AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉತ್ತರ ಪ್ರದೇಶದಲ್ಲಿ ಸಿಎಂ ಯೋಗಿ ಆದಿತ್ಯನಾಥ್​ಗೆ ದೇವಸ್ಥಾನ ಕಟ್ಟಿ ದಿನವೂ ಪೂಜೆ, ಭಜನೆ

ಆರತಿಯ ಸಮಯದಲ್ಲಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಹೊಗಳುವ ಭಜನೆಗಳನ್ನು ಹಾಡಲಾಗುತ್ತದೆ. ಪ್ರಭಾಕರ್ ಮೌರ್ಯ ಎಂಬುವವರು ಈ ದೇವಾಲಯವನ್ನು ನಿರ್ಮಿಸಿದ ವ್ಯಕ್ತಿ.

ಉತ್ತರ ಪ್ರದೇಶದಲ್ಲಿ ಸಿಎಂ ಯೋಗಿ ಆದಿತ್ಯನಾಥ್​ಗೆ ದೇವಸ್ಥಾನ ಕಟ್ಟಿ ದಿನವೂ ಪೂಜೆ, ಭಜನೆ
ಯೋಗಿ ಆದಿತ್ಯನಾಥ್ ದೇವಾಲಯ
TV9 Web
| Edited By: |

Updated on: Sep 20, 2022 | 10:13 AM

Share

ಅಯೋಧ್ಯೆ: ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ (Ayodhya) ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ (Yogi Adityanath) ಅವರಿಗೆ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಲಾಗುತ್ತಿದೆ. ಅಯೋಧ್ಯೆಯ ಭರತಕುಂಡ್‌ನಲ್ಲಿರುವ ದೇವಾಲಯದಲ್ಲಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ವಿಗ್ರಹವನ್ನು ಸ್ಥಾಪಿಸಿ, ಅದನ್ನು ಪೂಜಿಸಲಾಗುತ್ತಿದೆ. ಅವರನ್ನು ಭಗವಾನ್ ರಾಮನ ಅವತಾರದಂತೆ ಚಿತ್ರಿಸಿ, ಪ್ರಾರ್ಥಿಸಲಾಗುತ್ತಿದೆ.

ಆರತಿಯ ಸಮಯದಲ್ಲಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಹೊಗಳುವ ಭಜನೆಗಳನ್ನು ಹಾಡಲಾಗುತ್ತದೆ. ಪ್ರಭಾಕರ್ ಮೌರ್ಯ ಎಂಬುವವರು ಈ ದೇವಾಲಯವನ್ನು ನಿರ್ಮಿಸಿದ ವ್ಯಕ್ತಿ. ಈ ಸ್ಥಳದಲ್ಲಿ ಪ್ರಸಾರ ಮಾಡಲು ಭಜನೆಗಳ ಆಡಿಯೋ ಮತ್ತು ವಿಡಿಯೋ ಕ್ಯಾಸೆಟ್‌ಗಳನ್ನು ಸಿದ್ಧಪಡಿಸಲಾಗುತ್ತಿದೆ.

ಉತ್ತರ ಪ್ರದೇಶದಲ್ಲಿ ಬಹುಕಾಲದ ಭರವಸೆಯ ರಾಮಮಂದಿರ ನಿರ್ಮಾಣದ ಹಂತದಲ್ಲಿದೆ. ಪ್ರಭಾಕರ ಮೌರ್ಯ ಅಯೋಧ್ಯೆಯಿಂದ ಕೇವಲ 15 ಕಿಮೀ ದೂರದಲ್ಲಿ ಈ ದೇವಾಲಯವನ್ನು ನಿರ್ಮಿಸಿದ್ದಾರೆ. ಇದನ್ನು ಭಗವಾನ್ ರಾಮನ ಜನ್ಮಸ್ಥಳವೆಂದು ಪರಿಗಣಿಸಲಾಗಿದೆ. ಅಯೋಧ್ಯೆ-ಗೋರಖ್‌ಪುರ ಹೆದ್ದಾರಿಯಲ್ಲಿರುವ ಭರತ್‌ಕುಂಡ್ ಬಳಿಯ ಯೋಗಿ ಆದಿತ್ಯನಾಥ್ ಅವರ ದೇವಾಲಯವು ಇರುವ ಈ ಸ್ಥಳದಲ್ಲಿ ರಾಮನ ಸಹೋದರ ಭರತ ತನ್ನ ಮರದ ಚಪ್ಪಲಿಯನ್ನು ಸಿಂಹಾಸನದ ಮೇಲೆ ಇರಿಸುವ ಮೂಲಕ 14 ವರ್ಷಗಳ ಕಾಲ ಅಯೋಧ್ಯೆಯ ಆಳ್ವಿಕೆಯನ್ನು ವಹಿಸಿಕೊಂಡನೆಂದು ನಂಬಲಾಗಿದೆ.

ಇದನ್ನೂ ಓದಿ: ದೇವಸ್ಥಾನದ ಮಹದ್ವಾರ ನಿರ್ಮಾಣಕ್ಕೆ ವಿರೋಧ: ಟಿಪ್ಪು ಗೇಟ್ ನಿರ್ಮಾಣಕ್ಕೆ ಮುಂದಾದ ಅನ್ಯಕೋಮಿನ ಯುವಕರು; ಶಾಸಕ ಸುನೀಲ್ ನಾಯ್ಕ ಖಡಕ್ ಎಚ್ಚರಿಕೆ

ಪ್ರಭಾಕರ್ ಮೌರ್ಯರ ಸಂಕಲ್ಪ ಈಡೇರಿಕೆಗೆ ಈ ದೇವಾಲಯ ಸಾಕ್ಷಿಯಾಗಿದೆ. ಅಯೋಧ್ಯೆಯಲ್ಲಿ ಶ್ರೀರಾಮನಿಗೆ ಮಂದಿರವನ್ನು ನಿರ್ಮಿಸುವ ವ್ಯಕ್ತಿಯ ಹೆಸರಿನಲ್ಲಿ ಮಂದಿರವನ್ನು ನಿರ್ಮಿಸುತ್ತೇನೆ ಎಂದು ಪ್ರಭಾಕರ್ ಮೌರ್ಯ ಇಂಡಿಯಾ ಟುಡೇಗೆ ತಿಳಿಸಿದ್ದಾರೆ. ಈಗ, ಅಯೋಧ್ಯೆಯಲ್ಲಿ ಭವ್ಯವಾದ ರಾಮ ಮಂದಿರವನ್ನು ನಿರ್ಮಿಸಲಾಗುತ್ತಿದೆ. ಅದರಲ್ಲಿ ಯೋಗಿ ಆದಿತ್ಯನಾಥ್ ದೊಡ್ಡ ಪಾತ್ರವನ್ನು ವಹಿಸಿದ್ದಾರೆ ಎಂದು ಪ್ರಭಾಕರ್ ಮೌರ್ಯ ಹೇಳಿದ್ದಾರೆ.

ಯೋಗಿ ಆದಿತ್ಯನಾಥ್ ಅವರ ಎತ್ತರ 5.4 ಅಡಿ ಇದೆ. ಈ ವಿಗ್ರಹದ ಮೇಲಿರುವ ಬಟ್ಟೆಗಳ ಬಗ್ಗೆಯೂ ಗಮನ ಹರಿಸಲಾಗಿದೆ. ಯೋಗಿ ಆದಿತ್ಯನಾಥ್ ಧರಿಸುವ ರೀತಿಯ ಬಟ್ಟೆಯನ್ನೇ ಇದಕ್ಕೆ ಹಾಕಲಾಗಿದೆ ಎಂದು ಪ್ರಭಾಕರ್ ಮೌರ್ಯ ಹೇಳಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ