌ಗೆ 600 ರೂಗೆ ನೀಡುವುದಾಗಿ ಹೇಳಿತ್ತು. ಸಾರ್ವಜನಿಕ ಆರೋಗ್ಯ ವ್ಯವಸ್ಥೆಗೆ ಆಗಿರುವ ಅಗಾಧ ಸವಾಲುಗಳನ್ನು ಗುರುತಿಸಿ, ನಾವು ಕೊವಾಕ್ಸಿನ್ ಅನ್ನು ರಾಜ್ಯ ಸರ್ಕಾರಗಳಿಗೆ ಡೋಸ್ ಗೆ 400 ರೂ ದರದಲ್ಲಿ ನೀಡಲಿದ್ದೇವೆ ಎಂದು ಭಾರತ್ ಬಯೋಟೆಕ್ ತಮ್ಮ ಪ್ರಕಟಣೆಯಲ್ಲಿ ತಿಳಿಸಿದೆ.

18 ರಿಂದ 45 ವರ್ಷದೊಳಗಿನ ಎಲ್ಲ ವಯಸ್ಕರನ್ನು ಒಳಗೊಳ್ಳುವ ರಾಷ್ಟ್ರವ್ಯಾಪಿ ಕೊರೊನಾವೈರಸ್ ಲಸಿಕೆ ಅಭಿಯಾನತದ ಮುಂದಿನ ಹಂತಕ್ಕಾಗಿ ಕೋ-ವಿನ್ ಪ್ಲಾಟ್‌ಫಾರ್ಮ್‌ನಲ್ಲಿ ಸುಮಾರು 1.33 ಕೋಟಿ ಜನರು ಹೆಸರ ನೋಂದಾಯಿಸಿಕೊಂಡಿದ್ದಾರೆ.

ಇದನ್ನೂ ಓದಿ: Covid-19 Karnataka Update: ಕರ್ನಾಟಕದಲ್ಲಿ ಇಂದು 35,024 ಮಂದಿಗೆ ಕೊರೊನಾ ಸೋಂಕು, 270 ಸಾವು

ಲಸಿಕೆಗಾಗಿ 18-45 ವರ್ಷದವರು ನಾಳೆ ಆಸ್ಪತ್ರೆಗೆ ಹೋಗಬೇಡಿ, ಅಧಿಕೃತವಾಗಿ ಹೇಳೋ ತನಕ ಕಾಯಬೇಕು: ಡಾ.ಸುಧಾಕರ್

(In new record high India reported 3.86 lakh new Covid-19 cases 3498 deaths in the last 24 hours)

Published On - 10:35 am, Fri, 30 April 21

Follow Us
Rashmi Kallakatta
Rashmi Kallakatta

ಊರು ಕಾಸರಗೋಡು. ಓದಿದ್ದು ಇಂಜಿನಿಯರಿಂಗ್, ಪಬ್ಲಿಕ್ ಅಡ್ಮಿನಿಸ್ಟ್ರೇಷನ್ ಮತ್ತು ಇಂಗ್ಲಿಷ್ ಸ್ನಾತಕೋತ್ತರ ಪದವಿ. ಕನ್ನಡಪ್ರಭ, ಪ್ರಜಾವಾಣಿ ಡಿಜಿಟಲ್ ಮತ್ತು ಪ್ರಿಂಟ್ ವಿಭಾಗದಲ್ಲಿ ಕೆಲಸದ ಅನುಭವ. ಬ್ಲಾಗರ್, ಸಾಹಿತ್ಯ ಪ್ರೇಮಿ. ಇಲ್ಲಿವರೆಗೆ 2 ಪುಸ್ತಕಗಳು ಪ್ರಕಟವಾಗಿವೆ. ಕಲೆ,ಸಾಹಿತ್ಯ,ತಂತ್ರಜ್ಞಾನ,ಸಂದರ್ಶನ, ಫ್ಯಾಕ್ಟ್ ಚೆಕಿಂಗ್ ಆಸಕ್ತಿಕರ ವಿಷಯಗಳು. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷ ಅನುಭವ

‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!