7 ಮಂದಿ ಗಂಡಂದಿರು, ಮೂವರು ಮಕ್ಕಳಿದ್ದ ಮಹಿಳೆ ಮತ್ತೊಂದು ಮದುವೆಯಾಗಲು ಹೋಗಿ ಸಿಕ್ಕಿಬಿದ್ಲು

ಎಂಟನೇ ಮದುವೆಯಾಗಲು ಹೊರಟಿದ್ದ ಮಹಿಳೆಯನ್ನು ಪೊಲೀಸರು ಬಂಧಿಸಿದ್ದಾರೆ, ಈ ಘಟನೆ ರಾಜಸ್ಥಾನದ ಚುರುವಿನಲ್ಲಿ ನಡೆದಿದೆ. ಆಕೆ ಯುವಕರನ್ನು ಮದುವೆಯಾಗಿ ಕೆಲ ದಿನಗಳ ಕಾಲ ಅಲ್ಲೇ ಇದ್ದು ಬಳಿಕ ಬೆಳ್ಳಿ, ಬಂಗಾರವನ್ನೆಲ್ಲಾ ದೋಚಿ ಪರಾರಿಯಾಗುತ್ತಿದ್ದಳು.

7 ಮಂದಿ ಗಂಡಂದಿರು, ಮೂವರು ಮಕ್ಕಳಿದ್ದ ಮಹಿಳೆ ಮತ್ತೊಂದು ಮದುವೆಯಾಗಲು ಹೋಗಿ ಸಿಕ್ಕಿಬಿದ್ಲು
Follow us
|

Updated on: Jun 20, 2024 | 10:47 AM

ಏಳು ಮಂದಿ ಗಂಡಂದಿರು, ಮೂವರು ಮಕ್ಕಳಿದ್ದ ಮಹಿಳೆ ಎಂಟನೇ ಮದುವೆಯಾಗಲು ಹೋಗಿ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾಳೆ. ಈ ಘಟನೆ ರಾಜಸ್ಥಾನದ ಚುರುನಲ್ಲಿ ನಡೆದಿದೆ. ಮಹಿಳೆ ಕೆಲ ವರ್ಷಗಳ ಹಿಂದೆ ಮದುವೆಯಾಗಿದ್ದಳು, ಆಕೆಗೆ ಮೂವರು ಮಕ್ಕಳಿದ್ದರು, ನಂತರ ಆಕೆ ಪತಿಯಿಂದ ವಿಚ್ಛೇದನ ಪಡೆದಿದ್ದಳು. ನಂತರ ಆಕೆ ಮದುವೆಯನ್ನು ದಂಧೆಯಾಗಿಸಿಕೊಂಡಿದ್ದಳು.

ಶ್ರೀಮಂತರ ಹುಡುಗರನ್ನು ಬಲೆಗೆ ಬೀಳಿಸಿ ಮದುವೆಯಾಗಿ 10,12 ದಿನಗಳ ಕಾಲ ಅದೇ ಮನೆಯಲ್ಲಿದ್ದು ಬಳಿಕ ಲೂಟಿ ಮಾಡುತ್ತಿದ್ದಳು. ಇದುವರೆಗೆ ಆಕೆ ಏಳು ಮಂದಿಯನ್ನು ಮದುವೆಯಾಗಿ ವಂಚಿಸಿದ್ದಳು, 8ನೇ ವ್ಯಕ್ತಿಯನ್ನು ಮದುವೆಯಾಗಲು ತೆರಳಿದ್ದಾಗ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾಳೆ.

ಮತ್ತಷ್ಟು ಓದಿ: ಸಪ್ತಪದಿಗೂ ಮುನ್ನ ವಧುವಿನ ಮುಖ ನೋಡಿ ಮದುವೆ ಬೇಡ ಎಂದ ವರ

ಪೋಲೀಸ್ ಸ್ಟೇಷನ್ ನಲ್ಲಿ ಆಕೆ ಪೊಲೀಸರಿಗೆ ಪೂರ್ತಿ ಕಥೆ ಹೇಳಿದಾಗ ಪೊಲೀಸರೇ ಬೆಚ್ಚಿಬಿದ್ದಿದ್ದಾರೆ. ತಾನು ರತನ್‌ಗಢ ನಿವಾಸಿ ಎಂದು ಹೇಳಿದ್ದಾಳೆ. ಮೊದಲ ಪತಿಯಿಂದ ವಿಚ್ಛೇದನದ ನಂತರ, ಅವರು ಏಳು ಯುವಕರನ್ನು ಮದುವೆಯಾದಳು. ನಂತರ ಅವಳು ದರೋಡೆ ಮಾಡಿ ಓಡಿಹೋಗಿದ್ದಾಳೆ.

ಆಕೆಯದ್ದು ಗ್ಯಾಂಗ್​ ಕೂಡ ಇದೆ, ಗ್ಯಾಂಗ್ ಜತೆ ಸೇರಿ ಕೆಲವು ಟ್ರಕ್ ಚಾಲಕರನ್ನು ಕೂಡ ದರೋಡೆ ಮಾಡಿದ್ದಾಳೆ. ಆಕೆ ಏಪ್ರಿಲ್​ 8ರಂದು ಬಿಕಾನೇರ್​ನ ಲುಂಕಾರನ್​ಸರ್ ನಿವಾಸಿ ವೀರ್​ಪಾಲ್ ಅವರನ್ನು ವಿವಾಹವಾಗಿದ್ದಳು, ಆದರೆ ಮದುವೆಯಾಗಿ 20 ದಿನಗಳ ಬಳಿಕ ಆಕೆ ಅಲ್ಲಿಂದ ಓಡಿಹೋಗಿದ್ದಳು, ಈಗ ಎಂಟನೇ ಮದುವೆಯಾಗಲು ಯೋಜನೆ ರೂಪಿಸಿದ್ದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ತಾಜಾ ಸುದ್ದಿ
ಜೈಲಿನಲ್ಲಿ ದರ್ಶನ್​ನ​ ಅಪ್ಪಿ ಕಣ್ಣೀರು ಹಾಕಿದ ತಾಯಿ ಮೀನಾ
ಜೈಲಿನಲ್ಲಿ ದರ್ಶನ್​ನ​ ಅಪ್ಪಿ ಕಣ್ಣೀರು ಹಾಕಿದ ತಾಯಿ ಮೀನಾ
Daily Devotional: ಸನಾತನ ಧರ್ಮದಲ್ಲಿ 108ರ ಮಹತ್ವ ತಿಳಿದುಕೊಳ್ಳಿ
Daily Devotional: ಸನಾತನ ಧರ್ಮದಲ್ಲಿ 108ರ ಮಹತ್ವ ತಿಳಿದುಕೊಳ್ಳಿ
Daily Horoscope: ವೈವಾಹಿಕ ಜೀವನವು ಸುಖಮಯವಾಗಿ ಸಾಗಲಿದೆ
Daily Horoscope: ವೈವಾಹಿಕ ಜೀವನವು ಸುಖಮಯವಾಗಿ ಸಾಗಲಿದೆ
‘ದರ್ಶನ್ ರಿಲೀಸ್​ ಆಗ್ತಾರಾ?’: ದೇವರಿಗೆ ಪ್ರಶ್ನೆ ಕೇಳಿ ಉತ್ತರ ಪಡೆದ ಪೂಜಾರಿ
‘ದರ್ಶನ್ ರಿಲೀಸ್​ ಆಗ್ತಾರಾ?’: ದೇವರಿಗೆ ಪ್ರಶ್ನೆ ಕೇಳಿ ಉತ್ತರ ಪಡೆದ ಪೂಜಾರಿ
ಪಿಕ್ನಿಕ್ ಹೋದ ಐವರು ಜಲಪಾತದಲ್ಲಿ ಕೊಚ್ಚಿ ಹೋದ ಭಯಾನಕ ವಿಡಿಯೋ ವೈರಲ್
ಪಿಕ್ನಿಕ್ ಹೋದ ಐವರು ಜಲಪಾತದಲ್ಲಿ ಕೊಚ್ಚಿ ಹೋದ ಭಯಾನಕ ವಿಡಿಯೋ ವೈರಲ್
ಸಿದ್ದರಾಮಯ್ಯ ಮೇಲಿನ ವೈರತ್ವ ಮಗನ ಮೇಲೆ ಸಾಧಿಸುವುದು ಸರಿಯಲ್ಲ:ಭೈರತಿ ಸುರೇಶ್
ಸಿದ್ದರಾಮಯ್ಯ ಮೇಲಿನ ವೈರತ್ವ ಮಗನ ಮೇಲೆ ಸಾಧಿಸುವುದು ಸರಿಯಲ್ಲ:ಭೈರತಿ ಸುರೇಶ್
ಶೇ 60 ರಷ್ಟು ಕನ್ನಡ ಕಡ್ಡಾಯ; ಸರ್ಕಾರದಿಂದ  ಸೂಕ್ತ ಕ್ರಮ: ನಾರಾಯಣಗೌಡ, ಕರವೇ
ಶೇ 60 ರಷ್ಟು ಕನ್ನಡ ಕಡ್ಡಾಯ; ಸರ್ಕಾರದಿಂದ  ಸೂಕ್ತ ಕ್ರಮ: ನಾರಾಯಣಗೌಡ, ಕರವೇ
ಪ್ರಜ್ವಲ್​ ಮಾತಾಡಿಸಲು ಜೈಲಿಗೆ ಬಂದ ಭವಾನಿ ಮಾಧ್ಯಮಗಳಿಗೆ ಮುಖ ತೋರಿಸಲಿಲ್ಲ!
ಪ್ರಜ್ವಲ್​ ಮಾತಾಡಿಸಲು ಜೈಲಿಗೆ ಬಂದ ಭವಾನಿ ಮಾಧ್ಯಮಗಳಿಗೆ ಮುಖ ತೋರಿಸಲಿಲ್ಲ!
ಸ್ಟಿಕ್ ಹಿಡಿದು ಕುಂಟುತ್ತ ಪ್ರಜ್ವಲ್​ ನೋಡಲು ಬಂದ ಭವಾನಿ ರೇವಣ್ಣ
ಸ್ಟಿಕ್ ಹಿಡಿದು ಕುಂಟುತ್ತ ಪ್ರಜ್ವಲ್​ ನೋಡಲು ಬಂದ ಭವಾನಿ ರೇವಣ್ಣ
ರಾಹುಲ್ ಎಂದಿಗೂ ಹಿಂದೂ ವಿರೋಧಿಯಲ್ಲ; ಪ್ರಿಯಾಂಕಾ ಗಾಂಧಿ ಸ್ಪಷ್ಟನೆ
ರಾಹುಲ್ ಎಂದಿಗೂ ಹಿಂದೂ ವಿರೋಧಿಯಲ್ಲ; ಪ್ರಿಯಾಂಕಾ ಗಾಂಧಿ ಸ್ಪಷ್ಟನೆ