AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೋದರರಿಬ್ಬರು ಇನ್ನೇನು ಬಿಸಿಬಿಸಿ ಮೀನಿನ ಸಾರು ತಿನ್ನಬೇಕಿತ್ತು, ಆದರೆ ಆದದ್ದೇ ಬೇರೆ…ಅಣ್ಣನನ್ನು ತಮ್ಮ ಕೊಂದುಬಿಟ್ಟ!

ಸಂಜೀವ ತನ್ನ ತಮ್ಮ ವೆಂಕಟೇಶನ ಹೆಂಡತಿಗೆ ಮೀನಿನ ಸಾರು ಬೇಯಿಸಲು ಹೇಳಿದ್ದಾನೆ. ವೆಂಕಟೇಶನ ಪತ್ನಿ ಮೀನಿನ ಸಾರು ಬೇಯಿಸಲು ಮಸಾಲೆ ತಯಾರಿಸುತ್ತಿದ್ದಾಗ ಸಹೋದರರಿಬ್ಬರು ಮದ್ಯ ಸೇವಿಸಿ ಫುಲ್​ ಟೈಟ್​ ಆಗಿದ್ದಾರೆ. ಬಳಿಕ ಮೀನಿನ ಸಾರು ಬೇಯಿಸುವ ವಿಚಾರದಲ್ಲಿ ಇಬ್ಬರೂ ಜಗಳವಾಡಿದ್ದಾರೆ. ಆ ವೇಳೆ...

ಸೋದರರಿಬ್ಬರು ಇನ್ನೇನು ಬಿಸಿಬಿಸಿ ಮೀನಿನ ಸಾರು ತಿನ್ನಬೇಕಿತ್ತು, ಆದರೆ ಆದದ್ದೇ ಬೇರೆ...ಅಣ್ಣನನ್ನು ತಮ್ಮ ಕೊಂದುಬಿಟ್ಟ!
ಸೋದರರಿಬ್ಬರು ಇನ್ನೇನು ಬಿಸಿಬಿಸಿ ಮೀನಿನ ಸಾರು ತಿನ್ನಬೇಕಿತ್ತು, ಆದರೆ
ಸಾಧು ಶ್ರೀನಾಥ್​
|

Updated on: Jan 26, 2024 | 3:55 PM

Share

ಸತ್ಯಸಾಯಿ ಜಿಲ್ಲೆ, ಜನವರಿ 26: ಬಿಸಿಬಿಸಿ ಮೀನಿನ ಸಾರು ಇನ್ನೇನು ಕೆಲವೇ ಕ್ಷಣಗಳಲ್ಲಿ ಸಿದ್ಧವಾಗುವುದಿತ್ತು. ಆ ಇಬ್ಬರು ಸಹೋದರರು ಒಟ್ಟಿಗೆ ಕುಳಿತು ತಿನ್ನಲು ನಿರ್ಧರಿಸಿದ್ದರು. ಆದರೆ ಮೀನಿನ ಸಾರು ಸಿದ್ಧವಾಗುವ ಮೊದಲು, ಅಣ್ಣನನ್ನು ಅವನ ಕಿರಿಯ ಸಹೋದರ ಕೊಂದುಹಾಕಿದ್ದಾನೆ. ಮೀನಿನ ಸಾರು ಅನ್ನ ಪ್ರಾಣವನ್ನೇ ಕಿತ್ತುಕೊಂಡಿದೆ. ಆಂಧ್ರಪ್ರದೇಶದ ಶ್ರೀ ಸತ್ಯಸಾಯಿ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ.

ವಿವರಕ್ಕೆ ಹೋದರೆ.. ಶ್ರೀ ಸತ್ಯಸಾಯಿ ಜಿಲ್ಲೆಯ ತನಕಲ್ಲು ಮಂಡಲದ ನಡಿಮಿಕುಂಟಪಲ್ಲಿ ಗ್ರಾಮದ ಸಂಜೀವ್ ಮತ್ತು ವೆಂಕಟೇಶ್ ಇಬ್ಬರು ಸಹೋದರರು. ಕೂಲಿ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದಾರೆ. ಒಂದು ದಿನ ಅಣ್ಣನಾದವನು ತನ್ನ ಹೆಂಡತಿ ತವರು ಮನೆಗೆ ಹೋದಾಗ ಮಾರುಕಟ್ಟೆಗೆ ಹೋಗಿ ಮನೆಗೆ ಮೀನು ತಂದಿದ್ದಾನೆ.

ಆದರೆ ಅಣ್ಣ ಸಂಜೀವ ತನ್ನ ಕಿರಿಯ ಸಹೋದರ ವೆಂಕಟೇಶನ ಹೆಂಡತಿಗೆ ಮೀನಿನ ಸಾರು ಬೇಯಿಸಲು ಹೇಳಿದ್ದಾನೆ. ತಮ್ಮ ವೆಂಕಟೇಶನ ಪತ್ನಿ ಮೀನಿನ ಸಾರು ಬೇಯಿಸಲು ಮಸಾಲೆ ತಯಾರಿಸುತ್ತಿದ್ದಾಗ ಸಹೋದರರಿಬ್ಬರು ಮದ್ಯ ಸೇವಿಸಿ ಫುಲ್​ ಟೈಟ್​ ಆಗಿದ್ದಾರೆ. ಬಳಿಕ ಇಬ್ಬರು ಸಹೋದರರ ನಡುವೆ ಮೀನಿನ ಸಾರು ಬೇಯಿಸುವ ವಿಚಾರದಲ್ಲಿ ಜಗಳವಾಗಿದೆ.

ಮೀನಿನ ಸಾರು ಬೇಗ ಬೇಗ ಬೇಯಿಸುವ ಸಲುವಾಗಿ, ಸಂಜೀವ್ ಹಾಸಿಗೆಯ ಮೇಲೆ ಮಲಗಿದ್ದ ತಮ್ಮ ವೆಂಕಟೇಶನನ್ನು ಮಸಾಲೆ ತಯಾರಿಸಲು ಸಹಾಯ ಮಾಡುವಂತೆ ಪದೇ ಪದೇ ಕೀಟಲೆ ಮಾಡಿದ್ದಾನೆ. ಇದರಿಂದ ಇಬ್ಬರ ನಡುವೆ ದೊಡ್ಡ ಜಗಳವೇ ನಡೆದುಹೋಗಿದೆ. ಇತ್ತ ಅಣ್ಣತಮ್ಮ ಇಬ್ಬರೂ ಜಗಳವಾಡುತ್ತಿರುವಾಗ ವೆಂಕಟೇಶನ ಹೆಂಡತಿ ಮೀನಿನ ಸಾರು ಬೇಯಿಸಲು ಎಲ್ಲವನ್ನೂ ಸಿದ್ಧಪಡಿಸಿ ಒಲೆಯನ್ನು ಹೊತ್ತಿಸಿದಳು.

ಆದರೆ ಅಷ್ಟರಲ್ಲಿ ಕಿರಿಯ ಸಹೋದರ ವೆಂಕಟೇಶ್ ಕುಡಿದ ಮತ್ತಿನಲ್ಲಿ ದೊಣ್ಣೆ ತಂದು ಅಣ್ಣ ಸಂಜೀವನ ಮೇಲೆ ಹಲ್ಲೆ ನಡೆಸಿದ್ದಾನೆ. ಪರಿಣಾಮ ಸಂಜೀವ್ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಮೀನಿನ ಸಾರು ಅಡುಗೆ ಮಾಡುವ ವಿವಾದ ಕೊನೆಗೆ ಅಣ್ಣನ ಪ್ರಾಣವನ್ನೇ ತೆಗೆಯುವ ಮಟ್ಟಕ್ಕೆ ಬಂದಿತ್ತು. ಘಟನೆ ಕುರಿತು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Follow Us
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!