AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಸತ್ ಹೊರಗೆ ರಾಹುಲ್ ಗಾಂಧಿಯ ಚಹಾ-ಪಕೋಡ ಪ್ರತಿಭಟನೆಗೆ ಮಾಜಿ ಅಧಿಕಾರಿಗಳ ವಿರೋಧ; ಕ್ಷಮೆ ಯಾಚನೆಗೆ ಒತ್ತಾಯ

ಲೋಕಸಭಾ ಅಧಿವೇಶನದ ವೇಳೆ 5 ದಿನಗಳ ಹಿಂದೆ ಸಂಸತ್ ಹೊರಗೆ ಕಾಂಗ್ರೆಸ್ ನಾಯಕ ಹಾಗೂ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯ ನೇತೃತ್ವದಲ್ಲಿ ಎಲ್​ಪಿಜಿ ಬಿಕ್ಕಟ್ಟನ್ನು ವಿರೋಧಿಸಿ ಪ್ರತಿಭಟನೆ ನಡೆಸಲಾಗಿತ್ತು. ಈ 'ಚಾಯ್-ಪಕೋಡ' ಪ್ರತಿಭಟನೆಗೆ ಸಂಬಂಧಿಸಿದಂತೆ ರಾಹುಲ್ ಗಾಂಧಿ ದೇಶದ ಕ್ಷಮೆ ಯಾಚಿಸಬೇಕೆಂದು ಒತ್ತಾಯಿಸಿ 204 ಮಾಜಿ ಅಧಿಕಾರಿಗಳು ಸಹಿ ಮಾಡಿ ಬಹಿರಂಗ ಪತ್ರ ಬರೆದಿದ್ದಾರೆ. ಸ್ಪೀಕರ್ ನೀಡಿದ ಸ್ಪಷ್ಟ ಸೂಚನೆಯನ್ನು ನಿರ್ಲಕ್ಷ್ಯಿಸಿದ ರಾಹುಲ್ ಗಾಂಧಿ ವಿರುದ್ಧ ಪತ್ರದಲ್ಲಿ ಆಕ್ರೋಶ ಹೊರಹಾಕಲಾಗಿದೆ.

ಸಂಸತ್ ಹೊರಗೆ ರಾಹುಲ್ ಗಾಂಧಿಯ ಚಹಾ-ಪಕೋಡ ಪ್ರತಿಭಟನೆಗೆ ಮಾಜಿ ಅಧಿಕಾರಿಗಳ ವಿರೋಧ; ಕ್ಷಮೆ ಯಾಚನೆಗೆ ಒತ್ತಾಯ
Rahul Gandhi Protest Outside The ParliamentImage Credit source: PTI
ಸುಷ್ಮಾ ಚಕ್ರೆ
|

Updated on: Mar 17, 2026 | 3:19 PM

Share

ನವದೆಹಲಿ, ಮಾರ್ಚ್ 17: ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ (Rahul Gandhi) ಮಾರ್ಚ್ 12ರಂದು ಅಧಿವೇಶನದ (Parliament Session) ವೇಳೆ ಸಂಸತ್ತಿನ ಪ್ರವೇಶದ್ವಾರದಲ್ಲಿ ಕುಳಿತು ವಿಪಕ್ಷದ ಸಂಸದರೊಂದಿಗೆ ಚಹಾ ಮತ್ತು ಪಕೋಡ ಸೇವಿಸಿ ಪ್ರತಿಭಟನೆ ನಡೆಸಿದ ಘಟನೆಗೆ ಬಹಿರಂಗವಾಗಿ ಕ್ಷಮೆಯಾಚಿಸಬೇಕೆಂದು 204 ಮಾಜಿ ಅಧಿಕಾರಿಗಳು ಪತ್ರ ಬರೆದಿದ್ದಾರೆ. “ಮಾರ್ಚ್ 12ರ ಘಟನೆ ತೀವ್ರ ಕಳವಳಕಾರಿ ಮತ್ತು ಉದ್ದೇಶಪೂರ್ವಕವಾಗಿ ಸಂಸದೀಯ ಅಧಿಕಾರದ ನಿರ್ಲಕ್ಷ್ಯ ಮಾಡಲಾಗಿದೆ” ಎಂದು ಸಹಿದಾರರು ಆರೋಪಿಸಿದ್ದಾರೆ.

ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಮತ್ತು ಇತರೆ ವಿಪಕ್ಷ ನಾಯಕರ ಇತ್ತೀಚಿನ ನಡವಳಿಕೆಯನ್ನು ಖಂಡಿಸಿ 204 ಮಾಜಿ ಮಿಲಿಟರಿ ಅಧಿಕಾರಿಗಳು, ನಿವೃತ್ತ ನ್ಯಾಯಾಧೀಶರು ಮತ್ತು ಹಿರಿಯ ಸರ್ಕಾರಿ ಅಧಿಕಾರಿಗಳು ಬಹಿರಂಗ ಪತ್ರ ಬರೆದಿದ್ದಾರೆ. ಪತ್ರದ ಸಂಯೋಜಕರಾದ ಜಮ್ಮು ಮತ್ತು ಕಾಶ್ಮೀರದ ಮಾಜಿ ಡಿಜಿಪಿ ಎಸ್‌ಪಿ ವೈದ್, ಈ ಘಟನೆಯು ಭಾರತದ ಅತ್ಯುನ್ನತ ಪ್ರಜಾಪ್ರಭುತ್ವ ಸಂಸ್ಥೆಯ ಘನತೆ ಮತ್ತು ಸಾಂವಿಧಾನಿಕ ನೈತಿಕತೆಗೆ ಸವಾಲನ್ನು ಒಡ್ಡುತ್ತದೆ ಎಂದು ಟೀಕಿಸಿದ್ದಾರೆ.

ಇದನ್ನೂ ಓದಿ: ಪಕ್ಷಪಾತ ಮಾಡಿಲ್ಲ, ಸದನಕ್ಕಿಂತ ವಿಪಕ್ಷ ನಾಯಕ ಮೇಲಲ್ಲ; ರಾಹುಲ್ ಗಾಂಧಿಗೆ ಸ್ಪೀಕರ್ ಓಂ ಬಿರ್ಲಾ ತಿರುಗೇಟು

ಮಾರ್ಚ್ 12ರಂದು ರಾಹುಲ್ ಗಾಂಧಿ ನೇತೃತ್ವದಲ್ಲಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಸಂಕೀರ್ಣದಲ್ಲಿ ಸ್ಪೀಕರ್ ಅವರ ಸ್ಪಷ್ಟ ಸೂಚನೆಗಳನ್ನು ನಿರ್ಲಕ್ಷಿಸಿದ್ದರು. ಅವರು ಸಂಸತ್ತಿನ ಮೆಟ್ಟಿಲುಗಳ ಮೇಲೆ ಕುಳಿತು ಚಹಾ ಮತ್ತು ಪಕೋಡ, ಬಿಸ್ಕತ್ ಸೇವಿಸಿದರು. ಇದು ರಾಷ್ಟ್ರದ ಅತ್ಯುನ್ನತ ಶಾಸಕಾಂಗ ಸಂಸ್ಥೆಯಲ್ಲಿ ಅನುಚಿತ ಮತ್ತು ಅಸಂಸದೀಯ ನಡವಳಿಕೆಯನ್ನು ಸೂಚಿಸುತ್ತದೆ ಎಂದು ಪತ್ರದಲ್ಲಿ ಹೇಳಲಾಗಿದೆ.

ರಾಹುಲ್ ಗಾಂಧಿ ಈ ವರ್ತನೆಗಾಗಿ ರಾಷ್ಟ್ರದ ಕ್ಷಮೆಯಾಚಿಸಬೇಕು. ಸಂಸತ್ತಿನ ಘನತೆ, ಅಧಿಕಾರ ಮತ್ತು ಸಾಂಸ್ಥಿಕ ಪಾವಿತ್ರ್ಯವನ್ನು ಕಾಪಾಡಲು ಆತ್ಮಾವಲೋಕನ ಮಾಡಿಕೊಳ್ಳಬೇಕು ಎಂದು ಮಾಜಿ ಅಧಿಕಾರಿಗಳು ಮತ್ತು ನ್ಯಾಯಾಧೀಶರು ಸ್ಪಷ್ಟವಾಗಿ ಹೇಳಿದ್ದಾರೆ. ಪ್ರಜಾಪ್ರಭುತ್ವ ಸಂಸ್ಥೆಗಳಿಗೆ ಮಾಡಲಾಗುವ ಇಂತಹ ನಿರಂತರ ಅಗೌರವವು ಸಂಸತ್ತಿನ ವಿಶ್ವಾಸಾರ್ಹತೆಯನ್ನು ಹಾಳು ಮಾಡುವುದಲ್ಲದೆ, ಪ್ರಜಾಪ್ರಭುತ್ವದ ಅಡಿಪಾಯವನ್ನು ಅಲುಗಾಡಿಸುವ ಬೆದರಿಕೆ ಹಾಕುತ್ತದೆ ಎಂದು ಪತ್ರವು ಎಚ್ಚರಿಸಿದೆ.

ಇದನ್ನೂ ಓದಿ: ರಾಜ್ಯಸಭೆಯಲ್ಲಿ ಪ್ರಧಾನಿ ಮೋದಿ ಭಾಷಣ ಮಾಡುವಾಗಲೇ ವಿಪಕ್ಷದಿಂದ ಸಭಾತ್ಯಾಗ, ಸಂಸತ್ ಹೊರಗೆ ಪ್ರತಿಭಟನೆ

ಈ ಬಗ್ಗೆ ANI ಜೊತೆ ಮಾತನಾಡಿದ ಎಸ್‌ಪಿ ವೈದ್, “ಸಂಸತ್ತಿನಲ್ಲಿ ರಾಹುಲ್ ಗಾಂಧಿ ಅವರ ನಡವಳಿಕೆಯು ಹಕ್ಕು ಮತ್ತು ದುರಹಂಕಾರದ ಪ್ರಜ್ಞೆಯನ್ನು ತೋರಿಸುತ್ತದೆ. ರಾಹುಲ್ ಗಾಂಧಿಯವರ ಸಂಸತ್ತಿನಲ್ಲಿ ಅವರ ನಡವಳಿಕೆ ವಿರೋಧ ಪಕ್ಷದ ನಾಯಕನ ನಡವಳಿಕೆಗೆ ತಕ್ಕುದಲ್ಲ, ಇದು ತುಂಬಾ ಜವಾಬ್ದಾರಿಯುತ ಹುದ್ದೆ ಎಂಬುದನ್ನು ಅವರು ಅರಿಯಬೇಕು. ತಮ್ಮ ಸ್ಥಾನದ ಗೌರವಕ್ಕೆ ತಕ್ಕಂತೆ ನಡೆದುಕೊಳ್ಳಬೇಕು” ಎಂದಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Follow Us
Sushma Chakre
Sushma Chakre

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More
ಉತ್ತರಾಖಂಡದಲ್ಲಿ ಹಳಿ ತಪ್ಪಿದ ಉಜ್ಜಯಿನಿ ಎಕ್ಸ್​​ಪ್ರೆಸ್ ರೈಲು
ಉತ್ತರಾಖಂಡದಲ್ಲಿ ಹಳಿ ತಪ್ಪಿದ ಉಜ್ಜಯಿನಿ ಎಕ್ಸ್​​ಪ್ರೆಸ್ ರೈಲು
ಮಂಗಳೂರು: ಬಾವಿ ನೀರಿನಲ್ಲಿ ಡೀಸೆಲ್, ಸ್ಥಳೀಯರು ಹೇಳೋದೇನು ನೋಡಿ
ಮಂಗಳೂರು: ಬಾವಿ ನೀರಿನಲ್ಲಿ ಡೀಸೆಲ್, ಸ್ಥಳೀಯರು ಹೇಳೋದೇನು ನೋಡಿ
ಅಧಿಕ ಜೇಷ್ಠ ಮಾಸದಲ್ಲಿ ವಿಷ್ಣು ಸಹಸ್ರನಾಮ ಓದಲೇಬೇಕು!
ಅಧಿಕ ಜೇಷ್ಠ ಮಾಸದಲ್ಲಿ ವಿಷ್ಣು ಸಹಸ್ರನಾಮ ಓದಲೇಬೇಕು!
ಪಂಚ್ ಕೋತಿ ಇದ್ದ ಮೃಗಾಲಯಕ್ಕೆ ನುಗ್ಗಿದ್ದ ಇಬ್ಬರು ಅಮೆರಿಕನ್ನರ ಬಂಧನ
ಪಂಚ್ ಕೋತಿ ಇದ್ದ ಮೃಗಾಲಯಕ್ಕೆ ನುಗ್ಗಿದ್ದ ಇಬ್ಬರು ಅಮೆರಿಕನ್ನರ ಬಂಧನ
ಬೆಂಗಳೂರಿನಲ್ಲಿ ಭಾರೀ ಮಳೆ: ಲೇಔಟ್ ಒಳಗೆ ನುಗ್ಗಿದ ರಾಜಕಾಲುವೆ ಕೊಳಚೆ ನೀರು
ಬೆಂಗಳೂರಿನಲ್ಲಿ ಭಾರೀ ಮಳೆ: ಲೇಔಟ್ ಒಳಗೆ ನುಗ್ಗಿದ ರಾಜಕಾಲುವೆ ಕೊಳಚೆ ನೀರು
ಜೈಲಿಗೆ ಸ್ವತಃ ಡಿಜಿಪಿ ಭೇಟಿ ನೀಡಿದಾಗ ನಟ ದರ್ಶನ್ ಸಮಸ್ಯೆ ಹೇಳಿಕೊಂಡ್ರಾ?
ಜೈಲಿಗೆ ಸ್ವತಃ ಡಿಜಿಪಿ ಭೇಟಿ ನೀಡಿದಾಗ ನಟ ದರ್ಶನ್ ಸಮಸ್ಯೆ ಹೇಳಿಕೊಂಡ್ರಾ?
ದುಬಾರೆ ದುರಂತದ ಬೆನ್ನಲ್ಲೇ ಅಲರ್ಟ್: ಅರಣ್ಯ ಇಲಾಖೆ ಕೈಗೊಂಡ ಕ್ರಮಗಳೇನು?
ದುಬಾರೆ ದುರಂತದ ಬೆನ್ನಲ್ಲೇ ಅಲರ್ಟ್: ಅರಣ್ಯ ಇಲಾಖೆ ಕೈಗೊಂಡ ಕ್ರಮಗಳೇನು?
ಕುಕ್ಕೆ ಸುಬ್ರಹ್ಮಣ್ಯ ಮತ್ತೆ ನಂಬರ್‌ 1 ಶ್ರೀಮಂತ ದೇಗುಲ
ಕುಕ್ಕೆ ಸುಬ್ರಹ್ಮಣ್ಯ ಮತ್ತೆ ನಂಬರ್‌ 1 ಶ್ರೀಮಂತ ದೇಗುಲ
ಗಿನ್ನಿಸ್ ದಾಖಲೆ ಪುಟ ಸೇರಲಿದೆಯಾ ಕಾಂಗ್ರೆಸ್​​ ಸಾಧನಾ ಸಮಾವೇಶ?
ಗಿನ್ನಿಸ್ ದಾಖಲೆ ಪುಟ ಸೇರಲಿದೆಯಾ ಕಾಂಗ್ರೆಸ್​​ ಸಾಧನಾ ಸಮಾವೇಶ?
33ನೇ ವಯಸ್ಸಿಗೆ ದುರಂತ ಅಂತ್ಯ ಕಂಡ ಟ್ವಿಶಾ ಶರ್ಮಾ ಜೀವನ; ಸಾವಿಗೆ ಕಾರಣ ಏನು?
33ನೇ ವಯಸ್ಸಿಗೆ ದುರಂತ ಅಂತ್ಯ ಕಂಡ ಟ್ವಿಶಾ ಶರ್ಮಾ ಜೀವನ; ಸಾವಿಗೆ ಕಾರಣ ಏನು?