Sign In

By signing in or creating an account, you agree with Associated Broadcasting Company's Terms & Conditions and Privacy Policy.

Queen Elizabeth’s Funeral: ಬ್ರಿಟನ್ ರಾಣಿ ಎಲಿಜಬೆತ್ ಅಂತ್ಯಸಂಸ್ಕಾರದಲ್ಲಿ ಭಾಗಿಯಾಗಲಿದ್ದಾರೆ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೋಮವಾರ ರಾಣಿ ಎಲಿಜಬೆತ್ ಅವರ ಅಂತ್ಯಕ್ರಿಯೆಗೂ ಮೊದಲು ಬಕಿಂಗ್​ಹ್ಯಾಮ್ ಅರಮನೆಯಲ್ಲಿ ಕಿಂಗ್ ಚಾರ್ಲ್ಸ್ ಮತ್ತು ರಾಣಿ ಕಾನ್ಸೋರ್ಟ್ ಕ್ಯಾಮಿಲ್ಲಾ ದ್ರೌಪದಿ ಮುರ್ಮು ಅವರನ್ನು ಭೇಟಿಯಾಗಲಿದ್ದಾರೆ

Queen Elizabeth's Funeral: ಬ್ರಿಟನ್ ರಾಣಿ ಎಲಿಜಬೆತ್ ಅಂತ್ಯಸಂಸ್ಕಾರದಲ್ಲಿ ಭಾಗಿಯಾಗಲಿದ್ದಾರೆ ರಾಷ್ಟ್ರಪತಿ ದ್ರೌಪದಿ ಮುರ್ಮು
ದ್ರೌಪದಿ ಮುರ್ಮು
Follow us
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on:Sep 19, 2022 | 10:24 AM

ಭಾರತದ ರಾಷ್ಟ್ರಪತಿ ದ್ರೌಪದಿ ಮುರ್ಮು (Droupadi Murmu) ಭಾನುವಾರ ಲಂಡನ್‌ನ ವೆಸ್ಟ್‌ಮಿನ್‌ಸ್ಟರ್ ಹಾಲ್‌ಗೆ ಭೇಟಿ ನೀಡಿದ್ದು, ರಾಣಿ ಎಲಿಜಬೆತ್ II (Queen Elizabeth II) ಅವರ ಅಂತಿಮ ದರ್ಶನ ಪಡೆದಿದ್ದಾರೆ. ರಾಷ್ಟ್ರಪತಿ ಅವರ ಪರವಾಗಿ ಮತ್ತು ಭಾರತದ ಜನರ ಪರವಾಗಿ ಅಗಲಿದ ಆತ್ಮಕ್ಕೆ ಶ್ರದ್ಧಾಂಜಲಿ ಅರ್ಪಿಸಿದರು. ಮೂರು ದಿನಗಳ ಭೇಟಿಗಾಗಿ ಲಂಡನ್‌ನಲ್ಲಿರುವ ಮುರ್ಮು ಅವರು ಸೋಮವಾರ ಎಲಿಜಬೆತ್ II ರ ಅಂತಿಮ ಸಂಸ್ಕಾರದಲ್ಲಿ ಪಾಲ್ಗೊಳ್ಳಲಿದ್ದು ಭಾರತ ಸರ್ಕಾರದ ಪರವಾಗಿ ಸಂತಾಪ ಸೂಚಕ ಪುಸ್ತಕಕ್ಕೆ ಸಹಿ ಹಾಕಿದರು. ಸೆಪ್ಟೆಂಬರ್ 8 ರಂದು ಸ್ಕಾಟ್ಲೆಂಡ್‌ನಲ್ಲಿ 96 ನೇ ವಯಸ್ಸಿನಲ್ಲಿ ನಿಧನರಾದ ಎಲಿಜಬೆತ್ II ರ ನೆನಪಿಗಾಗಿ ಸಂತಾಪ ಸೂಚಿಸುವ ಪುಸ್ತಕಕ್ಕೆ ಸಹಿ ಹಾಕಲು ಭೇಟಿ ನೀಡುವ ವಿಶ್ವ ನಾಯಕರು ಲಂಡನ್‌ನ ಲ್ಯಾಂಕಾಸ್ಟರ್ ಹೌಸ್‌ಗೆ ಬರುತ್ತಾರೆ. ಅಲ್ಲಿ ಹಂಗಾಮಿ ಹೈಕಮಿಷನರ್ ಸುಜಿತ್ ಘೋಷ್ ಮುರ್ಮು ಅವರನ್ನು ಭೇಟಿಯಾಗಿದ್ದಾರೆ. ಶನಿವಾರ ಸಂಜೆ ಇಲ್ಲಿಗೆ ಆಗಮಿಸಿದ ರಾಷ್ಟ್ರಪತಿ ಮುರ್ಮು ನಾವೆ ಸುಮಾರು 500 ವಿಶ್ವ ನಾಯಕರು ಮತ್ತು ವಿಶ್ವಾದ್ಯಂತ ರಾಜಮನೆತನದ ಸದಸ್ಯರೊಂದಿಗೆ ಅಬ್ಬೆಯಲ್ಲಿ ನಡೆಯವಿರುವ ರಾಣಿಯ ಅಂತ್ಯ ಸಂಸ್ಕಾರದಲ್ಲಿ ಭಾಗಿಯಾಗಲಿದ್ದಾರೆ ಸ್ಥಳೀಯ ಸಮಯ ಬೆಳಿಗ್ಗೆ 11 ಗಂಟೆಗೆ ಅಂತಿಮ ವಿಧಿ ವಿಧಾನ ಆರಂಭವಾಗಲಿದೆ ಇದಾದನಂತರ ಒಂದು ಗಂಟೆ ಕಳೆದ ಎರಡು ನಿಮಿಷ ಮೌನಾಚರಣೆ ಮಾಡಲಾಗುತ್ತದೆ.

ಬಕಿಂಗ್​ಹ್ಯಾಮ್ ಅರಮನೆಗೆ ಆಹ್ವಾನ

ಸೋಮವಾರ ರಾಣಿ ಎಲಿಜಬೆತ್ ಅವರ ಅಂತ್ಯಕ್ರಿಯೆಯ ಮುಂಚಿತವಾಗಿ, ಬಕಿಂಗ್ಹ್ಯಾಮ್ ಅರಮನೆಯಲ್ಲಿ ಕಿಂಗ್ ಚಾರ್ಲ್ಸ್ ಮತ್ತು ರಾಣಿ ಕಾನ್ಸೋರ್ಟ್ ಕ್ಯಾಮಿಲ್ಲಾ ಆಯೋಜಿಸಿದ ಆತಿಥ್ಯಕ್ಕೆ ಮುರ್ಮು ಅವರನ್ನೂ ಆಹ್ವಾನಿಸಲಾಗಿದೆ. “ಅಧಿಕೃತ ರಾಜ್ಯ ಕಾರ್ಯಕ್ರಮ” ಎಂದು ವಿವರಿಸಲಾದ ಈ ಕಾರ್ಯಕ್ರಮದಲ್ಲಿ ಭೇಟಿ ನೀಡುವ ರಾಜ್ಯದ ಮುಖ್ಯಸ್ಥರು, ಸರ್ಕಾರ ಮತ್ತು ಅಧಿಕೃತ ಸಾಗರೋತ್ತರ ಅತಿಥಿಗಳನ್ನು ನಿರೀಕ್ಷಿಸಲಾಗುತ್ತದೆ. 2009 ಮತ್ತು 2012 ರ ನಡುವೆ ಕ್ವೀನ್ಸ್ ರಾಯಲ್ ಹೌಸ್‌ಹೋಲ್ಡ್‌ನಲ್ಲಿ ಕೆಲಸ ಮಾಡಿದ ಮತ್ತು ರಾಜಪ್ರಭುತ್ವದ ಬಗ್ಗೆ ವ್ಯಾಪಕವಾಗಿ ಬರೆದಿರುವ ಝಾಕಿ ಕೂಪರ್, ರಾಣಿ “ಭಾರತದೊಂದಿಗೆ ಪ್ರೀತಿಯ ಸಂಬಂಧವನ್ನು” ಹೊಂದಿದ್ದು ಸಾಮ್ರಾಜ್ಯದಿಂದ ಕಾಮನ್‌ವೆಲ್ತ್‌ಗೆ ಪರಿವರ್ತನೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ ಎಂದು ನಂಬುತ್ತಾರೆ.

ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಕಾಮನ್‌ವೆಲ್ತ್‌ನ ಪ್ರತಿನಿಧಿಗಳು

ಸೋಮವಾರದ ನಡೆಯುವ ರಾಣಿಯ ಅಂತ್ಯಕ್ರಿಯೆ ಸಮಾರಂಭದಲ್ಲಿ ರಿಯಲ್ಮ್ಸ್ ಮತ್ತು ಕಾಮನ್‌ವೆಲ್ತ್‌ನ ಪ್ರತಿನಿಧಿಗಳು ಇರುತ್ತಾರೆ. ಸಮಾರಂಭಕ್ಕೆ ಕೆಲವೇ ಗಂಟೆಗಳ ಮೊದಲು, ರಾಣಿಯ ಅಂತಿಮ ದರ್ಶನವನ್ನು ನಿಲ್ಲಿಸಲಾಗುತ್ತದೆ. ಅಬೆಯ ದ್ವಾರಗಳು ಸೋಮವಾರ ಸ್ಥಳೀಯ ಕಾಲಮಾನದಲ್ಲಿ ಬೆಳಿಗ್ಗೆ 8 ಗಂಟೆಗೆ ತೆರೆದುಕೊಳ್ಳಲಿದ್ದು ಗಣ್ಯರು ಮತ್ತು ಅಂತ್ಯಕ್ರಿಯೆಗೆ ಆಹ್ವಾನಿತ ಅತಿಥಿಗಳು ಇದರಲ್ಲಿ ಭಾಗಿಯಾಗುತ್ತಾರೆ.

Published On - 9:33 pm, Sun, 18 September 22

ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಕಾರಿಗೆ ಲಾರಿ ಡಿಕ್ಕಿ, ವಿಡಿಯೋ ನೋಡಿ
ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಕಾರಿಗೆ ಲಾರಿ ಡಿಕ್ಕಿ, ವಿಡಿಯೋ ನೋಡಿ
ಉತ್ತರ ಕರ್ನಾಟಕದ ಹುಲಿಗೆ ಜೈ: ಹಂಪಿ ಉತ್ಸವದಲ್ಲಿ ಹನುಮಂತನಿಗೆ ಜೈಕಾರ
ಉತ್ತರ ಕರ್ನಾಟಕದ ಹುಲಿಗೆ ಜೈ: ಹಂಪಿ ಉತ್ಸವದಲ್ಲಿ ಹನುಮಂತನಿಗೆ ಜೈಕಾರ
ಶಿವಕುಮಾರ್ ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾದರೇನು ತಪ್ಪು? ಜಾರಕಿಹೊಳಿ
ಶಿವಕುಮಾರ್ ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾದರೇನು ತಪ್ಪು? ಜಾರಕಿಹೊಳಿ
ಜಮೀರ್ ಅಹ್ಮದ್ ಆಡುವ ಮಾತಿಗೆ ಯಾವುದೇ ಬೆಲೆ ಇಲ್ಲ: ಜಗದೀಶ್ ಶೆಟ್ಟರ್
ಜಮೀರ್ ಅಹ್ಮದ್ ಆಡುವ ಮಾತಿಗೆ ಯಾವುದೇ ಬೆಲೆ ಇಲ್ಲ: ಜಗದೀಶ್ ಶೆಟ್ಟರ್
ಪಕ್ಷದಲ್ಲಿ ವಾತಾವರಣ ತಿಳಿಯಾಗುತ್ತಿದೆ ಎಂದು ವಿಜಯೇಂದ್ರ ಹೇಳುವುದು ನಿಜವೇ?
ಪಕ್ಷದಲ್ಲಿ ವಾತಾವರಣ ತಿಳಿಯಾಗುತ್ತಿದೆ ಎಂದು ವಿಜಯೇಂದ್ರ ಹೇಳುವುದು ನಿಜವೇ?
ಚಾಮುಂಡೇಶ್ವರಿ ದೇವಾಲಯದ ಒಳಗೂ ಸುದೀಪ್ ಜತೆ ಸೆಲ್ಫಿಗೆ ಮುಗಿಬಿದ್ದ ಫ್ಯಾನ್ಸ್
ಚಾಮುಂಡೇಶ್ವರಿ ದೇವಾಲಯದ ಒಳಗೂ ಸುದೀಪ್ ಜತೆ ಸೆಲ್ಫಿಗೆ ಮುಗಿಬಿದ್ದ ಫ್ಯಾನ್ಸ್
ಸರ್ಕಾರಕ್ಕೆ ಹಿನ್ನಡೆಯಾಗಲಿ ಅಂತ ನಾವು ಯಾವತ್ತೂ ಬಯಸಲ್ಲ: ಯದುವೀರ್
ಸರ್ಕಾರಕ್ಕೆ ಹಿನ್ನಡೆಯಾಗಲಿ ಅಂತ ನಾವು ಯಾವತ್ತೂ ಬಯಸಲ್ಲ: ಯದುವೀರ್
ಕಡುಗೆಂಪಗಿರುವುದೆಲ್ಲ ತಿನ್ನಲು-ಯೋಗ್ಯ ಕಲ್ಲಂಗಡಿ ಹಣ್ಣಲ್ಲ!
ಕಡುಗೆಂಪಗಿರುವುದೆಲ್ಲ ತಿನ್ನಲು-ಯೋಗ್ಯ ಕಲ್ಲಂಗಡಿ ಹಣ್ಣಲ್ಲ!
ಮಾರ್ಚ್​ 22ರಂದು ಅಖಂಡ ಕರ್ನಾಟಕ ಬಂದ್​ಗೆ ಕರೆ: ಯಾರೆಲ್ಲಾ ಬೆಂಬಲ?
ಮಾರ್ಚ್​ 22ರಂದು ಅಖಂಡ ಕರ್ನಾಟಕ ಬಂದ್​ಗೆ ಕರೆ: ಯಾರೆಲ್ಲಾ ಬೆಂಬಲ?
ವಿಶ್ವವಿಖ್ಯಾತ ಹಂಪಿ ಉತ್ಸವ ಕಳೆದ ಸಲಕ್ಕಿಂತ ಅದ್ದೂರಿಯಾಗಿದೆ: ಜಮೀರ್ ಅಹ್ಮದ್
ವಿಶ್ವವಿಖ್ಯಾತ ಹಂಪಿ ಉತ್ಸವ ಕಳೆದ ಸಲಕ್ಕಿಂತ ಅದ್ದೂರಿಯಾಗಿದೆ: ಜಮೀರ್ ಅಹ್ಮದ್