AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೌರವ್​ ಗಂಗೂಲಿಗೆ ಹೃದ್ರೋಗ ತಜ್ಞ ಡಾ.ದೇವಿ ಶೆಟ್ಟಿ ಸಮಕ್ಷಮದಲ್ಲಿ ಸ್ಟಂಟ್​ ಅಳವಡಿಕೆ

ಡಾ. ಅಫ್ತಬ್​ ಖಾನ್​ ನಾಳೆ ಗಂಗೂಲಿಗೆ ಸ್ಟಂಟ್​ ಹಾಕಲಿದ್ದಾರೆ. ಕರ್ನಾಟಕದ ಖ್ಯಾತ ಹೃದ್ರೋಗ ತಜ್ಞ ಡಾ.ದೇವಿ ಶೆಟ್ಟಿ ಸಮಕ್ಷಮ ಇರಲಿದೆ ಎಂದು ವುಡ್​ಲ್ಯಾಂಡ್​ ಆಸ್ಪತ್ರೆ ಮಾಹಿತಿ ನೀಡಿದೆ.

ಸೌರವ್​ ಗಂಗೂಲಿಗೆ ಹೃದ್ರೋಗ ತಜ್ಞ ಡಾ.ದೇವಿ ಶೆಟ್ಟಿ ಸಮಕ್ಷಮದಲ್ಲಿ ಸ್ಟಂಟ್​ ಅಳವಡಿಕೆ
ಸೌರವ್​ ಗಂಗೂಲಿ- ದೇವಿ ಶೆಟ್ಟಿ
ರಾಜೇಶ್ ದುಗ್ಗುಮನೆ
| Edited By: |

Updated on: Jan 27, 2021 | 9:52 PM

Share

ಕೋಲ್ಕತ್ತ: ಹೃದಯ ನೋವಿನಿಂದ ಆಸ್ಪತ್ರೆಗೆ ದಾಖಲಾಗಿದ್ದ ಬಿಸಿಸಿಐ ಅಧ್ಯಕ್ಷ ಸೌರವ್​ ಗಂಗೂಲಿ ನಾಳೆ ವುಡ್​ಲ್ಯಾಂಡ್​ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆಗೆ ಒಳಗಾಗಲಿದ್ದಾರೆ. ಈ ವೇಳೆ ಅವರಿಗೆ ಸ್ಟಂಟ್​ ಅಳವಡಿಕೆ ಮಾಡಲಾಗುತ್ತದೆ. ವಿಶೇಷ ಎಂದರೆ, ಕರ್ನಾಟಕದ ಖ್ಯಾತ ಹೃದ್ರೋಗ ತಜ್ಞ ದೇವಿ ಶೆಟ್ಟಿ ಅವರು ಕೂಡ ಹಾಜರಿರಲಿದ್ದಾರೆ.

ಗಂಗೂಲಿಗೆ ಎದೆನೋವು ಕಾಣಿಸಿಕೊಂಡಿತ್ತು. ಹೀಗಾಗಿ ಇಂದು ಅವರನ್ನು ಅಪೊಲೋ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಡಾ. ಸಪ್ತರ್ಷಿ ಬಸು ಮತ್ತು ಡಾ. ಸರೋಜ್​ ಮೊಂಡಲ್​ ಅವರ ಮೇಲ್ವಿಚಾರಣೆ ಮಾಡಿದ್ದಾರೆ. ಡಾ. ಅಫ್ತಬ್​ ಖಾನ್​ ನಾಳೆ ಗಂಗೂಲಿಗೆ ಸ್ಟಂಟ್​ ಹಾಕಲಿದ್ದಾರೆ. ಡಾ.ದೇವಿ ಶೆಟ್ಟಿ ಸಮಕ್ಷಮ ಇರಲಿದೆ ಎಂದು ವುಡ್​ಲ್ಯಾಂಡ್​ ಆಸ್ಪತ್ರೆ ಮಾಹಿತಿ ನೀಡಿದೆ.

ಸೌರವ್​ ಗಂಗೂಲಿಗೆ ಇತ್ತೀಚೆಗೆ ಜಿಮ್​ ಮಾಡುವಾಗ ಚಿಕ್ಕ ಪ್ರಮಾಣದಲ್ಲಿ ಹೃದಯಾಘಾತ ಸಂಭವಿಸಿತ್ತು. ನಂತರ ಅವರನ್ನು ಕೋಲ್ಕತ್ತಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ವೈದ್ಯರು ದಾದಾಗೆ ಹೃದಯ ಸಮಸ್ಯೆ ಇದೆ ಎಂದು ಹೇಳಿದ್ದರು. ಈ ಸಮಸ್ಯೆಗೆ ಚಿಕಿತ್ಸೆ ಪಡೆದ ಅವರು ಆಸ್ಪತ್ರೆಯಿಂದ ಮರಳಿ ಬಂದಿದ್ದರು. ಇಂದು ಅವರಿಗೆ ಮತ್ತೆ ಎದೆನೋವು ಕಾಣಿಸಿಕೊಂಡಿದೆ. ಈ ವಿಚಾರ ಅಭಿಮಾನಿಗಳಲ್ಲಿ ಬಹಳಷ್ಟು ಆತಂಕ ಮೂಡಿಸಿತ್ತು. ಆದರೆ, ಅವರ ಆರೋಗ್ಯ ಸಮಸ್ಥಿತಿಯಲ್ಲಿದೆ ಎಂದು ವೈದ್ಯರು ತಿಳಿಸಿದ್ದಾರೆ.

ದಾದಾ ಸೌರವ್​ ಗಂಗೂಲಿ ಎದೆನೋವಿನಿಂದ ಮತ್ತೆ ಆಸ್ಪತ್ರೆಗೆ ದಾಖಲು

Follow Us
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
2 ನಿಮಿಷ ತಡವಾಗಿ ಬಂದ ಬಾಲಕನಿಗೆ 2 ಗಂಟೆ ಬಿಸಿಲಲ್ಲಿ ನಿಲ್ಲಿಸಿ ಶಿಕ್ಷೆ!
2 ನಿಮಿಷ ತಡವಾಗಿ ಬಂದ ಬಾಲಕನಿಗೆ 2 ಗಂಟೆ ಬಿಸಿಲಲ್ಲಿ ನಿಲ್ಲಿಸಿ ಶಿಕ್ಷೆ!
ಯುಗಾದಿ- ರಂಜಾನ್ ಹಬ್ಬಕ್ಕೂ ಮುನ್ನವೇ ಅಡುಗೆ ಎಣ್ಣೆ ಬೆಲೆ ಭಾರೀ ಏರಿಕೆ
ಯುಗಾದಿ- ರಂಜಾನ್ ಹಬ್ಬಕ್ಕೂ ಮುನ್ನವೇ ಅಡುಗೆ ಎಣ್ಣೆ ಬೆಲೆ ಭಾರೀ ಏರಿಕೆ
ನಟ ಗುರು ನಂದನ್ ವಿಲ್ಲಾ ತೋಟಕ್ಕೆ ನುಗ್ಗಿದ ಆನೆ; ಮುಂದೇನಾಯ್ತು?
ನಟ ಗುರು ನಂದನ್ ವಿಲ್ಲಾ ತೋಟಕ್ಕೆ ನುಗ್ಗಿದ ಆನೆ; ಮುಂದೇನಾಯ್ತು?
ಎಲ್​ಪಿಜಿ ಗ್ಯಾಸ್ ಹಾಹಾಕಾರ;ವೀಕೆಂಡ್​ನಲ್ಲಿಯೂ ಬಂದ್ ಆದ ಹೋಟೆಲ್ಸ್ !
ಎಲ್​ಪಿಜಿ ಗ್ಯಾಸ್ ಹಾಹಾಕಾರ;ವೀಕೆಂಡ್​ನಲ್ಲಿಯೂ ಬಂದ್ ಆದ ಹೋಟೆಲ್ಸ್ !
ಗಂಡು ಮಕ್ಕಳಿಲ್ಲದಿದ್ದರೇನು? ಅಂತ್ಯಕ್ರಿಯೆ ನಡೆಸಿದ ಇಬ್ಬರು ಹೆಣ್ಣು ಮಕ್ಕಳು!
ಗಂಡು ಮಕ್ಕಳಿಲ್ಲದಿದ್ದರೇನು? ಅಂತ್ಯಕ್ರಿಯೆ ನಡೆಸಿದ ಇಬ್ಬರು ಹೆಣ್ಣು ಮಕ್ಕಳು!
1700 ರೂ. ಬೆಲೆಯ ಸಿಲಿಂಡರ್ 5000 ರೂ. ಗೆ ಮಾರಾಟ!
1700 ರೂ. ಬೆಲೆಯ ಸಿಲಿಂಡರ್ 5000 ರೂ. ಗೆ ಮಾರಾಟ!
ಶ್ರೀ ಗಂಧದ ಗುಡಿ ಧಾರಾವಾಹಿ ಬಿಟ್ಟಿದ್ದೇಕೆ? ವಿಡಿಯೋ ಮೂಲಕ ವಿವರಿಸಿದ ಸಂಜನಾ
ಶ್ರೀ ಗಂಧದ ಗುಡಿ ಧಾರಾವಾಹಿ ಬಿಟ್ಟಿದ್ದೇಕೆ? ವಿಡಿಯೋ ಮೂಲಕ ವಿವರಿಸಿದ ಸಂಜನಾ