AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

7 ಮಂದಿ ಗಂಡಂದಿರು, ಮೂವರು ಮಕ್ಕಳಿದ್ದ ಮಹಿಳೆ ಮತ್ತೊಂದು ಮದುವೆಯಾಗಲು ಹೋಗಿ ಸಿಕ್ಕಿಬಿದ್ಲು

ಎಂಟನೇ ಮದುವೆಯಾಗಲು ಹೊರಟಿದ್ದ ಮಹಿಳೆಯನ್ನು ಪೊಲೀಸರು ಬಂಧಿಸಿದ್ದಾರೆ, ಈ ಘಟನೆ ರಾಜಸ್ಥಾನದ ಚುರುವಿನಲ್ಲಿ ನಡೆದಿದೆ. ಆಕೆ ಯುವಕರನ್ನು ಮದುವೆಯಾಗಿ ಕೆಲ ದಿನಗಳ ಕಾಲ ಅಲ್ಲೇ ಇದ್ದು ಬಳಿಕ ಬೆಳ್ಳಿ, ಬಂಗಾರವನ್ನೆಲ್ಲಾ ದೋಚಿ ಪರಾರಿಯಾಗುತ್ತಿದ್ದಳು.

7 ಮಂದಿ ಗಂಡಂದಿರು, ಮೂವರು ಮಕ್ಕಳಿದ್ದ ಮಹಿಳೆ ಮತ್ತೊಂದು ಮದುವೆಯಾಗಲು ಹೋಗಿ ಸಿಕ್ಕಿಬಿದ್ಲು
ನಯನಾ ರಾಜೀವ್
|

Updated on: Jun 20, 2024 | 10:47 AM

Share

ಏಳು ಮಂದಿ ಗಂಡಂದಿರು, ಮೂವರು ಮಕ್ಕಳಿದ್ದ ಮಹಿಳೆ ಎಂಟನೇ ಮದುವೆಯಾಗಲು ಹೋಗಿ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾಳೆ. ಈ ಘಟನೆ ರಾಜಸ್ಥಾನದ ಚುರುನಲ್ಲಿ ನಡೆದಿದೆ. ಮಹಿಳೆ ಕೆಲ ವರ್ಷಗಳ ಹಿಂದೆ ಮದುವೆಯಾಗಿದ್ದಳು, ಆಕೆಗೆ ಮೂವರು ಮಕ್ಕಳಿದ್ದರು, ನಂತರ ಆಕೆ ಪತಿಯಿಂದ ವಿಚ್ಛೇದನ ಪಡೆದಿದ್ದಳು. ನಂತರ ಆಕೆ ಮದುವೆಯನ್ನು ದಂಧೆಯಾಗಿಸಿಕೊಂಡಿದ್ದಳು.

ಶ್ರೀಮಂತರ ಹುಡುಗರನ್ನು ಬಲೆಗೆ ಬೀಳಿಸಿ ಮದುವೆಯಾಗಿ 10,12 ದಿನಗಳ ಕಾಲ ಅದೇ ಮನೆಯಲ್ಲಿದ್ದು ಬಳಿಕ ಲೂಟಿ ಮಾಡುತ್ತಿದ್ದಳು. ಇದುವರೆಗೆ ಆಕೆ ಏಳು ಮಂದಿಯನ್ನು ಮದುವೆಯಾಗಿ ವಂಚಿಸಿದ್ದಳು, 8ನೇ ವ್ಯಕ್ತಿಯನ್ನು ಮದುವೆಯಾಗಲು ತೆರಳಿದ್ದಾಗ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾಳೆ.

ಮತ್ತಷ್ಟು ಓದಿ: ಸಪ್ತಪದಿಗೂ ಮುನ್ನ ವಧುವಿನ ಮುಖ ನೋಡಿ ಮದುವೆ ಬೇಡ ಎಂದ ವರ

ಪೋಲೀಸ್ ಸ್ಟೇಷನ್ ನಲ್ಲಿ ಆಕೆ ಪೊಲೀಸರಿಗೆ ಪೂರ್ತಿ ಕಥೆ ಹೇಳಿದಾಗ ಪೊಲೀಸರೇ ಬೆಚ್ಚಿಬಿದ್ದಿದ್ದಾರೆ. ತಾನು ರತನ್‌ಗಢ ನಿವಾಸಿ ಎಂದು ಹೇಳಿದ್ದಾಳೆ. ಮೊದಲ ಪತಿಯಿಂದ ವಿಚ್ಛೇದನದ ನಂತರ, ಅವರು ಏಳು ಯುವಕರನ್ನು ಮದುವೆಯಾದಳು. ನಂತರ ಅವಳು ದರೋಡೆ ಮಾಡಿ ಓಡಿಹೋಗಿದ್ದಾಳೆ.

ಆಕೆಯದ್ದು ಗ್ಯಾಂಗ್​ ಕೂಡ ಇದೆ, ಗ್ಯಾಂಗ್ ಜತೆ ಸೇರಿ ಕೆಲವು ಟ್ರಕ್ ಚಾಲಕರನ್ನು ಕೂಡ ದರೋಡೆ ಮಾಡಿದ್ದಾಳೆ. ಆಕೆ ಏಪ್ರಿಲ್​ 8ರಂದು ಬಿಕಾನೇರ್​ನ ಲುಂಕಾರನ್​ಸರ್ ನಿವಾಸಿ ವೀರ್​ಪಾಲ್ ಅವರನ್ನು ವಿವಾಹವಾಗಿದ್ದಳು, ಆದರೆ ಮದುವೆಯಾಗಿ 20 ದಿನಗಳ ಬಳಿಕ ಆಕೆ ಅಲ್ಲಿಂದ ಓಡಿಹೋಗಿದ್ದಳು, ಈಗ ಎಂಟನೇ ಮದುವೆಯಾಗಲು ಯೋಜನೆ ರೂಪಿಸಿದ್ದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ