AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪುಟಿನ್ ಜತೆ ಮೋದಿ ದೂರವಾಣಿ ಮಾತುಕತೆ: ರಾಜತಾಂತ್ರಿಕತೆ ಮೂಲಕ ಉಕ್ರೇನ್ ಬಿಕ್ಕಟ್ಟನ್ನು ಪರಿಹರಿಸಲು ಹೇಳಿದ ಪ್ರಧಾನಿ

ಉಕ್ರೇನ್‌ನಲ್ಲಿನ ಪರಿಸ್ಥಿತಿಯನ್ನು ಚರ್ಚಿಸುತ್ತಿರುವಾಗ, ಪ್ರಧಾನಿ ಮಾತುಕತೆ ಮತ್ತು ರಾಜತಾಂತ್ರಿಕತೆಯ ಕರೆಯನ್ನು ಪುನರುಚ್ಚರಿಸಿದರು ಎಂದು ಪಿಎಂಒ ಹೇಳಿದೆ. ರಷ್ಯಾ ಒಂದು ವರ್ಷದಿಂದ ಉಕ್ರೇನ್‌ನೊಂದಿಗೆ ಸಂಘರ್ಷದಲ್ಲಿ ತೊಡಗಿದ್ದು ಪಾಶ್ಚಿಮಾತ್ಯ ಜಗತ್ತು ಪುಟಿನ್ ವಿರುದ್ಧ ನಿಂತಿದೆ

ಪುಟಿನ್ ಜತೆ ಮೋದಿ ದೂರವಾಣಿ ಮಾತುಕತೆ: ರಾಜತಾಂತ್ರಿಕತೆ ಮೂಲಕ ಉಕ್ರೇನ್ ಬಿಕ್ಕಟ್ಟನ್ನು ಪರಿಹರಿಸಲು ಹೇಳಿದ ಪ್ರಧಾನಿ
ನರೇಂದ್ರ ಮೋದಿ - ಪುಟಿನ್
ರಶ್ಮಿ ಕಲ್ಲಕಟ್ಟ
|

Updated on:Jun 30, 2023 | 8:36 PM

Share

ದೆಹಲಿ: ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ (Vladimir Putin) ಅವರೊಂದಿಗೆ ದೂರವಾಣಿಯಲ್ಲಿ ಮಾತನಾಡಿರುವ ಪ್ರಧಾನಿ ನರೇಂದ್ರ ಮೋದಿ (Narendra Modi) ಉಕ್ರೇನ್ ಸಂಘರ್ಷಕ್ಕೆ ಪರಿಹಾರವನ್ನು ಕಂಡುಕೊಳ್ಳಲು ಮಾತುಕತೆ ಮತ್ತು ರಾಜತಾಂತ್ರಿಕತೆಯ ಕರೆಯನ್ನು  ಪುನರುಚ್ಚರಿಸಿದ್ದಾರೆ. ತಮ್ಮ ಮಾತುಕತೆಯಲ್ಲಿ, ಉಭಯ ನಾಯಕರು ದ್ವಿಪಕ್ಷೀಯ ಸಹಕಾರದಲ್ಲಿನ ಪ್ರಗತಿಯನ್ನು ಪರಿಶೀಲಿಸಿದ್ದು, ಪರಸ್ಪರ ಹಿತಾಸಕ್ತಿಯ ಪ್ರಾದೇಶಿಕ ಮತ್ತು ಜಾಗತಿಕ ವಿಷಯಗಳ ಕುರಿತು ಅಭಿಪ್ರಾಯಗಳನ್ನು ವಿನಿಮಯ ಮಾಡಿಕೊಂಡರು ಎಂದು ಪ್ರಧಾನಿ ಕಚೇರಿ (PMO) ತಿಳಿಸಿದೆ. ಅದೇ ವೇಳೆ ರಷ್ಯಾದಲ್ಲಿ ಇತ್ತೀಚಿನ ಬೆಳವಣಿಗೆಗಳ ಬಗ್ಗೆ ಪುಟಿನ್ ಮೋದಿಗೆ ತಿಳಿಸಿದ್ದಾರೆ.

ಉಕ್ರೇನ್‌ನಲ್ಲಿನ ಪರಿಸ್ಥಿತಿಯನ್ನು ಚರ್ಚಿಸುತ್ತಿರುವಾಗ, ಪ್ರಧಾನಿ ಮಾತುಕತೆ ಮತ್ತು ರಾಜತಾಂತ್ರಿಕತೆಯ ಕರೆಯನ್ನು ಪುನರುಚ್ಚರಿಸಿದರು ಎಂದು ಪಿಎಂಒ ಹೇಳಿದೆ. ರಷ್ಯಾ ಒಂದು ವರ್ಷದಿಂದ ಉಕ್ರೇನ್‌ನೊಂದಿಗೆ ಸಂಘರ್ಷದಲ್ಲಿ ತೊಡಗಿದ್ದು ಪಾಶ್ಚಿಮಾತ್ಯ ಜಗತ್ತು ಪುಟಿನ್ ವಿರುದ್ಧ ನಿಂತಿದೆ.

ಇಬ್ಬರೂ ನಾಯಕರು ಸಂಪರ್ಕದಲ್ಲಿರಲು ಒಪ್ಪಿಕೊಂಡಿದ್ದು, ಉಭಯ ದೇಶಗಳ ನಡುವಿನ ವಿಶೇಷ ಮತ್ತು ವಿಶೇಷವಾದ ಕಾರ್ಯತಂತ್ರದ ಪಾಲುದಾರಿಕೆಯನ್ನು ಮತ್ತಷ್ಟು ಬಲಪಡಿಸಲು ಪ್ರಯತ್ನಗಳನ್ನು ಮುಂದುವರೆಸಿದರು.

ಇದನ್ನೂ ಓದಿ: Putin on Make in India: ಮೇಕ್ ಇನ್ ಇಂಡಿಯಾ ಪರಿಕಲ್ಪನೆಯನ್ನು ಹೊಗಳಿದ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್

ಜುಲೈ 4 ರಂದು ಶಾಂಘೈ ಸಹಕಾರ ಸಂಸ್ಥೆ (ಎಸ್‌ಸಿಒ) ಶೃಂಗಸಭೆಗೆ ಕೆಲವು ದಿನಗಳ ಮೊದಲು ಉಭಯ ನಾಯಕರ ನಡುವಿನ ದೂರವಾಣಿ ಸಂಭಾಷಣೆ ನಡೆದಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 8:35 pm, Fri, 30 June 23

ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು